ಪ್ರಭಾಸ್ ನಟನೆಯ ‘ಆದಿಪುರುಷ್’ ಚಿತ್ರ ಯಾವ ಹಂತದಲ್ಲಿದೆ? ಇಲ್ಲಿದೆ ಕುತೂಹಲಕರ ಮಾಹಿತಿ

Prabhas: ಪ್ರಸ್ತುತ ಪ್ರಭಾಸ್ ಆದಿಪುರುಷ್ ಚಿತ್ರದ ಶೂಟಿಂಗ್​ನಲ್ಲಿ ಬ್ಯುಸಿಯಾಗಿದ್ದಾರೆ. ಈ ಕುರಿತ ಮಾಹಿತಿ ಇಲ್ಲಿದೆ.

ಪ್ರಭಾಸ್ ನಟನೆಯ ‘ಆದಿಪುರುಷ್’ ಚಿತ್ರ ಯಾವ ಹಂತದಲ್ಲಿದೆ? ಇಲ್ಲಿದೆ ಕುತೂಹಲಕರ ಮಾಹಿತಿ
ಆದಿಪುರುಷ್ ಚಿತ್ರದ ಪೋಸ್ಟರ್(ಎಡ), ಬಾಹುಬಲಿ ಚಿತ್ರದಲ್ಲಿ ಪ್ರಭಾಸ್ (ಬಲ)
Follow us
| Updated By: shivaprasad.hs

Updated on: Sep 19, 2021 | 5:17 PM

ಬಾಹುಬಲಿ ಚಿತ್ರದ ಮೂಲಕ ಪ್ರಭಾಸ್ ವರ್ಚಸ್ಸು ಒಮ್ಮೆಲೇ ಬದಲಾಯಿತು. ಆ ಚಿತ್ರದ ಮೂಲಕ ಪ್ರಭಾಸ್ ಪ್ಯಾನ್ ಇಂಡಿಯಾ ಸ್ಟಾರ್‌ ಆಗಿ ಬದಲಾದರು. ಇದರೊಂದಿಗೆ ನಿರ್ಮಾಪಕರು ಅವರೊಂದಿಗೆ ಬಿಗ್ ಬಜೆಟ್ ಸಿನಿಮಾಗಳನ್ನು ನಿರ್ಮಿಸಲು ಆಸಕ್ತಿ ತೋರುತ್ತಿದ್ದಾರೆ. ಪ್ರಸ್ತುತ, ಪ್ರಭಾಸ್ ಪ್ಯಾನ್ ಇಂಡಿಯಾ ಚಿತ್ರಗಳಲ್ಲಿ ನಿರತರಾಗಿದ್ದಾರೆ. ಕೆಜಿಎಫ್​ ಮುಖಾಂತರ ವಿಶ್ವದ ಗಮನ ಸೆಳೆದ ಪ್ರಶಾಂತ್ ನೀಲ್​ರೊಂದಿಗೆ ಪ್ರಭಾಸ್, ‘ಸಲಾರ್’ ಚಿತ್ರಗಳಲ್ಲಿ ತೊಡಗಿಕೊಂಡಿದ್ದಾರೆ. ಇದರೊಂದಿಗೆ ಅವರು ಸಕ್ರಿಯವಾಗಿ ನಟಿಸುತ್ತಿರುವ ಚಿತ್ರ ‘ಆದಿಪುರುಷ್’.

ಬಾಲಿವುಡ್​ ನಿರ್ದೇಶಕ ಓಂ ರಾವುತ್ ನಿರ್ದೇಶನದ ಈ ಚಿತ್ರದಲ್ಲಿ ಪ್ರಭಾಸ್ ರಾಮನ ಪಾತ್ರದಲ್ಲಿ ಕಾಣಿಸಿಕೊಳ್ಳುತ್ತಿದ್ದಾರೆ. ಇದರಲ್ಲಿ ಬಾಲಿವುಡ್ ಬೆಡಗಿ ಕೃತಿ ಸನೂನ್ ನಾಯಕಿಯಾಗಿ ನಟಿಸುತ್ತಿದ್ದಾರೆ. ಚಿತ್ರದ ಮುಂದಿನ ದೊಡ್ಡ ಶೆಡ್ಯೂಲ್ ಮುಂಬೈನಲ್ಲಿ ಪ್ರಾರಂಭವಾಗಲಿದೆ. ಈ ಶೆಡ್ಯೂಲ್​ನಲ್ಲಿ ಸುಮಾರು ಇಪ್ಪತ್ತೈದು ದಿನಗಳ ಕಾಲ ಚಿತ್ರೀಕರಣ ನಡೆಯಲಿದೆ ಎಂಬ ಮಾಹಿತಿ ಲಭ್ಯವಾಗಿದೆ. ವಿಶೇಷವಾಗಿ ಕ್ಲೈಮ್ಯಾಕ್ಸ್‌ನಲ್ಲಿನ ಸಾಹಸ ದೃಶ್ಯಗಳು ಈ ಶೆಡ್ಯೂಲ್​ನಲ್ಲಿ ಚಿತ್ರೀಕರಣವಾಗಲಿದೆ. ಈ ಆಕ್ಷನ್ ಸೀಕ್ವೆನ್ಸ್​​ಗಳಿಗಾಗಿ ಪ್ರಭಾಸ್ ಇತ್ತೀಚೆಗೆ ರಿಹರ್ಸಲ್ ಆರಂಭಿಸಿದ್ಧಾರೆ.

ಮೊದಲು ಆಕ್ಷನ್ ದೃಶ್ಯಗಳನ್ನು ಚಿತ್ರೀಕರಿಸಿ, ನಂತರ ಮಾತಿನ ಭಾಗದ ದೃಶ್ಯಗಳನ್ನು ಚಿತ್ರೀಕರಿಸಲಾಗುವುದು ಎಂಬ ಮಾಹಿತಿ ಲಭ್ಯವಾಗಿದೆ. ಭಾರೀ ಬಜೆಟ್ ನಲ್ಲಿ ತಯಾರಾಗುತ್ತಿರುವ ಈ ಪೌರಾಣಿಕ ಚಿತ್ರದಲ್ಲಿ ಪ್ರಭಾಸ್ ರಾಮನಾಗಿ, ಕೃತಿ ಸನೂನ್ ಸೀತೆಯಾಗಿ ಕಾಣಿಸಿಕೊಳ್ಳಲಿದ್ದಾರೆ. ಬಾಲಿವುಡ್ ಸ್ಟಾರ್ ಸೈಫ್ ಅಲಿ ಖಾನ್ ರಾವಣನ ಪಾತ್ರ ನಿರ್ವಹಿಸಲಿದ್ದಾರೆ. ಸನ್ನಿ ಸಿಂಗ್ ಲಕ್ಷ್ಮಣನ ಪಾತ್ರದಲ್ಲಿ ಕಾಣಿಸಿಕೊಳ್ಳಲಿದ್ದಾರೆ. ಮಹತ್ವಾಕಾಂಕ್ಷೆಯ ಈ ಚಿತ್ರವು ಮುಂದಿನ ವರ್ಷ ಅಕ್ಟೋಬರ್ 11 ರಂದು ಬಿಡುಗಡೆಯಾಗಲಿದೆ. ಪ್ರಭಾಸ್ ಮತ್ತು ಪೂಜಾ ಹೆಗ್ಡೆ ಅಭಿನಯದ ‘ರಾಧೇಶ್ಯಾಮ್’ ಚಿತ್ರೀಕರಣ ಮುಗಿಸಿದ್ದು, ಬಿಡುಗಡೆಗೆ ಸಿದ್ಧವಾಗಿದೆ. ಇತ್ತ ‘ಸಲಾರ್’ ಚಿತ್ರದ ಶೂಟಿಂಗ್ ಕೂಡ ನಡೆಯುತ್ತಿದ್ದು, ಶೃತಿ ಹಾಸನ್ ಮತ್ತು ಇತರ ಪಾತ್ರಗಳ ಭಾಗದ ಚಿತ್ರೀಕರಣ ನಡೆಯುತ್ತಿದೆ ಎಂಬ ಮಾಹಿತಿ ಲಭ್ಯವಾಗಲಿದೆ. ಈ ಚಿತ್ರಗಳ ನಂತರ ಪ್ರಭಾಸ್ ಯಾವ ಚಿತ್ರದಲ್ಲಿ ಕಾಣಿಸಿಕೊಳ್ಳಲಿದ್ದಾರೆ ಎಂಬುದನ್ನು ಅಭಿಮಾನಿಗಳು ಈಗಲೇ ಚರ್ಚಿಸಲು ಆರಂಭಿಸಿದ್ದಾರೆ.

ಇದನ್ನೂ ಓದಿ:

ತಂದೆ-ತಾಯಿ ವಿರುದ್ಧವೇ ಕೋರ್ಟ್​ ಮೆಟ್ಟಿಲೇರಿದ ನಟ ದಳಪತಿ ವಿಜಯ್; ಇದು ಸರಿ ಇದೆ ಎಂದ ಫ್ಯಾನ್ಸ್​​

ಸೀತೆ ಪಾತ್ರ ಮಾಡಲು ಕಂಗನಾಗೆ 32 ಕೋಟಿ ರೂ. ಸಂಬಳ? ಇದು ದೊಡ್ಡ ಪ್ರಮಾದ ಎಂದ ಕಮಾಲ್​ ಖಾನ್​

(Prabhas preparing for Adipurush climax shoots says reports)

ಹಾಸನಾಂಬಾ ಸನ್ನಿಧಾನದಲ್ಲಿ ಭರದ ಸಿದ್ಧತೆ
ಹಾಸನಾಂಬಾ ಸನ್ನಿಧಾನದಲ್ಲಿ ಭರದ ಸಿದ್ಧತೆ
ಬಿಬಿಎಂಪಿ ಭ್ರಷ್ಟ ಅಧಿಕಾರಿಗಳನ್ನು ಸಸ್ಪೆಂಡ್ ಮಾಡಿದರೆ ಸಮಸ್ಯೆ ಕೊನೆಗೊಳ್ಳದು
ಬಿಬಿಎಂಪಿ ಭ್ರಷ್ಟ ಅಧಿಕಾರಿಗಳನ್ನು ಸಸ್ಪೆಂಡ್ ಮಾಡಿದರೆ ಸಮಸ್ಯೆ ಕೊನೆಗೊಳ್ಳದು
ದೇವರ ಮುಂದೆ ಕಣ್ಣೀರು ಹಾಕಿದ್ರೆ ಏನಾಗುತ್ತೆ ಗೊತ್ತಾ?
ದೇವರ ಮುಂದೆ ಕಣ್ಣೀರು ಹಾಕಿದ್ರೆ ಏನಾಗುತ್ತೆ ಗೊತ್ತಾ?
ಬದುಕು ಬದಲಿಸಿದ ‘ಕೆಜಿಎಫ್’: ಪ್ರಶಾಂತ್ ನೀಲ್​ಗೆ ಗರುಡ ರಾಮ್ ಧನ್ಯವಾದ
ಬದುಕು ಬದಲಿಸಿದ ‘ಕೆಜಿಎಫ್’: ಪ್ರಶಾಂತ್ ನೀಲ್​ಗೆ ಗರುಡ ರಾಮ್ ಧನ್ಯವಾದ
ತುಂಗಭದ್ರಾ ಪೈಪ್‌ಲೈನ್ ಒಡೆದು 50 ಎಕರೆ ಬೆಳೆ ಮುಳುಗಡೆ
ತುಂಗಭದ್ರಾ ಪೈಪ್‌ಲೈನ್ ಒಡೆದು 50 ಎಕರೆ ಬೆಳೆ ಮುಳುಗಡೆ
ಕಟ್ಟಡ ಕುಸಿತ: ಅಧಿಕಾರಿಗಳನ್ನ ತರಾಟೆಗೆ ತಗೊಂಡ್ರು ಲೋಕಾಯುಕ್ತ ನ್ಯಾಯಮೂರ್ತಿ
ಕಟ್ಟಡ ಕುಸಿತ: ಅಧಿಕಾರಿಗಳನ್ನ ತರಾಟೆಗೆ ತಗೊಂಡ್ರು ಲೋಕಾಯುಕ್ತ ನ್ಯಾಯಮೂರ್ತಿ
‘ಬಘೀರ’ದಲ್ಲಿ ಹೇಗಿದೆ ಗರುಡಾ ರಾಮ್ ಪಾತ್ರ? ಕಥೆ ಬಗ್ಗೆ ಸುಳಿವು ನೀಡಿದ ನಟ
‘ಬಘೀರ’ದಲ್ಲಿ ಹೇಗಿದೆ ಗರುಡಾ ರಾಮ್ ಪಾತ್ರ? ಕಥೆ ಬಗ್ಗೆ ಸುಳಿವು ನೀಡಿದ ನಟ
ನಾಮಪತ್ರ ಸಲ್ಲಿಕೆಗೆ ಸಿದ್ದರಾಮಯ್ಯ, ಶಿವಕುಮಾರ್ ಬರಲಿದ್ದಾರೆ: ಯೋಗೇಶ್ವರ್
ನಾಮಪತ್ರ ಸಲ್ಲಿಕೆಗೆ ಸಿದ್ದರಾಮಯ್ಯ, ಶಿವಕುಮಾರ್ ಬರಲಿದ್ದಾರೆ: ಯೋಗೇಶ್ವರ್
ಕುಮಾರಸ್ವಾಮಿ ಸೂಚಿಸುವ ಅಭ್ಯರ್ಥಿಗೆ ಎನ್​ಡಿಎ ಒಮ್ಮತದ ಬೆಂಬಲ: ವಿಜಯೇಂದ್ರ
ಕುಮಾರಸ್ವಾಮಿ ಸೂಚಿಸುವ ಅಭ್ಯರ್ಥಿಗೆ ಎನ್​ಡಿಎ ಒಮ್ಮತದ ಬೆಂಬಲ: ವಿಜಯೇಂದ್ರ
ಬಿಗ್​ಬಾಸ್​ನಲ್ಲಿ ಶುರುವಾಯ್ತು ಪಕ್ಷ ರಾಜಕೀಯ, ಸ್ಪರ್ಧಿಗಳ ನಡುವೆ ಗಲಾಟೆ
ಬಿಗ್​ಬಾಸ್​ನಲ್ಲಿ ಶುರುವಾಯ್ತು ಪಕ್ಷ ರಾಜಕೀಯ, ಸ್ಪರ್ಧಿಗಳ ನಡುವೆ ಗಲಾಟೆ