Prabhas: ರಾಮಾಯಣ ಆಧಾರಿತ ‘ಆದಿಪುರುಷ್’ ಚಿತ್ರಕ್ಕೆ ಟ್ರೋಲ್​ ಕಾಟ;​ ನೆಟ್ಟಿಗರ ಅಸಮಾಧಾನಕ್ಕೆ ಕಾರಣ ಏನು?

Adipurush Teaser Troll: ‘ಆದಿಪುರುಷ್ ಟೀಸರ್​ನಲ್ಲಿ ರಾವಣನನ್ನು ನೋಡಿದರೆ ಅಲ್ಲಾವುದ್ದೀನ್​ ಖಿಲ್ಜಿ ನೋಡಿದಂತೆ ಆಗುತ್ತಿದೆ. ಇದಕ್ಕಿಂತ ರಾಮಾಯಣ ಸೀರಿಯಲ್​ ಎಷ್ಟೋ ಚೆನ್ನಾಗಿತ್ತು’ ಎಂದು ನೆಟ್ಟಿಗರು ಖಾರವಾಗಿ ಪ್ರತಿಕ್ರಿಯಿಸಿದ್ದಾರೆ.

Prabhas: ರಾಮಾಯಣ ಆಧಾರಿತ ‘ಆದಿಪುರುಷ್’ ಚಿತ್ರಕ್ಕೆ ಟ್ರೋಲ್​ ಕಾಟ;​ ನೆಟ್ಟಿಗರ ಅಸಮಾಧಾನಕ್ಕೆ ಕಾರಣ ಏನು?
ಪ್ರಭಾಸ್, ಸೈಫ್​ ಅಲಿ ಖಾನ್​
Follow us
| Updated By: ಮದನ್​ ಕುಮಾರ್​

Updated on: Oct 03, 2022 | 12:13 PM

ಭಾರಿ ನಿರೀಕ್ಷೆ ಮೂಡಿಸಿದ್ದ ‘ಆದಿಪುರುಷ್​’ ಚಿತ್ರದ ಟೀಸರ್​ (Adipurush Teaser) ಬಿಡುಗಡೆ ಆಗಿದೆ. ಆಯೋಧ್ಯೆಯಲ್ಲಿ ಅದ್ದೂರಿ ಕಾರ್ಯಕ್ರಮದ ಮೂಲಕ ಭಾನುವಾರ (ಅ.2) ಟೀಸರ್​ ರಿಲೀಸ್​ ಮಾಡಲಾಯಿತು. ಪ್ರಭಾಸ್​ (Prabhas) ಅಭಿಮಾನಿಗಳು ಈ ಟೀಸರ್​ ನೋಡಿ ಮೆಚ್ಚುಗೆ ಸೂಚಿಸಿದ್ದಾರೆ. ಆದರೆ ಒಂದು ವರ್ಗದ ನೆಟ್ಟಿಗರು ಸಿಕ್ಕಾಪಟ್ಟೆ ಟ್ರೋಲ್​ (Troll) ಮಾಡುತ್ತಿದ್ದಾರೆ. ಅದಕ್ಕೆ ಕಾರಣ ಆಗಿರುವುದು ಕಳಪೆ ಗ್ರಾಫಿಕ್ಸ್​! ಈ ಚಿತ್ರಕ್ಕೆ ಓಂ ರಾವತ್​ ನಿರ್ದೇಶನ ಮಾಡುತ್ತಿದ್ದು, ಬಿಗ್​ ಬಜೆಟ್​ನಲ್ಲಿ ನಿರ್ಮಾಣ ಆಗುತ್ತಿದೆ. ಬಹುಕೋಟಿ ರೂಪಾಯಿ ಖರ್ಚು ಮಾಡಿದ್ದರೂ ಕೂಡ ಗ್ರಾಫಿಕ್ಸ್​ ಯಾಕೆ ಇಷ್ಟು ಕಳಪೆ ಆಗಿದೆ ಎಂದು ನೆಟ್ಟಿಗರು ಪ್ರಶ್ನೆ ಮಾಡುತ್ತಿದ್ದಾರೆ. ಸದ್ಯ ಸೋಶಿಯಲ್​ ಮೀಡಿಯಾದಲ್ಲಿ ಈ ಬಗ್ಗೆ ಸಖತ್​ ಚರ್ಚೆ ನಡೆಯುತ್ತಿದೆ.

ರಾಮಾಯಣದ ಕಥೆಯನ್ನು ಇಟ್ಟುಕೊಂಡು ‘ಆದಿಪುರುಷ್​’ ಚಿತ್ರ ಮಾಡಲಾಗುತ್ತಿದೆ. ಈ ಸಿನಿಮಾದಲ್ಲಿ ಪ್ರಭಾಸ್​ ಅವರಿಗೆ ರಾಮನ ಪಾತ್ರವಿದೆ. ಸೀತೆಯಾಗಿ ಕೃತಿ ಸನೋನ್​ ಅಭಿನಯಿಸುತ್ತಿದ್ದಾರೆ. ರಾವಣನ ಪಾತ್ರದಲ್ಲಿ ಸೈಫ್​ ಅಲಿ ಖಾನ್​ ಅಬ್ಬರಿಸಲಿದ್ದಾರೆ. ಪೌರಾಣಿಕ ಸಿನಿಮಾಗಳನ್ನು ಕಟ್ಟಿಕೊಡಲು ಅತ್ಯಾಧುನಿಕ ಗ್ರಾಫಿಕ್ಸ್​ ತಂತ್ರಜ್ಞಾನ ಬಳಸಬೇಕಾಗುತ್ತದೆ. ಈ ವಿಚಾರದಲ್ಲಿ ‘ಆದಿಪುರುಷ್’ ತಂಡ ಎಡವಿದೆ ಎಂಬುದು ನೆಟ್ಟಿಗರ ಅಭಿಪ್ರಾಯ.

ಇದನ್ನೂ ಓದಿ
Image
Adipurush: ಪ್ರಭಾಸ್​ ಫ್ಯಾನ್ಸ್​ ಮನ ಗೆದ್ದ ‘ಆದಿಪುರುಷ್​’ ಟೀಸರ್​; ಇಲ್ಲಿದೆ ರಾಮ-ರಾವಣರ ಮುಖಾಮುಖಿ
Image
Adipurush Teaser: ‘ಆದಿಪುರುಷ್​’ ಟೀಸರ್​ ಬಿಡುಗಡೆ; ಅಯೋಧ್ಯೆಯಲ್ಲಿ ರಾಮನಾಗಿ ದರ್ಶನ ನೀಡಿದ ಪ್ರಭಾಸ್​
Image
Prabhas: ದೊಡ್ಡಪ್ಪನ ನಿಧನದ ನೋವಿಟ್ಟುಕೊಂಡು ಕೆಲಸಕ್ಕೆ ಬಂದ ಪ್ರಭಾಸ್​; ‘ಸಲಾರ್​’ ಶೂಟಿಂಗ್​ ಮತ್ತೆ ಶುರು
Image
Prabhas: ದೊಡ್ಡಪ್ಪನ ಅಂತ್ಯ ಸಂಸ್ಕಾರಕ್ಕೆ ಬಂದ ಫ್ಯಾನ್ಸ್​ಗೆ ಊಟದ ವ್ಯವಸ್ಥೆ ಮಾಡಿಸಿ ಕಾಳಜಿ ತೋರಿದ ಪ್ರಭಾಸ್​

ರಾಮನ ಪರಾಕ್ರಮ, ರಾವಣನ ಹತ್ತು ತಲೆ, ವಾನರ ಸೇನೆಯ ದಾಳಿ, ರಾಮಸೇತು ನಿರ್ಮಾಣ ಸೇರಿದಂತೆ ಅನೇಕ ದೃಶ್ಯಗಳ ಝಲಕ್​ ಈ ಟೀಸರ್​ನಲ್ಲಿ ಕಾಣಿಸಿದೆ. ಅವುಗಳನ್ನು ತೋರಿಸಿರುವ ರೀತಿ ಕಂಡು ಜನರು ನೆಗೆಟಿವ್​ ಕಮೆಂಟ್​ ಮಾಡುತ್ತಿದ್ದಾರೆ. ಇದರಲ್ಲಿನ ಗ್ರಾಫಿಕ್ಸ್​ ನೋಡಿದರೆ ಕಾರ್ಟೂನ್​ ನೆಟ್​ವರ್ಕ್​ ನೆನಪಾಗುತ್ತದೆ ಎಂದು ನೆಟ್ಟಿಗರು ಟೀಕಿಸಿದ್ದಾರೆ.

‘ರಾವಣನನ್ನು ನೋಡಿದರೆ ಅಲ್ಲಾವುದ್ದೀನ್​ ಖಿಲ್ಜಿ ನೋಡಿದಂತೆ ಆಗುತ್ತಿದೆ. ಮಂಗಗಳ ಬದಲಿಗೆ ಬೇರೆ ಯಾವುದೇ ಪ್ರಾಣಿಗಳು ಕಾಣಿಸುತ್ತಿವೆ. ಈ ಚಿತ್ರಕ್ಕಿಂತ ದೂರದರ್ಶನದಲ್ಲಿ ಪ್ರಸಾರವಾದ ರಾಮಾಯಣ ಸೀರಿಯಲ್​ ಎಷ್ಟೋ ಚೆನ್ನಾಗಿತ್ತು. ಸಿನಿಮಾ ಮಾಡುವುದಕ್ಕಿಂತ ಮುನ್ನ ಒಂದಷ್ಟು ಅಧ್ಯಯನ ಮಾಡಿಕೊಳ್ಳಬೇಕು’ ಎಂದು ನೆಟ್ಟಿಗರು ಖಾರವಾಗಿ ಕಮೆಂಟ್​ ಮಾಡುತ್ತಿದ್ದಾರೆ.

ಟೀಕೆಗಳು ಏನೇ ಇರಲಿ, ಯೂಟ್ಯೂಬ್​ನಲ್ಲಿ ಜನರು ಮುಗಿಬಿದ್ದು ‘ಆದಿಪುರುಷ್​​’ ಟೀಸರ್​ ನೋಡುತ್ತಿದ್ದಾರೆ. ಕನ್ನಡ, ಹಿಂದಿ, ತೆಲುಗು, ಮಲಯಾಳಂ ಹಾಗೂ ತಮಿಳು ವರ್ಷನ್​ ಸೇರಿ ಕೇವಲ 16 ಗಂಟೆಗಳಲ್ಲಿ 75 ಮಿಲಿಯನ್​ಗಿಂತಲೂ (7.5 ಕೋಟಿ) ಹೆಚ್ಚು ಬಾರಿ ವೀಕ್ಷಣೆ ಕಂಡಿದೆ. ಸದ್ಯ ಜನರಿಂದ ವ್ಯಕ್ತವಾಗಿರುವ ನೆಗೆಟಿವ್​ ಪ್ರತಿಕ್ರಿಯೆಗಳಿಗೆ ಚಿತ್ರತಂಡ ಯಾವ ರೀತಿ ಪ್ರತಿಕ್ರಿಯೆ ನೀಡಲಿದೆ ಎಂಬುದನ್ನು ಕಾದು ನೋಡಬೇಕು.

ಹೆಚ್ಚಿನ ಸಿನಿಮಾ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್​ ಮಾಡಿ.

‘ಕೆಟ್ಟ ಕಾರಣಕ್ಕೆ ಕನ್ನಡ ಚಿತ್ರರಂಗ ಸುದ್ದಿ ಆಗುತ್ತಿದೆ, ಆದರೆ..’: ಕಿಚ್ಚ
‘ಕೆಟ್ಟ ಕಾರಣಕ್ಕೆ ಕನ್ನಡ ಚಿತ್ರರಂಗ ಸುದ್ದಿ ಆಗುತ್ತಿದೆ, ಆದರೆ..’: ಕಿಚ್ಚ
ಕನ್ನಡದಲ್ಲಿ ಔಷಧಿ ಚೀಟಿ ಬರೆದು ಗಮನಸೆಳೆದ ಮತ್ತೋರ್ವ ಡಾಕ್ಟರ್
ಕನ್ನಡದಲ್ಲಿ ಔಷಧಿ ಚೀಟಿ ಬರೆದು ಗಮನಸೆಳೆದ ಮತ್ತೋರ್ವ ಡಾಕ್ಟರ್
ಅಂತಿಂಥ ಕಳ್ಳಿ ನಾನಲ್ಲ; ಇವರು ಸೀರೆ ಕದಿಯೋದೇ ಗೊತ್ತಾಗಲ್ಲ!
ಅಂತಿಂಥ ಕಳ್ಳಿ ನಾನಲ್ಲ; ಇವರು ಸೀರೆ ಕದಿಯೋದೇ ಗೊತ್ತಾಗಲ್ಲ!
ಶಾಸಕ ಯತ್ನಾಳ್ ವಿರುದ್ಧ ಎಫ್​ಐಆರ್ ದಾಖಲು: ಬಾಗಲಕೋಟೆ ಎಸ್​ಪಿ ಹೇಳಿದ್ದಿಷ್ಟು
ಶಾಸಕ ಯತ್ನಾಳ್ ವಿರುದ್ಧ ಎಫ್​ಐಆರ್ ದಾಖಲು: ಬಾಗಲಕೋಟೆ ಎಸ್​ಪಿ ಹೇಳಿದ್ದಿಷ್ಟು
ಹೆಗಲಿಗೆ ಬ್ಯಾಗ್, ಕೈಯಲ್ಲಿ ಚಪ್ಪಲಿ ಹಿಡಿದು ಕೆಸರಲ್ಲೇ ನಡೆಯಬೇಕು ಮಕ್ಕಳು
ಹೆಗಲಿಗೆ ಬ್ಯಾಗ್, ಕೈಯಲ್ಲಿ ಚಪ್ಪಲಿ ಹಿಡಿದು ಕೆಸರಲ್ಲೇ ನಡೆಯಬೇಕು ಮಕ್ಕಳು
ಜಮ್ಮು ಕಾಶ್ಮೀರದಲ್ಲಿ ಬಸ್ ಅಪಘಾತ; 3 ಬಿಎಸ್‌ಎಫ್ ಯೋಧರು ಸಾವು
ಜಮ್ಮು ಕಾಶ್ಮೀರದಲ್ಲಿ ಬಸ್ ಅಪಘಾತ; 3 ಬಿಎಸ್‌ಎಫ್ ಯೋಧರು ಸಾವು
20 ರೂ. ನೀರಿನ ಬಾಟಲಿ ಕೊಳ್ಳಲು ಬಂದವನು ಮಾಡಿದ್ದೇನು ನೋಡಿ!
20 ರೂ. ನೀರಿನ ಬಾಟಲಿ ಕೊಳ್ಳಲು ಬಂದವನು ಮಾಡಿದ್ದೇನು ನೋಡಿ!
ಬ್ಯಾಕ್ ಟು ಬ್ಯಾಕ್ ವಿಕೆಟ್ ಉರುಳಿಸಿದ ಆಕಾಶ್ ದೀಪ್
ಬ್ಯಾಕ್ ಟು ಬ್ಯಾಕ್ ವಿಕೆಟ್ ಉರುಳಿಸಿದ ಆಕಾಶ್ ದೀಪ್
ದರ್ಶನ್ ಹೊರಗೆ ಬಂದ್ರೆ ಖುಷಿ; ತಪ್ಪು ಮಾಡಿದ್ದರೆ ಕ್ರಮ ಆಗಲಿ: ಗುರು ಕಿರಣ್
ದರ್ಶನ್ ಹೊರಗೆ ಬಂದ್ರೆ ಖುಷಿ; ತಪ್ಪು ಮಾಡಿದ್ದರೆ ಕ್ರಮ ಆಗಲಿ: ಗುರು ಕಿರಣ್
ಭಗವಾನ್ ಜಗನ್ನಾಥನ ವಿಗ್ರಹ ಖರೀದಿಸಿ, ಡಿಜಿಟಲ್ ಪೇಮೆಂಟ್ ಮಾಡಿದ ಪಿಎಂ ಮೋದಿ
ಭಗವಾನ್ ಜಗನ್ನಾಥನ ವಿಗ್ರಹ ಖರೀದಿಸಿ, ಡಿಜಿಟಲ್ ಪೇಮೆಂಟ್ ಮಾಡಿದ ಪಿಎಂ ಮೋದಿ