Adipurush Movie: ‘ಆದಿಪುರುಷ್’ ಚಿತ್ರಕ್ಕೆ ಮತ್ತೊಂದು ಶಾಕ್; ಒಟಿಟಿ ರಿಲೀಸ್​ಗೂ ಮೊದಲೇ ಕಹಿ ಸುದ್ದಿ

‘ಆದಿಪುರುಷ್’ ಸಿನಿಮಾ ಒಟಿಟಿಗೆ ರಿಲೀಸ್ ಆಗುವ ಮೊದಲೇ ಎಚ್​ಡಿ ಪ್ರಿಂಟ್ ಸೋರಿಕೆ ಆಗಿದೆ. ಕೆಲವರು ಇದನ್ನು ಯೂಟ್ಯೂಬ್​ನಲ್ಲೂ ಅಪ್​ಲೋಡ್ ಮಾಡಿದ್ದಾರೆ.

Adipurush Movie: ‘ಆದಿಪುರುಷ್’ ಚಿತ್ರಕ್ಕೆ ಮತ್ತೊಂದು ಶಾಕ್; ಒಟಿಟಿ ರಿಲೀಸ್​ಗೂ ಮೊದಲೇ ಕಹಿ ಸುದ್ದಿ
ಆದಿಪುರುಷ್ ಕಲೆಕ್ಷನ್
Follow us
|

Updated on: Jul 11, 2023 | 7:10 AM

‘ಆದಿಪುರುಷ್’ ಸಿನಿಮಾ (Adipurush Movie) ಕಳೆದ ತಿಂಗಳು ರಿಲೀಸ್ ಆಗಿ ಮಿಶ್ರ ಪ್ರತಿಕ್ರಿಯೆ ಪಡೆಯಿತು. ನೂರಾರು ಕೋಟಿ ರೂಪಾಯಿ ಬಜೆಟ್​ನಲ್ಲಿ ಸಿದ್ಧವಾದ ಈ ಸಿನಿಮಾ ಮೆಚ್ಚುಗೆ ಪಡೆಯಬಹುದು ಎಂಬುದು ಚಿತ್ರತಂಡದ ಆಲೋಚನೆ ಆಗಿತ್ತು. ಆದರೆ, ಹಾಗಾಗಲೇ ಇಲ್ಲ. ರಾಮಾಯಣದ (Ramayana) ಕಥೆ ತಿರುಚಲಾಗಿದೆ ಎಂಬ ಆರೋಪ ಕೇಳಿ ಬಂದಿದ್ದರಿಂದ ಸಿನಿಮಾಗೆ ಸಾಕಷ್ಟು ಹಿನ್ನಡೆ ಆಯಿತು. ಈ ಸಿನಿಮಾ ಇನ್ನು ಕೆಲವೇ ದಿನಗಳಲ್ಲಿ ಒಟಿಟಿಯಲ್ಲಿ ರಿಲೀಸ್ ಆಗಲಿದೆ. ಅದಕ್ಕೂ ಮೊದಲೇ ಚಿತ್ರಕ್ಕೆ ಹಿನ್ನಡೆ ಆಗುವಂಥ ಘಟನೆ ನಡೆದಿದೆ. ಇದು ತಂಡದ ಆತಂಕ ಹೆಚ್ಚಿಸಿದೆ.

ಇತ್ತೀಚೆಗೆ ಪೈರಸಿ ಕಾಟ ಜೋರಾಗಿದೆ. ಯಾವುದೇ ಸಿನಿಮಾ ಒಟಿಟಿಯಲ್ಲಿ ರಿಲೀಸ್ ಆದರೆ ಅದರ ಥಿಯೇಟರ್ ಪ್ರಿಂಟ್ ಆನ್​ಲೈನ್​ನಲ್ಲಿ ಲೀಕ್ ಆಗುತ್ತದೆ. ಆದರೆ, ಎಚ್​​ಡಿ ಪ್ರಿಂಟ್ ಬೇಕು ಎಂದರೆ ಆ ಸಿನಿಮಾ ಒಟಿಟಿಯಲ್ಲಿ ರಿಲೀಸ್ ಆಗುವವರೆಗೆ ಕಾಯಲೇಬೇಕು. ಆದರೆ, ‘ಆದಿಪುರುಷ್’ ವಿಚಾರದಲ್ಲಿ ಹಾಗಾಗಿಲ್ಲ. ಸಿನಿಮಾ ಒಟಿಟಿಗೆ ರಿಲೀಸ್ ಆಗುವ ಮೊದಲೇ ಎಚ್​ಡಿ ಪ್ರಿಂಟ್ ಸೋರಿಕೆ ಆಗಿದೆ. ಕೆಲವರು ಇದನ್ನು ಯೂಟ್ಯೂಬ್​ನಲ್ಲೂ ಅಪ್​ಲೋಡ್ ಮಾಡಿದ್ದಾರೆ.

ಥಿಯೇಟರ್​ನಲ್ಲಿ ಸೋತ ಸಿನಿಮಾಗಳು ಒಟಿಟಿಯಲ್ಲಿ ಮೆಚ್ಚುಗೆ ಪಡೆದ ಉದಾಹರಣೆ ಇದೆ. ಈಗ ‘ಆದಿಪರುಷ್’ ತಂಡ ಕೂಡ ಅದೇ ಭರವಸೆಯಲ್ಲಿ ಇದೆ. ಹೀಗಿರುವಾಗಲೇ ಸಿನಿಮಾದ ಎಚ್​​ಡಿ ಪ್ರಿಂಟ್ ಲೀಕ್​ ಆಗಿದ್ದು, ಒಂದಷ್ಟು ಮಂದಿ ಇದನ್ನೇ ಡೌನ್​ಲೋಡ್ ಮಾಡಿಕೊಂಡು ನೋಡುತ್ತಿದ್ದಾರೆ. ಇನ್ನು, ಯೂಟ್ಯೂಬ್​ನಲ್ಲೂ ಇದೇ ವಿಡಿಯೋ ಅಪ್​ಲೋಡ್ ಆಗಿತ್ತು. ಒಂದು ಗಂಟೆಯ ಬಳಿಕ ಅದನ್ನು ಡಿಲೀಟ್ ಮಾಡಿಸಲಾಗಿದೆ.

ಇದನ್ನೂ ಓದಿ: ‘ಆದಿಪುರುಷ್’ ಬಾಕ್ಸ್ ಆಫೀಸ್ ಲೆಕ್ಕಾಚಾರ ಫೇಕ್? ಮೂಡಿದೆ ಅನುಮಾನ

‘ಆದಿಪುರುಷ್’ ಚಿತ್ರಕ್ಕೆ ಓಂ ರಾವತ್ ಅವರ ನಿರ್ದೇಶನ ಇದೆ. ಪ್ರಭಾಸ್ ರಾಮನಾಗಿ ಕಾಣಿಸಿಕೊಂಡರೆ, ಸೀತೆಯ ಪಾತ್ರದಲ್ಲಿ ಕೃತಿ ಸನೋನ್ ನಟಿಸಿದ್ದಾರೆ. ರಾವಣನ ಪಾತ್ರದಲ್ಲಿ ಸೈಫ್ ಅಲಿ ಖಾನ್ ಅವರು ಅಬ್ಬರಿಸಿದ್ದಾರೆ. ಅವರ ಪಾತ್ರವನ್ನು ಅನೇಕರು ಟೀಕೆ ಮಾಡಿದ್ದಾರೆ. ಸಿನಿಮಾದಲ್ಲಿ ಅನಾವಶ್ಯಕ ಗ್ಲಾಮರ್ ತುರುಕಿದ್ದು, ಹನುಮಂತನ ಸಂಭಾಷಣೆ ಸೇರಿ ಅನೇಕ ವಿಚಾರಗಳನ್ನು ಟೀಕೆ ಮಾಡಲಾಗಿತ್ತು.

ಇನ್ನಷ್ಟು ಸಿನಿಮಾ ಸುದ್ದಿಗಾಗಿ ಇಲ್ಲಿ ಕ್ಲಿಕ್​ ಮಾಡಿ

ಭಗವಾನ್ ಜಗನ್ನಾಥನ ವಿಗ್ರಹ ಖರೀದಿಸಿ, ಡಿಜಿಟಲ್ ಪೇಮೆಂಟ್ ಮಾಡಿದ ಪಿಎಂ ಮೋದಿ
ಭಗವಾನ್ ಜಗನ್ನಾಥನ ವಿಗ್ರಹ ಖರೀದಿಸಿ, ಡಿಜಿಟಲ್ ಪೇಮೆಂಟ್ ಮಾಡಿದ ಪಿಎಂ ಮೋದಿ
ತ್ರಿವರ್ಣ ಧ್ವಜದಲ್ಲಿ ಉರ್ದು ವಾಕ್ಯ ಬರೆದು ದರ್ಗಾಕ್ಕೆ ಕಟ್ಟಿದ ಯುವಕ:ವಿಡಿಯೋ
ತ್ರಿವರ್ಣ ಧ್ವಜದಲ್ಲಿ ಉರ್ದು ವಾಕ್ಯ ಬರೆದು ದರ್ಗಾಕ್ಕೆ ಕಟ್ಟಿದ ಯುವಕ:ವಿಡಿಯೋ
ದಸರಾ ಉದ್ಘಾಟನೆ ಅನಿರೀಕ್ಷಿತವಾಗಿ ಬಂದ ಸಂತೋಷದ ಕ್ಷಣ; ಹಂಪಾ ನಾಗರಾಜಯ್ಯ
ದಸರಾ ಉದ್ಘಾಟನೆ ಅನಿರೀಕ್ಷಿತವಾಗಿ ಬಂದ ಸಂತೋಷದ ಕ್ಷಣ; ಹಂಪಾ ನಾಗರಾಜಯ್ಯ
ಬಯೋಲಾಜಿಕಲ್ ವಾರ್ ರೀತಿ ಏಡ್ಸ್ ಇರುವವರನ್ನು ಬಳಸಿದ್ದಾರೆ: ಡಿಕೆ ಸುರೇಶ್​
ಬಯೋಲಾಜಿಕಲ್ ವಾರ್ ರೀತಿ ಏಡ್ಸ್ ಇರುವವರನ್ನು ಬಳಸಿದ್ದಾರೆ: ಡಿಕೆ ಸುರೇಶ್​
ಹೆಚ್​ಡಿ ಕುಮಾರಸ್ವಾಮಿ ಸುದ್ದಿಗೋಷ್ಠಿ
ಹೆಚ್​ಡಿ ಕುಮಾರಸ್ವಾಮಿ ಸುದ್ದಿಗೋಷ್ಠಿ
ನಕ್ಸಲರ ದಾಳಿಗೆ ತುತ್ತಾದ ಜನರ ಸಂಕಟ ತೆರೆದಿಡುವ ಸಾಕ್ಷ್ಯಚಿತ್ರವಿದು
ನಕ್ಸಲರ ದಾಳಿಗೆ ತುತ್ತಾದ ಜನರ ಸಂಕಟ ತೆರೆದಿಡುವ ಸಾಕ್ಷ್ಯಚಿತ್ರವಿದು
ಅಡ್ಡಲಾಗಿ ಬಿದ್ದ 10 ಚಕ್ರದ ಲಾರಿ, ರಿಂಗ್‌ ರೋಡಲ್ಲಿ ಫುಲ್ ಟ್ರಾಫಿಕ್ ಜಾಮ್
ಅಡ್ಡಲಾಗಿ ಬಿದ್ದ 10 ಚಕ್ರದ ಲಾರಿ, ರಿಂಗ್‌ ರೋಡಲ್ಲಿ ಫುಲ್ ಟ್ರಾಫಿಕ್ ಜಾಮ್
ಹೊಸ ಹಾನರ್ ಸ್ಮಾರ್ಟ್​ಫೋನ್​ನಲ್ಲಿದೆ 108 ಮೆಗಾಪಿಕ್ಸೆಲ್ ಸಖತ್ ಎಐ ಕ್ಯಾಮೆರಾ
ಹೊಸ ಹಾನರ್ ಸ್ಮಾರ್ಟ್​ಫೋನ್​ನಲ್ಲಿದೆ 108 ಮೆಗಾಪಿಕ್ಸೆಲ್ ಸಖತ್ ಎಐ ಕ್ಯಾಮೆರಾ
ಮುನಿರತ್ನ ವಿರುದ್ಧದ ಪ್ರಕರಣಗಳ ತನಿಖೆಗೆ SIT ರಚಿಸಿ: ಸಿಎಂಗೆ ಮನವಿ
ಮುನಿರತ್ನ ವಿರುದ್ಧದ ಪ್ರಕರಣಗಳ ತನಿಖೆಗೆ SIT ರಚಿಸಿ: ಸಿಎಂಗೆ ಮನವಿ
ಕಾಡಿಗೆ ಹೋಗುವ ದಾರಿ ಗೊತ್ತು ಅಂತ ಅರಣ್ಯ ಸಿಬ್ಬಂದಿ ಮೇಲೆ ತಿರುಗಿ ಬಿದ್ದ ಆನೆ
ಕಾಡಿಗೆ ಹೋಗುವ ದಾರಿ ಗೊತ್ತು ಅಂತ ಅರಣ್ಯ ಸಿಬ್ಬಂದಿ ಮೇಲೆ ತಿರುಗಿ ಬಿದ್ದ ಆನೆ