AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

‘ಕಲ್ಕಿ 2898 ಎಡಿ’ ಬಿಡುಗಡೆ ಮುಂದಕ್ಕೆ ಹೋಗತ್ತೆ ಎಂದವರಿಗೆ ಇಲ್ಲಿದೆ ಖಡಕ್​ ಉತ್ತರ

ಬಹುನಿರೀಕ್ಷಿತ ‘ಕಲ್ಕಿ 2898 ಎಡಿ’ ಚಿತ್ರದ ಹಾಡಿನ ಚಿತ್ರೀಕರಣ ರಾಮೋಜಿ ಫಿಲ್ಮ್​ ಸಿಟಿಯಲ್ಲಿ ನಡೆಯುತ್ತಿದೆ. ಅದರಲ್ಲಿ ಪ್ರಭಾಸ್​ ಮತ್ತು ಬಾಲಿವುಡ್​ ನಟಿ ದಿಶಾ ಪಟಾನಿ ಅವರು ಪಾಲ್ಗೊಂಡಿದ್ದಾರೆ. ಮೇ 9ರಂದು ಈ ಸಿನಿಮಾ ಬಿಡುಗಡೆ ಆಗಲಿದೆ. ಸಿನಿಮಾದ ಕೆಲಸಗಳು ಬಿರುಸಿನಿಂದ ಸಾಗುತ್ತಿವೆ. ಈ ನಡುವೆ ಬಿಡುಗಡೆ ದಿನಾಂಕದ ಬಗ್ಗೆ ಕೆಲವರು ಗಾಸಿಪ್​ ಹಬ್ಬಿಸಿದ್ದಾರೆ.

‘ಕಲ್ಕಿ 2898 ಎಡಿ’ ಬಿಡುಗಡೆ ಮುಂದಕ್ಕೆ ಹೋಗತ್ತೆ ಎಂದವರಿಗೆ ಇಲ್ಲಿದೆ ಖಡಕ್​ ಉತ್ತರ
ಪ್ರಭಾಸ್​
ಮದನ್​ ಕುಮಾರ್​
|

Updated on: Feb 25, 2024 | 3:13 PM

Share

ಟಾಲಿವುಡ್​ ನಟ ಪ್ರಭಾಸ್​ (Prabhas) ಅವರು ‘ಕಲ್ಕಿ 2898 ಎಡಿ’ ಸಿನಿಮಾದಲ್ಲಿ ಬ್ಯುಸಿ ಆಗಿದ್ದಾರೆ. ಇತ್ತೀಚೆಗೆ ತೆಲುಗಿನ ಕೆಲವು ಬಹುನಿರೀಕ್ಷಿತ ಸಿನಿಮಾಗಳ ರಿಲೀಸ್​ ಡೇಟ್​ ಬಗ್ಗೆ ಇಲ್ಲಸಲ್ಲದ ಗಾಸಿಪ್​ಗಳು ಹಬ್ಬಿವೆ. ಬಿಗ್​ ಪ್ರಾಜೆಕ್ಟ್​ಗಳ ಬಗ್ಗೆ ಇಂಥ ಗಾಳಿಸುದ್ದಿ ಹಬ್ಬುವುದು ಕಾಮನ್​. ಆದರೆ ಬಿಡುಗಡೆ ದಿನಾಂಕದ ಬಗ್ಗೆ ಗಾಸಿಪ್​ ಹರಿದಾಡಿದರೆ ಇನ್ನುಳಿದ ಚಿತ್ರಗಳ ಮೇಲೆ ಕೂಡ ಪರಿಣಾಮ ಬೀರುತ್ತದೆ. ಕಲ್ಕಿ 2898 ಎಡಿ’ (Kalki 2898 AD) ಸಿನಿಮಾದ ಬಿಡುಗಡೆ ದಿನಾಂಕ ಮುಂದಕ್ಕೆ ಹೋಗುತ್ತೆ ಎಂದು ಕೆಲವರು ಗಾಸಿಪ್​ ಹಬ್ಬಿಸಿದ್ದಾರೆ. ಅಂಥವರಿಗೆ ನಿರ್ಮಾಪಕರ ಕಡೆಯಿಂದ ಖಡಕ್​ ಉತ್ತರ ಸಿಕ್ಕಿದೆ.

ಮೇ 9ರಂದು ‘ಕಲ್ಕಿ 2898 ಎಡಿ’ ಸಿನಿಮಾ ಬಿಡುಗಡೆ ಆಗಲಿದೆ. ಈ ಸಿನಿಮಾದಲ್ಲಿ ಪ್ರಭಾಸ್​ ಜೊತೆ ದೀಪಿಕಾ ಪಡುಕೋಣೆ, ದಿಶಾ ಪಟಾನಿ, ಅಮಿತಾಭ್​ ಬಚ್ಚನ್​, ಕಮಲ್​ ಹಾಸನ್​ ಮುಂತಾದ ಘಟಾನುಘಟಿಗಳು ನಟಿಸುತ್ತಿದ್ದಾರೆ. ಹಾಗಾಗಿ ಪ್ಯಾನ್​ ಇಂಡಿಯಾ ಮಟ್ಟದಲ್ಲಿ ಈ ಚಿತ್ರ ಅಬ್ಬರಿಸಲಿದೆ. ಸದ್ಯಕ್ಕೆ ಹಾಡಿನ ಶೂಟಿಂಗ್​ ನಡೆಯುತ್ತಿದ್ದು, ಅದರ ಬಗ್ಗೆ ನಿರ್ಮಾಣ ಸಂಸ್ಥೆ ‘ವೈಜಯಂತಿ ಮೂವೀಸ್​’ ಮೂಲಕ ಅಪ್​ಡೇಟ್​ ಸಿಕ್ಕಿದೆ.

ಎಷ್ಟೇ ಎಚ್ಚರಿಕೆ ವಹಿಸಿದರೂ ‘ಕಲ್ಕಿ 2898 ಎಡಿ’ ಶೂಟಿಂಗ್​ ಸೆಟ್​ನಿಂದ ಫೋಟೋ ಲೀಕ್​

ರಾಮೋಜಿ ಫಿಲ್ಮ್​ ಸಿಟಿಯಲ್ಲಿ ನಡೆಯುತ್ತಿರುವ ‘ಕಲ್ಕಿ 2898 ಎಡಿ’ ಸಿನಿಮಾದ ಹಾಡಿನ ಶೂಟಿಂಗ್​ನಲ್ಲಿ ಪ್ರಭಾಸ್​ ಮತ್ತು ದಿಶಾ ಪಟಾನಿ ಪಾಲ್ಗೊಂಡಿದ್ದಾರೆ. ಈ ವೇಳೆ ಪ್ರಭಾಸ್​ ಅವರು ಹಾಡಿನ ತಾಳಕ್ಕೆ ತಕ್ಕಂತೆ ಕಾಲು ಕುಣಿಸುತ್ತಿರುವ ವಿಡಿಯೋವನ್ನು ಸೋಶಿಯಲ್​ ಮೀಡಿಯಾದಲ್ಲಿ ನಿರ್ಮಾಪಕರು ಶೇರ್​ ಮಾಡಿಕೊಂಡಿದ್ದಾರೆ. ಆ ಪೋಸ್ಟ್​ಗೆ ನೀಡಿದ ಕ್ಯಾಪ್ಷನ್​ನಲ್ಲಿ ಬಿಡುಗಡೆ ದಿನಾಂಕ ಮೇ 9 ಎಂಬುದನ್ನು ಮತ್ತೊಮ್ಮೆ ಸ್ಪಷ್ಟಪಡಿಸಲಾಗಿದೆ.

‘ವೈಜಯಂತಿ ಮೂವೀಸ್​’ ಎಕ್ಸ್​ (ಟ್ವಿಟರ್​) ಪೋಸ್ಟ್​:

ಕೆಲವೇ ದಿನಗಳ ಹಿಂದೆ ‘ಪುಷ್ಪ 2’ ಸಿನಿಮಾದ ರಿಲೀಸ್​ ಡೇಟ್​ ಬಗ್ಗೆಯೂ ಗಾಸಿಪ್​ ಹಬ್ಬಿತ್ತು. ಆದರೆ ಆ ಸಿನಿಮಾದ ಬಿಡುಗಡೆ ದಿನಾಂಕ ಮುಂದೂಡಿಕೆ ಆಗುವುದು ಸಾಧ್ಯವೇ ಇಲ್ಲ ಎಂದು ಚಿತ್ರತಂಡದವರು ಖಚಿತಪಡಿಸಿದ್ದರು. ಈಗ ‘ಕಲ್ಕಿ 2898 ಎಡಿ’ ಸಿನಿಮಾದವರು ಕೂಡ ತಮ್ಮ ರಿಲೀಸ್​ ದಿನಾಂಕದಲ್ಲಿ ಯಾವುದೇ ಬದಲಾವಣೆ ಇಲ್ಲ ಎಂಬುದನ್ನು ಈ ಮೂಲಕ ತಿಳಿಸಿದ್ದಾರೆ. ಪ್ರಭಾಸ್​ ಅಭಿಮಾನಿಗಳು ‘ಕಲ್ಕಿ 2898 ಎಡಿ’ ಚಿತ್ರದ ಮೇಲೆ ಭಾರಿ ನಿರೀಕ್ಷೆ ಇಟ್ಟುಕೊಂಡಿದ್ದಾರೆ. ಇದು ಸೈನ್​ ಫಿಕ್ಷನ್​ ಸಿನಿಮಾ ಆದ್ದರಿಂದ ಪ್ರಭಾಸ್​ ಅವರ ವೃತ್ತಿಜೀವನದಲ್ಲಿ ಡಿಫರೆಂಟ್​ ಪ್ರಯತ್ನವಾಗಿ ಗಮನ ಸೆಳೆಯಲಿದೆ. ‘ಮಹಾನಟಿ’ ಖ್ಯಾತಿಯ ನಾಗ್​ ಅಶ್ವಿನ್​ ಅವರು ಈ ಸಿನಿಮಾಗೆ ನಿರ್ದೇಶನ ಮಾಡುತ್ತಿದ್ದಾರೆ. ಅದ್ದೂರಿ ಬಜೆಟ್​ನಲ್ಲಿ ‘ಕಲ್ಕಿ 2898 ಎಡಿ’ ನಿರ್ಮಾಣ ಆಗುತ್ತಿದೆ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

Follow Us
Madan Kumar
Madan Kumar

ಮಾಧ್ಯಮ ಲೋಕದಲ್ಲಿ ಕಳೆದ 10 ವರ್ಷಗಳಿಂದ ಸಕ್ರಿಯವಾಗಿದ್ದೇನೆ. ಕನ್ನಡದ ವಿವಿಧ ಪ್ರತಿಷ್ಠಿತ ಮಾಧ್ಯಮಗಳಲ್ಲಿ ಕೆಲಸ ಮಾಡಿದ ಅನುಭವ ಹೊಂದಿದ್ದೇನೆ. ಸಿನಿಮಾ ವರದಿಗಾರಿಕೆ ಮತ್ತು ವಿಮರ್ಶೆಯಲ್ಲಿ ಪರಿಣತಿ ಇದೆ. 2014ರಿಂದ 2019ರ ತನಕ ವಿಜಯವಾಣಿ ದಿನ ಪತ್ರಿಕೆಯಲ್ಲಿ ಸಿನಿಮಾ ವರದಿಗಾರನಾಗಿ ಕೆಲಸ ಮಾಡಿ ಅನುಭವ ಪಡೆದಿದ್ದೇನೆ. ಬಳಿಕ ವಿಜಯ ಕರ್ನಾಟಕ ಡಿಜಿಟಲ್ (ಟೈಮ್ಸ್​ ಇಂಟರ್​ನೆಟ್​) ಸಂಸ್ಥೆಯಲ್ಲಿ ಕಂಟೆಂಟ್​ ಪ್ರೊಡ್ಯೂಸರ್​ ಆಗಿ ಕೆಲಸ ಮಾಡಿದ್ದೇನೆ. ಪ್ರಸ್ತುತ ‘ಟಿವಿ9 ಕನ್ನಡ ಡಿಜಿಟಲ್​’ನ ಸಿನಿಮಾ/ಮನರಂಜನೆ ವಿಭಾಗದಲ್ಲಿ ಕೆಲಸ ಮಾಡುತ್ತಿದ್ದೇನೆ. ಎಲ್ಲ ಭಾಷೆಯ ಸಿನಿಮಾಗಳ ವೀಕ್ಷಣೆಯಲ್ಲಿ ಆಸಕ್ತಿ ಇದೆ. ಸದಾ ಕನ್ನಡ-ಇಂಗ್ಲಿಷ್​ ಸಾಹಿತ್ಯದ ವಿದ್ಯಾರ್ಥಿ.

Read More
ವಚನಾನಂದಶ್ರೀಗಳ ವೈದ್ಯಕೀಯ ಪರೀಕ್ಷೆ ಬಗ್ಗೆ ಡಾಕ್ಟರ್ ಸ್ಫೋಟಕ ಹೇಳಿಕೆ
ವಚನಾನಂದಶ್ರೀಗಳ ವೈದ್ಯಕೀಯ ಪರೀಕ್ಷೆ ಬಗ್ಗೆ ಡಾಕ್ಟರ್ ಸ್ಫೋಟಕ ಹೇಳಿಕೆ
ಭೀಕರ ಬಿರುಗಾಳಿಗೆ ಶೀಟ್​ ಸಮೇತ ಗಾಳಿಯಲ್ಲಿ ಹಾರಿದ ವ್ಯಕ್ತಿ
ಭೀಕರ ಬಿರುಗಾಳಿಗೆ ಶೀಟ್​ ಸಮೇತ ಗಾಳಿಯಲ್ಲಿ ಹಾರಿದ ವ್ಯಕ್ತಿ
ಮಾಧುಸ್ವಾಮಿ ದಿಢೀರ್ ಪ್ರತ್ಯಕ್ಷ:ಸ್ವಪಕ್ಷದ ನಾಯಕರ ನಡೆಗೆ ಬಹಿರಂಗ ಅಸಮಾಧಾನ
ಮಾಧುಸ್ವಾಮಿ ದಿಢೀರ್ ಪ್ರತ್ಯಕ್ಷ:ಸ್ವಪಕ್ಷದ ನಾಯಕರ ನಡೆಗೆ ಬಹಿರಂಗ ಅಸಮಾಧಾನ
ಪೋಕ್ಸೋ ಕೇಸ್​​ ವಿಚಾರಣೆ ಬಳಿಕ ವಚನಾನಂದ ಶ್ರೀ ಫಸ್ಟ್​​ ರಿಯಾಕ್ಷನ್​​
ಪೋಕ್ಸೋ ಕೇಸ್​​ ವಿಚಾರಣೆ ಬಳಿಕ ವಚನಾನಂದ ಶ್ರೀ ಫಸ್ಟ್​​ ರಿಯಾಕ್ಷನ್​​
ರಾಹುಲ್,ಸೋನಿಯಾ ಅತ್ಯಾಪ್ತನನ್ನು ಬಿಟ್ಟು ಸತೀಶನ್ ಆಯ್ಕೆ ಹಿಂದಿನ ಕಾರಣವೇನು?
ರಾಹುಲ್,ಸೋನಿಯಾ ಅತ್ಯಾಪ್ತನನ್ನು ಬಿಟ್ಟು ಸತೀಶನ್ ಆಯ್ಕೆ ಹಿಂದಿನ ಕಾರಣವೇನು?
ನಾಯಂಡಹಳ್ಳಿ ಗೋದಾಮಿನಲ್ಲಿ ಅಗ್ನಿ ಅನಾಹುತ: ಧಗ ಧಗಿಸಿದ ವಸ್ತುಗಳು
ನಾಯಂಡಹಳ್ಳಿ ಗೋದಾಮಿನಲ್ಲಿ ಅಗ್ನಿ ಅನಾಹುತ: ಧಗ ಧಗಿಸಿದ ವಸ್ತುಗಳು
ಬುರ್ಖಾ ಧರಿಸಿ ಬಂದು ಚಿನ್ನದಂಗಡಿ ಮಾಲೀಕನ ಕಣ್ಣಿಗೆ ಖಾರದಪುಡಿ ಎರಚಿದ ಮಹಿಳೆ
ಬುರ್ಖಾ ಧರಿಸಿ ಬಂದು ಚಿನ್ನದಂಗಡಿ ಮಾಲೀಕನ ಕಣ್ಣಿಗೆ ಖಾರದಪುಡಿ ಎರಚಿದ ಮಹಿಳೆ
ಮೋದಿ ರೀತಿ ಬೆಂಗಾವಲು ಪಡೆ ವಾಹನ ಕಡಿಮೆ ಮಾಡ್ತಾರಾ ಸಿಎಂ? ಹೇಳಿದ್ದೇನು ನೋಡಿ
ಮೋದಿ ರೀತಿ ಬೆಂಗಾವಲು ಪಡೆ ವಾಹನ ಕಡಿಮೆ ಮಾಡ್ತಾರಾ ಸಿಎಂ? ಹೇಳಿದ್ದೇನು ನೋಡಿ
ಅಜ್ಜನ ಹೆಸರ ಮೇಲೆ ಶಾಸಕರಾಗಿ ಪ್ರಮಾಣ ವಚನ ಸ್ವೀಕರಿಸಿದ ಸಮರ್ಥ್ ಶಾಮನೂರು!
ಅಜ್ಜನ ಹೆಸರ ಮೇಲೆ ಶಾಸಕರಾಗಿ ಪ್ರಮಾಣ ವಚನ ಸ್ವೀಕರಿಸಿದ ಸಮರ್ಥ್ ಶಾಮನೂರು!
ದಿಲೀಪ್​​ರ ಉಳಿಸಿಕೊಳ್ಳಲು ಪತ್ನಿ ಮಾಡಿದ ಪ್ರಯತ್ನಗಳ ವಿವರಿಸಿದ ಆಟೋ ಚಾಲಕ
ದಿಲೀಪ್​​ರ ಉಳಿಸಿಕೊಳ್ಳಲು ಪತ್ನಿ ಮಾಡಿದ ಪ್ರಯತ್ನಗಳ ವಿವರಿಸಿದ ಆಟೋ ಚಾಲಕ