AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Adipurush Movie: ರಾಮನ ಮೀಸೆ ವಿಚಾರಕ್ಕೆ ಸ್ಪಷ್ಟನೆ ನೀಡಿದ ‘ಆದಿಪುರುಷ್’ ನಿರ್ಮಾಪಕ

‘ಆದಿಪುರುಷ್​’ ಚಿತ್ರದಲ್ಲಿ ಪ್ರಭಾಸ್ ಲುಕ್ ಹೀಗೆಯೇ ಇರಬೇಕು, ಹಾಗೆಯೇ ಇರಬೇಕು ಎಂದು ಅಭಿಮಾನಿಗಳು ನಿರೀಕ್ಷೆ ಮಾಡಲು ಸಾಧ್ಯವಿಲ್ಲ. ಆದರೆ, ಪ್ರಭಾಸ್​ಗೆ ಈ ಮೀಸೆ ಅಷ್ಟು ಹೊಂದುತ್ತಿಲ್ಲ ಎಂಬುದನ್ನು ಅನೇಕರು ಹೇಳಿದ್ದಾರೆ.

Adipurush Movie: ರಾಮನ ಮೀಸೆ ವಿಚಾರಕ್ಕೆ ಸ್ಪಷ್ಟನೆ ನೀಡಿದ ‘ಆದಿಪುರುಷ್’ ನಿರ್ಮಾಪಕ
ಪ್ರಭಾಸ್
ರಾಜೇಶ್ ದುಗ್ಗುಮನೆ
|

Updated on: Jun 09, 2023 | 7:38 AM

Share

ಪ್ರಭಾಸ್ ನಟನೆಯ ‘ಆದಿಪುರುಷ್’ ಸಿನಿಮಾ (Adipurush Movie) ಬಗ್ಗೆ ಸಾಕಷ್ಟು ನಿರೀಕ್ಷೆ ಸೃಷ್ಟಿ ಆಗಿದೆ. ರಾಮಾಯಣದ ಕಥೆ ಆಧರಿಸಿ ಸಿದ್ಧವಾದ ಈ ಚಿತ್ರ ಹೈಪ್ ಪಡೆದುಕೊಂಡಿದೆ. ಬಾಲಿವುಡ್ ನಿರ್ದೇಶಕ ಓಂ ರಾವತ್ ನಿರ್ದೇಶನದ ಈ ಚಿತ್ರದಲ್ಲಿ ಪ್ರಭಾಸ್ (Prabhas) ರಾಮನಾಗಿ ಕಾಣಿಸಿಕೊಳ್ಳಲಿದ್ದಾರೆ. ಬಾಲಿವುಡ್ ಬೆಡಗಿ ಕೃತಿ ಸನೋನ್ ಸೀತೆಯಾಗಿ ನಟಿಸುತ್ತಿದ್ದಾರೆ. ರಿಲೀಸ್ ಆದ ಎರಡು ಟ್ರೇಲರ್‌ಗಳು ಚಿತ್ರದ ನಿರೀಕ್ಷೆಯನ್ನು ಹೆಚ್ಚು ಮಾಡಿದೆ. ಈ ಸಿನಿಮಾ ರಿಲೀಸ್ ಆಗುತ್ತಿರುವ ಹಿನ್ನೆಲೆಯಲ್ಲಿ ಸಿನಿಮಾದ ಬಗ್ಗೆ ವಿವಾದಗಳೂ ಹೆಚ್ಚಾಗುತ್ತಿವೆ. ಈ ಮೊದಲು ಬಿಡುಗಡೆಯಾಗಿರುವ ಟೀಸರ್ ಬಗ್ಗೆ ಟೀಕೆಗಳು ವ್ಯಕ್ತವಾಗಿತ್ತು. ಗ್ರಾಫಿಕ್ಸ್ ಉತ್ತಮವಾಗಿಲ್ಲ ಎಂಬ ಮಾತು ಕೇಳಿಬಂದಿವೆ. ಈಗ ಪ್ರಭಾಸ್ ಮೀಸೆ ಬಗ್ಗೆ ಅಪಸ್ವರ ತೆಗೆಯಲಾಗಿದೆ. ಇದಕ್ಕೆ ನಿರ್ಮಾಪಕರಿಂದ ಸ್ಪಷ್ಟನೆ ಸಿಕ್ಕಿದೆ.

ಪ್ರಭಾಸ್ ಅವರು ಹ್ಯಾಂಡ್ಸಂ ಹಂಕ್. ಅವರ ಲುಕ್​ಗೆ ಅನೇಕರು ಫಿದಾ ಆಗಿದ್ದಾರೆ. ಅವರಿಗೆ ಕೋಟ್ಯಂತರ ಅಭಿಮಾನಿಗಳು ಇದ್ದಾರೆ. ‘ಆದಿಪುರುಷ್’ ರಾಮಾಯಣ ಆಧರಿಸಿ ಸಿದ್ಧವಾದ ಸಿನಿಮಾ. ಹೀಗಾಗಿ, ಇಲ್ಲಿ ಪ್ರಭಾಸ್ ಲುಕ್ ಹೀಗೆಯೇ ಇರಬೇಕು, ಹಾಗೆಯೇ ಇರಬೇಕು ಎಂದು ಅಭಿಮಾನಿಗಳು ನಿರೀಕ್ಷೆ ಮಾಡಲು ಸಾಧ್ಯವಿಲ್ಲ. ಆದರೆ, ಪ್ರಭಾಸ್​ಗೆ ಈ ಮೀಸೆ ಅಷ್ಟು ಹೊಂದುತ್ತಿಲ್ಲ ಎಂಬುದನ್ನು ಅನೇಕರು ಹೇಳಿದ್ದಾರೆ.

ಈ ಬಗ್ಗೆ ‘ಆದಿಪುರುಷ್’ ಸಿನಿಮಾ ನಿರ್ಮಾಪಕರಲ್ಲಿ ಒಬ್ಬರು ಪ್ರತಿಕ್ರಿಯೆ ನೀಡಿದ್ದಾರೆ. ‘ಆದಿಪುರುಷ್​ ಸಿನಿಮಾ ಎಲ್ಲರಿಗೂ ಇಷ್ಟವಾಗುತ್ತದೆ. ರಾಮನಿಗೆ ಮೀಸೆ ಏಕೆ ಎಂದು ಸಿನಿಮಾ ನೋಡಿದರೆ ಅರ್ಥವಾಗುತ್ತದೆ  ಪ್ರೇಕ್ಷಕರ ಹಲವು ಅನುಮಾನಗಳಿಗೆ ಸಿನಿಮಾ ನೋಡಿದ ನಂತರ ಸ್ಪಷ್ಟನೆ ಸಿಗಲಿದೆ’ ಎಂದು ನಿರ್ಮಾಪಕರು ಹೇಳಿರುವುದಾಗಿ ವರದಿ ಆಗಿದೆ.

ಇದನ್ನೂ ಓದಿ: ಸಿಕ್ತು ‘ಆದಿಪುರುಷ್​’ ಚಿತ್ರದ ಸೆನ್ಸಾರ್​ ಸರ್ಟಿಫಿಕೇಟ್​; ಅಬ್ಬಬ್ಬಾ ಈ ಸಿನಿಮಾದ ಅವಧಿ ಇಷ್ಟೊಂದಾ?

ಈ ಮೊದಲು ರಿಲೀಸ್ ಆದ ಟೀಸರ್​ನಲ್ಲಿ ರಾವಣನ ಗಡ್ಡದ ಬಗ್ಗೆ ಅನೇಕರು ಅಪಸ್ವರ ತೆಗೆದಿದ್ದರು. ಭಾರತದ ಮೇಲೆ ದಂಡೆತ್ತಿ ಬಂದ ಮುಸ್ಲಿಂ ರಾಜರ ರೀತಿಯಲ್ಲಿ ಈ ಪಾತ್ರವನ್ನು ಸೃಷ್ಟಿ ಮಾಡಲಾಗಿದೆ ಎಂದು ಅನೇಕರು ಟೀಕಿಸಿದ್ದರು. ಆದರೆ, ಟ್ರೇಲರ್​ನಲ್ಲಿ ರಾವಣನ ಲುಕ್ ಬದಲಾಯಿಸಲಾಗಿದೆ. ರಾವಣನಾಗಿ ಸೈಫ್ ಅಲಿ ಖಾನ್ ನಟಿಸುತ್ತಿದ್ದಾರೆ. ಈ ಸಿನಿಮಾ ಜೂನ್ 16ರಂದು ರಿಲೀಸ್ ಆಗಲಿದೆ. ಈ ಚಿತ್ರಕ್ಕೆ ಭಾರೀ ಬೆಂಬಲ ಸಿಕ್ಕಿದೆ. ‘ದಿ ಕಾಶ್ಮೀರ್ ಫೈಲ್ಸ್’ ಸಿನಿಮಾ ನಿರ್ಮಾಪಕ ಅಭಿಷೇಕ್​ ಅಗರ್​ವಾಲ್, ನಟ ರಣಬೀರ್ ಕಪೂರ್, ರಾಮ್ ಚರಣ್ ತಲಾ 10 ಸಾವಿರ ಟಿಕೆಟ್ ಖರೀದಿಸುವುದಾಗಿ ಹೇಳಿದ್ದಾರೆ.

ಇನ್ನಷ್ಟು ಸಿನಿಮಾ ಸುದ್ದಿಗಾಗಿ ಇಲ್ಲಿ ಕ್ಲಿಕ್​ ಮಾಡಿ

ಚೈತ್ರಾ ಕುಂದಾಪುರ ಡಿಬಾರ್ ಆಗಿದ್ದಳು: ಎಲ್ಲ ವಿಷಯ ಹೇಳಿದ ತಂದೆ ಬಾಲಕೃಷ್ಣ
ಚೈತ್ರಾ ಕುಂದಾಪುರ ಡಿಬಾರ್ ಆಗಿದ್ದಳು: ಎಲ್ಲ ವಿಷಯ ಹೇಳಿದ ತಂದೆ ಬಾಲಕೃಷ್ಣ
ಸಂಜು ಹೊಡೆತಕ್ಕೆ ಸಿಲುಕಿ ನೋವಿನಿಂದ ನರಳಾಡಿದ ಅಂಪೈರ್
ಸಂಜು ಹೊಡೆತಕ್ಕೆ ಸಿಲುಕಿ ನೋವಿನಿಂದ ನರಳಾಡಿದ ಅಂಪೈರ್
ರೈಲಿನಿಂದ ಬೀಳುತ್ತಿದ್ದ ಪ್ರಯಾಣಿಕನನ್ನು ಕಾಪಾಡಿದ ಸ್ಟೇಷನ್ ಮಾಸ್ಟರ್
ರೈಲಿನಿಂದ ಬೀಳುತ್ತಿದ್ದ ಪ್ರಯಾಣಿಕನನ್ನು ಕಾಪಾಡಿದ ಸ್ಟೇಷನ್ ಮಾಸ್ಟರ್
ಗೃಹಲಕ್ಷ್ಮೀ ಹಣದ ಬಗ್ಗೆ ಸ್ಫೋಟಕ ಮಾಹಿತಿ ಬಿಚ್ಚಿಟ್ಟ ಸಿಎಂ ಆರ್ಥಿಕ ಸಲಹೆಗಾರ
ಗೃಹಲಕ್ಷ್ಮೀ ಹಣದ ಬಗ್ಗೆ ಸ್ಫೋಟಕ ಮಾಹಿತಿ ಬಿಚ್ಚಿಟ್ಟ ಸಿಎಂ ಆರ್ಥಿಕ ಸಲಹೆಗಾರ
ಮೋದಿಯಿಂದ ನಾಳೆ ಉದ್ಘಾಟನೆಯಾಗಲಿದೆ ಅಸ್ಸಾಂನ ಅತಿದೊಡ್ಡ ವಿಮಾನ ನಿಲ್ದಾಣ
ಮೋದಿಯಿಂದ ನಾಳೆ ಉದ್ಘಾಟನೆಯಾಗಲಿದೆ ಅಸ್ಸಾಂನ ಅತಿದೊಡ್ಡ ವಿಮಾನ ನಿಲ್ದಾಣ
ಶಾಲೆಗೆ ಬರುವ ಮಕ್ಕಳನ್ನ ಗಾರೆ ಕೆಲಸಕ್ಕಚ್ಚಿದ ಮೇಸ್ಟ್ರು, ವಿಡಿಯೋ ವೈರಲ್
ಶಾಲೆಗೆ ಬರುವ ಮಕ್ಕಳನ್ನ ಗಾರೆ ಕೆಲಸಕ್ಕಚ್ಚಿದ ಮೇಸ್ಟ್ರು, ವಿಡಿಯೋ ವೈರಲ್
ಸಂಸತ್ ಅಧಿವೇಶನ ಮುಕ್ತಾಯ; ಮೋದಿ ಸೇರಿ ಎಲ್ಲ ಸಂಸದರಿಗೆ ಸ್ಪೀಕರ್ ಟೀ ಪಾರ್ಟಿ
ಸಂಸತ್ ಅಧಿವೇಶನ ಮುಕ್ತಾಯ; ಮೋದಿ ಸೇರಿ ಎಲ್ಲ ಸಂಸದರಿಗೆ ಸ್ಪೀಕರ್ ಟೀ ಪಾರ್ಟಿ
ಬಾಲಕನನ್ನು ಫುಟ್ಬಾಲ್​​ನಂತೆ ಒದ್ದ ಜಿಮ್ ಟ್ರೈನರ್​​ನ ಮತ್ತಷ್ಟು ಕೃತ್ಯಗಳು
ಬಾಲಕನನ್ನು ಫುಟ್ಬಾಲ್​​ನಂತೆ ಒದ್ದ ಜಿಮ್ ಟ್ರೈನರ್​​ನ ಮತ್ತಷ್ಟು ಕೃತ್ಯಗಳು
ವಕ್ಫ್ ಆಸ್ತಿಗಾಗಿ ಸಂಘರ್ಷ: 11 ಎಕರೆ ಜಮೀನಿಗಾಗಿ ಕುಟುಂಬಗಳ‌ ಮಧ್ಯೆ ಬಡಿದಾಟ
ವಕ್ಫ್ ಆಸ್ತಿಗಾಗಿ ಸಂಘರ್ಷ: 11 ಎಕರೆ ಜಮೀನಿಗಾಗಿ ಕುಟುಂಬಗಳ‌ ಮಧ್ಯೆ ಬಡಿದಾಟ
ದೇವಿ ದರ್ಶನ ಬಳಿಕ ಡಿಸಿಎಂ ಸ್ಫೋಟಕ ಹೇಳಿಕೆ: ಸಂಚಲನ ಮೂಡಿಸಿದ ಡಿಕೆಶಿ ಸಂದೇಶ
ದೇವಿ ದರ್ಶನ ಬಳಿಕ ಡಿಸಿಎಂ ಸ್ಫೋಟಕ ಹೇಳಿಕೆ: ಸಂಚಲನ ಮೂಡಿಸಿದ ಡಿಕೆಶಿ ಸಂದೇಶ