ಪ್ರಭಾಸ್​ ಬಗ್ಗೆ ಹಬ್ಬಿದೆ 150 ಕೋಟಿ ರೂ. ಗಾಸಿಪ್​; ಸಂಬಳದ ವಿಷಯ ಕೇಳಿ ಹುಬ್ಬೇರಿಸಿದ ಫ್ಯಾನ್ಸ್​

Prabhas: ‘ಆದಿಪುರುಷ್​’ ಚಿತ್ರದಲ್ಲಿ ಪ್ರಭಾಸ್​ ಅವರು ರಾಮನ ಪಾತ್ರ ಮಾಡುತ್ತಿದ್ದಾರೆ. ಈ ಪಾತ್ರಕ್ಕಾಗಿ ಅವರು ಬರೋಬ್ಬರಿ 150 ಕೋಟಿ ರೂ. ಸಂಭಾವನೆ ಪಡೆದುಕೊಳ್ಳುತ್ತಿದ್ದಾರೆ ಎಂಬ ಗಾಸಿಪ್​ ಹರಿದಾಡುತ್ತಿದೆ.

ಪ್ರಭಾಸ್​ ಬಗ್ಗೆ ಹಬ್ಬಿದೆ 150 ಕೋಟಿ ರೂ. ಗಾಸಿಪ್​; ಸಂಬಳದ ವಿಷಯ ಕೇಳಿ ಹುಬ್ಬೇರಿಸಿದ ಫ್ಯಾನ್ಸ್​
ಪ್ರಭಾಸ್
Follow us
| Updated By: Digi Tech Desk

Updated on:Oct 08, 2021 | 9:35 AM

ಪ್ಯಾನ್ ಇಂಡಿಯಾ ಸ್ಟಾರ್​ ಪ್ರಭಾಸ್​ ಅವರು ಸದ್ಯ ಹಲವು ಪ್ರಾಜೆಕ್ಟ್​ಗಳಲ್ಲಿ ಬ್ಯುಸಿ ಆಗಿದ್ದಾರೆ. ಅವರ ಕಾಲ್​ಶೀಟ್​ಗೆ ಸಿಕ್ಕಾಪಟ್ಟೆ ಬೇಡಿಕೆ ಇದೆ. ಮೊದಲು ತೆಲುಗು ಚಿತ್ರರಂಗಕ್ಕೆ ಮಾತ್ರ ಸೀಮಿತ ಆಗಿದ್ದ ಅವರು ‘ಬಾಹುಬಲಿ’ ಚಿತ್ರದ ಯಶಸ್ಸಿನ ಬಳಿಕ ಬಹುಭಾಷೆಯಲ್ಲಿ ಜನಪ್ರಿಯತೆ ಗಳಿಸಿದರು. ಅದೇ ರೀತಿ ಅವರ ಸಂಭಾವನೆ ಕೂಡ ಹೆಚ್ಚಿದೆ. ಪ್ರಭಾಸ್​ ನಟಿಸುತ್ತಿರುವ ‘ಆದಿಪುರುಷ್​’ ಚಿತ್ರ ಹಲವು ಕಾರಣಗಳಿಂದ ಸದ್ದು ಮಾಡುತ್ತಿದೆ. ಈ ಚಿತ್ರಕ್ಕೆ ಪ್ರಭಾಸ್​ ಎಷ್ಟು ಸಂಭಾವನೆ ಪಡೆಯುತ್ತಿದ್ದಾರೆ ಎಂಬ ಬಗ್ಗೆಯೂ ಈಗ ಗಾಸಿಪ್ ಹಬ್ಬಿದೆ. ಅದನ್ನು ಕೇಳಿ ಫ್ಯಾನ್ಸ್​ ನಿಜಕ್ಕೂ ಅಚ್ಚರಿ ವ್ಯಕ್ತಪಡಿಸಿದ್ದಾರೆ.

ಆದಿಪುರುಷ್​ ಸಿನಿಮಾ ತುಂಬ ಅದ್ದೂರಿಯಾಗಿ ಮೂಡಿಬರಲಿದೆ ಎಂಬುದರಲ್ಲಿ ಅನುಮಾನವೇ ಇಲ್ಲ. ಬರೋಬ್ಬರಿ 500 ಕೋಟಿ ರೂ. ಬಜೆಟ್​ನಲ್ಲಿ ಈ ಸಿನಿಮಾ ನಿರ್ಮಾಣ ಆಗುತ್ತಿದೆ. ‘ತಾನಾಜಿ’ ಸಿನಿಮಾ ಮೂಲಕ ಭಾರಿ ಯಶಸ್ಸು ಕಂಡಿದ್ದ ನಿರ್ದೇಶಕ ಓಂ ರಾವುತ್​ ಅವರು ‘ಆದಿಪುರುಷ್​’ ಚಿತ್ರಕ್ಕೆ ನಿರ್ದೇಶನ ಮಾಡುತ್ತಿರುವುದರಿಂದ ಅವರ ಕೆಲಸದ ಮೇಲೆ ನಿರ್ಮಾಪಕರಿಗೆ ಸಖತ್​ ಭರವಸೆ ಇದೆ. ಇನ್ನು, ಪ್ರಭಾಸ್​ಗೆ ಇರುವ ದೊಡ್ಡ ಫ್ಯಾನ್ಸ್​ ಫಾಲೋಯಿಂಗ್​ ನಂಬಿಕೊಂಡು ಇಷ್ಟೊಂದು ಬಜೆಟ್​ ಸುರಿಯಲಾಗಿದೆ.

ಆದಿಪುರುಷ್​ ಚಿತ್ರದಲ್ಲಿ ಪ್ರಭಾಸ್​ ಅವರು ರಾಮನ ಪಾತ್ರ ಮಾಡುತ್ತಿದ್ದಾರೆ. ಈ ಪಾತ್ರಕ್ಕಾಗಿ ಅವರು ಬರೋಬ್ಬರಿ 150 ಕೋಟಿ ರೂ. ಸಂಭಾವನೆ ಪಡೆದುಕೊಳ್ಳುತ್ತಿದ್ದಾರೆ ಎಂಬ ಗಾಸಿಪ್​ ಹರಿದಾಡುತ್ತಿದೆ. ಈ ಮಾಹಿತಿ ಬಗ್ಗೆ ಕೆಲವರಿಗೆ ಅನುಮಾನ ಕೂಡ ಇದೆ. ಯಾಕೆಂದರೆ, ಪ್ರಭಾಸ್​ ನಟಿಸಿದ ಪ್ಯಾನ್​ ಇಂಡಿಯಾ ಸಿನಿಮಾ ‘ಸಾಹೋ’ ಸೋತಿತ್ತು. ಆ ಬಳಿಕ ಅವರಿಗೆ ಇಷ್ಟೊಂದು ದೊಡ್ಡ ಮೊತ್ತದ ಸಂಭಾವನೆ ಕೊಡಲು ಸಾಧ್ಯವೇ ಎಂದು ಕೆಲವರು ಪ್ರಶ್ನೆ ಮಾಡಿದ್ದಾರೆ.

ಆದಿಪುರುಷ್​ ಚಿತ್ರದಲ್ಲಿ ರಾವಣನಾಗಿ ಸೈಫ್​ ಅಲಿ ಖಾನ್​ ಕಾಣಿಸಿಕೊಳ್ಳಲಿದ್ದಾರೆ. ನಾಯಕಿಯಾಗಿ ಕೃತಿ ಸನೋನ್​ ಅಭಿನಯಿಸುತ್ತಿದ್ದಾರೆ. ಇದಲ್ಲದೇ ಪ್ರಭಾಸ್​ ನಟನೆಯ ‘ರಾಧೆ ಶ್ಯಾಮ್​’ ಚಿತ್ರ ಕೂಡ ದೊಡ್ಡ ಮಟ್ಟದಲ್ಲಿ ನಿರೀಕ್ಷೆ ಮೂಡಿಸಿದೆ. 2022ರ ಜ.14ರಂದು ಆ ಸಿನಿಮಾ ಬಿಡುಗಡೆ ಆಗಲಿದೆ. ‘ಕೆಜಿಎಫ್​’ ನಿರ್ದೇಶಕ ಪ್ರಶಾಂತ್​ ನೀಲ್​ ಆ್ಯಕ್ಷನ್​-ಕಟ್​ ಹೇಳುತ್ತಿರುವ ‘ಸಲಾರ್​’ ಚಿತ್ರದಲ್ಲೂ ಪ್ರಭಾಸ್​ ನಟಿಸುತ್ತಿದ್ದಾರೆ. ಇತ್ತೀಚೆಗಷ್ಟೇ ಅವರ 25ನೇ ಸಿನಿಮಾ ಕೂಡ ಅನೌನ್ಸ್​ ಆಗಿದೆ.

ಇದನ್ನೂ ಓದಿ:

Prabhas: ಆದಿಪುರುಷ್​ಗಾಗಿ ಬಾಡಿ ಬೆಳೆಸಲು ಸ್ಟಿರಾಯ್ಡ್​ ಬಳಸಿದ್ದಾರಾ ಪ್ರಭಾಸ್​? ಸಹನಟ ತೆರೆದಿಟ್ಟ ಸತ್ಯ ಇಲ್ಲಿದೆ

ಪ್ರಭಾಸ್​ಗೆ ವಿದೇಶದಲ್ಲಿ ಚಿಕಿತ್ಸೆ ಕೊಡಿಸಲಿರುವ ನಿರ್ದೇಶಕ; ‘ಬಾಹುಬಲಿ’ ನಟನಿಗೆ ಅಂಥದ್ದೇನಾಗಿದೆ?

Published On - 8:02 am, Fri, 8 October 21

ಅಂತಿಂಥ ಕಳ್ಳಿ ನಾನಲ್ಲ; ಇವರು ಸೀರೆ ಕದಿಯೋದೇ ಗೊತ್ತಾಗಲ್ಲ!
ಅಂತಿಂಥ ಕಳ್ಳಿ ನಾನಲ್ಲ; ಇವರು ಸೀರೆ ಕದಿಯೋದೇ ಗೊತ್ತಾಗಲ್ಲ!
ಶಾಸಕ ಯತ್ನಾಳ್ ವಿರುದ್ಧ ಎಫ್​ಐಆರ್ ದಾಖಲು: ಬಾಗಲಕೋಟೆ ಎಸ್​ಪಿ ಹೇಳಿದ್ದಿಷ್ಟು
ಶಾಸಕ ಯತ್ನಾಳ್ ವಿರುದ್ಧ ಎಫ್​ಐಆರ್ ದಾಖಲು: ಬಾಗಲಕೋಟೆ ಎಸ್​ಪಿ ಹೇಳಿದ್ದಿಷ್ಟು
ಹೆಗಲಿಗೆ ಬ್ಯಾಗ್, ಕೈಯಲ್ಲಿ ಚಪ್ಪಲಿ ಹಿಡಿದು ಕೆಸರಲ್ಲೇ ನಡೆಯಬೇಕು ಮಕ್ಕಳು
ಹೆಗಲಿಗೆ ಬ್ಯಾಗ್, ಕೈಯಲ್ಲಿ ಚಪ್ಪಲಿ ಹಿಡಿದು ಕೆಸರಲ್ಲೇ ನಡೆಯಬೇಕು ಮಕ್ಕಳು
ಜಮ್ಮು ಕಾಶ್ಮೀರದಲ್ಲಿ ಬಸ್ ಅಪಘಾತ; 3 ಬಿಎಸ್‌ಎಫ್ ಯೋಧರು ಸಾವು
ಜಮ್ಮು ಕಾಶ್ಮೀರದಲ್ಲಿ ಬಸ್ ಅಪಘಾತ; 3 ಬಿಎಸ್‌ಎಫ್ ಯೋಧರು ಸಾವು
20 ರೂ. ನೀರಿನ ಬಾಟಲಿ ಕೊಳ್ಳಲು ಬಂದವನು ಮಾಡಿದ್ದೇನು ನೋಡಿ!
20 ರೂ. ನೀರಿನ ಬಾಟಲಿ ಕೊಳ್ಳಲು ಬಂದವನು ಮಾಡಿದ್ದೇನು ನೋಡಿ!
ಬ್ಯಾಕ್ ಟು ಬ್ಯಾಕ್ ವಿಕೆಟ್ ಉರುಳಿಸಿದ ಆಕಾಶ್ ದೀಪ್
ಬ್ಯಾಕ್ ಟು ಬ್ಯಾಕ್ ವಿಕೆಟ್ ಉರುಳಿಸಿದ ಆಕಾಶ್ ದೀಪ್
ದರ್ಶನ್ ಹೊರಗೆ ಬಂದ್ರೆ ಖುಷಿ; ತಪ್ಪು ಮಾಡಿದ್ದರೆ ಕ್ರಮ ಆಗಲಿ: ಗುರು ಕಿರಣ್
ದರ್ಶನ್ ಹೊರಗೆ ಬಂದ್ರೆ ಖುಷಿ; ತಪ್ಪು ಮಾಡಿದ್ದರೆ ಕ್ರಮ ಆಗಲಿ: ಗುರು ಕಿರಣ್
ಭಗವಾನ್ ಜಗನ್ನಾಥನ ವಿಗ್ರಹ ಖರೀದಿಸಿ, ಡಿಜಿಟಲ್ ಪೇಮೆಂಟ್ ಮಾಡಿದ ಪಿಎಂ ಮೋದಿ
ಭಗವಾನ್ ಜಗನ್ನಾಥನ ವಿಗ್ರಹ ಖರೀದಿಸಿ, ಡಿಜಿಟಲ್ ಪೇಮೆಂಟ್ ಮಾಡಿದ ಪಿಎಂ ಮೋದಿ
ತ್ರಿವರ್ಣ ಧ್ವಜದಲ್ಲಿ ಉರ್ದು ವಾಕ್ಯ ಬರೆದು ದರ್ಗಾಕ್ಕೆ ಕಟ್ಟಿದ ಯುವಕ:ವಿಡಿಯೋ
ತ್ರಿವರ್ಣ ಧ್ವಜದಲ್ಲಿ ಉರ್ದು ವಾಕ್ಯ ಬರೆದು ದರ್ಗಾಕ್ಕೆ ಕಟ್ಟಿದ ಯುವಕ:ವಿಡಿಯೋ
ದಸರಾ ಉದ್ಘಾಟನೆ ಅನಿರೀಕ್ಷಿತವಾಗಿ ಬಂದ ಸಂತೋಷದ ಕ್ಷಣ; ಹಂಪಾ ನಾಗರಾಜಯ್ಯ
ದಸರಾ ಉದ್ಘಾಟನೆ ಅನಿರೀಕ್ಷಿತವಾಗಿ ಬಂದ ಸಂತೋಷದ ಕ್ಷಣ; ಹಂಪಾ ನಾಗರಾಜಯ್ಯ