AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

50 ಕೋಟಿ ರೂಪಾಯಿ ಸಂಭಾವನೆ ಕಡಿಮೆ ಮಾಡಿಕೊಂಡ ಪ್ರಭಾಸ್; ಕಾರಣ ಏನು?

ಟಾಲಿವುಡ್ ಸ್ಟಾರ್ ನಟ ಪ್ರಭಾಸ್ ಅವರು ಪ್ರತಿ ಸಿನಿಮಾಗೆ ನೂರಾರು ಕೋಟಿ ರೂಪಾಯಿ ಸಂಭಾವನೆ ಪಡೆಯುತ್ತಾರೆ. ಆದರೆ ‘ದಿ ರಾಜಾ ಸಾಬ್’ ಚಿತ್ರಕ್ಕಾಗಿ ಅವರು ತಮ್ಮ ಸಂಭಾವನೆಯಲ್ಲಿ 50 ಕೋಟಿ ರೂಪಾಯಿ ಕಡಿಮೆ ಮಾಡಿಕೊಂಡಿದ್ದಾರೆ. ಈ ಸಿನಿಮಾಗೆ ಪ್ರಭಾಸ್ ಅವರು ಪಡೆದ ಸಂಭಾವನೆ ಎಷ್ಟು? ಆ ಕುರಿತು ಇಲ್ಲಿದೆ ಹೆಚ್ಚಿನ ಮಾಹಿತಿ..

50 ಕೋಟಿ ರೂಪಾಯಿ ಸಂಭಾವನೆ ಕಡಿಮೆ ಮಾಡಿಕೊಂಡ ಪ್ರಭಾಸ್; ಕಾರಣ ಏನು?
Prabhas
ಮದನ್​ ಕುಮಾರ್​
|

Updated on: Jun 05, 2025 | 7:08 PM

Share

ನಟ ಪ್ರಭಾಸ್ (Prabhas) ಅವರು ಬ್ಯಾಕ್ ಟು ಬ್ಯಾಕ್ ಸಿನಿಮಾಗಳಲ್ಲಿ ನಟಿಸುತ್ತಿದ್ದಾರೆ. ಸೋಲು-ಗೆಲುವು ಏನೇ ಇದ್ದರೂ ಪ್ರಭಾಸ್ ಅವರಿಗೆ ಇರುವ ಬೇಡಿಕೆ ಕಡಿಮೆ ಆಗಿಲ್ಲ. ಈಗ ಅವರು ‘ದಿ ರಾಜಾ ಸಾಬ್’ (The Raja Saab) ಸಿನಿಮಾದಲ್ಲಿ ನಟಿಸುತ್ತಿದ್ದಾರೆ. ಇದು ಪ್ರಭಾಸ್ ಅವರ ವೃತ್ತಿ ಜೀವನದಲ್ಲಿ ಡಿಫರೆಂಟ್ ಸಿನಿಮಾ. ಹಾರರ್ ಕಹಾನಿ ಇರುವ ಈ ಸಿನಿಮಾ ಮೇಲೆ ಪ್ರಭಾಸ್ ಅಭಿಮಾನಿಗಳಿಗೆ ಸಖತ್ ನಿರೀಕ್ಷೆ ಇದೆ. ನೂರಾರು ಕೋಟಿ ರೂಪಾಯಿ ಸಂಭಾವನೆ ಪಡೆಯುವ ಪ್ರಭಾಸ್ ಅವರು ‘ದಿ ರಾಜಾ ಸಾಬ್’ ಸಿನಿಮಾಗೆ ಕಡಿಮೆ ಸಂಬಳ (Remuneration) ಪಡೆದಿದ್ದಾರೆ ಎನ್ನಲಾಗಿದೆ.

‘ಬಾಹುಬಲಿ’ ಸಿನಿಮಾ ಗೆದ್ದ ಬಳಿಕ ಪ್ರಭಾಸ್ ಅವರಿಗೆ ಇದ್ದ ಬೇಡಿಕೆ ಒಮ್ಮೆಲೆ ಹೆಚ್ಚಾಯಿತು. ಏಕಾಏಕಿ ಅವರು ಸಂಭಾವನೆ ಜಾಸ್ತಿ ಮಾಡಿಕೊಂಡರು. ಒಂದು ಸಿನಿಮಾಗೆ ಪ್ರಭಾಸ್ ಅವರು ಬರೋಬ್ಬರಿ 150 ಕೋಟಿ ರೂಪಾಯಿ ಸಂಭಾವನೆ ಪಡೆಯುತ್ತಾರೆ. ಆದರೆ ‘ದಿ ರಾಜಾ ಸಾಬ್’ ಸಿನಿಮಾ ವಿಚಾರದಲ್ಲಿ ಅವರು ವಿನಾಯಿತಿ ನೀಡಿದ್ದಾರೆ. ಈ ಚಿತ್ರಕ್ಕೆ ಅವರು ಕೇವಲ 100 ಕೋಟಿ ರೂಪಾಯಿ ಸಂಭಾವನೆ ಪಡೆದಿದ್ದಾರೆ ಎಂದು ಸುದ್ದಿ ಆಗಿದೆ.

ಅಷ್ಟಕ್ಕೂ ಪ್ರಭಾಸ್ ಅವರು 50 ಕೋಟಿ ರೂಪಾಯಿ ಸಂಭಾವನೆ ಕಡಿಮೆ ಮಾಡಿಕೊಳ್ಳಲು ಕಾರಣ ಏನು? ಈ ಸಿನಿಮಾವನ್ನು ‘ಪೀಪಲ್ ಮೀಡಿಯಾ ಫ್ಯಾಕ್ಟರಿ’ ಸಂಸ್ಥೆಯು ನಿರ್ಮಾಣ ಮಾಡುತ್ತಿದೆ. ಈ ಹಿಂದೆ ಪ್ರಭಾಸ್ ನಟನೆಯ ‘ಆದಿಪುರುಷ್’ ಸಿನಿಮಾದ ತೆಲುಗು ವಿತರಣೆ ಹಕ್ಕುಗಳನ್ನು ಪಡೆದು ಈ ಸಂಸ್ಥೆ ಕೈ ಸುಟ್ಟುಕೊಂಡಿತ್ತು. ಆ ಕಾರಣದಿಂದ ಪ್ರಭಾಸ್ ಅವರು ಈಗ ಸಂಭಾವನೆ ಕಡಿಮೆ ಮಾಡಿಕೊಂಡಿರಬಹುದು.

ಇದನ್ನೂ ಓದಿ
Image
ಪ್ರಭಾಸ್ ಅಭಿಮಾನಿಗಳಿಗೆ ಗುಡ್ ನ್ಯೂಸ್ ಕೊಟ್ಟ ‘ಕಲ್ಕಿ 2898 ಎಡಿ’ ಟೀಂ
Image
ಪ್ರಭಾಸ್ ಜೊತೆಗೆ ಹೊಂಬಾಳೆಯ 4ನೇ ಸಿನಿಮಾ, ನಿರ್ದೇಶಕ ಯಾರು?
Image
ತಂದೆ ಮೃತಪಟ್ಟ ನೋವಲ್ಲೂ ಸಹಾಯ ಮಾಡೋದು ಮರೆತಿರಲಿಲ್ಲ ಪ್ರಭಾಸ್  
Image
ಪ್ರಭಾಸ್​ರ ಹೊಸ ಚಿತ್ರ ಶೂಟಿಂಗ್​ಗೆ ಮುಹೂರ್ತ ಫಿಕ್ಸ್, ಬಿಡುಗಡೆ ಯಾವಾಗ?

ಕಾರಣಾಂತರಗಳಿಂದ ‘ದಿ ರಾಜಾ ಸಾಬ್’ ಸಿನಿಮಾದ ಕೆಲಸಗಳು ವಿಳಂಬ ಆದವು. ಈ ಚಿತ್ರಕ್ಕೆ ಮಾರುತಿ ಅವರು ನಿರ್ದೇಶನ ಮಾಡುತ್ತಿದ್ದಾರೆ. ಪ್ರಭಾಸ್ ಅವರಿಗೆ ಈ ಚಿತ್ರದಲ್ಲಿ ಡಿಫರೆಂಟ್ ಗೆಟಪ್ ಇದೆ. ಎಲ್ಲವೂ ಅಂದುಕೊಂಡಂತೆ ಆಗಿದ್ದರೆ ಏಪ್ರಿಲ್ 10ರಂದು ಈ ಸಿನಿಮಾ ಬಿಡುಗಡೆ ಆಗಬೇಕಿತ್ತು. ಆದರೆ ಬಿಡುಗಡೆ ದಿನಾಂಕ ಮುಂದೂಡಿಕೆ ಆಯಿತು. ಡಿಸೆಂಬರ್ 5ರಂದು ‘ದಿ ರಾಜಾ ಸಾಬ್’ ಸಿನಿಮಾ ರಿಲೀಸ್ ಆಗಲಿದೆ.

ಇದನ್ನೂ ಓದಿ: ‘ಸ್ಪಿರಿಟ್’ ಸಿನಿಮಾದಲ್ಲಿ ಪ್ರಭಾಸ್​ಗೆ ಜೋಡಿಯಾದ ‘ಅನಿಮಲ್’ ನಟಿ ತೃಪ್ತಿ ದಿಮ್ರಿ

ಇದೇ ಮೊದಲ ಬಾರಿಗೆ ಪ್ರಭಾಸ್ ಅವರು ಹಾರರ್ ಸಿನಿಮಾದಲ್ಲಿ ನಟಿಸಿದ್ದಾರೆ. ಅದು ‘ದಿ ರಾಜಾ ಸಾಬ್’ ಸಿನಿಮಾದ ಮೊದಲ ವಿಶೇಷತೆ. ‘ಕಣ್ಣಪ್ಪ’ ಸಿನಿಮಾದಲ್ಲಿ ಅವರು ವಿಶೇಷ ಪಾತ್ರ ಮಾಡಿದ್ದಾರೆ. ಅಲ್ಲದೇ, ಸಂದೀಪ್ ರೆಡ್ಡಿ ವಂಗ ನಿರ್ದೇಶನದ ‘ಸ್ಪಿರಿಟ್’ ಸಿನಿಮಾಗೂ ಪ್ರಭಾಸ್ ಅವರು ಹೀರೋ ಆಗಿದ್ದಾರೆ. ಆ ಸಿನಿಮಾ ಇನ್ನಷ್ಟೇ ಸೆಟ್ಟೇರಬೇಕಿದೆ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

Follow Us
ಮದನ್​ ಕುಮಾರ್​
ಮದನ್​ ಕುಮಾರ್​

ಮಾಧ್ಯಮ ಲೋಕದಲ್ಲಿ ಕಳೆದ 10 ವರ್ಷಗಳಿಂದ ಸಕ್ರಿಯವಾಗಿದ್ದೇನೆ. ಕನ್ನಡದ ವಿವಿಧ ಪ್ರತಿಷ್ಠಿತ ಮಾಧ್ಯಮಗಳಲ್ಲಿ ಕೆಲಸ ಮಾಡಿದ ಅನುಭವ ಹೊಂದಿದ್ದೇನೆ. ಸಿನಿಮಾ ವರದಿಗಾರಿಕೆ ಮತ್ತು ವಿಮರ್ಶೆಯಲ್ಲಿ ಪರಿಣತಿ ಇದೆ. 2014ರಿಂದ 2019ರ ತನಕ ವಿಜಯವಾಣಿ ದಿನ ಪತ್ರಿಕೆಯಲ್ಲಿ ಸಿನಿಮಾ ವರದಿಗಾರನಾಗಿ ಕೆಲಸ ಮಾಡಿ ಅನುಭವ ಪಡೆದಿದ್ದೇನೆ. ಬಳಿಕ ವಿಜಯ ಕರ್ನಾಟಕ ಡಿಜಿಟಲ್ (ಟೈಮ್ಸ್​ ಇಂಟರ್​ನೆಟ್​) ಸಂಸ್ಥೆಯಲ್ಲಿ ಕಂಟೆಂಟ್​ ಪ್ರೊಡ್ಯೂಸರ್​ ಆಗಿ ಕೆಲಸ ಮಾಡಿದ್ದೇನೆ. ಪ್ರಸ್ತುತ ‘ಟಿವಿ9 ಕನ್ನಡ ಡಿಜಿಟಲ್​’ನ ಸಿನಿಮಾ/ಮನರಂಜನೆ ವಿಭಾಗದಲ್ಲಿ ಕೆಲಸ ಮಾಡುತ್ತಿದ್ದೇನೆ. ಎಲ್ಲ ಭಾಷೆಯ ಸಿನಿಮಾಗಳ ವೀಕ್ಷಣೆಯಲ್ಲಿ ಆಸಕ್ತಿ ಇದೆ. ಸದಾ ಕನ್ನಡ-ಇಂಗ್ಲಿಷ್​ ಸಾಹಿತ್ಯದ ವಿದ್ಯಾರ್ಥಿ.

Read More
ಎತ್ತಿನ ಬದಲು ಹೆಂಡತಿಯನ್ನೇ ನೊಗಕ್ಕೆ ಕಟ್ಟಿ ಹೊಲ ಉಳುಮೆ ಮಾಡಿದ ರೈತ!
ಎತ್ತಿನ ಬದಲು ಹೆಂಡತಿಯನ್ನೇ ನೊಗಕ್ಕೆ ಕಟ್ಟಿ ಹೊಲ ಉಳುಮೆ ಮಾಡಿದ ರೈತ!
ಧರ್ಮಸ್ಥಳಕ್ಕೆ ಕಳಂಕ ತರಲು ಗ್ಯಾಂಗ್ ಹುನ್ನಾರ:ಚಿನ್ನಯ್ಯನಿಂದ ಸ್ಫೋಟಕ ಮಾಹಿತಿ
ಧರ್ಮಸ್ಥಳಕ್ಕೆ ಕಳಂಕ ತರಲು ಗ್ಯಾಂಗ್ ಹುನ್ನಾರ:ಚಿನ್ನಯ್ಯನಿಂದ ಸ್ಫೋಟಕ ಮಾಹಿತಿ
ಗೊರಗುಂಟೆಪಾಳ್ಯ ಭೀಕರ ರಸ್ತೆ ಅಪಘಾತ: ಸ್ಫೋಟಕ ಮಾಹಿತಿ ನೀಡಿದ ಡಿಸಿಪಿ
ಗೊರಗುಂಟೆಪಾಳ್ಯ ಭೀಕರ ರಸ್ತೆ ಅಪಘಾತ: ಸ್ಫೋಟಕ ಮಾಹಿತಿ ನೀಡಿದ ಡಿಸಿಪಿ
ಗೃಹಲಕ್ಷ್ಮೀ ಯೋಜನೆ ಪರಿಷ್ಕರಣೆ: 3.89 ಲಕ್ಷ ಜನ ಸ್ಕೀಂನಿಂದ ಔಟ್!
ಗೃಹಲಕ್ಷ್ಮೀ ಯೋಜನೆ ಪರಿಷ್ಕರಣೆ: 3.89 ಲಕ್ಷ ಜನ ಸ್ಕೀಂನಿಂದ ಔಟ್!
ವಿಡಿಯೋ: ಸಿನಿಮಾಗಳಲ್ಲಿ ಆಕ್ಷನ್ ದೃಶ್ಯ ಎಷ್ಟು ಕಷ್ಟವಾಗಿರುತ್ತೆ ನೋಡಿ
ವಿಡಿಯೋ: ಸಿನಿಮಾಗಳಲ್ಲಿ ಆಕ್ಷನ್ ದೃಶ್ಯ ಎಷ್ಟು ಕಷ್ಟವಾಗಿರುತ್ತೆ ನೋಡಿ
ಬೈಕ್​​​ಗೆ ಗುದ್ದಿ ನೇರವಾಗಿ ಅಡಿಕೆ ತೋಟಕ್ಕೆ ನುಗ್ಗಿದ KSRTC ಬಸ್
ಬೈಕ್​​​ಗೆ ಗುದ್ದಿ ನೇರವಾಗಿ ಅಡಿಕೆ ತೋಟಕ್ಕೆ ನುಗ್ಗಿದ KSRTC ಬಸ್
ಮತದಾನವಿಲ್ಲದೇ ಕರ್ನಾಟಕದಿಂದ ನಾಲ್ವರು ರಾಜ್ಯಸಭೆಗೆ ಅವಿರೋಧವಾಗಿ ಆಯ್ಕೆ
ಮತದಾನವಿಲ್ಲದೇ ಕರ್ನಾಟಕದಿಂದ ನಾಲ್ವರು ರಾಜ್ಯಸಭೆಗೆ ಅವಿರೋಧವಾಗಿ ಆಯ್ಕೆ
‘ಬಾಯ್ಸ್ ನೆವರ್ ಕಾಂಪ್ರಮೈಸ್’: ಸಿನಿಮಾ ಬಗ್ಗೆ ನಿರ್ದೇಶಕರ ಮಾತು
‘ಬಾಯ್ಸ್ ನೆವರ್ ಕಾಂಪ್ರಮೈಸ್’: ಸಿನಿಮಾ ಬಗ್ಗೆ ನಿರ್ದೇಶಕರ ಮಾತು
'ಅವನು ನನ್ನ ವಿರುದ್ಧವೇ ಕೆಲಸ ಮಾಡಿದ್ದಾನೆ': ಜಮಿರ್ ವಿರುದ್ಧ ಸಿದ್ದು ಗರಂ
'ಅವನು ನನ್ನ ವಿರುದ್ಧವೇ ಕೆಲಸ ಮಾಡಿದ್ದಾನೆ': ಜಮಿರ್ ವಿರುದ್ಧ ಸಿದ್ದು ಗರಂ
ಹಿಂದುಳಿದ ವರ್ಗಗಳ ಇಲಾಖೆಯಲ್ಲಿ ಅನುದಾನ ತಾರತಮ್ಯದ ಆರೋಪ
ಹಿಂದುಳಿದ ವರ್ಗಗಳ ಇಲಾಖೆಯಲ್ಲಿ ಅನುದಾನ ತಾರತಮ್ಯದ ಆರೋಪ