AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Adipurush Movie: ‘ಆದಿಪುರುಷ್’ ಚಿತ್ರಕ್ಕೆ ಮತ್ತೊಂದು ಶಾಕ್; ಒಟಿಟಿ ರಿಲೀಸ್​ಗೂ ಮೊದಲೇ ಕಹಿ ಸುದ್ದಿ

‘ಆದಿಪುರುಷ್’ ಸಿನಿಮಾ ಒಟಿಟಿಗೆ ರಿಲೀಸ್ ಆಗುವ ಮೊದಲೇ ಎಚ್​ಡಿ ಪ್ರಿಂಟ್ ಸೋರಿಕೆ ಆಗಿದೆ. ಕೆಲವರು ಇದನ್ನು ಯೂಟ್ಯೂಬ್​ನಲ್ಲೂ ಅಪ್​ಲೋಡ್ ಮಾಡಿದ್ದಾರೆ.

Adipurush Movie: ‘ಆದಿಪುರುಷ್’ ಚಿತ್ರಕ್ಕೆ ಮತ್ತೊಂದು ಶಾಕ್; ಒಟಿಟಿ ರಿಲೀಸ್​ಗೂ ಮೊದಲೇ ಕಹಿ ಸುದ್ದಿ
ಆದಿಪುರುಷ್ ಕಲೆಕ್ಷನ್
ರಾಜೇಶ್ ದುಗ್ಗುಮನೆ
|

Updated on: Jul 11, 2023 | 7:10 AM

Share

‘ಆದಿಪುರುಷ್’ ಸಿನಿಮಾ (Adipurush Movie) ಕಳೆದ ತಿಂಗಳು ರಿಲೀಸ್ ಆಗಿ ಮಿಶ್ರ ಪ್ರತಿಕ್ರಿಯೆ ಪಡೆಯಿತು. ನೂರಾರು ಕೋಟಿ ರೂಪಾಯಿ ಬಜೆಟ್​ನಲ್ಲಿ ಸಿದ್ಧವಾದ ಈ ಸಿನಿಮಾ ಮೆಚ್ಚುಗೆ ಪಡೆಯಬಹುದು ಎಂಬುದು ಚಿತ್ರತಂಡದ ಆಲೋಚನೆ ಆಗಿತ್ತು. ಆದರೆ, ಹಾಗಾಗಲೇ ಇಲ್ಲ. ರಾಮಾಯಣದ (Ramayana) ಕಥೆ ತಿರುಚಲಾಗಿದೆ ಎಂಬ ಆರೋಪ ಕೇಳಿ ಬಂದಿದ್ದರಿಂದ ಸಿನಿಮಾಗೆ ಸಾಕಷ್ಟು ಹಿನ್ನಡೆ ಆಯಿತು. ಈ ಸಿನಿಮಾ ಇನ್ನು ಕೆಲವೇ ದಿನಗಳಲ್ಲಿ ಒಟಿಟಿಯಲ್ಲಿ ರಿಲೀಸ್ ಆಗಲಿದೆ. ಅದಕ್ಕೂ ಮೊದಲೇ ಚಿತ್ರಕ್ಕೆ ಹಿನ್ನಡೆ ಆಗುವಂಥ ಘಟನೆ ನಡೆದಿದೆ. ಇದು ತಂಡದ ಆತಂಕ ಹೆಚ್ಚಿಸಿದೆ.

ಇತ್ತೀಚೆಗೆ ಪೈರಸಿ ಕಾಟ ಜೋರಾಗಿದೆ. ಯಾವುದೇ ಸಿನಿಮಾ ಒಟಿಟಿಯಲ್ಲಿ ರಿಲೀಸ್ ಆದರೆ ಅದರ ಥಿಯೇಟರ್ ಪ್ರಿಂಟ್ ಆನ್​ಲೈನ್​ನಲ್ಲಿ ಲೀಕ್ ಆಗುತ್ತದೆ. ಆದರೆ, ಎಚ್​​ಡಿ ಪ್ರಿಂಟ್ ಬೇಕು ಎಂದರೆ ಆ ಸಿನಿಮಾ ಒಟಿಟಿಯಲ್ಲಿ ರಿಲೀಸ್ ಆಗುವವರೆಗೆ ಕಾಯಲೇಬೇಕು. ಆದರೆ, ‘ಆದಿಪುರುಷ್’ ವಿಚಾರದಲ್ಲಿ ಹಾಗಾಗಿಲ್ಲ. ಸಿನಿಮಾ ಒಟಿಟಿಗೆ ರಿಲೀಸ್ ಆಗುವ ಮೊದಲೇ ಎಚ್​ಡಿ ಪ್ರಿಂಟ್ ಸೋರಿಕೆ ಆಗಿದೆ. ಕೆಲವರು ಇದನ್ನು ಯೂಟ್ಯೂಬ್​ನಲ್ಲೂ ಅಪ್​ಲೋಡ್ ಮಾಡಿದ್ದಾರೆ.

ಥಿಯೇಟರ್​ನಲ್ಲಿ ಸೋತ ಸಿನಿಮಾಗಳು ಒಟಿಟಿಯಲ್ಲಿ ಮೆಚ್ಚುಗೆ ಪಡೆದ ಉದಾಹರಣೆ ಇದೆ. ಈಗ ‘ಆದಿಪರುಷ್’ ತಂಡ ಕೂಡ ಅದೇ ಭರವಸೆಯಲ್ಲಿ ಇದೆ. ಹೀಗಿರುವಾಗಲೇ ಸಿನಿಮಾದ ಎಚ್​​ಡಿ ಪ್ರಿಂಟ್ ಲೀಕ್​ ಆಗಿದ್ದು, ಒಂದಷ್ಟು ಮಂದಿ ಇದನ್ನೇ ಡೌನ್​ಲೋಡ್ ಮಾಡಿಕೊಂಡು ನೋಡುತ್ತಿದ್ದಾರೆ. ಇನ್ನು, ಯೂಟ್ಯೂಬ್​ನಲ್ಲೂ ಇದೇ ವಿಡಿಯೋ ಅಪ್​ಲೋಡ್ ಆಗಿತ್ತು. ಒಂದು ಗಂಟೆಯ ಬಳಿಕ ಅದನ್ನು ಡಿಲೀಟ್ ಮಾಡಿಸಲಾಗಿದೆ.

ಇದನ್ನೂ ಓದಿ: ‘ಆದಿಪುರುಷ್’ ಬಾಕ್ಸ್ ಆಫೀಸ್ ಲೆಕ್ಕಾಚಾರ ಫೇಕ್? ಮೂಡಿದೆ ಅನುಮಾನ

‘ಆದಿಪುರುಷ್’ ಚಿತ್ರಕ್ಕೆ ಓಂ ರಾವತ್ ಅವರ ನಿರ್ದೇಶನ ಇದೆ. ಪ್ರಭಾಸ್ ರಾಮನಾಗಿ ಕಾಣಿಸಿಕೊಂಡರೆ, ಸೀತೆಯ ಪಾತ್ರದಲ್ಲಿ ಕೃತಿ ಸನೋನ್ ನಟಿಸಿದ್ದಾರೆ. ರಾವಣನ ಪಾತ್ರದಲ್ಲಿ ಸೈಫ್ ಅಲಿ ಖಾನ್ ಅವರು ಅಬ್ಬರಿಸಿದ್ದಾರೆ. ಅವರ ಪಾತ್ರವನ್ನು ಅನೇಕರು ಟೀಕೆ ಮಾಡಿದ್ದಾರೆ. ಸಿನಿಮಾದಲ್ಲಿ ಅನಾವಶ್ಯಕ ಗ್ಲಾಮರ್ ತುರುಕಿದ್ದು, ಹನುಮಂತನ ಸಂಭಾಷಣೆ ಸೇರಿ ಅನೇಕ ವಿಚಾರಗಳನ್ನು ಟೀಕೆ ಮಾಡಲಾಗಿತ್ತು.

ಇನ್ನಷ್ಟು ಸಿನಿಮಾ ಸುದ್ದಿಗಾಗಿ ಇಲ್ಲಿ ಕ್ಲಿಕ್​ ಮಾಡಿ

ಟಿ20 ಕ್ರಿಕೆಟ್‌ನಲ್ಲಿ ವಿಕೆಟ್​ಗಳ ಶತಕ ಪೂರೈಸಿದ ಹಾರ್ದಿಕ್ ಪಾಂಡ್ಯ
ಟಿ20 ಕ್ರಿಕೆಟ್‌ನಲ್ಲಿ ವಿಕೆಟ್​ಗಳ ಶತಕ ಪೂರೈಸಿದ ಹಾರ್ದಿಕ್ ಪಾಂಡ್ಯ
ಶಾಮನೂರು ಶಿವಶಂಕರಪ್ಪನವರಿಗೆ ಏನಾಗಿತ್ತು?ಆಸ್ಪತ್ರೆ ಮುಖ್ಯಸ್ಥ ಹೇಳಿದ್ದಿಷ್ಟು
ಶಾಮನೂರು ಶಿವಶಂಕರಪ್ಪನವರಿಗೆ ಏನಾಗಿತ್ತು?ಆಸ್ಪತ್ರೆ ಮುಖ್ಯಸ್ಥ ಹೇಳಿದ್ದಿಷ್ಟು
ಬೌಲಿಂಗ್‌ನಲ್ಲಿ ಪಾಕ್ ನಾಯಕನ ವಿಕೆಟ್ ಎಗರಿಸಿದ ವೈಭವ್
ಬೌಲಿಂಗ್‌ನಲ್ಲಿ ಪಾಕ್ ನಾಯಕನ ವಿಕೆಟ್ ಎಗರಿಸಿದ ವೈಭವ್
ರಾಜಕೀಯಕ್ಕೆ ಬಂದ್ರೆ ಸ್ಟೈಲ್ ಆಗಿ ಬರ್ತೀನಿ: ಸುದೀಪ್
ರಾಜಕೀಯಕ್ಕೆ ಬಂದ್ರೆ ಸ್ಟೈಲ್ ಆಗಿ ಬರ್ತೀನಿ: ಸುದೀಪ್
ಬಿಬಿಎಲ್ ಚೊಚ್ಚಲ ಪಂದ್ಯದಲ್ಲಿ ಮುಗ್ಗರಿಸಿದ ಬಾಬರ್ ಆಝಂ
ಬಿಬಿಎಲ್ ಚೊಚ್ಚಲ ಪಂದ್ಯದಲ್ಲಿ ಮುಗ್ಗರಿಸಿದ ಬಾಬರ್ ಆಝಂ
ಶಿವಾಜಿ ಇಲ್ಲದಿದ್ದರೆ ಎಲ್ಲರ ಸುನ್ನತಿ ಆಗುತ್ತಿತ್ತು: ಯತ್ನಾಳ್
ಶಿವಾಜಿ ಇಲ್ಲದಿದ್ದರೆ ಎಲ್ಲರ ಸುನ್ನತಿ ಆಗುತ್ತಿತ್ತು: ಯತ್ನಾಳ್
ಪ್ರೀತಿಸಿ ಮೋಸ: ಪ್ರಿಯಕರನ ಮದ್ವೆಗೆ ನುಗ್ಗಿ ರಣಚಂಡಿ ಅವತಾರ ತಾಳಿದ ಪ್ರೇಯಿಸಿ
ಪ್ರೀತಿಸಿ ಮೋಸ: ಪ್ರಿಯಕರನ ಮದ್ವೆಗೆ ನುಗ್ಗಿ ರಣಚಂಡಿ ಅವತಾರ ತಾಳಿದ ಪ್ರೇಯಿಸಿ
ರಾತ್ರಿಯಾದ್ರೆ ಸಾಕು ಬೆಡ್ ರೂಂ ಬಳಿ ಸೈಕೋ ಪ್ರತ್ಯಕ್ಷ! ಬೇಸತ್ತ ವೈದ್ಯೆ
ರಾತ್ರಿಯಾದ್ರೆ ಸಾಕು ಬೆಡ್ ರೂಂ ಬಳಿ ಸೈಕೋ ಪ್ರತ್ಯಕ್ಷ! ಬೇಸತ್ತ ವೈದ್ಯೆ
ಕಾಮಚೇಷ್ಟೆ ಮಾಡ್ತಿದ್ದ ಸೈಕೋಪಾತ್​​​ಗೆ ಮಹಿಳೆಯರಿಂದ ಬಿಸಿ ಬಿಸಿ ಕಜ್ಜಾಯ!
ಕಾಮಚೇಷ್ಟೆ ಮಾಡ್ತಿದ್ದ ಸೈಕೋಪಾತ್​​​ಗೆ ಮಹಿಳೆಯರಿಂದ ಬಿಸಿ ಬಿಸಿ ಕಜ್ಜಾಯ!
ಸಿಡ್ನಿಯ ಬೊಂಡಿ ಬೀಚ್​ನಲ್ಲಿ ಸಾಮೂಹಿಕ ಗುಂಡಿನ ದಾಳಿ, 10 ಮಂದಿ ಸಾವು
ಸಿಡ್ನಿಯ ಬೊಂಡಿ ಬೀಚ್​ನಲ್ಲಿ ಸಾಮೂಹಿಕ ಗುಂಡಿನ ದಾಳಿ, 10 ಮಂದಿ ಸಾವು