AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Prabhas: ದೊಡ್ಡಪ್ಪನ ನಿಧನದ ನೋವಿಟ್ಟುಕೊಂಡು ಕೆಲಸಕ್ಕೆ ಬಂದ ಪ್ರಭಾಸ್​; ‘ಸಲಾರ್​’ ಶೂಟಿಂಗ್​ ಮತ್ತೆ ಶುರು

Salaar: ಕೃಷ್ಣಂ ರಾಜು ನಿಧನರಾದ ಕಾರಣದಿಂದ ಪ್ರಭಾಸ್ ಅವರು ಕನಿಷ್ಠ ಎರಡು ವಾರವಾದರೂ ಬ್ರೇಕ್ ತೆಗೆದುಕೊಳ್ಳಬಹುದು ಅಂತ ಎಲ್ಲರೂ ಊಹಿಸಿದ್ದರು. ಆದರೆ ಅದಕ್ಕೂ ಮುನ್ನವೇ ಅವರು ಶೂಟಿಂಗ್​ಗೆ ಮರಳಿದ್ದಾರೆ.

Prabhas: ದೊಡ್ಡಪ್ಪನ ನಿಧನದ ನೋವಿಟ್ಟುಕೊಂಡು ಕೆಲಸಕ್ಕೆ ಬಂದ ಪ್ರಭಾಸ್​; ‘ಸಲಾರ್​’ ಶೂಟಿಂಗ್​ ಮತ್ತೆ ಶುರು
ಪ್ರಭಾಸ್
TV9 Web
| Edited By: |

Updated on:Sep 23, 2022 | 8:02 AM

Share

ನಟ ಪ್ರಭಾಸ್​ (Prabhas) ಅವರ ಮನೆಯಲ್ಲಿ ಸೂತಕ ಛಾಯೆ ಇದೆ. ಅವರ ದೊಡ್ಡಪ್ಪ ಕೃಷ್ಣಂ ರಾಜು ನಿಧನದಿಂದ ಇಡೀ ಕುಟುಂಬದಲ್ಲಿ ಶೋಕದ ವಾತಾವರಣ ನಿರ್ಮಾಣ ಆಗಿದೆ. ಪ್ರಭಾಸ್​ ಅವರ ವೃತ್ತಿಜೀವನದನಲ್ಲಿ ಕೃಷ್ಣಂ ರಾಜು (Krishnam Raju) ಅವರು ತುಂಬ ಮಹತ್ವದ ಪಾತ್ರ ವಹಿಸಿದ್ದರು. ಹಾಗಾಗಿ ಅವರನ್ನು ಕಂಡರೆ ಪ್ರಭಾಸ್​ಗೆ ತುಂಬ ಪ್ರೀತಿ, ಗೌರವ. ಆದರೆ ಏಕಾಏಕಿ ದೊಡ್ಡಪ್ಪನನ್ನು ಕಳೆದುಕೊಂಡಿರುವುದು ಪ್ರಭಾಸ್​ ಮನಸ್ಸಿಗೆ ಆಘಾತ ಉಂಟು ಮಾಡಿದೆ. ಹಾಗಿದ್ದರೂ ಕೂಡ ಅವರು ಕೆಲಸದ ಮೇಲಿರುವ ನಿಷ್ಠೆಯನ್ನು ಕಡಿಮೆ ಮಾಡಿಕೊಂಡಿಲ್ಲ. ಎಲ್ಲರೂ ಊಹಿಸಿದ್ದಕ್ಕಿಂತಲೂ ಮುಂಚೆಯೇ ಅವರು ಶೂಟಿಂಗ್​ಗೆ ಮರಳಿದ್ದಾರೆ. ಮನದಲ್ಲಿ ಬೆಟ್ಟದಷ್ಟು ನೋವಿದ್ದರೂ ಕೂಡ ‘ಸಲಾರ್​’ (Salaar) ಸಿನಿಮಾದ ಚಿತ್ರೀಕರಣಕ್ಕೆ ಅವರು ಹಾಜರಾಗಿದ್ದಾರೆ. ಇದು ಎಲ್ಲರಿಗೂ ಅಚ್ಚರಿ ಉಂಟು ಮಾಡಿದೆ.

ಪ್ರಶಾಂತ್​ ನೀಲ್​ ಅವರು ‘ಸಲಾರ್’ ಸಿನಿಮಾಗೆ ನಿರ್ದೇಶನ ಮಾಡುತ್ತಿದ್ದಾರೆ. ರಾಮೋಜಿ ಫಿಲ್ಮ್ ಸಿಟಿಯಲ್ಲಿ ಬೃಹತ್​ ಸೆಟ್​ಗಳನ್ನು ನಿರ್ಮಿಸಿ ಶೂಟಿಂಗ್​ ಮಾಡಲಾಗುತ್ತಿದೆ. ಆದರೆ ಪ್ರಭಾಸ್​ ಅವರ ದೊಡ್ಡಪ್ಪ ಕೃಷ್ಣಂ ರಾಜು ನಿಧನರಾದ ಕಾರಣದಿಂದ ಚಿತ್ರೀಕರಣಕ್ಕೆ ಹಿನ್ನಡೆ ಆಗಿತ್ತು. ಪ್ರಭಾಸ್ ಅವರು ಕನಿಷ್ಠ ಎರಡು ವಾರವಾದರೂ ಬ್ರೇಕ್ ತೆಗೆದುಕೊಳ್ಳಬಹುದು ಎಂದೇ ಎಲ್ಲರೂ ನಿರೀಕ್ಷಿಸಿದ್ದರು. ಆದರೆ ಅದಕ್ಕೂ ಮುನ್ನವೇ ಅವರು ಶೂಟಿಂಗ್​ಗೆ ಮರಳಿದ್ದಾರೆ.

ಕೃಷ್ಣಂ ರಾಜು ಅವರ 11ನೇ ದಿನದ ಕಾರ್ಯಗಳನ್ನು ಮಾಡಲಾಗಿದೆ. ಹಾಗಾಗಿ ಪ್ರಭಾಸ್​ ಅವರು ಮತ್ತೆ ಸಿನಿಮಾದ ಕೆಲಸಗಳಲ್ಲಿ ತೊಡಗಿಕೊಳ್ಳಲು ಆರಂಭಿಸಿದ್ದಾರೆ. ಗುರುವಾರವೇ (ಸೆಪ್ಟೆಂಬರ್​ 22) ಅವರು ‘ಸಲಾರ್​’ ಸೆಟ್​ಗೆ ಮರಳಿದ್ದಾರೆ. ಒಂದೆರಡು ದೃಶ್ಯಗಳಲ್ಲಿ ಅಭಿನಯಿಸಿದ್ದಾರೆ. ಇದು ಎಲ್ಲರಿಗೂ ಅಚ್ಚರಿ ಮೂಡಿಸಿದೆ. ಈ ಚಿತ್ರದಲ್ಲಿ ಪ್ರಭಾಸ್​ಗೆ ಜೋಡಿಯಾಗಿ ಶ್ರುತಿ ಹಾಸನ್​ ನಟಿಸುತ್ತಿದ್ದಾರೆ. ಇನ್ನೆರಡು ದಿನಗಳಲ್ಲಿ ಶೂಟಿಂಗ್​ಗೆ ಹಾಜರಾಗುವಂತೆ ಅವರಿಗೆ ಪ್ರಭಾಸ್​ ನೀಲ್​ ಸೂಚಿಸಿದ್ದಾರೆ ಎಂದು ವರದಿ ಆಗಿದೆ.

ಇದನ್ನೂ ಓದಿ
Image
ವಯಸ್ಸಿನಲ್ಲಿ 11 ವರ್ಷ ಚಿಕ್ಕ ನಟಿಯ ಜತೆ ಪ್ರಭಾಸ್ ಡೇಟಿಂಗ್​? ಸೂತಕದ ಮನೆಗೆ ಬೇಸರ ತಂದ ಗಾಸಿಪ್​
Image
Prabhas: ದೊಡ್ಡಪ್ಪನ ಅಂತ್ಯ ಸಂಸ್ಕಾರಕ್ಕೆ ಬಂದ ಫ್ಯಾನ್ಸ್​ಗೆ ಊಟದ ವ್ಯವಸ್ಥೆ ಮಾಡಿಸಿ ಕಾಳಜಿ ತೋರಿದ ಪ್ರಭಾಸ್​
Image
ಪ್ರಭಾಸ್​ ವರ್ಸಸ್​ ಪ್ರಭಾಸ್​: ‘ಸಲಾರ್​’ ಚಿತ್ರದಲ್ಲಿ ಡಬಲ್​ ರೋಲ್​ ಮಾಡಿಸುತ್ತಾರಾ ಪ್ರಶಾಂತ್​ ನೀಲ್​?
Image
‘ರಾಧೆ ಶ್ಯಾಮ್​’ ಸೋಲಿಗೆ 2 ಮುಖ್ಯ ಕಾರಣ ತಿಳಿಸಿದ ಪ್ರಭಾಸ್​; ಪ್ರೇಕ್ಷಕರು ಈ ನೆಪವನ್ನೆಲ್ಲ ಒಪ್ಪುತ್ತಾರಾ?

ಪ್ರಶಾಂತ್​ ನೀಲ್​ ಮತ್ತು ಪ್ರಭಾಸ್​ ಕಾಂಬಿನೇಷನ್​ನಲ್ಲಿ ‘ಸಲಾರ್​’ ಸಿನಿಮಾ ಮೂಡಿಬರುತ್ತಿರುವುದರಿಂದ ಸಹಜವಾಗಿಯೇ ನಿರೀಕ್ಷೆ ಹೆಚ್ಚಿದೆ. ತುಂಬ ಅದ್ದೂರಿಯಾಗಿ ನಿರ್ಮಾಣ ಆಗುತ್ತಿರುವ ಈ ಚಿತ್ರಕ್ಕೆ ಬಂಡವಾಳ ಹೂಡುತ್ತಿರುವುದು ‘ಕೆಜಿಎಫ್​: ಚಾಪ್ಟರ್​ 2’ ಖ್ಯಾತಿಯ ನಿರ್ಮಾಪಕ ವಿಜಯ್​ ಕಿರಗಂದೂರು. ಘಟಾನುಘಟಿ ತಂತ್ರಜ್ಞರು ಪ್ರಶಾಂತ್​ ನೀಲ್​ ಜೊತೆ ಕೆಲಸ ಮಾಡುತ್ತಿದ್ದಾರೆ.

ಪ್ರಭಾಸ್​ ಅವರು ‘ಆದಿಪುರುಷ್​’ ಚಿತ್ರದಲ್ಲೂ ನಟಿಸಿದ್ದು, ಆ ಸಿನಿಮಾದ ಪ್ರಚಾರ ಕಾರ್ಯಕ್ಕೆ ಚಾಲನೆ ನೀಡಲಾಗಿದೆ. ಅನೇಕ ಕಡೆಗಳಲ್ಲಿ ತೆರಳಿ ಅವರು ಪ್ರಚಾರ ಮಾಡಬೇಕಿದೆ. ಇಲ್ಲದೇ ‘ಪ್ರಾಜೆಕ್ಟ್​ ಕೆ’ ಸಿನಿಮಾದ ಕೆಲಸಗಳು ಕೂಡ ಪ್ರಗತಿಯಲ್ಲಿವೆ.

ಹೆಚ್ಚಿನ ಸಿನಿಮಾ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್​ ಮಾಡಿ.

Published On - 8:02 am, Fri, 23 September 22

ಏರ್ಪೋರ್ಟ್​ನಲ್ಲೇ ಭೈರತಿ ಬಸವರಾಜ್​​ರನ್ನ​ ವಶಕ್ಕೆ ಪಡೆದ ಪೊಲೀಸರು
ಏರ್ಪೋರ್ಟ್​ನಲ್ಲೇ ಭೈರತಿ ಬಸವರಾಜ್​​ರನ್ನ​ ವಶಕ್ಕೆ ಪಡೆದ ಪೊಲೀಸರು
ಇದು ಜಗತ್ತಿನ ದುಬಾರಿ ಅಣಬೆ: ಬೆಲೆ ಕೇಳಿದ್ರೆ ಶಾಕ್​​ ಆಗೋದು ಗ್ಯಾರಂಟಿ
ಇದು ಜಗತ್ತಿನ ದುಬಾರಿ ಅಣಬೆ: ಬೆಲೆ ಕೇಳಿದ್ರೆ ಶಾಕ್​​ ಆಗೋದು ಗ್ಯಾರಂಟಿ
ಕಾಫಿ ಬಿಲ್​ ಕೇಳಿದ್ದಕ್ಕೆ ಪಿಸಿಗಳಿಂದ ಹೋಟೆಲ್​ ಸಿಬ್ಬಂದಿ ಮೇಲೆ ಹಲ್ಲೆ
ಕಾಫಿ ಬಿಲ್​ ಕೇಳಿದ್ದಕ್ಕೆ ಪಿಸಿಗಳಿಂದ ಹೋಟೆಲ್​ ಸಿಬ್ಬಂದಿ ಮೇಲೆ ಹಲ್ಲೆ
ಜಯಸೂರ್ಯರ 17 ವರ್ಷಗಳ ಹಳೆಯ ದಾಖಲೆ ಮುರಿದ ಓಮನ್ ಆಟಗಾರ
ಜಯಸೂರ್ಯರ 17 ವರ್ಷಗಳ ಹಳೆಯ ದಾಖಲೆ ಮುರಿದ ಓಮನ್ ಆಟಗಾರ
ರಾಜ್ಯ ಸರ್ಕಾರಕ್ಕೆ 1 ಸಾವಿರ ದಿನ: 6ನೇ ಗ್ಯಾರಂಟಿ ಜಾರಿ ಮಾಡ್ತೇವೆ; ಡಿಕೆಶಿ
ರಾಜ್ಯ ಸರ್ಕಾರಕ್ಕೆ 1 ಸಾವಿರ ದಿನ: 6ನೇ ಗ್ಯಾರಂಟಿ ಜಾರಿ ಮಾಡ್ತೇವೆ; ಡಿಕೆಶಿ
ಮುಸ್ಲಿಂ ಯುವಕನ ಜೊತೆ ಹಿಂದೂ ಹುಡುಗಿ ಪರಾರಿ: ಯುವತಿ ತಂದೆಯ ಸ್ಫೋಟಕ ಹೇಳಿಕೆ
ಮುಸ್ಲಿಂ ಯುವಕನ ಜೊತೆ ಹಿಂದೂ ಹುಡುಗಿ ಪರಾರಿ: ಯುವತಿ ತಂದೆಯ ಸ್ಫೋಟಕ ಹೇಳಿಕೆ
ಚಂದನ್ ಹತ್ಯೆ: ಮೊಬೈಲ್‌ನಲ್ಲಿ ಮಗನ ಅಂತಿಮ ದರ್ಶನ ನೋಡಿ ಕಣ್ಣೀರಿಟ್ಟ ತಂದೆ
ಚಂದನ್ ಹತ್ಯೆ: ಮೊಬೈಲ್‌ನಲ್ಲಿ ಮಗನ ಅಂತಿಮ ದರ್ಶನ ನೋಡಿ ಕಣ್ಣೀರಿಟ್ಟ ತಂದೆ
ಪಿಡಬ್ಲ್ಯೂಡಿ ಮುಖ್ಯ ಇಂಜಿನಿಯರ್​​ಗೆ ಶಾಕ್​​ ಕೊಟ್ಟ ಲೋಕಾಯುಕ್ತ
ಪಿಡಬ್ಲ್ಯೂಡಿ ಮುಖ್ಯ ಇಂಜಿನಿಯರ್​​ಗೆ ಶಾಕ್​​ ಕೊಟ್ಟ ಲೋಕಾಯುಕ್ತ
RCB ಅಭಿಮಾನಿಗಳಿಗೆ ಸರ್ಕಾರದಿಂದ ಇಂದೇ ಸಿಗುತ್ತಾ ಸಿಹಿ ಸುದ್ದಿ?
RCB ಅಭಿಮಾನಿಗಳಿಗೆ ಸರ್ಕಾರದಿಂದ ಇಂದೇ ಸಿಗುತ್ತಾ ಸಿಹಿ ಸುದ್ದಿ?
ರಸ್ತೆ ಮಧ್ಯೆ ಕೆಟ್ಟು ನಿಂತ ಕೆಎಸ್‌ಆರ್‌ಟಿಸಿ ಬಸ್
ರಸ್ತೆ ಮಧ್ಯೆ ಕೆಟ್ಟು ನಿಂತ ಕೆಎಸ್‌ಆರ್‌ಟಿಸಿ ಬಸ್