AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಸಲಾರ್​ ಬಳಿಕ ಕಾದಿದೆ ಸರ್ಪ್ರೈಸ್​; ಪ್ರಭಾಸ್​ ಜೊತೆ ಇಂಥ ಸಿನಿಮಾನೂ ಮಾಡ್ತಾರಾ ಪ್ರಶಾಂತ್​ ನೀಲ್​?

ಸಲಾರ್​ ಬಳಿಕ ಮತ್ತೊಂದು ಸಿನಿಮಾದಲ್ಲೂ ಪ್ರಶಾಂತ್​ ನೀಲ್​ ಮತ್ತು ಪ್ರಭಾಸ್​ ಒಂದಾಗುತ್ತಿದ್ದಾರೆ ಎಂಬ ಮಾಹಿತಿ ಕೇಳಿಬಂದಿದೆ. ಆ ಹೊಸ ಚಿತ್ರಕ್ಕೆ ಟಾಲಿವುಡ್​ನ ಖ್ಯಾತ ನಿರ್ಮಾಪಕ ದಿಲ್​ ರಾಜು ಬಂಡವಾಳ ಹೂಡಲಿದ್ದಾರೆ.

ಸಲಾರ್​ ಬಳಿಕ ಕಾದಿದೆ ಸರ್ಪ್ರೈಸ್​; ಪ್ರಭಾಸ್​ ಜೊತೆ ಇಂಥ ಸಿನಿಮಾನೂ ಮಾಡ್ತಾರಾ ಪ್ರಶಾಂತ್​ ನೀಲ್​?
ಪ್ರಶಾಂತ್​ ನೀಲ್​ - ಪ್ರಭಾಸ್​
ಮದನ್​ ಕುಮಾರ್​
|

Updated on:Jun 10, 2021 | 8:10 AM

Share

ನಿರ್ದೇಶಕ ಪ್ರಶಾಂತ್​ ನೀಲ್​ ಅವರಿಗೆ ದೇಶಾದ್ಯಂತ ಡಿಮ್ಯಾಂಡ್​ ಹೆಚ್ಚಿದೆ. ‘ಕೆಜಿಎಫ್​: ಚಾಪ್ಟರ್​ 2’ ಬಿಡುಗಡೆಗೂ ಮುನ್ನವೇ ಅವರು ಹಲವು ಸಿನಿಮಾಗಳನ್ನು ಒಪ್ಪಿಕೊಳ್ಳುತ್ತಿದ್ದಾರೆ. ಪರಭಾಷೆಯ ಘಟಾನುಘಟಿ ನಟರ ಚಿತ್ರಗಳಿಂದ ಪ್ರಶಾಂತ್ ನೀಲ್​ಗೆ ಬೇಡಿಕೆ ಬಂದಿದೆ. ಈಗಾಗಲೇ ಅವರು ಪ್ರಭಾಸ್​ ಜೊತೆ ‘ಸಲಾರ್​’ ಮಾಡುತ್ತಿದ್ದಾರೆ. ಬಳಿಕ ಜ್ಯೂ. ಎನ್​ಟಿಆರ್​ ಜೊತೆಗೆ ಸಿನಿಮಾ ಮಾಡುವುದು ಕೂಡ ಪಕ್ಕಾ ಆಗಿದೆ. ಈಗ ಇನ್ನೊಂದು ಇಂಟರೆಸ್ಟಿಂಗ್​ ನ್ಯೂಸ್​ ಕೇಳಿಬಂದಿದೆ.

ಸದ್ಯ ಸಲಾರ್​ ಚಿತ್ರದ ಮೇಲೆ ಪ್ರಶಾಂತ್​ ನೀಲ್​ ಅವರ ಗಮನ ಇದೆ. ಅಚ್ಚರಿ ಎಂದರೆ ಸಲಾರ್​ ಮಾತ್ರವಲ್ಲದೆ, ಮತ್ತೊಂದು ಸಿನಿಮಾದಲ್ಲೂ ಪ್ರಶಾಂತ್​ ನೀಲ್​ ಮತ್ತು ಪ್ರಭಾಸ್​ ಒಂದಾಗುತ್ತಿದ್ದಾರೆ ಎಂಬ ಮಾಹಿತಿ ಕೇಳಿಬಂದಿದೆ. ಆ ಹೊಸ ಚಿತ್ರಕ್ಕೆ ಟಾಲಿವುಡ್​ನ ಖ್ಯಾತ ನಿರ್ಮಾಪಕ ದಿಲ್​ ರಾಜು ಬಂಡವಾಳ ಹೂಡಲಿದ್ದಾರೆ. ಅದು ಪೌರಾಣಿಕ ಸಿನಿಮಾ ಆಗಿರಲಿದೆ ಎಂಬುದು ವಿಶೇಷ.

ಉಗ್ರಂ ಮತ್ತು ಕೆಜಿಎಫ್​ ಚಿತ್ರಗಳಲ್ಲಿ ರಗಡ್​ ಆದಂತಹ ಕಥೆಗಳನ್ನು ಹೇಳಿರುವ ಪ್ರಶಾಂತ್​ ನೀಲ್ ಅವರು ಪೌರಾಣಿಕ ಸಿನಿಮಾವನ್ನೂ ಹ್ಯಾಂಡಲ್​ ಮಾಡಬಲ್ಲರಾ ಎಂಬ ಪ್ರಶ್ನೆ ಅಭಿಮಾನಿಗಳ ಮನದಲ್ಲಿ ಮೂಡಿದೆ. ಅದರಲ್ಲೂ ನಿರ್ದಿಷ್ಟವಾಗಿ ಅವರು ಯಾವ ಕಥೆಯನ್ನು ಆಯ್ಕೆ ಮಾಡಿಕೊಳ್ಳಲಿದ್ದಾರೆ ಎಂಬುದು ಇನ್ನೂ ಬಹಿರಂಗ ಆಗಿಲ್ಲ. ಗಮನಿಸಬೇಕಾದ ಅಂಶ ಏನೆಂದರೆ, ಈ ಸಿನಿಮಾ ಬಾಹುಬಲಿಗಿಂತಲೂ ದೊಡ್ಡ ಕ್ಯಾನ್ವಾಸ್​ನಲ್ಲಿ ಮೂಡಿಬರಲಿದೆಯಂತೆ.

ಈ ಚಿತ್ರಕ್ಕಾಗಿ ದೊಡ್ಡ ಮಟ್ಟದ ಪ್ರೀ ಪ್ರೊಡಕ್ಷನ್​ ಕೆಲಸಗಳು ಆಗಬೇಕಿದೆ. ಬೃಹತ್​ ಸೆಟ್​ಗಳು ನಿರ್ಮಾಣ ಆಗಬೇಕಿದೆ. ಆದರೆ ಅದೆಲ್ಲದಕ್ಕೂ ಮುನ್ನ ಪ್ರಭಾಸ್​ ಮತ್ತು ಪ್ರಶಾಂತ್ ನೀಲ್​ ಅವರು ಈಗಿರುವ ಕಮಿಟ್​ಮೆಂಟ್​ಗಳನ್ನು ಮುಗಿಸಿಕೊಳ್ಳಬೇಕಿದೆ. ಸಲಾರ್​, ರಾಧೆ ಶ್ಯಾಮ್​, ಆದಿಪುರುಷ್​ ಸಿನಿಮಾ ಕೆಲಸಗಳಲ್ಲಿ ಪ್ರಭಾಸ್​ ಬ್ಯುಸಿ ಇದ್ದಾರೆ. ಅವರು ಪ್ರಶಾಂತ್ ನೀಲ್​ ಜೊತೆ ಮಾಡಲಿರುವ ಈ ಪೌರಾಣಿಕ ಚಿತ್ರ ಅವರ 25ನೇ ಸಿನಿಮಾ ಆಗಲಿದೆ ಎಂಬ ಸುದ್ದಿ ಕೇಳಿಬಂದಿದೆ. ಈ ಬಗ್ಗೆ ಮಾತುಕಥೆಗಳು ನಡೆಯುತ್ತಿದ್ದು, ಚಿತ್ರತಂಡದವರಿಂದ ಇನ್ನಷ್ಟೇ ಅಧಿಕೃತ ಮಾಹಿತಿ ಹೊರಬೀಳಬೇಕಿದೆ.

ಇದನ್ನೂ ಓದಿ:

ಪ್ರಶಾಂತ್​ ನೀಲ್​ ಜನ್ಮದಿನ; ಪ್ರೀತಿಯಿಂದ ಶುಭಕೋರಿದ ಜ್ಯೂ. ಎನ್​ಟಿಆರ್​ ಕಾಯುತ್ತಿರುವುದು ಆ ಒಂದು ಕ್ಷಣಕ್ಕಾಗಿ

ಲಸಿಕೆ ಪಡೆದ ಆ ಯುವಕನ ರೀತಿಯೇ ವೈರಲ್​ ಆಯ್ತು ಪ್ರಶಾಂತ್​ ನೀಲ್ ಫೋಟೋ​; ಆದರೆ ಕಾರಣ ಬೇರೆ

Published On - 8:06 am, Thu, 10 June 21

ನನ್ನ ಸೊಸೆ ಸ್ಟಾರ್, ಆಕೆಗೆ ಕೆಟ್ಟ ಹೆಸರು ಬರಬಾರದು: ಯಶ್ ತಾಯಿ ಪುಷ್ಪ
ನನ್ನ ಸೊಸೆ ಸ್ಟಾರ್, ಆಕೆಗೆ ಕೆಟ್ಟ ಹೆಸರು ಬರಬಾರದು: ಯಶ್ ತಾಯಿ ಪುಷ್ಪ
ಮೋದಿಮಯವಾದ ನಮೀಬಿಯಾ ಸಂಸತ್; ಸಂಸದರಿಂದ ಎದ್ದು ನಿಂತು ಚಪ್ಪಾಳೆ
ಮೋದಿಮಯವಾದ ನಮೀಬಿಯಾ ಸಂಸತ್; ಸಂಸದರಿಂದ ಎದ್ದು ನಿಂತು ಚಪ್ಪಾಳೆ
ಶಿವಮೊಗ್ಗದಲ್ಲಿ ಅಮಾನವೀಯ ಘಟನೆ:ದೆವ್ವ ಬಿಡಿಸ್ತೀನಂತ ಮಹಿಳೆಯನ್ನೇ ಬಲಿಪಡೆದಳು
ಶಿವಮೊಗ್ಗದಲ್ಲಿ ಅಮಾನವೀಯ ಘಟನೆ:ದೆವ್ವ ಬಿಡಿಸ್ತೀನಂತ ಮಹಿಳೆಯನ್ನೇ ಬಲಿಪಡೆದಳು
ಸಿಎಂ ಮತ್ತು ಡಿಸಿಎಂ ಜೊತೆ ಸಚಿವ ಮತ್ತ ಶಾಸಕರ ಪಟಾಲಂ ಕೂಡ ಇದೆ!
ಸಿಎಂ ಮತ್ತು ಡಿಸಿಎಂ ಜೊತೆ ಸಚಿವ ಮತ್ತ ಶಾಸಕರ ಪಟಾಲಂ ಕೂಡ ಇದೆ!
ಹಿಂದೆ ತಾವು ಹೇಳಿದ್ದನ್ನು ನೆನೆಪಿಸಿದಾಗ ಶ್ರೀರಾಮುಲು ನಿರುತ್ತರಾದರು!
ಹಿಂದೆ ತಾವು ಹೇಳಿದ್ದನ್ನು ನೆನೆಪಿಸಿದಾಗ ಶ್ರೀರಾಮುಲು ನಿರುತ್ತರಾದರು!
ಆನೆಗುಡ್ಡೆ ದೇವಸ್ಥಾನದಲ್ಲಿ ರಿಷಬ್ ಶೆಟ್ಟಿ ಹುಟ್ಟುಹಬ್ಬ ಆಚರಣೆ
ಆನೆಗುಡ್ಡೆ ದೇವಸ್ಥಾನದಲ್ಲಿ ರಿಷಬ್ ಶೆಟ್ಟಿ ಹುಟ್ಟುಹಬ್ಬ ಆಚರಣೆ
ನಮ್ಮನ್ನು ಅಸಡ್ಡೆ ಮಾಡಲಾಯಿತು, ಆಗಿಂದಲೇ ಹೋರಾಟ ಶುರುವಾಯಿತು: ನಿಶಾ
ನಮ್ಮನ್ನು ಅಸಡ್ಡೆ ಮಾಡಲಾಯಿತು, ಆಗಿಂದಲೇ ಹೋರಾಟ ಶುರುವಾಯಿತು: ನಿಶಾ
ರಸ್ತೆ ಪೂರ್ಣಗೊಳ್ಳುವ ಮೊದಲೇ ಸುಂಕ ವಸೂಲಾತಿ; ಟೋಲ್ ಪ್ಲಾಜಾ ಧ್ವಂಸ
ರಸ್ತೆ ಪೂರ್ಣಗೊಳ್ಳುವ ಮೊದಲೇ ಸುಂಕ ವಸೂಲಾತಿ; ಟೋಲ್ ಪ್ಲಾಜಾ ಧ್ವಂಸ
ನ್ಯಾಯ ಕೊಡಿಸುವ ಭರವಸೆ ಸುರ್ಜೇವಾಲಾ ನೀಡಿದ್ದಾರೆ: ಮಾಳವಿಕ
ನ್ಯಾಯ ಕೊಡಿಸುವ ಭರವಸೆ ಸುರ್ಜೇವಾಲಾ ನೀಡಿದ್ದಾರೆ: ಮಾಳವಿಕ
ಶಿವಕುಮಾರ್ ಒಗಟಲ್ಲಿ ಮಾತಾಡ್ತಾರೆ, ಸಿದ್ದರಾಮಯ್ಯ ನಂದೇ ಪೂರ್ಣಾವಧಿ ಅಂತಾರೆ!
ಶಿವಕುಮಾರ್ ಒಗಟಲ್ಲಿ ಮಾತಾಡ್ತಾರೆ, ಸಿದ್ದರಾಮಯ್ಯ ನಂದೇ ಪೂರ್ಣಾವಧಿ ಅಂತಾರೆ!