AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

‘ರಾಧೆ ಶ್ಯಾಮ್​’ ಚಿತ್ರದ ಕಥೆ ಲೀಕ್​; ಪ್ರಭಾಸ್​-ಪೂಜಾ ಹೆಗ್ಡೆ ಸಿನಿಮಾದ ಈ ಹಾಡಿನಲ್ಲಿ ಅಡಗಿದೆ ಸ್ಟೋರಿ

Radhe Shyam Movie: ಪ್ರಭಾಸ್​ ನಟನೆಯ ಬಹುನಿರೀಕ್ಷಿತ ‘ರಾಧೆ ಶ್ಯಾಮ್​’ ಸಿನಿಮಾದ ಕಥೆ ಬಗ್ಗೆ ಜನರು ಹಲವು ರೀತಿಯಲ್ಲಿ ಊಹೆ ಮಾಡಿದ್ದಾರೆ. ಅವುಗಳ ಬಗ್ಗೆ ಚಿತ್ರದ ಗೀತರಚನೆಕಾರ ಕೃಷ್ಣ ಕಾಂತ್​ ಮಾತನಾಡಿದ್ದಾರೆ.

‘ರಾಧೆ ಶ್ಯಾಮ್​’ ಚಿತ್ರದ ಕಥೆ ಲೀಕ್​; ಪ್ರಭಾಸ್​-ಪೂಜಾ ಹೆಗ್ಡೆ ಸಿನಿಮಾದ ಈ ಹಾಡಿನಲ್ಲಿ ಅಡಗಿದೆ ಸ್ಟೋರಿ
ಪೂಜಾ ಹೆಗ್ಡೆ, ಪ್ರಭಾಸ್
TV9 Web
| Edited By: |

Updated on: Nov 21, 2021 | 12:59 PM

Share

ನಟ ಪ್ರಭಾಸ್​ (Prabhas) ಅವರಿಗೆ ‘ಬಾಹುಬಲಿ’ ಚಿತ್ರದ ಬಳಿಕ ಹೊಸದೊಂದು ಇಮೇಜ್​ ಸಿಕ್ಕಿತು. ಆದರೆ ಈಗ ರಿಲೀಸ್​ ಆಗಲು ಸಿದ್ಧವಾಗಿರುವ ‘ರಾಧೆ ಶ್ಯಾಮ್​’ ಸಿನಿಮಾ (Radhe Shyam Movie) ಮೂಲಕ ಆ ಇಮೇಜ್​ನಿಂದ ಹೊರಬರಲು ಅವರು ನಿರ್ಧರಿಸಿದಂತಿದೆ. ಈಗಾಗಲೇ ಬಿಡುಗಡೆ ಆಗಿರುವ ಟೀಸರ್​, ಪೋಸ್ಟರ್​ಗಳಲ್ಲಿ ಪ್ರಭಾಸ್​ ಅವರು ಲವರ್​ ಬಾಯ್​ ಆಗಿ ಕಾಣಿಸಿಕೊಂಡಿದ್ದಾರೆ. ಇಡೀ ಸಿನಿಮಾ ತುಂಬ ಡಿಫರೆಂಟ್​ ಆಗಿ ಮೂಡಿಬಂದಿದೆ ಎಂದು ಚಿತ್ರತಂಡ ಹೇಳಿಕೊಂಡಿದೆ. ಈ ಎಲ್ಲ ಕಾರಣಗಳಿಂದಾಗಿ ‘ರಾಧೆ ಶ್ಯಾಮ್​’ ಚಿತ್ರದ ಮೇಲೆ ದೊಡ್ಡ ಮಟ್ಟದ ನಿರೀಕ್ಷೆ ಇದೆ. ಈ ಚಿತ್ರದ ಕಥೆ ಏನು ಎಂಬ ಬಗ್ಗೆ ಭಾರಿ ಚರ್ಚೆ ನಡೆಯುತ್ತಿದೆ. ಈ ಕುರಿತಾಗಿ ಚಿತ್ರದ ಗೀತರಚನೆಕಾರ ಕೃಷ್ಣ ಕಾಂತ್​ ಕೆಲವು ಸುಳಿವುಗಳನ್ನು ಬಿಟ್ಟುಕೊಟ್ಟಿದ್ದಾರೆ. ಆ ಮೂಲಕ ಅವರು ‘ರಾಧೆ ಶ್ಯಾಮ್​’ ಕಥೆ ಲೀಕ್​ ಮಾಡಿದ್ದಾರೆ ಎನ್ನಲಾಗುತ್ತಿದೆ.

ಈ ಬಹುನಿರೀಕ್ಷಿತ ಸಿನಿಮಾದ ಕಥೆಯ ಬಗ್ಗೆ ಜನರು ಹಲವು ರೀತಿಯಲ್ಲಿ ಊಹೆ ಮಾಡಿದ್ದಾರೆ. ಅವುಗಳ ಬಗ್ಗೆಯೂ ಕೃಷ್ಣ ಕಾಂತ್​ ಮಾತನಾಡಿದ್ದಾರೆ. ‘1970ರ ಸಮಯದಲ್ಲಿ ಯುರೋಪ್​ನಲ್ಲಿ ನಡೆಯುವ ಒಂದು ಲವ್​ ಸ್ಟೋರಿ ‘ರಾಧೆ ಶ್ಯಾಮ್​’ ಚಿತ್ರದಲ್ಲಿದ್ದು, ಈ ಸಿನಿಮಾದ ಕಥೆ ಪುನರ್ಜನ್ಮ ಮತ್ತು ಟೈಮ್​ ಟ್ರಾವೆಲಿಂಗ್​ಗೆ ಸಂಬಂಧಿಸಿದೆ ಅಂತ ಕೆಲವರು ಊಹಿಸಿದ್ದಾರೆ. ಇಡೀ ಸಿನಿಮಾ ಒಂದು ರೈಲಿನ ಪಯಣದಲ್ಲಿ ನಡೆಯುತ್ತದೆ ಎಂದು ಕೂಡ ಬಹುತೇಕರು ಊಹೆ ಮಾಡಿದ್ದಾರೆ. ಆ ಬಗ್ಗೆ ನಾನು ಮಾತನಾಡುವುದಿಲ್ಲ. ಸಸ್ಪೆನ್ಸ್​ ಹಾಗೆಯೇ ಇರಲಿ’ ಎಂದು ಹೇಳಿರುವ ಕೃಷ್ಣ ಕಾಂತ್​ ಅವರು ಬೇರೆ ಸುಳಿವು ಬಿಟ್ಟುಕೊಟ್ಟಿದ್ದಾರೆ.

ಕೆಲವೇ ದಿನಗಳ ಹಿಂದೆ ಈ ಚಿತ್ರದ ‘ಯೇ ರಾತಾಲೇ..’ ಹಾಡಿನ ಲಿರಿಕಲ್​ ವಿಡಿಯೋ ಬಿಡುಗಡೆ ಆಗಿದೆ. ಅದರಲ್ಲಿ ಕಾರ್ಟೂನ್​ ರೀತಿಯಲ್ಲಿ ಕೆಲವು ದೃಶ್ಯಗಳನ್ನು ವಿವರಿಸಲಾಗಿದೆ. ಈ ಚಿತ್ರದ ಮಾಂಟೇಜ್​ ದೃಶ್ಯಗಳಲ್ಲಿ ಇಡೀ ಸಿನಿಮಾದ ಕಥೆ ಅಡಗಿದೆ ಎಂದು ಕೃಷ್ಣ ಕಾಂತ್​ ಹೇಳಿದ್ದಾರೆ. ಅದರ ಆಧಾರದ ಮೇಲೆ ಪ್ರೇಕ್ಷಕರು ಕಥೆಯ ಎಳೆ ಏನೆಂಬುದನ್ನು ಊಹಿಸುತ್ತಿದ್ದಾರೆ.

ಈ ಚಿತ್ರಕ್ಕೆ ರಾಧಾಕೃಷ್ಣ ಕುಮಾರ್​ ಅವರು ನಿರ್ದೇಶನ ಮಾಡಿದ್ದಾರೆ. ಜ.14ರಂದು ಈ ಸಿನಿಮಾ ಬಿಡುಗಡೆ ಆಗುತ್ತಿದೆ. ತೆಲುಗು ಮಾತ್ರವಲ್ಲದೇ ಕನ್ನಡ, ತಮಿಳು, ಮಲಯಾಳಂ ಮತ್ತು ಹಿಂದಿ ಭಾಷೆಗಳಲ್ಲಿ ‘ರಾಧೆ ಶ್ಯಾಮ್​’ ತೆರೆಕಾಣಲಿದೆ.

ಇದನ್ನೂ ಓದಿ:

Pooja Hegde: ಬೀಚ್​​​ನಲ್ಲಿ ಹಾಟ್ ಅವತಾರ ತಾಳಿದ ಪೂಜಾ ಹೆಗ್ಡೆ; ಇಲ್ಲಿವೆ ಫೋಟೋಗಳು

ಪ್ರಭಾಸ್​ ಹುಟ್ಟುಹಬ್ಬದ ದಿನವೇ ಫ್ಯಾನ್ಸ್​ಗೆ ಬೇಸರ ಮೂಡಿಸಿದ ಪ್ರಶಾಂತ್​ ನೀಲ್​; ‘ಸಲಾರ್’​ ಟೀಮ್​ ಎಡವಿದ್ದೆಲ್ಲಿ?

ಬಸ್​​ನಲ್ಲಿ 240 ಗ್ರಾಂ ಚಿನ್ನ ಕದ್ದಾಕೆ ಸಿಕ್ಕಿಬಿದ್ದಿದ್ಹೇಗೆ ಗೊತ್ತಾ?
ಬಸ್​​ನಲ್ಲಿ 240 ಗ್ರಾಂ ಚಿನ್ನ ಕದ್ದಾಕೆ ಸಿಕ್ಕಿಬಿದ್ದಿದ್ಹೇಗೆ ಗೊತ್ತಾ?
ಸಿದ್ದರಾಮಯ್ಯ ಅಧಿಕಾರದಿಂದ ಇಳಿಯೋದು ಯಾವಾಗ?: ಕೋಡಿಮಠ ಶ್ರೀ ಸ್ಪೋಟಕ ಭವಿಷ್ಯ
ಸಿದ್ದರಾಮಯ್ಯ ಅಧಿಕಾರದಿಂದ ಇಳಿಯೋದು ಯಾವಾಗ?: ಕೋಡಿಮಠ ಶ್ರೀ ಸ್ಪೋಟಕ ಭವಿಷ್ಯ
ಕೂಲಿ ಕಾರ್ಮಿಕ ಮಹಿಳೆ ಜತೆ ಲವ್ವಿಡವ್ವಿ: ಗುತ್ತಿಗೆದಾರನನ್ನ ಕೊಚ್ಚಿ ಕೊಂದ್ರು
ಕೂಲಿ ಕಾರ್ಮಿಕ ಮಹಿಳೆ ಜತೆ ಲವ್ವಿಡವ್ವಿ: ಗುತ್ತಿಗೆದಾರನನ್ನ ಕೊಚ್ಚಿ ಕೊಂದ್ರು
ನಮ್ಮಿಂದ ತಪ್ಪಾಗಿದೆ ಕ್ಷಮಿಸಿ: ಕನ್ನಡಿಗರ ಕ್ಷಮೆಯಾಚಿಸಿದ ಬೆಂಗಳೂರಿನ ಕಂಪನಿ
ನಮ್ಮಿಂದ ತಪ್ಪಾಗಿದೆ ಕ್ಷಮಿಸಿ: ಕನ್ನಡಿಗರ ಕ್ಷಮೆಯಾಚಿಸಿದ ಬೆಂಗಳೂರಿನ ಕಂಪನಿ
ರಿಜ್ವಾನ್ ಬ್ಯಾಟಿಂಗ್‌ ಅರ್ಧಕ್ಕೆ ನಿಲ್ಲಿಸಿ ವಾಪಸ್ ಕರೆಸಿಕೊಂಡ ನಾಯಕ
ರಿಜ್ವಾನ್ ಬ್ಯಾಟಿಂಗ್‌ ಅರ್ಧಕ್ಕೆ ನಿಲ್ಲಿಸಿ ವಾಪಸ್ ಕರೆಸಿಕೊಂಡ ನಾಯಕ
ಸಿದ್ರಾಮಯ್ಯ ಮೈಸೂರು, ಡಿಕೆಶಿ ಕನಕಪುರ ಇದ್ದಂಗೆ ನಮ್ಗೆ ಆಗ್ಬೇಕು ಎಂದ ಖರ್ಗೆ
ಸಿದ್ರಾಮಯ್ಯ ಮೈಸೂರು, ಡಿಕೆಶಿ ಕನಕಪುರ ಇದ್ದಂಗೆ ನಮ್ಗೆ ಆಗ್ಬೇಕು ಎಂದ ಖರ್ಗೆ
ಲಕ್ಕುಂಡಿಯಲ್ಲಿ ಸಿಕ್ಕ ನಿಧಿಗೆ ವಾರಸುದಾರರು ಯಾರು? ಕಾಯ್ದೆ ಹೇಳೋದೇನು?
ಲಕ್ಕುಂಡಿಯಲ್ಲಿ ಸಿಕ್ಕ ನಿಧಿಗೆ ವಾರಸುದಾರರು ಯಾರು? ಕಾಯ್ದೆ ಹೇಳೋದೇನು?
ಹಿಮಾಚಲದ ಕಟ್ಟಡದಲ್ಲಿ ಬೆಂಕಿ ಅವಘಡ; 8 ವರ್ಷದ ಮಗು ಸಾವು, ಹಲವರಿಗೆ ಗಾಯ
ಹಿಮಾಚಲದ ಕಟ್ಟಡದಲ್ಲಿ ಬೆಂಕಿ ಅವಘಡ; 8 ವರ್ಷದ ಮಗು ಸಾವು, ಹಲವರಿಗೆ ಗಾಯ
ಬಿಗ್​ಬಾಸ್​ಗೆ ಸಂಕಷ್ಟ; ಶೋ ಹಾಗೂ ನಟ ಸುದೀಪ್ ವಿರುದ್ಧ ದೂರು ದಾಖಲು
ಬಿಗ್​ಬಾಸ್​ಗೆ ಸಂಕಷ್ಟ; ಶೋ ಹಾಗೂ ನಟ ಸುದೀಪ್ ವಿರುದ್ಧ ದೂರು ದಾಖಲು
ಉಚ್ಛಾಟಿತ ಶಾಸಕ ಯತ್ನಾಳ್​ ಸಂಪರ್ಕದಲ್ಲಿದ್ಯಾ BJP ಹೈಕಮಾಂಡ್​?
ಉಚ್ಛಾಟಿತ ಶಾಸಕ ಯತ್ನಾಳ್​ ಸಂಪರ್ಕದಲ್ಲಿದ್ಯಾ BJP ಹೈಕಮಾಂಡ್​?