AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Prabhas: 1 ರೂಪಾಯಿ ಸಂಭಾವನೆ ಕೂಡ ಬೇಡ ಎಂಬ ನಿರ್ಧಾರಕ್ಕೆ ಬಂದ ಪ್ರಭಾಸ್​; ಏನಿದು ಹೊಸ ತಂತ್ರ?

Prabhas Next Movie | Prabhas Remuneration: ‘ರಾಜ ಡಿಲಕ್ಸ್​’ ಚಿತ್ರಕ್ಕೆ ಪ್ರಭಾಸ್​ ಅವರು ಸಂಭಾವನೆ ಪಡೆಯಲು ನಿರಾಕರಿಸಿದ್ದಾರೆ ಎನ್ನಲಾಗುತ್ತಿದೆ. ಹಾಗಂತ ಅವರು ಉಚಿತವಾಗಿ ನಟಿಸುತ್ತಿಲ್ಲ. ಅವರ ತಂತ್ರವೇ ಬೇರೆ ಇದೆ.

Prabhas: 1 ರೂಪಾಯಿ ಸಂಭಾವನೆ ಕೂಡ ಬೇಡ ಎಂಬ ನಿರ್ಧಾರಕ್ಕೆ ಬಂದ ಪ್ರಭಾಸ್​; ಏನಿದು ಹೊಸ ತಂತ್ರ?
ಪ್ರಭಾಸ್
ಮದನ್​ ಕುಮಾರ್​
|

Updated on: Feb 11, 2023 | 8:00 AM

Share

ಪ್ಯಾನ್​ ಇಂಡಿಯಾ ಹೀರೋ ಪ್ರಭಾಸ್​ (Prabhas) ಅವರ ವೃತ್ತಿಜೀವನದಲ್ಲಿ ಸಾಕಷ್ಟು ಏರುಪೇರು ಉಂಟಾಗಿದೆ. ‘ಬಾಹುಬಲಿ’ ಮತ್ತು ‘ಬಾಹುಬಲಿ 2’ ಸಿನಿಮಾಗಳ ಭರ್ಜರಿ ಯಶಸ್ಸಿನಿಂದ ಅವರು ದೊಡ್ಡ ಮಟ್ಟದ ಜನಪ್ರಿಯತೆ ಪಡೆದುಕೊಂಡರು. ಆ ಬಳಿಕ ಅವರು ಮಾಡುವ ಎಲ್ಲ ಸಿನಿಮಾಗಳ ಬಜೆಟ್​ ಹೆಚ್ಚಿತು. ಸಿನಿಮಾ ಬಜೆಟ್​ನಲ್ಲಿನ ಹೆಚ್ಚಿನ ಹಣ ಪ್ರಭಾಸ್​ ಅವರ ಸಂಭಾವನೆಗೆ (Prabhas Remuneration) ಮೀಸಲಾಗತೊಡಗಿತು. ನೂರಾರು ಕೋಟಿ ರೂಪಾಯಿ ಸಂಭಾವನೆ ಪಡೆಯುವ ನಟರ ಪಟ್ಟಿಯಲ್ಲಿ ಪ್ರಭಾಸ್​ ಕೂಡ ಮುಂಚೂಣಿಯಲ್ಲಿದ್ದಾರೆ. ಆದರೆ ಈಗ ಒಂದು ಅಚ್ಚರಿಯ ಸುದ್ದಿ ಕೇಳಿಬಂದಿದೆ. ತಮ್ಮ ಮುಂದಿನ ಚಿತ್ರಕ್ಕೆ (Prabhas Next Movie) ಒಂದು ರೂಪಾಯಿ ಸಂಭಾವನೆ ಕೂಡ ತೆಗೆದುಕೊಳ್ಳುವುದು ಬೇಡ ಎಂಬ ನಿರ್ಧಾರಕ್ಕೆ ಪ್ರಭಾಸ್​ ಬಂದಿದ್ದಾರೆ ಎನ್ನಲಾಗಿದೆ.

ನಿರ್ದೇಶಕ ಮಾರುತಿ ಜೊತೆ ಪ್ರಭಾಸ್​ ಕೈ ಜೋಡಿಸಿದ್ದಾರೆ. ಇವರಿಬ್ಬರ ಕಾಂಬಿನೇಷನ್​ನಲ್ಲಿ ಮೂಡಿಬರಲಿರುವ ಚಿತ್ರಕ್ಕೆ ತಾತ್ಕಾಲಿಕವಾಗಿ ‘ರಾಜ ಡಿಲಕ್ಸ್​’ ಎಂದು ಶೀರ್ಷಿಕೆ ಇಡಲಾಗಿದೆ. ಈ ಸಿನಿಮಾದ ಶೂಟಿಂಗ್​ ಕೂಡ ಈಗಾಗಲೇ ಆರಂಭ ಆಗಿದೆ. ಈ ಚಿತ್ರದಲ್ಲಿ ನಟಿಸುತ್ತಿರುವ ಪ್ರಭಾಸ್​ ಅವರು ಸಂಭಾವನೆ ಪಡೆಯಲು ನಿರಾಕರಿಸಿದ್ದಾರೆ ಎಂಬ ಸುದ್ದಿ ಹರಡಿದೆ. ಹಾಗಂತ ಅವರು ಉಚಿತವಾಗಿ ಈ ಸಿನಿಮಾದಲ್ಲಿ ನಟಿಸುತ್ತಿಲ್ಲ. ಅವರ ತಂತ್ರವೇ ಬೇರೆ ಇದೆ.

ಇದನ್ನೂ ಓದಿ: Prabhas Engagement: ಪ್ರಭಾಸ್​ ಜತೆ ಕೃತಿ ಸನೋನ್​ ನಿಶ್ಚಿತಾರ್ಥ ಆಗಲಿದೆ ಅಂತ ಬ್ರೇಕಿಂಗ್ ನ್ಯೂಸ್​ ನೀಡಿದ ಉಮೈರ್​ ಸಂಧು

ಇದನ್ನೂ ಓದಿ
Image
Adipurush: ಪ್ರಭಾಸ್​ ಫ್ಯಾನ್ಸ್​ ಮನ ಗೆದ್ದ ‘ಆದಿಪುರುಷ್​’ ಟೀಸರ್​; ಇಲ್ಲಿದೆ ರಾಮ-ರಾವಣರ ಮುಖಾಮುಖಿ
Image
Adipurush Teaser: ‘ಆದಿಪುರುಷ್​’ ಟೀಸರ್​ ಬಿಡುಗಡೆ; ಅಯೋಧ್ಯೆಯಲ್ಲಿ ರಾಮನಾಗಿ ದರ್ಶನ ನೀಡಿದ ಪ್ರಭಾಸ್​
Image
Prabhas: ದೊಡ್ಡಪ್ಪನ ನಿಧನದ ನೋವಿಟ್ಟುಕೊಂಡು ಕೆಲಸಕ್ಕೆ ಬಂದ ಪ್ರಭಾಸ್​; ‘ಸಲಾರ್​’ ಶೂಟಿಂಗ್​ ಮತ್ತೆ ಶುರು
Image
Prabhas: ದೊಡ್ಡಪ್ಪನ ಅಂತ್ಯ ಸಂಸ್ಕಾರಕ್ಕೆ ಬಂದ ಫ್ಯಾನ್ಸ್​ಗೆ ಊಟದ ವ್ಯವಸ್ಥೆ ಮಾಡಿಸಿ ಕಾಳಜಿ ತೋರಿದ ಪ್ರಭಾಸ್​

ಪ್ರಭಾಸ್​ ನಟಿಸಿದ ಈ ಹಿಂದಿನ ಸಿನಿಮಾಗಳಾದ ‘ಸಾಹೋ’ ಮತ್ತು ‘ರಾಧೆ ಶ್ಯಾಮ್​’ ಚಿತ್ರಗಳು ನಿರೀಕ್ಷಿತ ಮಟ್ಟದಲ್ಲಿ ಹಣ ಗಳಿಸಲಿಲ್ಲ. ಆದರೆ ಆ ಚಿತ್ರಗಳಿಗೆ ಪ್ರಭಾಸ್​ ಅವರು ಬಹುಕೋಟಿ ರೂಪಾಯಿ ಸಂಭಾವನೆ ಪಡೆದಿದ್ದರು. ಆದರೆ ಈ ಬಾರಿ ತಮ್ಮ ಪ್ಲ್ಯಾನ್​ ಬದಲಾಯಿಸಿಕೊಂಡಿದ್ದಾರೆ. ‘ರಾಜ ಡಿಲಕ್ಸ್​’ ಚಿತ್ರಕ್ಕೆ ಸಂಭಾವನೆ ಪಡೆಯುವ ಬದಲು ಅದೇ ಮೊತ್ತವನ್ನು ಬಂಡವಾಳ ಎಂದು ಪರಿಗಣಿಸಿ, ಚಿತ್ರದಿಂದ ಬರುವ ಲಾಭದಲ್ಲಿ ಪಾಲು ಪಡೆಯಲು ಪ್ರಭಾಸ್​ ನಿರ್ಧರಿಸಿದ್ದಾರೆ ಎನ್ನಲಾಗಿದೆ.

ಇದನ್ನೂ ಓದಿ: Adipurush: ಜೂ.16ಕ್ಕೆ ‘ಆದಿಪುರುಷ್​’ ರಿಲೀಸ್​ ಖಚಿತ; ಪ್ರಭಾಸ್​ ಫ್ಯಾನ್ಸ್​ಗೆ ಸಮಾಧಾನ ತಂದ ಚಿತ್ರತಂಡದ ಸ್ಪಷ್ಟನೆ

ಪ್ರಭಾಸ್​ ಈ ರೀತಿ ಮಾಡುವುದರಿಂದ ಸಿನಿಮಾದ ಸೋಲು-ಗೆಲುವಿನ ಜವಾಬ್ದಾರಿ ಅವರ ಮೇಲೂ ಬೀಳುತ್ತದೆ. ಒಂದು ವೇಳೆ ಸಿನಿಮಾ ಸೂಪರ್​ ಹಿಟ್​ ಆದರೆ ನಿರೀಕ್ಷಿಸಿದ್ದಕಿಂತಲೂ ಹೆಚ್ಚಿನ ಹಣ ಪ್ರಭಾಸ್​ ಕೈ ಸೇರುತ್ತದೆ. ಈ ಬಗ್ಗೆ ಚಿತ್ರತಂಡದಿಂದ ಯಾವುದೇ ಅಧಿಕೃತ ಮಾಹಿತಿ ಹೊರಬಿದ್ದಿಲ್ಲ.

ಇದನ್ನೂ ಓದಿ: Prabhas: ‘ಸಲ್ಮಾನ್​ ಖಾನ್​ ಮದುವೆ ಆದ ನಂತರವೇ ನನ್ನ ವಿವಾಹ’: ಎಲ್ಲರೆದುರು ಘೋಷಿಸಿದ ಪ್ರಭಾಸ್​

ಬಹುನಿರೀಕ್ಷಿತ ‘ಆದಿಪುರುಷ್​’ ಮತ್ತು ‘ಸಲಾರ್​’ ಸಿನಿಮಾದ ಕೆಲಸಗಳಲ್ಲಿ ಪ್ರಭಾಸ್​ ಬ್ಯುಸಿ ಆಗಿದ್ದಾರೆ. ಈ ಸಿನಿಮಾಗಳ ಮೇಲೆ ಅಭಿಮಾನಿಗಳು ಸಾಕಷ್ಟು ನಿರೀಕ್ಷೆ ಇಟ್ಟುಕೊಂಡಿದ್ದಾರೆ. ‘ಆದಿಪುರುಷ್​’ ಚಿತ್ರಕ್ಕೆ ಓಂ ರಾವತ್​ ನಿರ್ದೇಶನ ಮಾಡುತ್ತಿದ್ದಾರೆ. ಪ್ರಶಾಂತ್​ ನೀಲ್​ ನಿರ್ದೇಶನದಲ್ಲಿ ‘ಸಲಾರ್​’ ಮೂಡಿಬರುತ್ತಿದೆ.

ಹೆಚ್ಚಿನ ಸಿನಿಮಾ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್​ ಮಾಡಿ.

ಪಂಚಾಯ್ತಿಗೆ ನುಗ್ಗಿ PDO ಚೇರ್ ಮೇಲೆಯೇ ಆಯಾಗಿ ಮಲಗಿದ ಶ್ವಾನ!
ಪಂಚಾಯ್ತಿಗೆ ನುಗ್ಗಿ PDO ಚೇರ್ ಮೇಲೆಯೇ ಆಯಾಗಿ ಮಲಗಿದ ಶ್ವಾನ!
ವಾಸನೆ ಕುಡಿದು ಸಾಕಾಗಿ ಕೊನೆಗೆ ಫಾರಂನಲ್ಲಿದ್ದ ಕೋಳಿಗಳನ್ನೇ ಕದ್ದರು
ವಾಸನೆ ಕುಡಿದು ಸಾಕಾಗಿ ಕೊನೆಗೆ ಫಾರಂನಲ್ಲಿದ್ದ ಕೋಳಿಗಳನ್ನೇ ಕದ್ದರು
ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್​: ಟಾರ್ಗೆಟ್​​ ಯಾರು?
ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್​: ಟಾರ್ಗೆಟ್​​ ಯಾರು?
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ
2026ರಲ್ಲಿ ಈ ರಾಶಿಗೆ ಗುರು, ಶನಿ, ರಾಹು, ಕೇತು ಸಂಚಾರದಿಂದ ಆರ್ಥಿಕ ಲಾಭ
2026ರಲ್ಲಿ ಈ ರಾಶಿಗೆ ಗುರು, ಶನಿ, ರಾಹು, ಕೇತು ಸಂಚಾರದಿಂದ ಆರ್ಥಿಕ ಲಾಭ
ಸೀಬರ್ಡ್ ಬಸ್ ದುರಂತ: ಪ್ರಾಣ ಉಳಿಸಿಕೊಂಡವರ ಒಂದೊಂದು ಕಥೆ ರೋಚಕ
ಸೀಬರ್ಡ್ ಬಸ್ ದುರಂತ: ಪ್ರಾಣ ಉಳಿಸಿಕೊಂಡವರ ಒಂದೊಂದು ಕಥೆ ರೋಚಕ
ಯಾರ ಮನೆಯನ್ನೂ ಒಡೆಯಬಾರದು: ಫ್ಯಾನ್ಸ್ ವಾರ್ ಬಗ್ಗೆ ಶಿವಣ್ಣ ಖಡಕ್ ರಿಯಾಕ್ಷನ್
ಯಾರ ಮನೆಯನ್ನೂ ಒಡೆಯಬಾರದು: ಫ್ಯಾನ್ಸ್ ವಾರ್ ಬಗ್ಗೆ ಶಿವಣ್ಣ ಖಡಕ್ ರಿಯಾಕ್ಷನ್