AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Adipurush Movie: ‘ಆದಿಪುರುಷ್’ ಚಿತ್ರಕ್ಕೆ ಮತ್ತೊಂದು ಶಾಕ್; ಒಟಿಟಿ ರಿಲೀಸ್​ಗೂ ಮೊದಲೇ ಕಹಿ ಸುದ್ದಿ

‘ಆದಿಪುರುಷ್’ ಸಿನಿಮಾ ಒಟಿಟಿಗೆ ರಿಲೀಸ್ ಆಗುವ ಮೊದಲೇ ಎಚ್​ಡಿ ಪ್ರಿಂಟ್ ಸೋರಿಕೆ ಆಗಿದೆ. ಕೆಲವರು ಇದನ್ನು ಯೂಟ್ಯೂಬ್​ನಲ್ಲೂ ಅಪ್​ಲೋಡ್ ಮಾಡಿದ್ದಾರೆ.

Adipurush Movie: ‘ಆದಿಪುರುಷ್’ ಚಿತ್ರಕ್ಕೆ ಮತ್ತೊಂದು ಶಾಕ್; ಒಟಿಟಿ ರಿಲೀಸ್​ಗೂ ಮೊದಲೇ ಕಹಿ ಸುದ್ದಿ
ಆದಿಪುರುಷ್ ಕಲೆಕ್ಷನ್
Follow us
ರಾಜೇಶ್ ದುಗ್ಗುಮನೆ
|

Updated on: Jul 11, 2023 | 7:10 AM

‘ಆದಿಪುರುಷ್’ ಸಿನಿಮಾ (Adipurush Movie) ಕಳೆದ ತಿಂಗಳು ರಿಲೀಸ್ ಆಗಿ ಮಿಶ್ರ ಪ್ರತಿಕ್ರಿಯೆ ಪಡೆಯಿತು. ನೂರಾರು ಕೋಟಿ ರೂಪಾಯಿ ಬಜೆಟ್​ನಲ್ಲಿ ಸಿದ್ಧವಾದ ಈ ಸಿನಿಮಾ ಮೆಚ್ಚುಗೆ ಪಡೆಯಬಹುದು ಎಂಬುದು ಚಿತ್ರತಂಡದ ಆಲೋಚನೆ ಆಗಿತ್ತು. ಆದರೆ, ಹಾಗಾಗಲೇ ಇಲ್ಲ. ರಾಮಾಯಣದ (Ramayana) ಕಥೆ ತಿರುಚಲಾಗಿದೆ ಎಂಬ ಆರೋಪ ಕೇಳಿ ಬಂದಿದ್ದರಿಂದ ಸಿನಿಮಾಗೆ ಸಾಕಷ್ಟು ಹಿನ್ನಡೆ ಆಯಿತು. ಈ ಸಿನಿಮಾ ಇನ್ನು ಕೆಲವೇ ದಿನಗಳಲ್ಲಿ ಒಟಿಟಿಯಲ್ಲಿ ರಿಲೀಸ್ ಆಗಲಿದೆ. ಅದಕ್ಕೂ ಮೊದಲೇ ಚಿತ್ರಕ್ಕೆ ಹಿನ್ನಡೆ ಆಗುವಂಥ ಘಟನೆ ನಡೆದಿದೆ. ಇದು ತಂಡದ ಆತಂಕ ಹೆಚ್ಚಿಸಿದೆ.

ಇತ್ತೀಚೆಗೆ ಪೈರಸಿ ಕಾಟ ಜೋರಾಗಿದೆ. ಯಾವುದೇ ಸಿನಿಮಾ ಒಟಿಟಿಯಲ್ಲಿ ರಿಲೀಸ್ ಆದರೆ ಅದರ ಥಿಯೇಟರ್ ಪ್ರಿಂಟ್ ಆನ್​ಲೈನ್​ನಲ್ಲಿ ಲೀಕ್ ಆಗುತ್ತದೆ. ಆದರೆ, ಎಚ್​​ಡಿ ಪ್ರಿಂಟ್ ಬೇಕು ಎಂದರೆ ಆ ಸಿನಿಮಾ ಒಟಿಟಿಯಲ್ಲಿ ರಿಲೀಸ್ ಆಗುವವರೆಗೆ ಕಾಯಲೇಬೇಕು. ಆದರೆ, ‘ಆದಿಪುರುಷ್’ ವಿಚಾರದಲ್ಲಿ ಹಾಗಾಗಿಲ್ಲ. ಸಿನಿಮಾ ಒಟಿಟಿಗೆ ರಿಲೀಸ್ ಆಗುವ ಮೊದಲೇ ಎಚ್​ಡಿ ಪ್ರಿಂಟ್ ಸೋರಿಕೆ ಆಗಿದೆ. ಕೆಲವರು ಇದನ್ನು ಯೂಟ್ಯೂಬ್​ನಲ್ಲೂ ಅಪ್​ಲೋಡ್ ಮಾಡಿದ್ದಾರೆ.

ಥಿಯೇಟರ್​ನಲ್ಲಿ ಸೋತ ಸಿನಿಮಾಗಳು ಒಟಿಟಿಯಲ್ಲಿ ಮೆಚ್ಚುಗೆ ಪಡೆದ ಉದಾಹರಣೆ ಇದೆ. ಈಗ ‘ಆದಿಪರುಷ್’ ತಂಡ ಕೂಡ ಅದೇ ಭರವಸೆಯಲ್ಲಿ ಇದೆ. ಹೀಗಿರುವಾಗಲೇ ಸಿನಿಮಾದ ಎಚ್​​ಡಿ ಪ್ರಿಂಟ್ ಲೀಕ್​ ಆಗಿದ್ದು, ಒಂದಷ್ಟು ಮಂದಿ ಇದನ್ನೇ ಡೌನ್​ಲೋಡ್ ಮಾಡಿಕೊಂಡು ನೋಡುತ್ತಿದ್ದಾರೆ. ಇನ್ನು, ಯೂಟ್ಯೂಬ್​ನಲ್ಲೂ ಇದೇ ವಿಡಿಯೋ ಅಪ್​ಲೋಡ್ ಆಗಿತ್ತು. ಒಂದು ಗಂಟೆಯ ಬಳಿಕ ಅದನ್ನು ಡಿಲೀಟ್ ಮಾಡಿಸಲಾಗಿದೆ.

ಇದನ್ನೂ ಓದಿ: ‘ಆದಿಪುರುಷ್’ ಬಾಕ್ಸ್ ಆಫೀಸ್ ಲೆಕ್ಕಾಚಾರ ಫೇಕ್? ಮೂಡಿದೆ ಅನುಮಾನ

‘ಆದಿಪುರುಷ್’ ಚಿತ್ರಕ್ಕೆ ಓಂ ರಾವತ್ ಅವರ ನಿರ್ದೇಶನ ಇದೆ. ಪ್ರಭಾಸ್ ರಾಮನಾಗಿ ಕಾಣಿಸಿಕೊಂಡರೆ, ಸೀತೆಯ ಪಾತ್ರದಲ್ಲಿ ಕೃತಿ ಸನೋನ್ ನಟಿಸಿದ್ದಾರೆ. ರಾವಣನ ಪಾತ್ರದಲ್ಲಿ ಸೈಫ್ ಅಲಿ ಖಾನ್ ಅವರು ಅಬ್ಬರಿಸಿದ್ದಾರೆ. ಅವರ ಪಾತ್ರವನ್ನು ಅನೇಕರು ಟೀಕೆ ಮಾಡಿದ್ದಾರೆ. ಸಿನಿಮಾದಲ್ಲಿ ಅನಾವಶ್ಯಕ ಗ್ಲಾಮರ್ ತುರುಕಿದ್ದು, ಹನುಮಂತನ ಸಂಭಾಷಣೆ ಸೇರಿ ಅನೇಕ ವಿಚಾರಗಳನ್ನು ಟೀಕೆ ಮಾಡಲಾಗಿತ್ತು.

ಇನ್ನಷ್ಟು ಸಿನಿಮಾ ಸುದ್ದಿಗಾಗಿ ಇಲ್ಲಿ ಕ್ಲಿಕ್​ ಮಾಡಿ

ಸಿದ್ದರಾಮಯ್ಯ ನಾಯಕತ್ವದ ಬಗ್ಗೆ ಕಾಂಗ್ರೆಸ್ ಪಕ್ಷದಲ್ಲಿ ಗೊಂದಲವಿಲ್ಲ: ಸುರೇಶ್
ಸಿದ್ದರಾಮಯ್ಯ ನಾಯಕತ್ವದ ಬಗ್ಗೆ ಕಾಂಗ್ರೆಸ್ ಪಕ್ಷದಲ್ಲಿ ಗೊಂದಲವಿಲ್ಲ: ಸುರೇಶ್
ಕುಷ್ಟಗಿ-ಹುಬ್ಬಳ್ಳಿ ಪ್ಯಾಸೆಂಜರ್ ರೈಲಿಗೆ ಚಾಲನೆ ನೀಡಿದ ಸಚಿವ ವಿ ಸೋಮಣ್ಣ
ಕುಷ್ಟಗಿ-ಹುಬ್ಬಳ್ಳಿ ಪ್ಯಾಸೆಂಜರ್ ರೈಲಿಗೆ ಚಾಲನೆ ನೀಡಿದ ಸಚಿವ ವಿ ಸೋಮಣ್ಣ
ಮಂಡಿನೋವಿನ ಸಮಸ್ಯೆಯ ನಂತರ ಸಿದ್ದರಾಮಯ್ಯ ನಡಿಗೆ ಶೈಲಿ ಬದಲಾಗಿದೆ
ಮಂಡಿನೋವಿನ ಸಮಸ್ಯೆಯ ನಂತರ ಸಿದ್ದರಾಮಯ್ಯ ನಡಿಗೆ ಶೈಲಿ ಬದಲಾಗಿದೆ
ನತದೃಷ್ಟ ಮಗುವಿಗೆ ತಂದೆಯಿಲ್ಲ, ಕುಟುಂಬದಲ್ಲಿ ಮೂವರಿಗೆ ಹುಟ್ಟುಕಿವುಡು: ಸಂಸದ
ನತದೃಷ್ಟ ಮಗುವಿಗೆ ತಂದೆಯಿಲ್ಲ, ಕುಟುಂಬದಲ್ಲಿ ಮೂವರಿಗೆ ಹುಟ್ಟುಕಿವುಡು: ಸಂಸದ
ಕಟ್ಟಡದೊಳಗೆ ಅಡಗಿದ್ದ ಜೈಶ್ ಉಗ್ರರ ಎನ್​ಕೌಂಟರ್ ನಡೆದಿದ್ದು ಹೇಗೆ?
ಕಟ್ಟಡದೊಳಗೆ ಅಡಗಿದ್ದ ಜೈಶ್ ಉಗ್ರರ ಎನ್​ಕೌಂಟರ್ ನಡೆದಿದ್ದು ಹೇಗೆ?
ಸುಮಾರು ಮೂರು ಲಕ್ಷ ಜನ ಸಾಧನಾ ಸಮಾವೇಶದಲ್ಲಿ ಪಾಲ್ಗೊಳ್ಳಲಿದ್ದಾರೆ: ಈಶ್ವರ್
ಸುಮಾರು ಮೂರು ಲಕ್ಷ ಜನ ಸಾಧನಾ ಸಮಾವೇಶದಲ್ಲಿ ಪಾಲ್ಗೊಳ್ಳಲಿದ್ದಾರೆ: ಈಶ್ವರ್
ಮಗಳ ಸಾವಿಗೆ ಸೇಡು ತೀರಿಸಿಕೊಂಡ ಅಪ್ಪ: ಕೊಲೆ ಮಾಡುತ್ತಿರುವ ಭಯಾನಕ ವಿಡಿಯೋ!
ಮಗಳ ಸಾವಿಗೆ ಸೇಡು ತೀರಿಸಿಕೊಂಡ ಅಪ್ಪ: ಕೊಲೆ ಮಾಡುತ್ತಿರುವ ಭಯಾನಕ ವಿಡಿಯೋ!
ಮೀನುಗಾರಿಕೆ ಕ್ಷೇತ್ರದ ಪ್ರಗತಿ: ಪ್ರಧಾನಿ ಮೋದಿ ಸಭೆ
ಮೀನುಗಾರಿಕೆ ಕ್ಷೇತ್ರದ ಪ್ರಗತಿ: ಪ್ರಧಾನಿ ಮೋದಿ ಸಭೆ
ಸೋಶಿಯಲ್ ಮಿಡಿಯಾದಲ್ಲಿ ವೃಥಾ ಕಾಮೆಂಟ್ ಮಾಡುವವರ ಮೇಲೆ ಕೇಸ್: ಉಮಾ ಪ್ರಶಾಂತ್
ಸೋಶಿಯಲ್ ಮಿಡಿಯಾದಲ್ಲಿ ವೃಥಾ ಕಾಮೆಂಟ್ ಮಾಡುವವರ ಮೇಲೆ ಕೇಸ್: ಉಮಾ ಪ್ರಶಾಂತ್
ಕಡಲೂರಿನ ಕಾರ್ಖಾನೆ ದುರಂತ; ಟ್ಯಾಂಕ್ ಸ್ಫೋಟಗೊಂಡು 20 ಜನರಿಗೆ ಗಾಯ
ಕಡಲೂರಿನ ಕಾರ್ಖಾನೆ ದುರಂತ; ಟ್ಯಾಂಕ್ ಸ್ಫೋಟಗೊಂಡು 20 ಜನರಿಗೆ ಗಾಯ