AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಪ್ರಭಾಸ್​ ಸಿನಿಮಾದಲ್ಲಿ ಬಿಗ್​ ಬಾಸ್​ ಸ್ಪರ್ಧಿಗೆ ಅವಕಾಶ? ಜೋರಾಗಿ ಹಬ್ಬಿದ್ದ ಗಾಸಿಪ್​ನ ಅಸಲಿಯತ್ತು ಇಲ್ಲಿದೆ

ಹಲವು ದಿನಗಳ ಹಿಂದೆಯೇ ‘ಆದಿಪುರುಷ್​’ ಚಿತ್ರಕ್ಕೆ ಶೂಟಿಂಗ್ ಆರಂಭಿಸಲಾಗಿತ್ತು. ಆದರೆ ಸೆಟ್​ನಲ್ಲಿ ಬೆಂಕಿ ಕಾಣಿಸಿಕೊಂಡಿದ್ದು, ಲಾಕ್​ಡೌನ್​ ಜಾರಿಯಾಗಿದ್ದು ಮುಂತಾದ ವಿಘ್ನಗಳ ಕಾರಣದಿಂದ ಸದ್ಯಕ್ಕೆ ಚಿತ್ರೀಕರಣ ನಿಲ್ಲಿಸಲಾಗಿದೆ.

ಪ್ರಭಾಸ್​ ಸಿನಿಮಾದಲ್ಲಿ ಬಿಗ್​ ಬಾಸ್​ ಸ್ಪರ್ಧಿಗೆ ಅವಕಾಶ? ಜೋರಾಗಿ ಹಬ್ಬಿದ್ದ ಗಾಸಿಪ್​ನ ಅಸಲಿಯತ್ತು ಇಲ್ಲಿದೆ
ಪ್ರಭಾಸ್​, ಆದಿಪುರುಷ್​ ಸಿನಿಮಾ ಪೋಸ್ಟರ್​
ಮದನ್​ ಕುಮಾರ್​
|

Updated on: May 30, 2021 | 9:09 AM

Share

ಪ್ಯಾನ್​ ಇಂಡಿಯಾ ಸ್ಟಾರ್​ ಪ್ರಭಾಸ್​ ನಟಿಸುತ್ತಿರುವ ‘ಆದಿಪುರುಷ್​’ ಚಿತ್ರ ಹಲವು ಕಾರಣಗಳಿಗಾಗಿ ಸದ್ದು ಮಾಡುತ್ತಿದ್ದೆ. ಈ ಸಿನಿಮಾದಲ್ಲಿ ರಾಮಾಯಣದ ಕಥೆ ಇರಲಿದೆ. ರಾಮನಾಗಿ ಪ್ರಭಾಸ್​ ಕಾಣಿಸಿಕೊಳ್ಳಲಿದ್ದಾರೆ. ಲಕ್ಷ್ಮಣನ ಪಾತ್ರಕ್ಕೆ ಸನ್ನಿ ಸಿಂಗ್​ ಆಯ್ಕೆ ಆಗಿದ್ದಾರೆ. ಸೀತೆಯ ಪಾತ್ರಕ್ಕೆ ಕೃತಿ ಸನೋನ್​ ಬಣ್ಣ ಹಚ್ಚಲಿದ್ದಾರೆ. ಈ ನಡುವೆ ಅನೇಕ ಸ್ಟಾರ್​ಗಳ ಹೆಸರು ಕೂಡ ಇದರಲ್ಲಿ ಕೇಳಿಬರುತ್ತಿದೆ. ಬಿಗ್​ ಬಾಸ್​ ಸ್ಪರ್ಧಿ ಸಿದ್ಧಾರ್ಥ್​ ಶುಕ್ಲಾ ಕೂಡ ‘ಆದಿಪುರುಷ್​’ ಚಿತ್ರದಲ್ಲಿ ನಟಿಸುತ್ತಾರೆ ಎಂಬ ಸುದ್ದಿ ಹರಡಿತ್ತು. ಅದಕ್ಕೀಗ ಸ್ಪಷ್ಟನೆ ಸಿಕ್ಕಿದೆ.

ಬಹುನಿರೀಕ್ಷಿತ ಆದಿಪುರುಷ್​ ಚಿತ್ರಕ್ಕೆ ಖ್ಯಾತ ನಿರ್ದೇಶಕ ಓಂ ರಾವುತ್​ ಅವರು ನಿರ್ದೇಶನ ಮಾಡುತ್ತಿದ್ದಾರೆ. ರಾವಣನಾಗಿ ಸೈಫ್​ ಅಲಿ ಖಾನ್​ ನಟಿಸುತ್ತಿದ್ದಾರೆ. ರಾವಣನ ಪುತ್ರನ ಪಾತ್ರದಲ್ಲಿ ಸಿದ್ಧಾರ್ಥ್​ ಶುಕ್ಲಾ ಅಭಿನಯಿಸುತ್ತಾರೆ ಎಂಬ ಗುಸುಗಸು ಬಿ-ಟೌನ್​ ಅಂಗಳಲ್ಲಿ ಹಬ್ಬಿತ್ತು. ಆ ಬಗ್ಗೆ ಸ್ವತಃ ಸಿದ್ಧಾರ್ಥ್​ ಶುಕ್ಲಾ ಪ್ರತಿಕ್ರಿಯೆ ನೀಡಿದ್ದಾರೆ. ಅಚ್ಚರಿ ಎಂದರೆ ಈವರೆಗೂ ಅವರಿಗೆ ಅಂತಹ ಯಾವುದೇ ಆಫರ್​ ಹೋಗಿಲ್ಲ.

ಮಾಧ್ಯಮವೊಂದಕ್ಕೆ ನೀಡಿದ ಸಂದರ್ಶನದಲ್ಲಿ ಸಿದ್ಧಾರ್ಥ್​ ಶುಕ್ಲಾ ಈ ಬಗ್ಗೆ ಮಾತನಾಡಿದ್ದಾರೆ. ‘ಪ್ರಾಮಾಣಿಕವಾಗಿ ಹೇಳಬೇಕೆಂದರೆ ನನಗೆ ಆ ರೀತಿಯ ಯಾವುದೇ ಆಫರ್​ ಬಂದಿಲ್ಲ. ಹಾಗಾಗಿ, ಹರಿದಾಡುತ್ತಿರುವ ಸುದ್ದಿಯಲ್ಲಿ ನಿಜ ಇದೆಯೋ ಇಲ್ಲವೋ ನನಗೆ ಗೊತ್ತಿಲ್ಲ. ಈ ಬಗ್ಗೆ ನನಗೆ ಏನೂ ಗೊತ್ತಿಲ್ಲ’ ಎನ್ನುವ ಮೂಲಕ ಎಲ್ಲ ಗಾಸಿಪ್​ಗಳಿಗೆ ಅವರು ತೆರೆ ಎಳೆದಿದ್ದಾರೆ. ಹಲವು ದಿನಗಳ ಹಿಂದೆಯೇ ‘ಆದಿಪುರುಷ್​’ ಚಿತ್ರಕ್ಕೆ ಶೂಟಿಂಗ್ ಆರಂಭಿಸಲಾಗಿತ್ತು. ಆದರೆ ಸೆಟ್​ನಲ್ಲಿ ಬೆಂಕಿ ಕಾಣಿಸಿಕೊಂಡಿದ್ದು, ಲಾಕ್​ಡೌನ್​ ಜಾರಿಯಾಗಿದ್ದು ಮುಂತಾದ ವಿಘ್ನಗಳ ಕಾರಣದಿಂದ ಸದ್ಯಕ್ಕೆ ಚಿತ್ರೀಕರಣ ನಿಲ್ಲಿಸಲಾಗಿದೆ.

ಹಿಂದಿ ಬಿಗ್​ ಬಾಸ್​ 13ನೇ ಸೀಸನ್​ನಲ್ಲಿ ಭಾಗವಹಿಸಿದ್ದ ಸಿದ್ಧಾರ್ಥ್​ ಶುಕ್ಲಾ ಅವರು ವಿನ್ನರ್​ ಆಗಿ ಹೊರಹೊಮ್ಮಿದ್ದರು. ಇದಲ್ಲದೆ ಕಿರುತೆರೆಯ ಅನೇಕ ಧಾರಾವಾಹಿ ಮತ್ತು ರಿಯಾಲಿಟಿ ಶೋಗಳಲ್ಲೂ ಅವರು ಕಾಣಿಸಿಕೊಂಡಿದ್ದಾರೆ. ಇತ್ತೀಚೆಗೆ ಬಿಡುಗಡೆ ಆಗಿರುವ ‘ಬ್ರೋಕನ್​ ಬಟ್​ ಬ್ಯೂಟಿಫುಲ್​ 3’ ವೆಬ್​ ಸಿರೀಸ್​ನಲ್ಲೂ ಸಿದ್ಧಾರ್ಥ್​ ನಟಿಸಿದ್ದು, ಎಲ್ಲರ ಗಮನ ಸೆಳೆಯುತ್ತಿದ್ದಾರೆ.

ಇದನ್ನೂ ಓದಿ:

Prabhas: ಆದಿಪುರುಷ್​ಗಾಗಿ ಬಾಡಿ ಬೆಳೆಸಲು ಸ್ಟಿರಾಯ್ಡ್​ ಬಳಸಿದ್ದಾರಾ ಪ್ರಭಾಸ್​? ಸಹನಟ ತೆರೆದಿಟ್ಟ ಸತ್ಯ ಇಲ್ಲಿದೆ

ಪ್ರಭಾಸ್​, ಸೈಫ್​ ಅಲಿ ಖಾನ್​ ನಟನೆಯ ಆದಿಪುರುಷ್​ ಸಿನಿಮಾದಲ್ಲಿ ಕಿಚ್ಚ ಸುದೀಪ್​ಗೆ ಯಾವ ಪಾತ್ರ?

Follow Us
ಪೋರ್ಟರ್, ರ‍್ಯಾಪಿಡೋ ಆ್ಯಪ್​​ಗಳ ವಿರುದ್ಧ ಬೀದಿಗಿಳಿದ ಗೂಡ್ಸ್ ವಾಹನ ಚಾಲಕರು
ಪೋರ್ಟರ್, ರ‍್ಯಾಪಿಡೋ ಆ್ಯಪ್​​ಗಳ ವಿರುದ್ಧ ಬೀದಿಗಿಳಿದ ಗೂಡ್ಸ್ ವಾಹನ ಚಾಲಕರು
ಯುಎಇ ದೇಶಕ್ಕೆ ರಫ್ತಾಗಲಿವೆ ಬ್ರಹ್ಮೋಸ್, ಆಕಾಶ್ ಕ್ಷಿಪಣಿಗಳು!
ಯುಎಇ ದೇಶಕ್ಕೆ ರಫ್ತಾಗಲಿವೆ ಬ್ರಹ್ಮೋಸ್, ಆಕಾಶ್ ಕ್ಷಿಪಣಿಗಳು!
ಬೆಂಗಳೂರು ರಸ್ತೆ ಅಭಿವೃದ್ಧಿ ಅನುದಾನದ ಬಗ್ಗೆ ತೇಜಸ್ವಿ ಸೂರ್ಯ ವಾಗ್ದಾಳಿ
ಬೆಂಗಳೂರು ರಸ್ತೆ ಅಭಿವೃದ್ಧಿ ಅನುದಾನದ ಬಗ್ಗೆ ತೇಜಸ್ವಿ ಸೂರ್ಯ ವಾಗ್ದಾಳಿ
ಮುಮ್ಮಡಿ ನಿರ್ವಾಣ ಸ್ವಾಮೀಜಿ ಅಂತಿಮ ದರ್ಶನದ ವೇಳೆ ಸಿಎಂ ಡಿಕೆಶಿ ಭಾವುಕ
ಮುಮ್ಮಡಿ ನಿರ್ವಾಣ ಸ್ವಾಮೀಜಿ ಅಂತಿಮ ದರ್ಶನದ ವೇಳೆ ಸಿಎಂ ಡಿಕೆಶಿ ಭಾವುಕ
ಧರ್ಮಸ್ಥಳದಲ್ಲಿ ಶಾಸಕರ ಆಣೆ ಪ್ರಮಾಣ ನಿರ್ಧಾರದಿಂದ ಹಿಂದೆ ಸರಿದ ಬಿಜೆಪಿ
ಧರ್ಮಸ್ಥಳದಲ್ಲಿ ಶಾಸಕರ ಆಣೆ ಪ್ರಮಾಣ ನಿರ್ಧಾರದಿಂದ ಹಿಂದೆ ಸರಿದ ಬಿಜೆಪಿ
‘ಹೀರೋಗಳು ವರ್ಷಕ್ಕೆ ಒಂದಾದರೂ ಸಿನಿಮಾ ಕೊಡಬೇಕು, ಆಗ ಇಂಡಸ್ಟ್ರಿ ಉಳಿಯುತ್ತೆ’
‘ಹೀರೋಗಳು ವರ್ಷಕ್ಕೆ ಒಂದಾದರೂ ಸಿನಿಮಾ ಕೊಡಬೇಕು, ಆಗ ಇಂಡಸ್ಟ್ರಿ ಉಳಿಯುತ್ತೆ’
ರಾಕಸಕೊಪ್ಪ ಡ್ಯಾಂ ಖಾಲಿ: ಬೆಳಗಾವಿ ನಗರದ ಕುಡಿಯುವ ನೀರಿನ ಸಮಸ್ಯೆ ತೀವ್ರ
ರಾಕಸಕೊಪ್ಪ ಡ್ಯಾಂ ಖಾಲಿ: ಬೆಳಗಾವಿ ನಗರದ ಕುಡಿಯುವ ನೀರಿನ ಸಮಸ್ಯೆ ತೀವ್ರ
ಬಿಳಿಗಿರಿರಂಗನಾಥಸ್ವಾಮಿ ಬೆಟ್ಟದಲ್ಲಿ ಒಂಟಿ ಸಲಗದ ಅಟಾಟೋಪ
ಬಿಳಿಗಿರಿರಂಗನಾಥಸ್ವಾಮಿ ಬೆಟ್ಟದಲ್ಲಿ ಒಂಟಿ ಸಲಗದ ಅಟಾಟೋಪ
ಕನಕಪುರ ದೇಗುಲ ಮಠದ ಹಿರಿಯ ಶ್ರೀ ಮುಮ್ಮಡಿ ನಿರ್ವಾಣ ಸ್ವಾಮೀಜಿ ಲಿಂಗೈಕ್ಯ
ಕನಕಪುರ ದೇಗುಲ ಮಠದ ಹಿರಿಯ ಶ್ರೀ ಮುಮ್ಮಡಿ ನಿರ್ವಾಣ ಸ್ವಾಮೀಜಿ ಲಿಂಗೈಕ್ಯ
ನಿರ್ಮಲಾನಂದನಾಥಶ್ರೀ ಭೇಟಿಯಾದ ಸಿಎಂ ಡಿಕೆ ಶಿವಕುಮಾರ್
ನಿರ್ಮಲಾನಂದನಾಥಶ್ರೀ ಭೇಟಿಯಾದ ಸಿಎಂ ಡಿಕೆ ಶಿವಕುಮಾರ್