AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Prabhas: 50 ದಿನಗಳ ಬಳಿಕ ಭಾರತಕ್ಕೆ ಮರಳಿದ ಪ್ರಭಾಸ್; ‘ಸಲಾರ್’ ತಂಡದ ಚಿಂತೆ ದೂರ

ಇತ್ತೀಚೆಗೆ ಅಮೆರಿಕದಲ್ಲಿ ‘ಕಲ್ಕಿ 2898 ಎಡಿ’ ಸಿನಿಮಾದ ಮೊದಲ ಗ್ಲಿಂಪ್ಸ್ ರಿಲೀಸ್ ಆಗಿದೆ. ಈ ಕಾರ್ಯಕ್ರಮದಲ್ಲಿ ಪ್ರಭಾಸ್ ಭಾಗಿ ಆಗಿದ್ದರು. ಈಗ ಅವರು ಎಲ್ಲಾ ಕೆಲಸಗಳನ್ನು ಪೂರ್ಣಗೊಳಿಸಿ, ಭಾರತಕ್ಕೆ ಮರಳಿದ್ದಾರೆ.

Prabhas: 50 ದಿನಗಳ ಬಳಿಕ ಭಾರತಕ್ಕೆ ಮರಳಿದ ಪ್ರಭಾಸ್; ‘ಸಲಾರ್’ ತಂಡದ ಚಿಂತೆ ದೂರ
ಪ್ರಭಾಸ್
Follow us
ರಾಜೇಶ್ ದುಗ್ಗುಮನೆ
|

Updated on:Jul 26, 2023 | 12:42 PM

ಪ್ರಭಾಸ್ ಅವರು ‘ಆದಿಪುರುಷ್’ ಸಿನಿಮಾ (Adipurush Movie) ರಿಲೀಸ್ ಸಂದರ್ಭದಲ್ಲಿ ಅಮೆರಿಕಕ್ಕೆ ತೆರಳಿದ್ದರು. ಅಲ್ಲಿ ಅಭಿಮಾನಿಗಳ ಜೊತೆ ಸಿನಿಮಾ ನೋಡಿದ್ದರು. ಈಗ ಅವರು 50 ದಿನಗಳ ಬಳಿಕ ಭಾರತಕ್ಕೆ ಮರಳಿದ್ದಾರೆ. ಇಂದು (ಜುಲೈ 26) ಮುಂಜಾನೆ ಅವರು ಹೈದರಾಬಾದ್ ವಿಮಾನ ನಿಲ್ದಾಣದಲ್ಲಿ ಕಾಣಿಸಿಕೊಂಡಿದ್ದಾರೆ ಎನ್ನಲಾಗಿದೆ. ‘ಸಲಾರ್’ ಸಿನಿಮಾ (Salaar Movie) ರಿಲೀಸ್​ಗೆ ಇನ್ನು ಎರಡು ತಿಂಗಳು ಮಾತ್ರ ಬಾಕಿ ಇದೆ. ಈ ಚಿತ್ರಕ್ಕೆ ಭರ್ಜರಿಯಾಗಿ ಪ್ರಚಾರ ನೀಡಬೇಕಿದೆ. ಮುಂದಿನ ದಿನಗಳಲ್ಲಿ ಅವರು ಸಂಪೂರ್ಣವಾಗಿ ಈ ಚಿತ್ರದ ಪ್ರಮೋಷನ್ ಕಾರ್ಯದಲ್ಲಿ ಭಾಗಿ ಆಗಲಿದ್ದಾರೆ.

ಪ್ರಭಾಸ್ ‘ಸಲಾರ್’ ಸಿನಿಮಾ ಶೂಟಿಂಗ್ ವೇಳೆ ಗಾಯಗೊಂಡಿದ್ದರು. ಬಳಿಕ ಇದರಿಂದ ಚೇತರಿಕೆ ಕಂಡರು. ಮತ್ತೆ ಅವರಿಗೆ ತೊಂದರೆ ಕಾಡಿತ್ತು. ಹೀಗಾಗಿ, ಅವರು ಅಮೆರಿಕದಲ್ಲಿ ಶಸ್ತ್ರಚಿಕಿತ್ಸೆಗೆ ಒಳಗಾಗಿದ್ದಾರೆ. ಅಲ್ಲಿಯೇ ಅವರು ಚೇತರಿಸಿಕೊಂಡಿದ್ದಾರೆ. ಇತ್ತೀಚೆಗೆ ಅಮೆರಿಕದಲ್ಲಿ ‘ಕಲ್ಕಿ 2898 ಎಡಿ’ ಸಿನಿಮಾದ ಮೊದಲ ಗ್ಲಿಂಪ್ಸ್ ರಿಲೀಸ್ ಆಗಿದೆ. ಈ ಕಾರ್ಯಕ್ರಮದಲ್ಲಿ ಪ್ರಭಾಸ್ ಭಾಗಿ ಆಗಿದ್ದರು. ಈಗ ಅವರು ಎಲ್ಲಾ ಕೆಲಸಗಳನ್ನು ಪೂರ್ಣಗೊಳಿಸಿ, ಭಾರತಕ್ಕೆ ಮರಳಿದ್ದಾರೆ. ಇದರಿಂದ ಫ್ಯಾನ್ಸ್ ಖುಷಿಯಾಗಿದ್ದಾರೆ.

ಹೊಂಬಾಳೆ ಫಿಲ್ಮ್ಸ್​ ನಿರ್ಮಾಣದ ‘ಸಲಾರ್’ ಸಿನಿಮಾ ಬಗ್ಗೆ ಸಾಕಷ್ಟು ನಿರೀಕ್ಷೆ ಇದೆ. ಈ ಚಿತ್ರದ ಮೂಲಕ ಗೆಲ್ಲಲೇಬೇಕಾದ ಅನಿವಾರ್ಯತೆ ಪ್ರಭಾಸ್​ಗೆ ಇದೆ. ಇದರ ಜೊತೆಗೆ ಸಿನಿಮಾಗೆ ದೊಡ್ಡ ಮಟ್ಟದ ಪ್ರಚಾರ ಬೇಕಿದೆ. ಟಾಲಿವುಡ್ ಮಾತ್ರವಲ್ಲದೆ ಈ ಚಿತ್ರಕ್ಕೆ ಕನ್ನಡ, ಹಿಂದಿಯಲ್ಲೂ ದೊಡ್ಡ ಮಟ್ಟದ ಪ್ರಮೋಷನ್ ಮಾಡುವ ಅಗತ್ಯವಿದೆ. ಹೀಗಾಗಿ, ಇದಕ್ಕೆ ಕನಿಷ್ಠ ಎರಡು ತಿಂಗಳ ಅವಶ್ಯಕತೆ ಇದೆ.

ಇದನ್ನೂ ಓದಿ: ‘ಕಲ್ಕಿ’ ಅವತಾರದಲ್ಲಿ ಪ್ರಭಾಸ್ ಎಂಟ್ರಿ; ಮಿಂಚಿದ ಅಮಿತಾಭ್, ದೀಪಿಕಾ

ಪ್ರಶಾಂತ್ ನೀಲ್ ಅವರು ‘ಸಲಾರ್’ ಸಿನಿಮಾಗೆ ನಿರ್ದೇಶನ ಮಾಡಿದ್ದಾರೆ. ಶ್ರುತಿ ಹಾಸನ್ ಈ ಚಿತ್ರದ ನಾಯಕಿ. ಇತ್ತೀಚೆಗೆ ರಿಲೀಸ್ ಆದ ಟೀಸರ್ ಸಾಕಷ್ಟು ಗಮನ ಸೆಳೆದಿದೆ. ಈ ಚಿತ್ರದಲ್ಲಿ ಮಲಯಾಳಂನ ಪೃಥ್ವಿರಾಜ್ ಸುಕುಮಾರನ್ ಕೂಡ ಮುಖ್ಯ ಪಾತ್ರ ಮಾಡಿದ್ದಾರೆ. ಸಿನಿಮಾಗೆ ಯಾವಾಗಿನಿಂದ ಪ್ರಚಾರ ಕಾರ್ಯ ಆರಂಭ ಆಗಲಿದೆ ಎಂಬುದನ್ನು ಕಾದು ನೋಡಬೇಕಿದೆ.

ಇನ್ನಷ್ಟು ಸಿನಿಮಾ ಸುದ್ದಿಗಾಗಿ ಇಲ್ಲಿ ಕ್ಲಿಕ್​ ಮಾಡಿ

Published On - 12:20 pm, Wed, 26 July 23

ಹೊಸ ಪಕ್ಷ ಕಟ್ಟೇನು, ಆದರೆ ಕಾಂಗ್ರೆಸ್ ಮಾತ್ರ ಸೇರಲ್ಲ: ಬಸನಗೌಡ ಯತ್ನಾಳ್
ಹೊಸ ಪಕ್ಷ ಕಟ್ಟೇನು, ಆದರೆ ಕಾಂಗ್ರೆಸ್ ಮಾತ್ರ ಸೇರಲ್ಲ: ಬಸನಗೌಡ ಯತ್ನಾಳ್
ವಾಂಖೆಡೆಯಲ್ಲಿ ರೋಹಿತ್ ಶರ್ಮಾ ಸ್ಟ್ಯಾಂಡ್ ಉದ್ಘಾಟನೆ
ವಾಂಖೆಡೆಯಲ್ಲಿ ರೋಹಿತ್ ಶರ್ಮಾ ಸ್ಟ್ಯಾಂಡ್ ಉದ್ಘಾಟನೆ
ಕಾರಿಗೆ ಅಪರೇಷನ್ ಸಿಂಧೂರ್ ಚಿತ್ರಗಳು, ಗಮನಸೆಳೆದ ಬಿಜೆಪಿ ನಾಯಕನ ಥಾರ್
ಕಾರಿಗೆ ಅಪರೇಷನ್ ಸಿಂಧೂರ್ ಚಿತ್ರಗಳು, ಗಮನಸೆಳೆದ ಬಿಜೆಪಿ ನಾಯಕನ ಥಾರ್
ಚಿಕ್ಕಬಳ್ಳಾಪುರ ಎಸ್​ಪಿ ಕಚೇರಿಗೆ ಬಂದು ಭದ್ರತೆ ಕೋರಿದ ಯುವಕ-ಯುವತಿ
ಚಿಕ್ಕಬಳ್ಳಾಪುರ ಎಸ್​ಪಿ ಕಚೇರಿಗೆ ಬಂದು ಭದ್ರತೆ ಕೋರಿದ ಯುವಕ-ಯುವತಿ
ಪ್ರಧಾನಿ ಮೋದಿ ಪಾದಗಳಿಗೆ ಸೇನೆ ನಮಸ್ಕರಿಸುತ್ತಿದೆ ಎಂದ ಜಗದೀಶ್ ದೇವ್ಡಾ
ಪ್ರಧಾನಿ ಮೋದಿ ಪಾದಗಳಿಗೆ ಸೇನೆ ನಮಸ್ಕರಿಸುತ್ತಿದೆ ಎಂದ ಜಗದೀಶ್ ದೇವ್ಡಾ
ಸಾವಿಗೂ ಮುನ್ನ ಗೆಳೆಯನೊಟ್ಟಿಗೆ ಏನು ಮಾತನಾಡಿದ್ದ ರಾಕೇಶ್ ಪೂಜಾರಿ
ಸಾವಿಗೂ ಮುನ್ನ ಗೆಳೆಯನೊಟ್ಟಿಗೆ ಏನು ಮಾತನಾಡಿದ್ದ ರಾಕೇಶ್ ಪೂಜಾರಿ
ಸಂಪುಟ ಪುನಾರಚನೆಯಾದಾಗ ನನಗೆ ಮಂತ್ರಿ ಸ್ಥಾನ ನೀಡಬಹುದು: ಶಿವಲಿಂಗೇಗೌಡ
ಸಂಪುಟ ಪುನಾರಚನೆಯಾದಾಗ ನನಗೆ ಮಂತ್ರಿ ಸ್ಥಾನ ನೀಡಬಹುದು: ಶಿವಲಿಂಗೇಗೌಡ
ಜಗದೀಶ್ ಶೆಟ್ಟರ್ ಸಿಎಂ ಆದ ನಂತರ ಮಂತ್ರಿಯಾಗಿ ಕೆಲಸ ಮಾಡಿದವರು: ಹೆಬ್ಬಾಳ್ಕರ್
ಜಗದೀಶ್ ಶೆಟ್ಟರ್ ಸಿಎಂ ಆದ ನಂತರ ಮಂತ್ರಿಯಾಗಿ ಕೆಲಸ ಮಾಡಿದವರು: ಹೆಬ್ಬಾಳ್ಕರ್
ಹಿಂದೆ ಬರುತ್ತಿದ್ದ ಸ್ಕೂಟಿ ಮೇಲೆ ಹತ್ತಿದ ಟ್ರಕ್; ಪವಾಡದಂತೆ ಪಾರಾದ ಮಹಿಳೆ
ಹಿಂದೆ ಬರುತ್ತಿದ್ದ ಸ್ಕೂಟಿ ಮೇಲೆ ಹತ್ತಿದ ಟ್ರಕ್; ಪವಾಡದಂತೆ ಪಾರಾದ ಮಹಿಳೆ
ಸಿಂಹರಾಶಿಗೆ ಗುರುಬಲ ಶುರು; ಅದೃಷ್ಟ ಕೂಡಿ ಬರಲಿದೆ!
ಸಿಂಹರಾಶಿಗೆ ಗುರುಬಲ ಶುರು; ಅದೃಷ್ಟ ಕೂಡಿ ಬರಲಿದೆ!