Adipurush: ಜೂ.16ಕ್ಕೆ ‘ಆದಿಪುರುಷ್​’ ರಿಲೀಸ್​ ಖಚಿತ; ಪ್ರಭಾಸ್​ ಫ್ಯಾನ್ಸ್​ಗೆ ಸಮಾಧಾನ ತಂದ ಚಿತ್ರತಂಡದ ಸ್ಪಷ್ಟನೆ

Adipurush Release Date: ಜೂನ್​ 16ರಂದು ‘ಆದಿಪುರುಷ್​’ ಸಿನಿಮಾ ಬಿಡುಗಡೆ ಆಗಲಿದೆ ಎಂಬುದನ್ನು ‘ಆದಿಪುರುಷ್​’ ಟೀಮ್​ ಖಚಿತ ಪಡಿಸಿದೆ. ಈ ಸುದ್ದಿ ಕೇಳಿ ಪ್ರಭಾಸ್​ ಫ್ಯಾನ್ಸ್​ ಖುಷಿಪಟ್ಟಿದ್ದಾರೆ.

Adipurush: ಜೂ.16ಕ್ಕೆ ‘ಆದಿಪುರುಷ್​’ ರಿಲೀಸ್​ ಖಚಿತ; ಪ್ರಭಾಸ್​ ಫ್ಯಾನ್ಸ್​ಗೆ ಸಮಾಧಾನ ತಂದ ಚಿತ್ರತಂಡದ ಸ್ಪಷ್ಟನೆ
ಪ್ರಭಾಸ್
Follow us
| Updated By: ಮದನ್​ ಕುಮಾರ್​

Updated on:Jan 17, 2023 | 9:09 PM

ಪ್ರಭಾಸ್​ (Prabhas) ನಟನೆಯ ‘ಆದಿಪುರುಷ್​’ಚಿತ್ರದ ಮೇಲೆ ಅಭಿಮಾನಿಗಳಿಗೆ ಸಾಕಷ್ಟು ನಿರೀಕ್ಷೆ ಇದೆ. ಈ ಚಿತ್ರವನ್ನು ದೊಡ್ಡ ಪರದೆಯಲ್ಲಿ ಕಣ್ತುಂಬಿಕೊಳ್ಳಲು ಫ್ಯಾನ್ಸ್​ ಕಾದಿದ್ದಾರೆ. ಎಲ್ಲವೂ ಅಂದುಕೊಂಡಂತೆ ಆಗಿದ್ದರೆ 2023ರ ಜನವರಿ 12ರಂದು ‘ಆದಿಪುರುಷ್​’ (Adipurush Movie) ಬಿಡುಗಡೆ ಆಗಬೇಕಿತ್ತು. ಆದರೆ ಕಳೆದ ವರ್ಷ ಬಿಡುಗಡೆ ಆದ ಟೀಸರ್​ಗೆ ಸಿಕ್ಕಾಪಟ್ಟೆ ನೆಗೆಟಿವ್​ ಪ್ರತಿಕ್ರಿಯೆ ಸಿಕ್ಕ ಕಾರಣ ಚಿತ್ರಕ್ಕೆ ಕೆಲವು ಬದಲಾವಣೆಗಳನ್ನು ಮಾಡುವುದು ಅನಿವಾರ್ಯ ಆಯಿತು. ಅಲ್ಲಿಂದೀಚೆಗೆ ‘ಆದಿಪುರುಷ್​’ ರಿಲೀಸ್​ ದಿನಾಂಕದ (Adipurush Release Date) ಬಗ್ಗೆ ಅನುಮಾನ ವ್ಯಕ್ತವಾಗುತ್ತಲೇ ಇದೆ. ಅದಕ್ಕೀಗ ಚಿತ್ರತಂಡದಿಂದ ಸ್ಪಷ್ಟನೆ ಸಿಕ್ಕಿದೆ. ಜೂನ್​ 16ರಂದು ಈ ಸಿನಿಮಾ ಬಿಡುಗಡೆ ಆಗಲಿದೆ ಎಂಬುದನ್ನು ‘ಆದಿಪುರುಷ್​’ ಟೀಮ್​ ಖಚಿತಪಡಿಸಿದೆ.

ಜೂನ್​ 16ಕ್ಕೆ ‘ಆದಿಪುರುಷ್​’ ಸಿನಿಮಾ ರಿಲೀಸ್​ ಆಗುವುದು ಅನುಮಾನ ಎಂದು ಇತ್ತೀಚೆಗೆ ಕೆಲವರು ಗಾಸಿಪ್​ ಹಬ್ಬಿಸಿದ್ದರು. ಈ ಸಿನಿಮಾದ ವಿಎಫ್​ಎಕ್ಸ್​ ಕೆಲಸಗಳು ಸಾಕಷ್ಟು ಬಾಕಿ ಇರುವುದರಿಂದ ಅಂದುಕೊಂಡ ದಿನಾಂಕದಲ್ಲಿ ಚಿತ್ರವನ್ನು ತೆರೆಕಾಣಿಸಲು ಸಾಧ್ಯವಿಲ್ಲ ಎಂದು ಗಾಳಿ ಸುದ್ದಿ ಹರಡಿಸಲಾಗಿತ್ತು. ಅದು ಪ್ರಭಾಸ್​ ಅಭಿಮಾನಿಗಳ ಬೇಸರಕ್ಕೆ ಕಾರಣ ಆಗಿತ್ತು. ಆದರೆ ಈಗ ಸ್ವತಃ ಚಿತ್ರತಂಡವೇ ಎಲ್ಲ ಗಾಸಿಪ್​ಗಳಿಗೆ ತೆರೆ ಎಳೆದಿದೆ.

ಇದನ್ನೂ ಓದಿ
Image
‘ಗಂಧದ ಗುಡಿ’ ಚಿತ್ರಕ್ಕೆ ತೆರಿಗೆ ವಿನಾಯಿತಿ ನೀಡುವ ಬಗ್ಗೆ ಸಿಎಂ ಬಸವರಾಜ ಬೊಮ್ಮಾಯಿ ಪ್ರತಿಕ್ರಿಯೆ
Image
Puneetha Parva: ‘ಮಿಸ್​ ಯೂ ಅಪ್ಪು’: ಪುನೀತ ಪರ್ವ ವೇದಿಕೆಯಲ್ಲಿ ‘ಪವರ್​ ಸ್ಟಾರ್​’ಗೆ ನುಡಿ ನಮನ ಸಲ್ಲಿಸಿದ ಗಣ್ಯರು
Image
‘ನಾನಿರುವವರೆಗೂ ಈ ಹಾಡು ನನ್ನ ಜತೆ ಇರುತ್ತದೆ’; ‘ಪುನೀತ ಪರ್ವ’ ವೇದಿಕೆ ಮೇಲೆ ರಾಘಣ್ಣ ಭಾವುಕ ನುಡಿ
Image
Puneetha Parva: ‘ಪುನೀತ ಪರ್ವ’ ಲೈವ್​ ನೋಡಲು ಇಲ್ಲಿ ಕ್ಲಿಕ್​ ಮಾಡಿ; ಅರಮನೆ ಮೈದಾನದಲ್ಲಿ ತಾರೆಯರ ಸಂಗಮ

ಇದನ್ನೂ ಓದಿ: Adipurush: ರಾವಣನ ಗಡ್ಡಕ್ಕೆ ಗ್ರಾಫಿಕ್ಸ್​ ಮೂಲಕ ಶೇವಿಂಗ್​; ‘ಆದಿಪುರುಷ್​’ ಚಿತ್ರಕ್ಕೆ ಎಂಥ ಗತಿ ಬಂತು

ನಿರ್ದೇಶಕ ಓಂ ರಾವತ್​ ಅವರು ಹೊಸ ಪೋಸ್ಟರ್​ ಹಂಚಿಕೊಂಡಿದ್ದಾರೆ. ಇನ್ನು 150 ದಿನ ಬಾಕಿ ಇದೆ ಎಂದು ಈ ಪೋಸ್ಟರ್​ನಲ್ಲಿ ಬರೆದಿರುವುದು ಹೈಲೈಟ್​ ಆಗಿದೆ. ಪ್ರಭಾಸ್​ ಅಭಿಮಾನಿಗಳ ಬಳಗದಲ್ಲಿ ಈ ಪೋಸ್ಟರ್​ ವೈರಲ್​ ಆಗಿದೆ. ಈ ಸಿನಿಮಾ ಬಗ್ಗೆ ಕಾಯುತ್ತಿರುವುದಾಗಿ ಫ್ಯಾನ್ಸ್​ ಕಮೆಂಟ್​ ಮಾಡಿದ್ದಾರೆ.

ಇದನ್ನೂ ಓದಿ: ‘ಆದಿಪುರುಷ್​​’ ಚಿತ್ರಕ್ಕೆ ಮುಳುವಾದ ವಿವಾದ; ಉತ್ತರಿಸಲು ಸೆನ್ಸಾರ್ ಮಂಡಳಿಗೆ ಕೋರ್ಟ್​ ಆದೇಶ

ರಾಮಾಯಣದ ಕಥೆಯನ್ನು ಇಟ್ಟುಕೊಂಡು ‘ಆದಿಪುರುಷ್​’ ಸಿನಿಮಾ ಮಾಡಲಾಗುತ್ತಿದೆ. ರಾಮನ ಪಾತ್ರವನ್ನು ಪ್ರಭಾಸ್​ ಮಾಡುತ್ತಿದ್ದರೆ, ಸೀತೆಯಾಗಿ ಕೃತಿ ಸನೋನ್​ ನಟಿಸುತ್ತಿದ್ದಾರೆ. ರಾವಣನ ಪಾತ್ರವನ್ನು ಸೈಫ್​ ಅಲಿ ಖಾನ್​ ಮಾಡುತ್ತಿದ್ದಾರೆ. ಈ ಹಿಂದೆ ಬಿಡುಗಡೆ ಆಗಿದ್ದ ಟೀಸರ್​ನಲ್ಲಿ ರಾವಣನ ಲುಕ್​ ನೋಡಿ ನೆಟ್ಟಿಗರು ಅಪಸ್ವರ ತೆಗೆದಿದ್ದರು.

‘ಆದಿಪುರುಷ್​ ಒಂದು ಸಿನಿಮಾ ಅಲ್ಲ. ರಾಮನ ಬಗ್ಗೆ ನಮಗೆ ಇರುವ ಭಕ್ತಿ ಮತ್ತು ಸಂಸ್ಕೃತಿ-ಇತಿಹಾಸದ ಬಗ್ಗೆ ನಮಗೆ ಇರುವ ಬದ್ಧತೆಯನ್ನು ಇದು ಪ್ರತಿನಿಧಿಸುತ್ತದೆ. ಪ್ರೇಕ್ಷಕರಿಗೆ ಸಂಪೂರ್ಣ ದೃಶ್ಯ ವೈಭವವನ್ನು ನೀಡಲು ಚಿತ್ರತಂಡಕ್ಕೆ ಇನ್ನಷ್ಟು ಸಮಯ ಬೇಕಾಗಿದೆ. ಹಾಗಾಗಿ ‘ಆದಿಪುರುಷ್​’ ಚಿತ್ರ ಜೂನ್​ 16ರಂದು ರಿಲೀಸ್​ ಆಗಲಿದೆ. ಭಾರತವು ಹೆಮ್ಮೆ ಪಡುವಂತಹ ಸಿನಿಮಾ ಮಾಡಲು ನಾವು ಪಣತೊಟ್ಟಿದ್ದೇವೆ. ನಾವು ಮುಂದುವರಿಯಲು ನಿಮ್ಮ ಪ್ರೀತಿ, ಬೆಂಬಲ ಇರಲಿ’ ಎಂದು ಓಂ ರಾವತ್​ ಈ ಹಿಂದೆ ಟ್ವೀಟ್​ ಮಾಡಿದ್ದರು.

ಹೆಚ್ಚಿನ ಸಿನಿಮಾ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್​ ಮಾಡಿ.

Published On - 9:09 pm, Tue, 17 January 23

ಸಿದ್ದರಾಮಯ್ಯ ಪಾರ್ವತಿ ಅವರನ್ನು ಮದುವೆ ಆಗಿದ್ದೇ ತಪ್ಪಾ? ಸಿಎಂ ಇಬ್ರಾಹಿಂ
ಸಿದ್ದರಾಮಯ್ಯ ಪಾರ್ವತಿ ಅವರನ್ನು ಮದುವೆ ಆಗಿದ್ದೇ ತಪ್ಪಾ? ಸಿಎಂ ಇಬ್ರಾಹಿಂ
ಮಹಾರಾಷ್ಟ್ರದ ದೇವಸ್ಥಾನದಲ್ಲಿ ಡೋಲು ಬಾರಿಸಿದ ಪ್ರಧಾನಿ ಮೋದಿ
ಮಹಾರಾಷ್ಟ್ರದ ದೇವಸ್ಥಾನದಲ್ಲಿ ಡೋಲು ಬಾರಿಸಿದ ಪ್ರಧಾನಿ ಮೋದಿ
ಮೈಸೂರು ದಸರಾದಲ್ಲಿ ಗಿಡ್ಡ ಕಾಲಿನ ಬಂಡೂರು ಕುರಿಯೇ ಆಕರ್ಷಣೆ
ಮೈಸೂರು ದಸರಾದಲ್ಲಿ ಗಿಡ್ಡ ಕಾಲಿನ ಬಂಡೂರು ಕುರಿಯೇ ಆಕರ್ಷಣೆ
ಲಾಯರ್ ಜಗದೀಶ್ ವಿಚಾರಣೆ ನಡೆಸುವ ಸುಳಿವು ಕೊಟ್ಟ ಕಿಚ್ಚ: ವಿಡಿಯೋ
ಲಾಯರ್ ಜಗದೀಶ್ ವಿಚಾರಣೆ ನಡೆಸುವ ಸುಳಿವು ಕೊಟ್ಟ ಕಿಚ್ಚ: ವಿಡಿಯೋ
ಪಿಡಿಒ, ಕಾರ್ಯದರ್ಶಿಗಳ ಹೋರಾಟಕ್ಕೆ ಬೆಂಬಲ ಘೋಷಿಸಿದ ಕುಮಾರಸ್ವಾಮಿ,ವಿಜಯೇಂದ್ರ
ಪಿಡಿಒ, ಕಾರ್ಯದರ್ಶಿಗಳ ಹೋರಾಟಕ್ಕೆ ಬೆಂಬಲ ಘೋಷಿಸಿದ ಕುಮಾರಸ್ವಾಮಿ,ವಿಜಯೇಂದ್ರ
ಶನಿವಾರ ಭಕ್ತರ ಪರಾಕಾಷ್ಠೆ-ತಿಮ್ಮಪ್ಪನ ದರ್ಶನಕ್ಕೆ ಕಾಯಬೇಕು 18 ಗಂಟೆ...
ಶನಿವಾರ ಭಕ್ತರ ಪರಾಕಾಷ್ಠೆ-ತಿಮ್ಮಪ್ಪನ ದರ್ಶನಕ್ಕೆ ಕಾಯಬೇಕು 18 ಗಂಟೆ...
ನಾಮಿನೇಷನ್ ತೂಗುಗತ್ತಿ ಜೊತೆ ಕುತೂಹಲ ಮೂಡಿಸಿದ ಕಿಚ್ಚನ ಪಂಚಾಯ್ತಿ
ನಾಮಿನೇಷನ್ ತೂಗುಗತ್ತಿ ಜೊತೆ ಕುತೂಹಲ ಮೂಡಿಸಿದ ಕಿಚ್ಚನ ಪಂಚಾಯ್ತಿ
Daily Devotional: ನವರಾತ್ರಿ ಮೂರನೇ ದಿನ ಚಂದ್ರಘಂಟಾ ದೇವಿ ಆರಾಧನೆ
Daily Devotional: ನವರಾತ್ರಿ ಮೂರನೇ ದಿನ ಚಂದ್ರಘಂಟಾ ದೇವಿ ಆರಾಧನೆ
Nithya Bhavishya: ನವರಾತ್ರಿಯ ಮೂರನೇ ದಿನದ ರಾಶಿ ಭವಿಷ್ಯ ತಿಳಿಯಿರಿ
Nithya Bhavishya: ನವರಾತ್ರಿಯ ಮೂರನೇ ದಿನದ ರಾಶಿ ಭವಿಷ್ಯ ತಿಳಿಯಿರಿ
ಶ್ರೀರಂಗಪಟ್ಟಣ ದಸರಾ ವೇದಿಕೆಗೆ ಶಿವಣ್ಣ ಎಂಟ್ರಿ; ಅಭಿಮಾನಿಗಳಿಗೆ ಭಾರಿ ಖುಷಿ
ಶ್ರೀರಂಗಪಟ್ಟಣ ದಸರಾ ವೇದಿಕೆಗೆ ಶಿವಣ್ಣ ಎಂಟ್ರಿ; ಅಭಿಮಾನಿಗಳಿಗೆ ಭಾರಿ ಖುಷಿ