AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

‘ಹನುಮಾನ್’ ಚಿತ್ರದ ಟೀಸರ್​ನಲ್ಲಿ ಬರುವ ಗ್ರಾಫಿಕ್ಸ್ ನೋಡಿ ಪ್ರಭಾಸ್​ಗೆ ಚುಚ್ಚಿದ ಸಿನಿಪ್ರಿಯರು

‘ಹನುಮಾನ್’ ಟೀಸರ್​ನಲ್ಲಿಯೂ ಹನುಮಂತನ ಉಲ್ಲೇಖ ಇದೆ. ಫ್ಯಾಂಟಸಿ ಕಥೆಯಲ್ಲಿ ಕಥಾ ನಾಯಕನ ಪಾತ್ರ ಹನುಮಂತನ ಸ್ಫೂರ್ತಿಯಾಗಿಟ್ಟುಕೊಂಡು ಮಾಡಲಾಗಿದೆ ಎಂಬುದಕ್ಕೆ ಟೀಸರ್ ಸಾಕ್ಷ್ಯ ನೀಡಿದೆ.

‘ಹನುಮಾನ್’ ಚಿತ್ರದ ಟೀಸರ್​ನಲ್ಲಿ ಬರುವ ಗ್ರಾಫಿಕ್ಸ್ ನೋಡಿ ಪ್ರಭಾಸ್​ಗೆ ಚುಚ್ಚಿದ ಸಿನಿಪ್ರಿಯರು
ಹನುಮಾನ್​-ಆದಿಪುರುಷ್
TV9 Web
| Edited By: |

Updated on: Nov 22, 2022 | 7:59 AM

Share

ಪ್ರಭಾಸ್​ಗೆ (Prabhas) ಇತ್ತೀಚೆಗೆ ಸಂಕಷ್ಟ ಎದುರಾಗಿದೆ. ಮಾಡಿದ ಯಾವ ಸಿನಿಮಾಗಳೂ ಯಶಸ್ಸು ಕಾಣುತ್ತಿಲ್ಲ. ‘ಬಾಹುಬಲಿ 2’ (Bahubali 2) ಬಳಿಕ ರಿಲೀಸ್ ಆದ ‘ಸಾಹೋ’ ಹಾಗೂ ‘ರಾಧೆ ಶ್ಯಾಮ್’ (Radhe Shyam Movie) ಚಿತ್ರಗಳು ಬಾಕ್ಸ್ ಆಫೀಸ್​ನಲ್ಲಿ ಸೋಲು ಕಂಡವು. ಈಗ ‘ಆದಿಪುರುಷ್​’ ಚಿತ್ರದಿಂದ ಅವರು ಟ್ರೋಲ್ ಆಗಿದ್ದಾರೆ. ಈ ಚಿತ್ರದ ಗ್ರಾಫಿಕ್ಸ್ ವಿಚಾರ ಸಾಕಷ್ಟು ಟೀಕೆಗೆ ಒಳಗಾಗಿದೆ. ಈ ಮಧ್ಯೆ ಪ್ರಭಾಸ್ ಚಿತ್ರದ ಮೇಲೆ ಮತ್ತೆ ಟೀಕೆಗಳು ಬಂದಿವೆ. ಇದಕ್ಕೆ ಕಾರಣವಾಗಿದ್ದು ‘ಹನುಮಾನ್​’ ಚಿತ್ರದ ಟೀಸರ್.

ಕೆಲವೊಮ್ಮೆ ನೂರಾರು ಕೋಟಿ ಖರ್ಚು ಮಾಡಿ ಸಿನಿಮಾ ಮಾಡಿದರೂ ಅದನ್ನು ಪ್ರೇಕ್ಷಕರು ಕೈ ಹಿಡಿಯುವುದಿಲ್ಲ. ಆದರೆ, ಚಿಕ್ಕ ಬಜೆಟ್​ನಲ್ಲಿ ಒಳ್ಳೆಯ ಗ್ರಾಫಿಕ್ಸ್ ಮಾಡಿದ ಚಿತ್ರಗಳನ್ನು ಪ್ರೇಕ್ಷಕರು ಹೆಚ್ಚಾಗಿ ಇಷ್ಟಪಡುತ್ತಾರೆ. ಈಗ ಆಗಿದ್ದೂ ಇದೆ. ಪ್ರಶಾಂತ್ ವರ್ಮಾ ನಿರ್ದೇಶನದ ‘ಹನುಮಾನ್​’ ಚಿತ್ರದ ಟೀಸರ್​ ಅನ್ನು ಪ್ರೇಕ್ಷಕರು ಹೆಚ್ಚಾಗಿ ಇಷ್ಟಪಟ್ಟಿದ್ದಾರೆ. ಸಿನಿಮಾದ ಟೀಸರ್ ನೋಡಿದ ಅನೇಕರು ಮೆಚ್ಚಿಕೊಂಡಿದ್ದಾರೆ.

ರಾಮಾಯಣದಲ್ಲಿ ಬರುವ ಅತಿ ಬಲಶಾಲಿ ದೇವರುಗಳಲ್ಲಿ ಹನುಮಂತ ಕೂಡ ಇದ್ದಾನೆ. ಆತನ ಪರಾಕ್ರಮಗಳ ಬಗ್ಗೆ ರಾಮಾಯಣದಲ್ಲಿ ಉಲ್ಲೇಖವಾಗಿದೆ. ಈ ಪಾತ್ರದ ಬಗ್ಗೆ ಹಲವರು ಹಲವು ರೀತಿಯಲ್ಲಿ ಹೇಳಿದ್ದಾರೆ. ‘ಹನುಮಾನ್’ ಟೀಸರ್​ನಲ್ಲಿಯೂ ಹನುಮಂತನ ಉಲ್ಲೇಖ ಇದೆ. ಫ್ಯಾಂಟಸಿ ಕಥೆಯಲ್ಲಿ ಕಥಾ ನಾಯಕನ ಪಾತ್ರ ಹನುಮಂತನ ಸ್ಫೂರ್ತಿಯಾಗಿಟ್ಟುಕೊಂಡು ಮಾಡಲಾಗಿದೆ ಎಂಬುದಕ್ಕೆ ಟೀಸರ್ ಸಾಕ್ಷ್ಯ ನೀಡಿದೆ.

ಇದನ್ನೂ ಓದಿ
Image
Gandhada Gudi Trailer: ಒಂದೇ ದಿನದಲ್ಲಿ 1 ಕೋಟಿ ಬಾರಿ ವೀಕ್ಷಣೆ ಕಂಡ ‘ಗಂಧದ ಗುಡಿ’ ಟ್ರೇಲರ್
Image
Gandhada Gudi: ರಮ್ಯಾ ಕೈ ಸೇರಿತು ‘ಗಂಧದ ಗುಡಿ’ ಪ್ರೀ-ರಿಲೀಸ್​ ಇವೆಂಟ್​ ಆಮಂತ್ರಣ ಪತ್ರಿಕೆ
Image
Gandhada Gudi: ‘ಗಂಧದ ಗುಡಿ’ ಟ್ರೇಲರ್ ರಿಲೀಸ್ ವೇಳೆ ಅಶ್ವಿನಿ ಪುನೀತ್​ ರಾಜ್​ಕುಮಾರ್ ಹೇಳಿದ್ದು ಒಂದೇ ಮಾತು..
Image
Gandhada Gudi: ಅ.21ರಂದು ‘ಗಂಧದ ಗುಡಿ’ ಪ್ರೀ-ರಿಲೀಸ್​ ಇವೆಂಟ್​; ವಿಶೇಷವಾಗಿ ಸಿದ್ಧವಾಗಿದೆ ಆಮಂತ್ರಣ ಪತ್ರಿಕೆ

1 ನಿಮಿಷ 41 ಸೆಕೆಂಡ್​ನ ಟೀಸರ್​ನಲ್ಲಿ ಹಲವು ವಿಚಾರಗಳನ್ನು ತೋರಿಸಲಾಗಿದೆ. ಈಗಿನ ಕಾಲಘಟ್ಟ ಹಾಗೂ ಹಳೆಯ ಕಾಲಘಟ್ಟದಲ್ಲಿ ಕಥೆ ಸಾಗುವ ಸೂಚನೆ ಸಿಕ್ಕಿದೆ. ಹನುಮಂತ ಈಗಲೂ ರಾಮಜಪ ಮಾಡುತ್ತಾ ಕೂತಿದ್ದಾನೆ ಎಂಬ ಮಾತಿದೆ. ಅದೇ ವಿಚಾರವನ್ನು ಟೀಸರ್​ನಲ್ಲೂ ತೋರಿಸಲಾಗಿದೆ.

ಇದನ್ನೂ ಓದಿ: ‘ಯಶ್ ಮಾತ್ರವಲ್ಲ, ಬಿಟ್ರೆ ಪ್ರಭಾಸ್​ ಹೆಸರನ್ನು ಎಳೆದು ತರ್ತಾರೆ’; ‘ಬ್ರಹ್ಮಾಸ್ತ್ರ’ ಡೈರೆಕ್ಟರ್ ಹೀಗೆ ಹೇಳಿದ್ದೇಕೆ?

‘ಹನುಮಾನ್​’ ಸಿನಿಮಾ ಕಡಿಮೆ ಬಜೆಟ್​ನಲ್ಲಿ ಸಿದ್ಧಗೊಳ್ಳುತ್ತಿರುವ ಸಿನಿಮಾ. ಆದಾಗ್ಯೂ ಗ್ರಾಫಿಕ್ಸ್​ಗಳು ಉತ್ತಮವಾಗಿಯೇ ಮೂಡಿ ಬಂದಿವೆ. ಇದು ಎಲ್ಲರ ಗಮನ ಸೆಳೆದಿದೆ. ಇದರಿಂದ ಸಹಜವಾಗಿಯೇ ಎಲ್ಲರೂ ಪ್ರಭಾಸ್ ನಟನೆಯ ‘ಆದಿಪುರುಷ್​’ ಚಿತ್ರದ ಸಿನಿಮಾಗೆ ಇದನ್ನು ಹೋಲಿಕೆ ಮಾಡುತ್ತಿದ್ದಾರೆ. ‘ಹನುಮಾನ್​’ ಚಿತ್ರದಲ್ಲಿ ತೇಜಾ ಸಜ್ಜ, ಅಮೃತಾ ಐಯ್ಯರ್ ಮೊದಲಾದವರು ನಟಿಸಿದ್ದಾರೆ. ಈ ಸಿನಿಮಾ ಶೀಘ್ರವೇ ತೆರೆಗೆ ಬರುವ ನಿರೀಕ್ಷೆ ಇದೆ.

Follow Us
Web contact
Web contact

TV9 Kannada

Read More
‘ಮ್ಯಾಂಗೋ ಪಚ್ಚ’ ಚಿತ್ರದಲ್ಲಿ ಕಿಚ್ಚ ಸುದೀಪ್​ಗೆ ನೀಡಲಾಗಿದೆ ಟ್ರಿಬ್ಯೂಟ್
‘ಮ್ಯಾಂಗೋ ಪಚ್ಚ’ ಚಿತ್ರದಲ್ಲಿ ಕಿಚ್ಚ ಸುದೀಪ್​ಗೆ ನೀಡಲಾಗಿದೆ ಟ್ರಿಬ್ಯೂಟ್
ಮಂತ್ರಿ ಸ್ಥಾನ ಫಿಕ್ಸ್: ಹೈಕಮಾಂಡ್ ಕೊಟ್ಟ ಮಾತು ಬಿಚ್ಚಿಟ್ಟ ಯತೀಂದ್ರ
ಮಂತ್ರಿ ಸ್ಥಾನ ಫಿಕ್ಸ್: ಹೈಕಮಾಂಡ್ ಕೊಟ್ಟ ಮಾತು ಬಿಚ್ಚಿಟ್ಟ ಯತೀಂದ್ರ
ಆರ್​ಸಿಬಿ ಮಾಲೀಕರನ್ನೂ ಬಿಡದೆ ಎಲ್ಲರ ಕಾಲೆಳೆದ ಮಿ. ನಾಗ್ಸ್
ಆರ್​ಸಿಬಿ ಮಾಲೀಕರನ್ನೂ ಬಿಡದೆ ಎಲ್ಲರ ಕಾಲೆಳೆದ ಮಿ. ನಾಗ್ಸ್
ರಾಜ್ಯ ರಾಜಕೀಯ ರಂಗದ ಮೇಲೆ ಗುರು ಪ್ರಭಾವೇನು? ಡಿಕೆಶಿಗೆ ಸಿಗಲಿದೆಯಾ ಗುರುಬಲ?
ರಾಜ್ಯ ರಾಜಕೀಯ ರಂಗದ ಮೇಲೆ ಗುರು ಪ್ರಭಾವೇನು? ಡಿಕೆಶಿಗೆ ಸಿಗಲಿದೆಯಾ ಗುರುಬಲ?
ಕಾಂಗ್ರೆಸ್​​ನಲ್ಲಿ ಸಂಚಲನ ಮೂಡಿಸಿದ ಜಮಿರ್ ಅಹಮ್ಮದ್ ಆಡಿಯೋ
ಕಾಂಗ್ರೆಸ್​​ನಲ್ಲಿ ಸಂಚಲನ ಮೂಡಿಸಿದ ಜಮಿರ್ ಅಹಮ್ಮದ್ ಆಡಿಯೋ
ಜಿಮ್​​ನಲ್ಲಿ ವಾರ್ಮ್​ ಅಪ್ ಮಾಡಿ ನಿದ್ದೆಗೆ ಜಾರಿದ ಯುವಕ
ಜಿಮ್​​ನಲ್ಲಿ ವಾರ್ಮ್​ ಅಪ್ ಮಾಡಿ ನಿದ್ದೆಗೆ ಜಾರಿದ ಯುವಕ
IPL 2026: ಕನ್ನಡಿಗನ ಪಾಲಾದ 'ಬೆಸ್ಟ್ ಕ್ಯಾಚ್' ಪ್ರಶಸ್ತಿ
IPL 2026: ಕನ್ನಡಿಗನ ಪಾಲಾದ 'ಬೆಸ್ಟ್ ಕ್ಯಾಚ್' ಪ್ರಶಸ್ತಿ
ಗವರ್ನರ್​ಗಾಗಿ ರಸ್ತೆ ಬಂದ್: ನಡು ಮಾರ್ಗದಲ್ಲಿ ಕುಳಿತು ವ್ಯಕ್ತಿಯ ಪ್ರತಿಭಟನೆ
ಗವರ್ನರ್​ಗಾಗಿ ರಸ್ತೆ ಬಂದ್: ನಡು ಮಾರ್ಗದಲ್ಲಿ ಕುಳಿತು ವ್ಯಕ್ತಿಯ ಪ್ರತಿಭಟನೆ
ಬಾಲಕಿಯನ್ನು ಹೊತ್ತೊಯ್ಯುವಾಗ ಬಾಗಿಲಲ್ಲೇ ತಡೆದ ಬಾಲಕ
ಬಾಲಕಿಯನ್ನು ಹೊತ್ತೊಯ್ಯುವಾಗ ಬಾಗಿಲಲ್ಲೇ ತಡೆದ ಬಾಲಕ
ಸ್ಪೆಷಲ್ ಫ್ಲೈಟ್​ನಲ್ಲಿ ದೆಹಲಿಗೆ ತೆರಳಿದ ಡಿಕೆ ಶಿವಕುಮಾರ್, ಸಿದ್ದರಾಮಯ್ಯ!
ಸ್ಪೆಷಲ್ ಫ್ಲೈಟ್​ನಲ್ಲಿ ದೆಹಲಿಗೆ ತೆರಳಿದ ಡಿಕೆ ಶಿವಕುಮಾರ್, ಸಿದ್ದರಾಮಯ್ಯ!