AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

‘ಹನುಮಾನ್’ ಚಿತ್ರದ ಟೀಸರ್​ನಲ್ಲಿ ಬರುವ ಗ್ರಾಫಿಕ್ಸ್ ನೋಡಿ ಪ್ರಭಾಸ್​ಗೆ ಚುಚ್ಚಿದ ಸಿನಿಪ್ರಿಯರು

‘ಹನುಮಾನ್’ ಟೀಸರ್​ನಲ್ಲಿಯೂ ಹನುಮಂತನ ಉಲ್ಲೇಖ ಇದೆ. ಫ್ಯಾಂಟಸಿ ಕಥೆಯಲ್ಲಿ ಕಥಾ ನಾಯಕನ ಪಾತ್ರ ಹನುಮಂತನ ಸ್ಫೂರ್ತಿಯಾಗಿಟ್ಟುಕೊಂಡು ಮಾಡಲಾಗಿದೆ ಎಂಬುದಕ್ಕೆ ಟೀಸರ್ ಸಾಕ್ಷ್ಯ ನೀಡಿದೆ.

‘ಹನುಮಾನ್’ ಚಿತ್ರದ ಟೀಸರ್​ನಲ್ಲಿ ಬರುವ ಗ್ರಾಫಿಕ್ಸ್ ನೋಡಿ ಪ್ರಭಾಸ್​ಗೆ ಚುಚ್ಚಿದ ಸಿನಿಪ್ರಿಯರು
ಹನುಮಾನ್​-ಆದಿಪುರುಷ್
TV9 Web
| Edited By: |

Updated on: Nov 22, 2022 | 7:59 AM

Share

ಪ್ರಭಾಸ್​ಗೆ (Prabhas) ಇತ್ತೀಚೆಗೆ ಸಂಕಷ್ಟ ಎದುರಾಗಿದೆ. ಮಾಡಿದ ಯಾವ ಸಿನಿಮಾಗಳೂ ಯಶಸ್ಸು ಕಾಣುತ್ತಿಲ್ಲ. ‘ಬಾಹುಬಲಿ 2’ (Bahubali 2) ಬಳಿಕ ರಿಲೀಸ್ ಆದ ‘ಸಾಹೋ’ ಹಾಗೂ ‘ರಾಧೆ ಶ್ಯಾಮ್’ (Radhe Shyam Movie) ಚಿತ್ರಗಳು ಬಾಕ್ಸ್ ಆಫೀಸ್​ನಲ್ಲಿ ಸೋಲು ಕಂಡವು. ಈಗ ‘ಆದಿಪುರುಷ್​’ ಚಿತ್ರದಿಂದ ಅವರು ಟ್ರೋಲ್ ಆಗಿದ್ದಾರೆ. ಈ ಚಿತ್ರದ ಗ್ರಾಫಿಕ್ಸ್ ವಿಚಾರ ಸಾಕಷ್ಟು ಟೀಕೆಗೆ ಒಳಗಾಗಿದೆ. ಈ ಮಧ್ಯೆ ಪ್ರಭಾಸ್ ಚಿತ್ರದ ಮೇಲೆ ಮತ್ತೆ ಟೀಕೆಗಳು ಬಂದಿವೆ. ಇದಕ್ಕೆ ಕಾರಣವಾಗಿದ್ದು ‘ಹನುಮಾನ್​’ ಚಿತ್ರದ ಟೀಸರ್.

ಕೆಲವೊಮ್ಮೆ ನೂರಾರು ಕೋಟಿ ಖರ್ಚು ಮಾಡಿ ಸಿನಿಮಾ ಮಾಡಿದರೂ ಅದನ್ನು ಪ್ರೇಕ್ಷಕರು ಕೈ ಹಿಡಿಯುವುದಿಲ್ಲ. ಆದರೆ, ಚಿಕ್ಕ ಬಜೆಟ್​ನಲ್ಲಿ ಒಳ್ಳೆಯ ಗ್ರಾಫಿಕ್ಸ್ ಮಾಡಿದ ಚಿತ್ರಗಳನ್ನು ಪ್ರೇಕ್ಷಕರು ಹೆಚ್ಚಾಗಿ ಇಷ್ಟಪಡುತ್ತಾರೆ. ಈಗ ಆಗಿದ್ದೂ ಇದೆ. ಪ್ರಶಾಂತ್ ವರ್ಮಾ ನಿರ್ದೇಶನದ ‘ಹನುಮಾನ್​’ ಚಿತ್ರದ ಟೀಸರ್​ ಅನ್ನು ಪ್ರೇಕ್ಷಕರು ಹೆಚ್ಚಾಗಿ ಇಷ್ಟಪಟ್ಟಿದ್ದಾರೆ. ಸಿನಿಮಾದ ಟೀಸರ್ ನೋಡಿದ ಅನೇಕರು ಮೆಚ್ಚಿಕೊಂಡಿದ್ದಾರೆ.

ರಾಮಾಯಣದಲ್ಲಿ ಬರುವ ಅತಿ ಬಲಶಾಲಿ ದೇವರುಗಳಲ್ಲಿ ಹನುಮಂತ ಕೂಡ ಇದ್ದಾನೆ. ಆತನ ಪರಾಕ್ರಮಗಳ ಬಗ್ಗೆ ರಾಮಾಯಣದಲ್ಲಿ ಉಲ್ಲೇಖವಾಗಿದೆ. ಈ ಪಾತ್ರದ ಬಗ್ಗೆ ಹಲವರು ಹಲವು ರೀತಿಯಲ್ಲಿ ಹೇಳಿದ್ದಾರೆ. ‘ಹನುಮಾನ್’ ಟೀಸರ್​ನಲ್ಲಿಯೂ ಹನುಮಂತನ ಉಲ್ಲೇಖ ಇದೆ. ಫ್ಯಾಂಟಸಿ ಕಥೆಯಲ್ಲಿ ಕಥಾ ನಾಯಕನ ಪಾತ್ರ ಹನುಮಂತನ ಸ್ಫೂರ್ತಿಯಾಗಿಟ್ಟುಕೊಂಡು ಮಾಡಲಾಗಿದೆ ಎಂಬುದಕ್ಕೆ ಟೀಸರ್ ಸಾಕ್ಷ್ಯ ನೀಡಿದೆ.

ಇದನ್ನೂ ಓದಿ
Image
Gandhada Gudi Trailer: ಒಂದೇ ದಿನದಲ್ಲಿ 1 ಕೋಟಿ ಬಾರಿ ವೀಕ್ಷಣೆ ಕಂಡ ‘ಗಂಧದ ಗುಡಿ’ ಟ್ರೇಲರ್
Image
Gandhada Gudi: ರಮ್ಯಾ ಕೈ ಸೇರಿತು ‘ಗಂಧದ ಗುಡಿ’ ಪ್ರೀ-ರಿಲೀಸ್​ ಇವೆಂಟ್​ ಆಮಂತ್ರಣ ಪತ್ರಿಕೆ
Image
Gandhada Gudi: ‘ಗಂಧದ ಗುಡಿ’ ಟ್ರೇಲರ್ ರಿಲೀಸ್ ವೇಳೆ ಅಶ್ವಿನಿ ಪುನೀತ್​ ರಾಜ್​ಕುಮಾರ್ ಹೇಳಿದ್ದು ಒಂದೇ ಮಾತು..
Image
Gandhada Gudi: ಅ.21ರಂದು ‘ಗಂಧದ ಗುಡಿ’ ಪ್ರೀ-ರಿಲೀಸ್​ ಇವೆಂಟ್​; ವಿಶೇಷವಾಗಿ ಸಿದ್ಧವಾಗಿದೆ ಆಮಂತ್ರಣ ಪತ್ರಿಕೆ

1 ನಿಮಿಷ 41 ಸೆಕೆಂಡ್​ನ ಟೀಸರ್​ನಲ್ಲಿ ಹಲವು ವಿಚಾರಗಳನ್ನು ತೋರಿಸಲಾಗಿದೆ. ಈಗಿನ ಕಾಲಘಟ್ಟ ಹಾಗೂ ಹಳೆಯ ಕಾಲಘಟ್ಟದಲ್ಲಿ ಕಥೆ ಸಾಗುವ ಸೂಚನೆ ಸಿಕ್ಕಿದೆ. ಹನುಮಂತ ಈಗಲೂ ರಾಮಜಪ ಮಾಡುತ್ತಾ ಕೂತಿದ್ದಾನೆ ಎಂಬ ಮಾತಿದೆ. ಅದೇ ವಿಚಾರವನ್ನು ಟೀಸರ್​ನಲ್ಲೂ ತೋರಿಸಲಾಗಿದೆ.

ಇದನ್ನೂ ಓದಿ: ‘ಯಶ್ ಮಾತ್ರವಲ್ಲ, ಬಿಟ್ರೆ ಪ್ರಭಾಸ್​ ಹೆಸರನ್ನು ಎಳೆದು ತರ್ತಾರೆ’; ‘ಬ್ರಹ್ಮಾಸ್ತ್ರ’ ಡೈರೆಕ್ಟರ್ ಹೀಗೆ ಹೇಳಿದ್ದೇಕೆ?

‘ಹನುಮಾನ್​’ ಸಿನಿಮಾ ಕಡಿಮೆ ಬಜೆಟ್​ನಲ್ಲಿ ಸಿದ್ಧಗೊಳ್ಳುತ್ತಿರುವ ಸಿನಿಮಾ. ಆದಾಗ್ಯೂ ಗ್ರಾಫಿಕ್ಸ್​ಗಳು ಉತ್ತಮವಾಗಿಯೇ ಮೂಡಿ ಬಂದಿವೆ. ಇದು ಎಲ್ಲರ ಗಮನ ಸೆಳೆದಿದೆ. ಇದರಿಂದ ಸಹಜವಾಗಿಯೇ ಎಲ್ಲರೂ ಪ್ರಭಾಸ್ ನಟನೆಯ ‘ಆದಿಪುರುಷ್​’ ಚಿತ್ರದ ಸಿನಿಮಾಗೆ ಇದನ್ನು ಹೋಲಿಕೆ ಮಾಡುತ್ತಿದ್ದಾರೆ. ‘ಹನುಮಾನ್​’ ಚಿತ್ರದಲ್ಲಿ ತೇಜಾ ಸಜ್ಜ, ಅಮೃತಾ ಐಯ್ಯರ್ ಮೊದಲಾದವರು ನಟಿಸಿದ್ದಾರೆ. ಈ ಸಿನಿಮಾ ಶೀಘ್ರವೇ ತೆರೆಗೆ ಬರುವ ನಿರೀಕ್ಷೆ ಇದೆ.

Follow Us
ಜಾರಕಿಹೊಳಿ ಮನೆಯಲ್ಲಿ ED ಶೋಧ ಅಂತ್ಯ, 37 ಗಂಟೆಗಳ ಕಾಲ ನಡೆದ ಪರಿಶೀಲನೆ
ಜಾರಕಿಹೊಳಿ ಮನೆಯಲ್ಲಿ ED ಶೋಧ ಅಂತ್ಯ, 37 ಗಂಟೆಗಳ ಕಾಲ ನಡೆದ ಪರಿಶೀಲನೆ
'ಬ್ರಿಕ್ಸ್ ಶೃಂಗಸಭೆಗೆ ಭಾರತ ಸಿದ್ಧ'; ವಿಡಿಯೋ ಹಂಚಿಕೊಂಡ ಪ್ರಧಾನಿ ಮೋದಿ
'ಬ್ರಿಕ್ಸ್ ಶೃಂಗಸಭೆಗೆ ಭಾರತ ಸಿದ್ಧ'; ವಿಡಿಯೋ ಹಂಚಿಕೊಂಡ ಪ್ರಧಾನಿ ಮೋದಿ
ಹೈಕಮಾಂಡ್ ಬುಲಾವ್: ದೆಹಲಿಗೆ ಹೊರಟ ಮಾಜಿ ಸಿಎಂ ಸಿದ್ದರಾಮಯ್ಯ
ಹೈಕಮಾಂಡ್ ಬುಲಾವ್: ದೆಹಲಿಗೆ ಹೊರಟ ಮಾಜಿ ಸಿಎಂ ಸಿದ್ದರಾಮಯ್ಯ
ಡಿಕೆಶಿ 100 ದಿನಗಳ ಸಂಭ್ರಮಕ್ಕೆ ನೊಣವಿನಕೆರೆ ಶ್ರೀಗಳ ಆಶೀರ್ವಚನ ಹೀಗಿದೆ
ಡಿಕೆಶಿ 100 ದಿನಗಳ ಸಂಭ್ರಮಕ್ಕೆ ನೊಣವಿನಕೆರೆ ಶ್ರೀಗಳ ಆಶೀರ್ವಚನ ಹೀಗಿದೆ
ರಂಗನತಿಟ್ಟು ವಿದೇಶಿ ಪ್ರಯೋಗ: ಪಕ್ಷಿಗಳ ರಕ್ಷಣೆಗೆ ಗೇಬಿಯನ್ ತಂತ್ರಜ್ಞಾನ
ರಂಗನತಿಟ್ಟು ವಿದೇಶಿ ಪ್ರಯೋಗ: ಪಕ್ಷಿಗಳ ರಕ್ಷಣೆಗೆ ಗೇಬಿಯನ್ ತಂತ್ರಜ್ಞಾನ
ಬಿಗ್​​ಬಾಸ್​​ನಲ್ಲಿ ಓಪನ್ ಆಗ್ತಿದೆ ಹಳೆ ಲವ್ ಸ್ಟೋರಿಗಳು: ವಿಡಿಯೋ ನೋಡಿ
ಬಿಗ್​​ಬಾಸ್​​ನಲ್ಲಿ ಓಪನ್ ಆಗ್ತಿದೆ ಹಳೆ ಲವ್ ಸ್ಟೋರಿಗಳು: ವಿಡಿಯೋ ನೋಡಿ
ಮಹಾಸಂಕಲ್ಪ ಮತ್ತು ನವಸಂಕಲ್ಪ: 2037ರ ಭವ್ಯ ಕನಸು ಬಿಚ್ಚಿಟ್ಟ ಡಿಕೆಶಿ
ಮಹಾಸಂಕಲ್ಪ ಮತ್ತು ನವಸಂಕಲ್ಪ: 2037ರ ಭವ್ಯ ಕನಸು ಬಿಚ್ಚಿಟ್ಟ ಡಿಕೆಶಿ
ಬೆಂಗಳೂರು ದಕ್ಷಿಣದಲ್ಲಿ ಮಾದಕ ವಸ್ತುಗಳ ವಿರುದ್ಧ ಪೊಲೀಸರ ಸಮರ
ಬೆಂಗಳೂರು ದಕ್ಷಿಣದಲ್ಲಿ ಮಾದಕ ವಸ್ತುಗಳ ವಿರುದ್ಧ ಪೊಲೀಸರ ಸಮರ
ಸಚಿವ ಸತೀಶ್ ಜಾರಕಿಹೊಳಿಗೆ ಎದುರಾಯ್ತು ಇಡಿ ಸಂಕಷ್ಟ!
ಸಚಿವ ಸತೀಶ್ ಜಾರಕಿಹೊಳಿಗೆ ಎದುರಾಯ್ತು ಇಡಿ ಸಂಕಷ್ಟ!
ಹನುಮ ಹುಟ್ಟಿದ ನಾಡು ಅಂಜನಾದ್ರಿಗೆ ಭೇಟಿ ನೀಡಿದ ಸಂಸದ ಯದುವೀರ್
ಹನುಮ ಹುಟ್ಟಿದ ನಾಡು ಅಂಜನಾದ್ರಿಗೆ ಭೇಟಿ ನೀಡಿದ ಸಂಸದ ಯದುವೀರ್