AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Prabhas: 1 ರೂಪಾಯಿ ಸಂಭಾವನೆ ಕೂಡ ಬೇಡ ಎಂಬ ನಿರ್ಧಾರಕ್ಕೆ ಬಂದ ಪ್ರಭಾಸ್​; ಏನಿದು ಹೊಸ ತಂತ್ರ?

Prabhas Next Movie | Prabhas Remuneration: ‘ರಾಜ ಡಿಲಕ್ಸ್​’ ಚಿತ್ರಕ್ಕೆ ಪ್ರಭಾಸ್​ ಅವರು ಸಂಭಾವನೆ ಪಡೆಯಲು ನಿರಾಕರಿಸಿದ್ದಾರೆ ಎನ್ನಲಾಗುತ್ತಿದೆ. ಹಾಗಂತ ಅವರು ಉಚಿತವಾಗಿ ನಟಿಸುತ್ತಿಲ್ಲ. ಅವರ ತಂತ್ರವೇ ಬೇರೆ ಇದೆ.

Prabhas: 1 ರೂಪಾಯಿ ಸಂಭಾವನೆ ಕೂಡ ಬೇಡ ಎಂಬ ನಿರ್ಧಾರಕ್ಕೆ ಬಂದ ಪ್ರಭಾಸ್​; ಏನಿದು ಹೊಸ ತಂತ್ರ?
ಪ್ರಭಾಸ್
ಮದನ್​ ಕುಮಾರ್​
|

Updated on: Feb 11, 2023 | 8:00 AM

Share

ಪ್ಯಾನ್​ ಇಂಡಿಯಾ ಹೀರೋ ಪ್ರಭಾಸ್​ (Prabhas) ಅವರ ವೃತ್ತಿಜೀವನದಲ್ಲಿ ಸಾಕಷ್ಟು ಏರುಪೇರು ಉಂಟಾಗಿದೆ. ‘ಬಾಹುಬಲಿ’ ಮತ್ತು ‘ಬಾಹುಬಲಿ 2’ ಸಿನಿಮಾಗಳ ಭರ್ಜರಿ ಯಶಸ್ಸಿನಿಂದ ಅವರು ದೊಡ್ಡ ಮಟ್ಟದ ಜನಪ್ರಿಯತೆ ಪಡೆದುಕೊಂಡರು. ಆ ಬಳಿಕ ಅವರು ಮಾಡುವ ಎಲ್ಲ ಸಿನಿಮಾಗಳ ಬಜೆಟ್​ ಹೆಚ್ಚಿತು. ಸಿನಿಮಾ ಬಜೆಟ್​ನಲ್ಲಿನ ಹೆಚ್ಚಿನ ಹಣ ಪ್ರಭಾಸ್​ ಅವರ ಸಂಭಾವನೆಗೆ (Prabhas Remuneration) ಮೀಸಲಾಗತೊಡಗಿತು. ನೂರಾರು ಕೋಟಿ ರೂಪಾಯಿ ಸಂಭಾವನೆ ಪಡೆಯುವ ನಟರ ಪಟ್ಟಿಯಲ್ಲಿ ಪ್ರಭಾಸ್​ ಕೂಡ ಮುಂಚೂಣಿಯಲ್ಲಿದ್ದಾರೆ. ಆದರೆ ಈಗ ಒಂದು ಅಚ್ಚರಿಯ ಸುದ್ದಿ ಕೇಳಿಬಂದಿದೆ. ತಮ್ಮ ಮುಂದಿನ ಚಿತ್ರಕ್ಕೆ (Prabhas Next Movie) ಒಂದು ರೂಪಾಯಿ ಸಂಭಾವನೆ ಕೂಡ ತೆಗೆದುಕೊಳ್ಳುವುದು ಬೇಡ ಎಂಬ ನಿರ್ಧಾರಕ್ಕೆ ಪ್ರಭಾಸ್​ ಬಂದಿದ್ದಾರೆ ಎನ್ನಲಾಗಿದೆ.

ನಿರ್ದೇಶಕ ಮಾರುತಿ ಜೊತೆ ಪ್ರಭಾಸ್​ ಕೈ ಜೋಡಿಸಿದ್ದಾರೆ. ಇವರಿಬ್ಬರ ಕಾಂಬಿನೇಷನ್​ನಲ್ಲಿ ಮೂಡಿಬರಲಿರುವ ಚಿತ್ರಕ್ಕೆ ತಾತ್ಕಾಲಿಕವಾಗಿ ‘ರಾಜ ಡಿಲಕ್ಸ್​’ ಎಂದು ಶೀರ್ಷಿಕೆ ಇಡಲಾಗಿದೆ. ಈ ಸಿನಿಮಾದ ಶೂಟಿಂಗ್​ ಕೂಡ ಈಗಾಗಲೇ ಆರಂಭ ಆಗಿದೆ. ಈ ಚಿತ್ರದಲ್ಲಿ ನಟಿಸುತ್ತಿರುವ ಪ್ರಭಾಸ್​ ಅವರು ಸಂಭಾವನೆ ಪಡೆಯಲು ನಿರಾಕರಿಸಿದ್ದಾರೆ ಎಂಬ ಸುದ್ದಿ ಹರಡಿದೆ. ಹಾಗಂತ ಅವರು ಉಚಿತವಾಗಿ ಈ ಸಿನಿಮಾದಲ್ಲಿ ನಟಿಸುತ್ತಿಲ್ಲ. ಅವರ ತಂತ್ರವೇ ಬೇರೆ ಇದೆ.

ಇದನ್ನೂ ಓದಿ: Prabhas Engagement: ಪ್ರಭಾಸ್​ ಜತೆ ಕೃತಿ ಸನೋನ್​ ನಿಶ್ಚಿತಾರ್ಥ ಆಗಲಿದೆ ಅಂತ ಬ್ರೇಕಿಂಗ್ ನ್ಯೂಸ್​ ನೀಡಿದ ಉಮೈರ್​ ಸಂಧು

ಇದನ್ನೂ ಓದಿ
Image
Adipurush: ಪ್ರಭಾಸ್​ ಫ್ಯಾನ್ಸ್​ ಮನ ಗೆದ್ದ ‘ಆದಿಪುರುಷ್​’ ಟೀಸರ್​; ಇಲ್ಲಿದೆ ರಾಮ-ರಾವಣರ ಮುಖಾಮುಖಿ
Image
Adipurush Teaser: ‘ಆದಿಪುರುಷ್​’ ಟೀಸರ್​ ಬಿಡುಗಡೆ; ಅಯೋಧ್ಯೆಯಲ್ಲಿ ರಾಮನಾಗಿ ದರ್ಶನ ನೀಡಿದ ಪ್ರಭಾಸ್​
Image
Prabhas: ದೊಡ್ಡಪ್ಪನ ನಿಧನದ ನೋವಿಟ್ಟುಕೊಂಡು ಕೆಲಸಕ್ಕೆ ಬಂದ ಪ್ರಭಾಸ್​; ‘ಸಲಾರ್​’ ಶೂಟಿಂಗ್​ ಮತ್ತೆ ಶುರು
Image
Prabhas: ದೊಡ್ಡಪ್ಪನ ಅಂತ್ಯ ಸಂಸ್ಕಾರಕ್ಕೆ ಬಂದ ಫ್ಯಾನ್ಸ್​ಗೆ ಊಟದ ವ್ಯವಸ್ಥೆ ಮಾಡಿಸಿ ಕಾಳಜಿ ತೋರಿದ ಪ್ರಭಾಸ್​

ಪ್ರಭಾಸ್​ ನಟಿಸಿದ ಈ ಹಿಂದಿನ ಸಿನಿಮಾಗಳಾದ ‘ಸಾಹೋ’ ಮತ್ತು ‘ರಾಧೆ ಶ್ಯಾಮ್​’ ಚಿತ್ರಗಳು ನಿರೀಕ್ಷಿತ ಮಟ್ಟದಲ್ಲಿ ಹಣ ಗಳಿಸಲಿಲ್ಲ. ಆದರೆ ಆ ಚಿತ್ರಗಳಿಗೆ ಪ್ರಭಾಸ್​ ಅವರು ಬಹುಕೋಟಿ ರೂಪಾಯಿ ಸಂಭಾವನೆ ಪಡೆದಿದ್ದರು. ಆದರೆ ಈ ಬಾರಿ ತಮ್ಮ ಪ್ಲ್ಯಾನ್​ ಬದಲಾಯಿಸಿಕೊಂಡಿದ್ದಾರೆ. ‘ರಾಜ ಡಿಲಕ್ಸ್​’ ಚಿತ್ರಕ್ಕೆ ಸಂಭಾವನೆ ಪಡೆಯುವ ಬದಲು ಅದೇ ಮೊತ್ತವನ್ನು ಬಂಡವಾಳ ಎಂದು ಪರಿಗಣಿಸಿ, ಚಿತ್ರದಿಂದ ಬರುವ ಲಾಭದಲ್ಲಿ ಪಾಲು ಪಡೆಯಲು ಪ್ರಭಾಸ್​ ನಿರ್ಧರಿಸಿದ್ದಾರೆ ಎನ್ನಲಾಗಿದೆ.

ಇದನ್ನೂ ಓದಿ: Adipurush: ಜೂ.16ಕ್ಕೆ ‘ಆದಿಪುರುಷ್​’ ರಿಲೀಸ್​ ಖಚಿತ; ಪ್ರಭಾಸ್​ ಫ್ಯಾನ್ಸ್​ಗೆ ಸಮಾಧಾನ ತಂದ ಚಿತ್ರತಂಡದ ಸ್ಪಷ್ಟನೆ

ಪ್ರಭಾಸ್​ ಈ ರೀತಿ ಮಾಡುವುದರಿಂದ ಸಿನಿಮಾದ ಸೋಲು-ಗೆಲುವಿನ ಜವಾಬ್ದಾರಿ ಅವರ ಮೇಲೂ ಬೀಳುತ್ತದೆ. ಒಂದು ವೇಳೆ ಸಿನಿಮಾ ಸೂಪರ್​ ಹಿಟ್​ ಆದರೆ ನಿರೀಕ್ಷಿಸಿದ್ದಕಿಂತಲೂ ಹೆಚ್ಚಿನ ಹಣ ಪ್ರಭಾಸ್​ ಕೈ ಸೇರುತ್ತದೆ. ಈ ಬಗ್ಗೆ ಚಿತ್ರತಂಡದಿಂದ ಯಾವುದೇ ಅಧಿಕೃತ ಮಾಹಿತಿ ಹೊರಬಿದ್ದಿಲ್ಲ.

ಇದನ್ನೂ ಓದಿ: Prabhas: ‘ಸಲ್ಮಾನ್​ ಖಾನ್​ ಮದುವೆ ಆದ ನಂತರವೇ ನನ್ನ ವಿವಾಹ’: ಎಲ್ಲರೆದುರು ಘೋಷಿಸಿದ ಪ್ರಭಾಸ್​

ಬಹುನಿರೀಕ್ಷಿತ ‘ಆದಿಪುರುಷ್​’ ಮತ್ತು ‘ಸಲಾರ್​’ ಸಿನಿಮಾದ ಕೆಲಸಗಳಲ್ಲಿ ಪ್ರಭಾಸ್​ ಬ್ಯುಸಿ ಆಗಿದ್ದಾರೆ. ಈ ಸಿನಿಮಾಗಳ ಮೇಲೆ ಅಭಿಮಾನಿಗಳು ಸಾಕಷ್ಟು ನಿರೀಕ್ಷೆ ಇಟ್ಟುಕೊಂಡಿದ್ದಾರೆ. ‘ಆದಿಪುರುಷ್​’ ಚಿತ್ರಕ್ಕೆ ಓಂ ರಾವತ್​ ನಿರ್ದೇಶನ ಮಾಡುತ್ತಿದ್ದಾರೆ. ಪ್ರಶಾಂತ್​ ನೀಲ್​ ನಿರ್ದೇಶನದಲ್ಲಿ ‘ಸಲಾರ್​’ ಮೂಡಿಬರುತ್ತಿದೆ.

ಹೆಚ್ಚಿನ ಸಿನಿಮಾ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್​ ಮಾಡಿ.

ರಷ್ಯಾ-ಉಕ್ರೇನ್ ಶಾಂತಿ ಹಾದಿಯಲ್ಲಿ ಸಾಗುತ್ತೆ ಎನ್ನುವ ನಂಬಿಕೆ ಇದೆ: ಮೋದಿ
ರಷ್ಯಾ-ಉಕ್ರೇನ್ ಶಾಂತಿ ಹಾದಿಯಲ್ಲಿ ಸಾಗುತ್ತೆ ಎನ್ನುವ ನಂಬಿಕೆ ಇದೆ: ಮೋದಿ
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ಮಹಾತ್ಮ ಗಾಂಧಿ ಸ್ಮಾರಕಕ್ಕೆ ಗೌರವ ಸಲ್ಲಿಸಿದ ರಷ್ಯಾ ಅಧ್ಯಕ್ಷ ಪುಟಿನ್
ಮಹಾತ್ಮ ಗಾಂಧಿ ಸ್ಮಾರಕಕ್ಕೆ ಗೌರವ ಸಲ್ಲಿಸಿದ ರಷ್ಯಾ ಅಧ್ಯಕ್ಷ ಪುಟಿನ್
ವಧು-ವರರ ಆನ್​ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ
ವಧು-ವರರ ಆನ್​ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ
ದೇವಸ್ಥಾನಗಳಲ್ಲಿ ಮದುವೆ ಮಾಡಿಸಲು ಹಿಂದೇಟು; ಅರ್ಚಕರ ನಿರ್ಧಾರಕ್ಕೆ ಕಾರಣ ಏನು
ದೇವಸ್ಥಾನಗಳಲ್ಲಿ ಮದುವೆ ಮಾಡಿಸಲು ಹಿಂದೇಟು; ಅರ್ಚಕರ ನಿರ್ಧಾರಕ್ಕೆ ಕಾರಣ ಏನು
ಬೆಂಗಳೂರಿನ ಹಲವೆಡೆ ತುಂತುರು ಮಳೆ, ಚುಮು ಚುಮು ಚಳಿ
ಬೆಂಗಳೂರಿನ ಹಲವೆಡೆ ತುಂತುರು ಮಳೆ, ಚುಮು ಚುಮು ಚಳಿ
ತುಮಕೂರು: ಎಟಿಎಂ ಮಷಿನನ್ನೇ ಹೊತ್ತಯ್ದು ಕಸದ ಬುಟ್ಟಿ ಬಳಿ ಬಿಟ್ಟ ಕಳ್ಳರು!
ತುಮಕೂರು: ಎಟಿಎಂ ಮಷಿನನ್ನೇ ಹೊತ್ತಯ್ದು ಕಸದ ಬುಟ್ಟಿ ಬಳಿ ಬಿಟ್ಟ ಕಳ್ಳರು!
ಉತ್ತರಾಖಂಡ: ಕಂದಕಕ್ಕೆ ಬಿದ್ದ ಬೊಲೆರೊ, ಐವರು ಸಾವು
ಉತ್ತರಾಖಂಡ: ಕಂದಕಕ್ಕೆ ಬಿದ್ದ ಬೊಲೆರೊ, ಐವರು ಸಾವು
ಇಂಡಿಗೋ ವಿಮಾನ ರದ್ದು: ಕೆಎಸ್​ಆರ್​ಟಿಸಿ ಬಿಎಂಟಿಸಿ ಆದಾಯಕ್ಕೂ ಹೊಡೆತ
ಇಂಡಿಗೋ ವಿಮಾನ ರದ್ದು: ಕೆಎಸ್​ಆರ್​ಟಿಸಿ ಬಿಎಂಟಿಸಿ ಆದಾಯಕ್ಕೂ ಹೊಡೆತ