Prabhas: 1 ರೂಪಾಯಿ ಸಂಭಾವನೆ ಕೂಡ ಬೇಡ ಎಂಬ ನಿರ್ಧಾರಕ್ಕೆ ಬಂದ ಪ್ರಭಾಸ್​; ಏನಿದು ಹೊಸ ತಂತ್ರ?

Prabhas Next Movie | Prabhas Remuneration: ‘ರಾಜ ಡಿಲಕ್ಸ್​’ ಚಿತ್ರಕ್ಕೆ ಪ್ರಭಾಸ್​ ಅವರು ಸಂಭಾವನೆ ಪಡೆಯಲು ನಿರಾಕರಿಸಿದ್ದಾರೆ ಎನ್ನಲಾಗುತ್ತಿದೆ. ಹಾಗಂತ ಅವರು ಉಚಿತವಾಗಿ ನಟಿಸುತ್ತಿಲ್ಲ. ಅವರ ತಂತ್ರವೇ ಬೇರೆ ಇದೆ.

Prabhas: 1 ರೂಪಾಯಿ ಸಂಭಾವನೆ ಕೂಡ ಬೇಡ ಎಂಬ ನಿರ್ಧಾರಕ್ಕೆ ಬಂದ ಪ್ರಭಾಸ್​; ಏನಿದು ಹೊಸ ತಂತ್ರ?
ಪ್ರಭಾಸ್
Follow us
|

Updated on: Feb 11, 2023 | 8:00 AM

ಪ್ಯಾನ್​ ಇಂಡಿಯಾ ಹೀರೋ ಪ್ರಭಾಸ್​ (Prabhas) ಅವರ ವೃತ್ತಿಜೀವನದಲ್ಲಿ ಸಾಕಷ್ಟು ಏರುಪೇರು ಉಂಟಾಗಿದೆ. ‘ಬಾಹುಬಲಿ’ ಮತ್ತು ‘ಬಾಹುಬಲಿ 2’ ಸಿನಿಮಾಗಳ ಭರ್ಜರಿ ಯಶಸ್ಸಿನಿಂದ ಅವರು ದೊಡ್ಡ ಮಟ್ಟದ ಜನಪ್ರಿಯತೆ ಪಡೆದುಕೊಂಡರು. ಆ ಬಳಿಕ ಅವರು ಮಾಡುವ ಎಲ್ಲ ಸಿನಿಮಾಗಳ ಬಜೆಟ್​ ಹೆಚ್ಚಿತು. ಸಿನಿಮಾ ಬಜೆಟ್​ನಲ್ಲಿನ ಹೆಚ್ಚಿನ ಹಣ ಪ್ರಭಾಸ್​ ಅವರ ಸಂಭಾವನೆಗೆ (Prabhas Remuneration) ಮೀಸಲಾಗತೊಡಗಿತು. ನೂರಾರು ಕೋಟಿ ರೂಪಾಯಿ ಸಂಭಾವನೆ ಪಡೆಯುವ ನಟರ ಪಟ್ಟಿಯಲ್ಲಿ ಪ್ರಭಾಸ್​ ಕೂಡ ಮುಂಚೂಣಿಯಲ್ಲಿದ್ದಾರೆ. ಆದರೆ ಈಗ ಒಂದು ಅಚ್ಚರಿಯ ಸುದ್ದಿ ಕೇಳಿಬಂದಿದೆ. ತಮ್ಮ ಮುಂದಿನ ಚಿತ್ರಕ್ಕೆ (Prabhas Next Movie) ಒಂದು ರೂಪಾಯಿ ಸಂಭಾವನೆ ಕೂಡ ತೆಗೆದುಕೊಳ್ಳುವುದು ಬೇಡ ಎಂಬ ನಿರ್ಧಾರಕ್ಕೆ ಪ್ರಭಾಸ್​ ಬಂದಿದ್ದಾರೆ ಎನ್ನಲಾಗಿದೆ.

ನಿರ್ದೇಶಕ ಮಾರುತಿ ಜೊತೆ ಪ್ರಭಾಸ್​ ಕೈ ಜೋಡಿಸಿದ್ದಾರೆ. ಇವರಿಬ್ಬರ ಕಾಂಬಿನೇಷನ್​ನಲ್ಲಿ ಮೂಡಿಬರಲಿರುವ ಚಿತ್ರಕ್ಕೆ ತಾತ್ಕಾಲಿಕವಾಗಿ ‘ರಾಜ ಡಿಲಕ್ಸ್​’ ಎಂದು ಶೀರ್ಷಿಕೆ ಇಡಲಾಗಿದೆ. ಈ ಸಿನಿಮಾದ ಶೂಟಿಂಗ್​ ಕೂಡ ಈಗಾಗಲೇ ಆರಂಭ ಆಗಿದೆ. ಈ ಚಿತ್ರದಲ್ಲಿ ನಟಿಸುತ್ತಿರುವ ಪ್ರಭಾಸ್​ ಅವರು ಸಂಭಾವನೆ ಪಡೆಯಲು ನಿರಾಕರಿಸಿದ್ದಾರೆ ಎಂಬ ಸುದ್ದಿ ಹರಡಿದೆ. ಹಾಗಂತ ಅವರು ಉಚಿತವಾಗಿ ಈ ಸಿನಿಮಾದಲ್ಲಿ ನಟಿಸುತ್ತಿಲ್ಲ. ಅವರ ತಂತ್ರವೇ ಬೇರೆ ಇದೆ.

ಇದನ್ನೂ ಓದಿ: Prabhas Engagement: ಪ್ರಭಾಸ್​ ಜತೆ ಕೃತಿ ಸನೋನ್​ ನಿಶ್ಚಿತಾರ್ಥ ಆಗಲಿದೆ ಅಂತ ಬ್ರೇಕಿಂಗ್ ನ್ಯೂಸ್​ ನೀಡಿದ ಉಮೈರ್​ ಸಂಧು

ಇದನ್ನೂ ಓದಿ
Image
Adipurush: ಪ್ರಭಾಸ್​ ಫ್ಯಾನ್ಸ್​ ಮನ ಗೆದ್ದ ‘ಆದಿಪುರುಷ್​’ ಟೀಸರ್​; ಇಲ್ಲಿದೆ ರಾಮ-ರಾವಣರ ಮುಖಾಮುಖಿ
Image
Adipurush Teaser: ‘ಆದಿಪುರುಷ್​’ ಟೀಸರ್​ ಬಿಡುಗಡೆ; ಅಯೋಧ್ಯೆಯಲ್ಲಿ ರಾಮನಾಗಿ ದರ್ಶನ ನೀಡಿದ ಪ್ರಭಾಸ್​
Image
Prabhas: ದೊಡ್ಡಪ್ಪನ ನಿಧನದ ನೋವಿಟ್ಟುಕೊಂಡು ಕೆಲಸಕ್ಕೆ ಬಂದ ಪ್ರಭಾಸ್​; ‘ಸಲಾರ್​’ ಶೂಟಿಂಗ್​ ಮತ್ತೆ ಶುರು
Image
Prabhas: ದೊಡ್ಡಪ್ಪನ ಅಂತ್ಯ ಸಂಸ್ಕಾರಕ್ಕೆ ಬಂದ ಫ್ಯಾನ್ಸ್​ಗೆ ಊಟದ ವ್ಯವಸ್ಥೆ ಮಾಡಿಸಿ ಕಾಳಜಿ ತೋರಿದ ಪ್ರಭಾಸ್​

ಪ್ರಭಾಸ್​ ನಟಿಸಿದ ಈ ಹಿಂದಿನ ಸಿನಿಮಾಗಳಾದ ‘ಸಾಹೋ’ ಮತ್ತು ‘ರಾಧೆ ಶ್ಯಾಮ್​’ ಚಿತ್ರಗಳು ನಿರೀಕ್ಷಿತ ಮಟ್ಟದಲ್ಲಿ ಹಣ ಗಳಿಸಲಿಲ್ಲ. ಆದರೆ ಆ ಚಿತ್ರಗಳಿಗೆ ಪ್ರಭಾಸ್​ ಅವರು ಬಹುಕೋಟಿ ರೂಪಾಯಿ ಸಂಭಾವನೆ ಪಡೆದಿದ್ದರು. ಆದರೆ ಈ ಬಾರಿ ತಮ್ಮ ಪ್ಲ್ಯಾನ್​ ಬದಲಾಯಿಸಿಕೊಂಡಿದ್ದಾರೆ. ‘ರಾಜ ಡಿಲಕ್ಸ್​’ ಚಿತ್ರಕ್ಕೆ ಸಂಭಾವನೆ ಪಡೆಯುವ ಬದಲು ಅದೇ ಮೊತ್ತವನ್ನು ಬಂಡವಾಳ ಎಂದು ಪರಿಗಣಿಸಿ, ಚಿತ್ರದಿಂದ ಬರುವ ಲಾಭದಲ್ಲಿ ಪಾಲು ಪಡೆಯಲು ಪ್ರಭಾಸ್​ ನಿರ್ಧರಿಸಿದ್ದಾರೆ ಎನ್ನಲಾಗಿದೆ.

ಇದನ್ನೂ ಓದಿ: Adipurush: ಜೂ.16ಕ್ಕೆ ‘ಆದಿಪುರುಷ್​’ ರಿಲೀಸ್​ ಖಚಿತ; ಪ್ರಭಾಸ್​ ಫ್ಯಾನ್ಸ್​ಗೆ ಸಮಾಧಾನ ತಂದ ಚಿತ್ರತಂಡದ ಸ್ಪಷ್ಟನೆ

ಪ್ರಭಾಸ್​ ಈ ರೀತಿ ಮಾಡುವುದರಿಂದ ಸಿನಿಮಾದ ಸೋಲು-ಗೆಲುವಿನ ಜವಾಬ್ದಾರಿ ಅವರ ಮೇಲೂ ಬೀಳುತ್ತದೆ. ಒಂದು ವೇಳೆ ಸಿನಿಮಾ ಸೂಪರ್​ ಹಿಟ್​ ಆದರೆ ನಿರೀಕ್ಷಿಸಿದ್ದಕಿಂತಲೂ ಹೆಚ್ಚಿನ ಹಣ ಪ್ರಭಾಸ್​ ಕೈ ಸೇರುತ್ತದೆ. ಈ ಬಗ್ಗೆ ಚಿತ್ರತಂಡದಿಂದ ಯಾವುದೇ ಅಧಿಕೃತ ಮಾಹಿತಿ ಹೊರಬಿದ್ದಿಲ್ಲ.

ಇದನ್ನೂ ಓದಿ: Prabhas: ‘ಸಲ್ಮಾನ್​ ಖಾನ್​ ಮದುವೆ ಆದ ನಂತರವೇ ನನ್ನ ವಿವಾಹ’: ಎಲ್ಲರೆದುರು ಘೋಷಿಸಿದ ಪ್ರಭಾಸ್​

ಬಹುನಿರೀಕ್ಷಿತ ‘ಆದಿಪುರುಷ್​’ ಮತ್ತು ‘ಸಲಾರ್​’ ಸಿನಿಮಾದ ಕೆಲಸಗಳಲ್ಲಿ ಪ್ರಭಾಸ್​ ಬ್ಯುಸಿ ಆಗಿದ್ದಾರೆ. ಈ ಸಿನಿಮಾಗಳ ಮೇಲೆ ಅಭಿಮಾನಿಗಳು ಸಾಕಷ್ಟು ನಿರೀಕ್ಷೆ ಇಟ್ಟುಕೊಂಡಿದ್ದಾರೆ. ‘ಆದಿಪುರುಷ್​’ ಚಿತ್ರಕ್ಕೆ ಓಂ ರಾವತ್​ ನಿರ್ದೇಶನ ಮಾಡುತ್ತಿದ್ದಾರೆ. ಪ್ರಶಾಂತ್​ ನೀಲ್​ ನಿರ್ದೇಶನದಲ್ಲಿ ‘ಸಲಾರ್​’ ಮೂಡಿಬರುತ್ತಿದೆ.

ಹೆಚ್ಚಿನ ಸಿನಿಮಾ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್​ ಮಾಡಿ.

ಸಿದ್ದರಾಮಯ್ಯ ಪಾರ್ವತಿ ಅವರನ್ನು ಮದುವೆ ಆಗಿದ್ದೇ ತಪ್ಪಾ? ಸಿಎಂ ಇಬ್ರಾಹಿಂ
ಸಿದ್ದರಾಮಯ್ಯ ಪಾರ್ವತಿ ಅವರನ್ನು ಮದುವೆ ಆಗಿದ್ದೇ ತಪ್ಪಾ? ಸಿಎಂ ಇಬ್ರಾಹಿಂ
ಮಹಾರಾಷ್ಟ್ರದ ದೇವಸ್ಥಾನದಲ್ಲಿ ಡೋಲು ಬಾರಿಸಿದ ಪ್ರಧಾನಿ ಮೋದಿ
ಮಹಾರಾಷ್ಟ್ರದ ದೇವಸ್ಥಾನದಲ್ಲಿ ಡೋಲು ಬಾರಿಸಿದ ಪ್ರಧಾನಿ ಮೋದಿ
ಮೈಸೂರು ದಸರಾದಲ್ಲಿ ಗಿಡ್ಡ ಕಾಲಿನ ಬಂಡೂರು ಕುರಿಯೇ ಆಕರ್ಷಣೆ
ಮೈಸೂರು ದಸರಾದಲ್ಲಿ ಗಿಡ್ಡ ಕಾಲಿನ ಬಂಡೂರು ಕುರಿಯೇ ಆಕರ್ಷಣೆ
ಲಾಯರ್ ಜಗದೀಶ್ ವಿಚಾರಣೆ ನಡೆಸುವ ಸುಳಿವು ಕೊಟ್ಟ ಕಿಚ್ಚ: ವಿಡಿಯೋ
ಲಾಯರ್ ಜಗದೀಶ್ ವಿಚಾರಣೆ ನಡೆಸುವ ಸುಳಿವು ಕೊಟ್ಟ ಕಿಚ್ಚ: ವಿಡಿಯೋ
ಪಿಡಿಒ, ಕಾರ್ಯದರ್ಶಿಗಳ ಹೋರಾಟಕ್ಕೆ ಬೆಂಬಲ ಘೋಷಿಸಿದ ಕುಮಾರಸ್ವಾಮಿ,ವಿಜಯೇಂದ್ರ
ಪಿಡಿಒ, ಕಾರ್ಯದರ್ಶಿಗಳ ಹೋರಾಟಕ್ಕೆ ಬೆಂಬಲ ಘೋಷಿಸಿದ ಕುಮಾರಸ್ವಾಮಿ,ವಿಜಯೇಂದ್ರ
ಶನಿವಾರ ಭಕ್ತರ ಪರಾಕಾಷ್ಠೆ-ತಿಮ್ಮಪ್ಪನ ದರ್ಶನಕ್ಕೆ ಕಾಯಬೇಕು 18 ಗಂಟೆ...
ಶನಿವಾರ ಭಕ್ತರ ಪರಾಕಾಷ್ಠೆ-ತಿಮ್ಮಪ್ಪನ ದರ್ಶನಕ್ಕೆ ಕಾಯಬೇಕು 18 ಗಂಟೆ...
ನಾಮಿನೇಷನ್ ತೂಗುಗತ್ತಿ ಜೊತೆ ಕುತೂಹಲ ಮೂಡಿಸಿದ ಕಿಚ್ಚನ ಪಂಚಾಯ್ತಿ
ನಾಮಿನೇಷನ್ ತೂಗುಗತ್ತಿ ಜೊತೆ ಕುತೂಹಲ ಮೂಡಿಸಿದ ಕಿಚ್ಚನ ಪಂಚಾಯ್ತಿ
Daily Devotional: ನವರಾತ್ರಿ ಮೂರನೇ ದಿನ ಚಂದ್ರಘಂಟಾ ದೇವಿ ಆರಾಧನೆ
Daily Devotional: ನವರಾತ್ರಿ ಮೂರನೇ ದಿನ ಚಂದ್ರಘಂಟಾ ದೇವಿ ಆರಾಧನೆ
Nithya Bhavishya: ನವರಾತ್ರಿಯ ಮೂರನೇ ದಿನದ ರಾಶಿ ಭವಿಷ್ಯ ತಿಳಿಯಿರಿ
Nithya Bhavishya: ನವರಾತ್ರಿಯ ಮೂರನೇ ದಿನದ ರಾಶಿ ಭವಿಷ್ಯ ತಿಳಿಯಿರಿ
ಶ್ರೀರಂಗಪಟ್ಟಣ ದಸರಾ ವೇದಿಕೆಗೆ ಶಿವಣ್ಣ ಎಂಟ್ರಿ; ಅಭಿಮಾನಿಗಳಿಗೆ ಭಾರಿ ಖುಷಿ
ಶ್ರೀರಂಗಪಟ್ಟಣ ದಸರಾ ವೇದಿಕೆಗೆ ಶಿವಣ್ಣ ಎಂಟ್ರಿ; ಅಭಿಮಾನಿಗಳಿಗೆ ಭಾರಿ ಖುಷಿ