AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಪ್ರಭಾಸ್​ ಬಗ್ಗೆ ಹಬ್ಬಿದೆ 150 ಕೋಟಿ ರೂ. ಗಾಸಿಪ್​; ಸಂಬಳದ ವಿಷಯ ಕೇಳಿ ಹುಬ್ಬೇರಿಸಿದ ಫ್ಯಾನ್ಸ್​

Prabhas: ‘ಆದಿಪುರುಷ್​’ ಚಿತ್ರದಲ್ಲಿ ಪ್ರಭಾಸ್​ ಅವರು ರಾಮನ ಪಾತ್ರ ಮಾಡುತ್ತಿದ್ದಾರೆ. ಈ ಪಾತ್ರಕ್ಕಾಗಿ ಅವರು ಬರೋಬ್ಬರಿ 150 ಕೋಟಿ ರೂ. ಸಂಭಾವನೆ ಪಡೆದುಕೊಳ್ಳುತ್ತಿದ್ದಾರೆ ಎಂಬ ಗಾಸಿಪ್​ ಹರಿದಾಡುತ್ತಿದೆ.

ಪ್ರಭಾಸ್​ ಬಗ್ಗೆ ಹಬ್ಬಿದೆ 150 ಕೋಟಿ ರೂ. ಗಾಸಿಪ್​; ಸಂಬಳದ ವಿಷಯ ಕೇಳಿ ಹುಬ್ಬೇರಿಸಿದ ಫ್ಯಾನ್ಸ್​
ಪ್ರಭಾಸ್
TV9 Web
| Edited By: |

Updated on:Oct 08, 2021 | 9:35 AM

Share

ಪ್ಯಾನ್ ಇಂಡಿಯಾ ಸ್ಟಾರ್​ ಪ್ರಭಾಸ್​ ಅವರು ಸದ್ಯ ಹಲವು ಪ್ರಾಜೆಕ್ಟ್​ಗಳಲ್ಲಿ ಬ್ಯುಸಿ ಆಗಿದ್ದಾರೆ. ಅವರ ಕಾಲ್​ಶೀಟ್​ಗೆ ಸಿಕ್ಕಾಪಟ್ಟೆ ಬೇಡಿಕೆ ಇದೆ. ಮೊದಲು ತೆಲುಗು ಚಿತ್ರರಂಗಕ್ಕೆ ಮಾತ್ರ ಸೀಮಿತ ಆಗಿದ್ದ ಅವರು ‘ಬಾಹುಬಲಿ’ ಚಿತ್ರದ ಯಶಸ್ಸಿನ ಬಳಿಕ ಬಹುಭಾಷೆಯಲ್ಲಿ ಜನಪ್ರಿಯತೆ ಗಳಿಸಿದರು. ಅದೇ ರೀತಿ ಅವರ ಸಂಭಾವನೆ ಕೂಡ ಹೆಚ್ಚಿದೆ. ಪ್ರಭಾಸ್​ ನಟಿಸುತ್ತಿರುವ ‘ಆದಿಪುರುಷ್​’ ಚಿತ್ರ ಹಲವು ಕಾರಣಗಳಿಂದ ಸದ್ದು ಮಾಡುತ್ತಿದೆ. ಈ ಚಿತ್ರಕ್ಕೆ ಪ್ರಭಾಸ್​ ಎಷ್ಟು ಸಂಭಾವನೆ ಪಡೆಯುತ್ತಿದ್ದಾರೆ ಎಂಬ ಬಗ್ಗೆಯೂ ಈಗ ಗಾಸಿಪ್ ಹಬ್ಬಿದೆ. ಅದನ್ನು ಕೇಳಿ ಫ್ಯಾನ್ಸ್​ ನಿಜಕ್ಕೂ ಅಚ್ಚರಿ ವ್ಯಕ್ತಪಡಿಸಿದ್ದಾರೆ.

ಆದಿಪುರುಷ್​ ಸಿನಿಮಾ ತುಂಬ ಅದ್ದೂರಿಯಾಗಿ ಮೂಡಿಬರಲಿದೆ ಎಂಬುದರಲ್ಲಿ ಅನುಮಾನವೇ ಇಲ್ಲ. ಬರೋಬ್ಬರಿ 500 ಕೋಟಿ ರೂ. ಬಜೆಟ್​ನಲ್ಲಿ ಈ ಸಿನಿಮಾ ನಿರ್ಮಾಣ ಆಗುತ್ತಿದೆ. ‘ತಾನಾಜಿ’ ಸಿನಿಮಾ ಮೂಲಕ ಭಾರಿ ಯಶಸ್ಸು ಕಂಡಿದ್ದ ನಿರ್ದೇಶಕ ಓಂ ರಾವುತ್​ ಅವರು ‘ಆದಿಪುರುಷ್​’ ಚಿತ್ರಕ್ಕೆ ನಿರ್ದೇಶನ ಮಾಡುತ್ತಿರುವುದರಿಂದ ಅವರ ಕೆಲಸದ ಮೇಲೆ ನಿರ್ಮಾಪಕರಿಗೆ ಸಖತ್​ ಭರವಸೆ ಇದೆ. ಇನ್ನು, ಪ್ರಭಾಸ್​ಗೆ ಇರುವ ದೊಡ್ಡ ಫ್ಯಾನ್ಸ್​ ಫಾಲೋಯಿಂಗ್​ ನಂಬಿಕೊಂಡು ಇಷ್ಟೊಂದು ಬಜೆಟ್​ ಸುರಿಯಲಾಗಿದೆ.

ಆದಿಪುರುಷ್​ ಚಿತ್ರದಲ್ಲಿ ಪ್ರಭಾಸ್​ ಅವರು ರಾಮನ ಪಾತ್ರ ಮಾಡುತ್ತಿದ್ದಾರೆ. ಈ ಪಾತ್ರಕ್ಕಾಗಿ ಅವರು ಬರೋಬ್ಬರಿ 150 ಕೋಟಿ ರೂ. ಸಂಭಾವನೆ ಪಡೆದುಕೊಳ್ಳುತ್ತಿದ್ದಾರೆ ಎಂಬ ಗಾಸಿಪ್​ ಹರಿದಾಡುತ್ತಿದೆ. ಈ ಮಾಹಿತಿ ಬಗ್ಗೆ ಕೆಲವರಿಗೆ ಅನುಮಾನ ಕೂಡ ಇದೆ. ಯಾಕೆಂದರೆ, ಪ್ರಭಾಸ್​ ನಟಿಸಿದ ಪ್ಯಾನ್​ ಇಂಡಿಯಾ ಸಿನಿಮಾ ‘ಸಾಹೋ’ ಸೋತಿತ್ತು. ಆ ಬಳಿಕ ಅವರಿಗೆ ಇಷ್ಟೊಂದು ದೊಡ್ಡ ಮೊತ್ತದ ಸಂಭಾವನೆ ಕೊಡಲು ಸಾಧ್ಯವೇ ಎಂದು ಕೆಲವರು ಪ್ರಶ್ನೆ ಮಾಡಿದ್ದಾರೆ.

ಆದಿಪುರುಷ್​ ಚಿತ್ರದಲ್ಲಿ ರಾವಣನಾಗಿ ಸೈಫ್​ ಅಲಿ ಖಾನ್​ ಕಾಣಿಸಿಕೊಳ್ಳಲಿದ್ದಾರೆ. ನಾಯಕಿಯಾಗಿ ಕೃತಿ ಸನೋನ್​ ಅಭಿನಯಿಸುತ್ತಿದ್ದಾರೆ. ಇದಲ್ಲದೇ ಪ್ರಭಾಸ್​ ನಟನೆಯ ‘ರಾಧೆ ಶ್ಯಾಮ್​’ ಚಿತ್ರ ಕೂಡ ದೊಡ್ಡ ಮಟ್ಟದಲ್ಲಿ ನಿರೀಕ್ಷೆ ಮೂಡಿಸಿದೆ. 2022ರ ಜ.14ರಂದು ಆ ಸಿನಿಮಾ ಬಿಡುಗಡೆ ಆಗಲಿದೆ. ‘ಕೆಜಿಎಫ್​’ ನಿರ್ದೇಶಕ ಪ್ರಶಾಂತ್​ ನೀಲ್​ ಆ್ಯಕ್ಷನ್​-ಕಟ್​ ಹೇಳುತ್ತಿರುವ ‘ಸಲಾರ್​’ ಚಿತ್ರದಲ್ಲೂ ಪ್ರಭಾಸ್​ ನಟಿಸುತ್ತಿದ್ದಾರೆ. ಇತ್ತೀಚೆಗಷ್ಟೇ ಅವರ 25ನೇ ಸಿನಿಮಾ ಕೂಡ ಅನೌನ್ಸ್​ ಆಗಿದೆ.

ಇದನ್ನೂ ಓದಿ:

Prabhas: ಆದಿಪುರುಷ್​ಗಾಗಿ ಬಾಡಿ ಬೆಳೆಸಲು ಸ್ಟಿರಾಯ್ಡ್​ ಬಳಸಿದ್ದಾರಾ ಪ್ರಭಾಸ್​? ಸಹನಟ ತೆರೆದಿಟ್ಟ ಸತ್ಯ ಇಲ್ಲಿದೆ

ಪ್ರಭಾಸ್​ಗೆ ವಿದೇಶದಲ್ಲಿ ಚಿಕಿತ್ಸೆ ಕೊಡಿಸಲಿರುವ ನಿರ್ದೇಶಕ; ‘ಬಾಹುಬಲಿ’ ನಟನಿಗೆ ಅಂಥದ್ದೇನಾಗಿದೆ?

Published On - 8:02 am, Fri, 8 October 21

Follow Us
ಕರಾವಳಿಯಲ್ಲಿ ಇಂದು ಈದ್ ಮಿಲಾದ್: ದ.ಕ, ಉಡುಪಿ ಜಿಲ್ಲೆಗೆ ಸಾರ್ವತ್ರಿಕ ರಜೆ
ಕರಾವಳಿಯಲ್ಲಿ ಇಂದು ಈದ್ ಮಿಲಾದ್: ದ.ಕ, ಉಡುಪಿ ಜಿಲ್ಲೆಗೆ ಸಾರ್ವತ್ರಿಕ ರಜೆ
ಮಂಗಳ ಗೌರಿ ವ್ರತ, ಪ್ರದೋಷ ದಿನ: 12 ರಾಶಿಗಳ ದಿನ ಭವಿಷ್ಯ ಇಲ್ಲಿದೆ
ಮಂಗಳ ಗೌರಿ ವ್ರತ, ಪ್ರದೋಷ ದಿನ: 12 ರಾಶಿಗಳ ದಿನ ಭವಿಷ್ಯ ಇಲ್ಲಿದೆ
ಆಯಿಲ್ ಟ್ಯಾಂಕರ್ ಪಲ್ಟಿ; ಎಣ್ಣೆ ಹಿಡಿಯಲು ಬಕೆಟ್ ಹಿಡಿದು ನುಗ್ಗಿದ ಜನ!
ಆಯಿಲ್ ಟ್ಯಾಂಕರ್ ಪಲ್ಟಿ; ಎಣ್ಣೆ ಹಿಡಿಯಲು ಬಕೆಟ್ ಹಿಡಿದು ನುಗ್ಗಿದ ಜನ!
'ರಾಮಾಯಣ' ಚಿತ್ರದ ಪೆನ್ಸಿಲ್ ಆರ್ಟ್
'ರಾಮಾಯಣ' ಚಿತ್ರದ ಪೆನ್ಸಿಲ್ ಆರ್ಟ್
ದೆಹಲಿಯಲ್ಲಿ ಧಾರಾಕಾರ ಮಳೆ; ಜಲಾವೃತಗೊಂಡ ರಸ್ತೆಗಳಲ್ಲಿ ಈಜಾಡಿದ ಮಕ್ಕಳು
ದೆಹಲಿಯಲ್ಲಿ ಧಾರಾಕಾರ ಮಳೆ; ಜಲಾವೃತಗೊಂಡ ರಸ್ತೆಗಳಲ್ಲಿ ಈಜಾಡಿದ ಮಕ್ಕಳು
ಕಾಶ್ಮೀರಿ ಪಂಡಿತರಿಗಿರುವ ಬೆದರಿಕೆ​ಗೆ ಕಳವಳ ವ್ಯಕ್ತಪಡಿಸಿದ ಒಮರ್ ಅಬ್ದುಲ್ಲಾ
ಕಾಶ್ಮೀರಿ ಪಂಡಿತರಿಗಿರುವ ಬೆದರಿಕೆ​ಗೆ ಕಳವಳ ವ್ಯಕ್ತಪಡಿಸಿದ ಒಮರ್ ಅಬ್ದುಲ್ಲಾ
‘ಅಪ್ಪು ಸರ್ ನೆನಪಿನಲ್ಲಿ ಗಡ್ಡ ಬಿಟ್ಟೆ’: ಭಾವುಕವಾಗಿ ಮಾತನಾಡಿದ ಎಂ.ಕೆ. ಮಠ
‘ಅಪ್ಪು ಸರ್ ನೆನಪಿನಲ್ಲಿ ಗಡ್ಡ ಬಿಟ್ಟೆ’: ಭಾವುಕವಾಗಿ ಮಾತನಾಡಿದ ಎಂ.ಕೆ. ಮಠ
‘ಟಾಕ್ಸಿಕ್’ ಸಿನಿಮಾಗೆ ಭರ್ಜರಿ ಬುಕಿಂಗ್; ಲೆಕ್ಕ ನೀಡಿದ ಪ್ರದರ್ಶಕ ಜಗದೀಶ್
‘ಟಾಕ್ಸಿಕ್’ ಸಿನಿಮಾಗೆ ಭರ್ಜರಿ ಬುಕಿಂಗ್; ಲೆಕ್ಕ ನೀಡಿದ ಪ್ರದರ್ಶಕ ಜಗದೀಶ್
9 ಗಂಟೆಗಳ ಶೋಧ: ಪ್ಲ್ಯಾನ್ ಮಾಡಿಯೇ ಎಸ್ಕೇಪ್ ಆದ್ರಾ ಜ್ಞಾನೇಂದ್ರ ಕುಮಾರ್?
9 ಗಂಟೆಗಳ ಶೋಧ: ಪ್ಲ್ಯಾನ್ ಮಾಡಿಯೇ ಎಸ್ಕೇಪ್ ಆದ್ರಾ ಜ್ಞಾನೇಂದ್ರ ಕುಮಾರ್?
ಸಿಎಂ ಡಿಕೆಶಿಗೆ ಶಾಸಕ ಸುನಿಲ್ ಕುಮಾರ್ ಸವಾಲು
ಸಿಎಂ ಡಿಕೆಶಿಗೆ ಶಾಸಕ ಸುನಿಲ್ ಕುಮಾರ್ ಸವಾಲು