AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Prabhas: ದೊಡ್ಡಪ್ಪನ ನಿಧನದ ನೋವಿಟ್ಟುಕೊಂಡು ಕೆಲಸಕ್ಕೆ ಬಂದ ಪ್ರಭಾಸ್​; ‘ಸಲಾರ್​’ ಶೂಟಿಂಗ್​ ಮತ್ತೆ ಶುರು

Salaar: ಕೃಷ್ಣಂ ರಾಜು ನಿಧನರಾದ ಕಾರಣದಿಂದ ಪ್ರಭಾಸ್ ಅವರು ಕನಿಷ್ಠ ಎರಡು ವಾರವಾದರೂ ಬ್ರೇಕ್ ತೆಗೆದುಕೊಳ್ಳಬಹುದು ಅಂತ ಎಲ್ಲರೂ ಊಹಿಸಿದ್ದರು. ಆದರೆ ಅದಕ್ಕೂ ಮುನ್ನವೇ ಅವರು ಶೂಟಿಂಗ್​ಗೆ ಮರಳಿದ್ದಾರೆ.

Prabhas: ದೊಡ್ಡಪ್ಪನ ನಿಧನದ ನೋವಿಟ್ಟುಕೊಂಡು ಕೆಲಸಕ್ಕೆ ಬಂದ ಪ್ರಭಾಸ್​; ‘ಸಲಾರ್​’ ಶೂಟಿಂಗ್​ ಮತ್ತೆ ಶುರು
ಪ್ರಭಾಸ್
Follow us
TV9 Web
| Updated By: ಮದನ್​ ಕುಮಾರ್​

Updated on:Sep 23, 2022 | 8:02 AM

ನಟ ಪ್ರಭಾಸ್​ (Prabhas) ಅವರ ಮನೆಯಲ್ಲಿ ಸೂತಕ ಛಾಯೆ ಇದೆ. ಅವರ ದೊಡ್ಡಪ್ಪ ಕೃಷ್ಣಂ ರಾಜು ನಿಧನದಿಂದ ಇಡೀ ಕುಟುಂಬದಲ್ಲಿ ಶೋಕದ ವಾತಾವರಣ ನಿರ್ಮಾಣ ಆಗಿದೆ. ಪ್ರಭಾಸ್​ ಅವರ ವೃತ್ತಿಜೀವನದನಲ್ಲಿ ಕೃಷ್ಣಂ ರಾಜು (Krishnam Raju) ಅವರು ತುಂಬ ಮಹತ್ವದ ಪಾತ್ರ ವಹಿಸಿದ್ದರು. ಹಾಗಾಗಿ ಅವರನ್ನು ಕಂಡರೆ ಪ್ರಭಾಸ್​ಗೆ ತುಂಬ ಪ್ರೀತಿ, ಗೌರವ. ಆದರೆ ಏಕಾಏಕಿ ದೊಡ್ಡಪ್ಪನನ್ನು ಕಳೆದುಕೊಂಡಿರುವುದು ಪ್ರಭಾಸ್​ ಮನಸ್ಸಿಗೆ ಆಘಾತ ಉಂಟು ಮಾಡಿದೆ. ಹಾಗಿದ್ದರೂ ಕೂಡ ಅವರು ಕೆಲಸದ ಮೇಲಿರುವ ನಿಷ್ಠೆಯನ್ನು ಕಡಿಮೆ ಮಾಡಿಕೊಂಡಿಲ್ಲ. ಎಲ್ಲರೂ ಊಹಿಸಿದ್ದಕ್ಕಿಂತಲೂ ಮುಂಚೆಯೇ ಅವರು ಶೂಟಿಂಗ್​ಗೆ ಮರಳಿದ್ದಾರೆ. ಮನದಲ್ಲಿ ಬೆಟ್ಟದಷ್ಟು ನೋವಿದ್ದರೂ ಕೂಡ ‘ಸಲಾರ್​’ (Salaar) ಸಿನಿಮಾದ ಚಿತ್ರೀಕರಣಕ್ಕೆ ಅವರು ಹಾಜರಾಗಿದ್ದಾರೆ. ಇದು ಎಲ್ಲರಿಗೂ ಅಚ್ಚರಿ ಉಂಟು ಮಾಡಿದೆ.

ಪ್ರಶಾಂತ್​ ನೀಲ್​ ಅವರು ‘ಸಲಾರ್’ ಸಿನಿಮಾಗೆ ನಿರ್ದೇಶನ ಮಾಡುತ್ತಿದ್ದಾರೆ. ರಾಮೋಜಿ ಫಿಲ್ಮ್ ಸಿಟಿಯಲ್ಲಿ ಬೃಹತ್​ ಸೆಟ್​ಗಳನ್ನು ನಿರ್ಮಿಸಿ ಶೂಟಿಂಗ್​ ಮಾಡಲಾಗುತ್ತಿದೆ. ಆದರೆ ಪ್ರಭಾಸ್​ ಅವರ ದೊಡ್ಡಪ್ಪ ಕೃಷ್ಣಂ ರಾಜು ನಿಧನರಾದ ಕಾರಣದಿಂದ ಚಿತ್ರೀಕರಣಕ್ಕೆ ಹಿನ್ನಡೆ ಆಗಿತ್ತು. ಪ್ರಭಾಸ್ ಅವರು ಕನಿಷ್ಠ ಎರಡು ವಾರವಾದರೂ ಬ್ರೇಕ್ ತೆಗೆದುಕೊಳ್ಳಬಹುದು ಎಂದೇ ಎಲ್ಲರೂ ನಿರೀಕ್ಷಿಸಿದ್ದರು. ಆದರೆ ಅದಕ್ಕೂ ಮುನ್ನವೇ ಅವರು ಶೂಟಿಂಗ್​ಗೆ ಮರಳಿದ್ದಾರೆ.

ಕೃಷ್ಣಂ ರಾಜು ಅವರ 11ನೇ ದಿನದ ಕಾರ್ಯಗಳನ್ನು ಮಾಡಲಾಗಿದೆ. ಹಾಗಾಗಿ ಪ್ರಭಾಸ್​ ಅವರು ಮತ್ತೆ ಸಿನಿಮಾದ ಕೆಲಸಗಳಲ್ಲಿ ತೊಡಗಿಕೊಳ್ಳಲು ಆರಂಭಿಸಿದ್ದಾರೆ. ಗುರುವಾರವೇ (ಸೆಪ್ಟೆಂಬರ್​ 22) ಅವರು ‘ಸಲಾರ್​’ ಸೆಟ್​ಗೆ ಮರಳಿದ್ದಾರೆ. ಒಂದೆರಡು ದೃಶ್ಯಗಳಲ್ಲಿ ಅಭಿನಯಿಸಿದ್ದಾರೆ. ಇದು ಎಲ್ಲರಿಗೂ ಅಚ್ಚರಿ ಮೂಡಿಸಿದೆ. ಈ ಚಿತ್ರದಲ್ಲಿ ಪ್ರಭಾಸ್​ಗೆ ಜೋಡಿಯಾಗಿ ಶ್ರುತಿ ಹಾಸನ್​ ನಟಿಸುತ್ತಿದ್ದಾರೆ. ಇನ್ನೆರಡು ದಿನಗಳಲ್ಲಿ ಶೂಟಿಂಗ್​ಗೆ ಹಾಜರಾಗುವಂತೆ ಅವರಿಗೆ ಪ್ರಭಾಸ್​ ನೀಲ್​ ಸೂಚಿಸಿದ್ದಾರೆ ಎಂದು ವರದಿ ಆಗಿದೆ.

ಇದನ್ನೂ ಓದಿ
Image
ವಯಸ್ಸಿನಲ್ಲಿ 11 ವರ್ಷ ಚಿಕ್ಕ ನಟಿಯ ಜತೆ ಪ್ರಭಾಸ್ ಡೇಟಿಂಗ್​? ಸೂತಕದ ಮನೆಗೆ ಬೇಸರ ತಂದ ಗಾಸಿಪ್​
Image
Prabhas: ದೊಡ್ಡಪ್ಪನ ಅಂತ್ಯ ಸಂಸ್ಕಾರಕ್ಕೆ ಬಂದ ಫ್ಯಾನ್ಸ್​ಗೆ ಊಟದ ವ್ಯವಸ್ಥೆ ಮಾಡಿಸಿ ಕಾಳಜಿ ತೋರಿದ ಪ್ರಭಾಸ್​
Image
ಪ್ರಭಾಸ್​ ವರ್ಸಸ್​ ಪ್ರಭಾಸ್​: ‘ಸಲಾರ್​’ ಚಿತ್ರದಲ್ಲಿ ಡಬಲ್​ ರೋಲ್​ ಮಾಡಿಸುತ್ತಾರಾ ಪ್ರಶಾಂತ್​ ನೀಲ್​?
Image
‘ರಾಧೆ ಶ್ಯಾಮ್​’ ಸೋಲಿಗೆ 2 ಮುಖ್ಯ ಕಾರಣ ತಿಳಿಸಿದ ಪ್ರಭಾಸ್​; ಪ್ರೇಕ್ಷಕರು ಈ ನೆಪವನ್ನೆಲ್ಲ ಒಪ್ಪುತ್ತಾರಾ?

ಪ್ರಶಾಂತ್​ ನೀಲ್​ ಮತ್ತು ಪ್ರಭಾಸ್​ ಕಾಂಬಿನೇಷನ್​ನಲ್ಲಿ ‘ಸಲಾರ್​’ ಸಿನಿಮಾ ಮೂಡಿಬರುತ್ತಿರುವುದರಿಂದ ಸಹಜವಾಗಿಯೇ ನಿರೀಕ್ಷೆ ಹೆಚ್ಚಿದೆ. ತುಂಬ ಅದ್ದೂರಿಯಾಗಿ ನಿರ್ಮಾಣ ಆಗುತ್ತಿರುವ ಈ ಚಿತ್ರಕ್ಕೆ ಬಂಡವಾಳ ಹೂಡುತ್ತಿರುವುದು ‘ಕೆಜಿಎಫ್​: ಚಾಪ್ಟರ್​ 2’ ಖ್ಯಾತಿಯ ನಿರ್ಮಾಪಕ ವಿಜಯ್​ ಕಿರಗಂದೂರು. ಘಟಾನುಘಟಿ ತಂತ್ರಜ್ಞರು ಪ್ರಶಾಂತ್​ ನೀಲ್​ ಜೊತೆ ಕೆಲಸ ಮಾಡುತ್ತಿದ್ದಾರೆ.

ಪ್ರಭಾಸ್​ ಅವರು ‘ಆದಿಪುರುಷ್​’ ಚಿತ್ರದಲ್ಲೂ ನಟಿಸಿದ್ದು, ಆ ಸಿನಿಮಾದ ಪ್ರಚಾರ ಕಾರ್ಯಕ್ಕೆ ಚಾಲನೆ ನೀಡಲಾಗಿದೆ. ಅನೇಕ ಕಡೆಗಳಲ್ಲಿ ತೆರಳಿ ಅವರು ಪ್ರಚಾರ ಮಾಡಬೇಕಿದೆ. ಇಲ್ಲದೇ ‘ಪ್ರಾಜೆಕ್ಟ್​ ಕೆ’ ಸಿನಿಮಾದ ಕೆಲಸಗಳು ಕೂಡ ಪ್ರಗತಿಯಲ್ಲಿವೆ.

ಹೆಚ್ಚಿನ ಸಿನಿಮಾ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್​ ಮಾಡಿ.

Published On - 8:02 am, Fri, 23 September 22

ಶಾಸಕಾಂಗ, ಕಾರ್ಯಾಂಗ ಮತ್ತು ನ್ಯಾಯಾಂಗ ಸಮನ್ವಯತೆಯಿಂದ ಕೆಲಸ ಮಾಡಬೇಕು: ಸಿಎಂ
ಶಾಸಕಾಂಗ, ಕಾರ್ಯಾಂಗ ಮತ್ತು ನ್ಯಾಯಾಂಗ ಸಮನ್ವಯತೆಯಿಂದ ಕೆಲಸ ಮಾಡಬೇಕು: ಸಿಎಂ
ನನ್ನ ಆಯುಷ್ಯವನ್ನೂ ದೇವರು ನಮ್ಮ ಸೈನಿಕರಿಗೆ ನೀಡಲಿ: ಪಲ್ಲವಿ ರಾವ್
ನನ್ನ ಆಯುಷ್ಯವನ್ನೂ ದೇವರು ನಮ್ಮ ಸೈನಿಕರಿಗೆ ನೀಡಲಿ: ಪಲ್ಲವಿ ರಾವ್
ಬಾಗಲಕೋಟೆ: NWKRTC ಬಸ್​ ಚಾಲಕ, ಕಂಡಕ್ಟರ್​ ಮೇಲೆ ಕಟ್ಟಿಗೆಯಿಂದ ಹಲ್ಲೆ​
ಬಾಗಲಕೋಟೆ: NWKRTC ಬಸ್​ ಚಾಲಕ, ಕಂಡಕ್ಟರ್​ ಮೇಲೆ ಕಟ್ಟಿಗೆಯಿಂದ ಹಲ್ಲೆ​
ಕೆನಡ ಚುನಾವಣೆಯಲ್ಲಿ ಸೋತಿದ್ದಕ್ಕೆ ಭಾವುಕರಾದ ಖಲಿಸ್ತಾನ್ ಪರ ಜಗ್ಮೀತ್ ಸಿಂಗ್
ಕೆನಡ ಚುನಾವಣೆಯಲ್ಲಿ ಸೋತಿದ್ದಕ್ಕೆ ಭಾವುಕರಾದ ಖಲಿಸ್ತಾನ್ ಪರ ಜಗ್ಮೀತ್ ಸಿಂಗ್
ಸುದೀಪ್ ಮತ್ತು ಶಿವಣ್ಣನ ಜೊತೆಗಿನ ಗೆಳೆತನದ ಬಗ್ಗೆ ನಾನಿ ಮಾತು
ಸುದೀಪ್ ಮತ್ತು ಶಿವಣ್ಣನ ಜೊತೆಗಿನ ಗೆಳೆತನದ ಬಗ್ಗೆ ನಾನಿ ಮಾತು
ನಿನ್ನೆ ಶಿವಕುಮಾರ್ ಹೇಳಿದ್ದನ್ನೇ ಇಂದು ಪ್ರದೀಪ್ ಈಶ್ವರ್ ಪುನರುಚ್ಛರಿಸಿದರು
ನಿನ್ನೆ ಶಿವಕುಮಾರ್ ಹೇಳಿದ್ದನ್ನೇ ಇಂದು ಪ್ರದೀಪ್ ಈಶ್ವರ್ ಪುನರುಚ್ಛರಿಸಿದರು
ಮೋದಿ ನಿವಾಸದಲ್ಲಿ ಮಹತ್ವದ ಸಭೆ; ಸೇನಾ ಮುಖ್ಯಸ್ಥರು, ರಾಜನಾಥ್ ಸಿಂಗ್ ಭಾಗಿ
ಮೋದಿ ನಿವಾಸದಲ್ಲಿ ಮಹತ್ವದ ಸಭೆ; ಸೇನಾ ಮುಖ್ಯಸ್ಥರು, ರಾಜನಾಥ್ ಸಿಂಗ್ ಭಾಗಿ
ದೇವೇಗೌಡರಂತೆ ಮಂಜುನಾಥ್ ಸಹ ಪಹಲ್ಗಾಮ್ ಬಗ್ಗೆ ಅನಾವಶ್ಯಕ ಮಾತಾಡಲಿಲ್ಲ
ದೇವೇಗೌಡರಂತೆ ಮಂಜುನಾಥ್ ಸಹ ಪಹಲ್ಗಾಮ್ ಬಗ್ಗೆ ಅನಾವಶ್ಯಕ ಮಾತಾಡಲಿಲ್ಲ
ಅಧಿಕಾರದಿಂದ ಕೆಳಗಿಳಿಯುವ ಫ್ರಸ್ಟ್ರೇಶನ್ ಸಿಎಂರನ್ನು ಕಾಡುತ್ತಿದೆ: ಅಶೋಕ
ಅಧಿಕಾರದಿಂದ ಕೆಳಗಿಳಿಯುವ ಫ್ರಸ್ಟ್ರೇಶನ್ ಸಿಎಂರನ್ನು ಕಾಡುತ್ತಿದೆ: ಅಶೋಕ
ಧಗಧಗನೆ ಹೊತ್ತಿ ಉರಿದ ಚೀನಾದ ರೆಸ್ಟೋರೆಂಟ್; 22 ಜನ ಸಾವು
ಧಗಧಗನೆ ಹೊತ್ತಿ ಉರಿದ ಚೀನಾದ ರೆಸ್ಟೋರೆಂಟ್; 22 ಜನ ಸಾವು