AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Prabhas: ‘ಕಲ್ಕಿ 2898 ಎಡಿ’ ಚಿತ್ರದಲ್ಲಿ ಇರಲಿದೆ ಆರು ಸಾವಿರ ವರ್ಷಗಳ ಕಥೆ

‘ಕಲ್ಕಿ 2898 ಎಡಿ ಸಿನಿಮಾದ ಕಥೆ ಮಹಾಭಾರತದಿಂದ ಆರಂಭ ಆಗಲಿದೆ. ಚಿತ್ರದ ಕಥೆ ಕೊನೆಗೊಳ್ಳೋದು 2898 ಎ.ಡಿ.ಯಲ್ಲಿ. ಸುಮಾರು 6 ಸಾವಿರ ವರ್ಷಗಳ ಕಥೆ ಸಿನಿಮಾದಲ್ಲಿ ಇರಲಿದೆ. ಹೊಸ ಜಗತ್ತುಗಳನ್ನು ಸೃಷ್ಟಿಸಲು ನಾಗ್ ಅಶ್ವಿನ್ ಪ್ರಯತ್ನಿಸಿದ್ದಾರೆ. ಮಹಾಭಾರತದ ಕೃಷ್ಣನಿಂದಲೇ ಕಥೆ ಆರಂಭ ಆಗಲಿದೆಯಂತೆ.  

Prabhas: ‘ಕಲ್ಕಿ 2898 ಎಡಿ’ ಚಿತ್ರದಲ್ಲಿ ಇರಲಿದೆ ಆರು ಸಾವಿರ ವರ್ಷಗಳ ಕಥೆ
ಪ್ರಭಾಸ್
ರಾಜೇಶ್ ದುಗ್ಗುಮನೆ
|

Updated on: Feb 27, 2024 | 7:00 AM

Share

ಪ್ರಭಾಸ್ ನಟನೆಯ ‘ಸಲಾರ್’ ಸಿನಿಮಾ (Salaar Movie) ಹಿಟ್ ಆಗಿದೆ. ಈ ಬೆನ್ನಲ್ಲೇ ಅವರು ‘ಕಲ್ಕಿ 2898 ಎಡಿ’ ಚಿತ್ರದ ಕೆಲಸಗಳಲ್ಲಿ ಬ್ಯುಸಿ ಆಗಿದ್ದಾರೆ. ಈ ಚಿತ್ರದ ನಿರ್ದೇಶಕ ನಾಗ್ ಅಶ್ವಿನ್ ಮೇಲೆ ಪ್ರಭಾಸ್​ಗೆ ಸಂಪೂರ್ಣ ಭರವಸೆ ಇದೆ. ಅಮಿತಾಭ್ ಬಚ್ಚನ್, ಕಮಲ್ ಹಾಸನ್, ದೀಪಿಕಾ ಪಡುಕೋಣೆ, ದಿಶಾ ಪಟಾಣಿ ಪ್ರಮುಖ ಪಾತ್ರಗಳಲ್ಲಿ ಕಾಣಿಸಿಕೊಂಡಿರುವುದರಿಂದ ಸಿನಿಮಾ ಬಗ್ಗೆ ನಿರೀಕ್ಷೆ ಹೆಚ್ಚಿದೆ. ಈಗ ನಿರ್ದೇಶಕ ನಾಗ್ ಅಶ್ವಿನ್ ಅವರು ಒಂದು ಅಚ್ಚರಿಯ ವಿಚಾರ ಬಿಚ್ಚಿಟ್ಟಿದ್ದಾರೆ. ಈ ಸಿನಿಮಾದಲ್ಲಿ ಆರು ಸಾವಿರ ವರ್ಷಗಳ ಕಥೆ ಇರಲಿದೆಯಂತೆ. ಈ ವಿಚಾರ ಕೇಳಿ ಪ್ರಭಾಸ್ ಫ್ಯಾನ್ಸ್ ಥ್ರಿಲ್ ಆಗಿದ್ದಾರೆ.

ದೆಹಲಿ ಸಮೀಪದ ಗುರುಗ್ರಾಮದಲ್ಲಿ ನಡೆದ ಕಾರ್ಯಕ್ರಮ ಒಂದರಲ್ಲಿ ನಾಗ್ ಅಶ್ವಿನ್ ಭಾಗವಹಿಸಿದ್ದಾರೆ. ಈ ವೇಳೆ ಅವರು ಸಿನಿಮಾ ಟೈಮ್​ಲೈನ್ ಬಗ್ಗೆ ಮಾತನಾಡಿದ್ದಾರೆ. ‘ಮಹಾಭಾರತದಿಂದ ಆರಂಭ ಆಗುವ ಸಿನಿಮಾದ ಕಥೆ 2898 ಎಡಿಯಲ್ಲಿ ಕೊನೆಗೊಳ್ಳಲಿದೆ. ಸುಮಾರು ಆರು ಸಾವಿರ ವರ್ಷಗಳ ಕಥೆ ಸಿನಿಮಾದಲ್ಲಿದೆ. ನಾವು ಜಗತ್ತುಗಳನ್ನು ಸೃಷ್ಟಿಸಲು ಪ್ರಯತ್ನಿಸಿದ್ದೇವೆ’ ಎಂದಿದ್ದಾರೆ ಅವರು. ಮಹಾಭಾರತದಲ್ಲಿ ಕೃಷ್ಣ ಇದ್ದಾನೆ. ಅವನಿಂದಲೇ ಕಥೆ ಆರಂಭ ಆಗಲಿದೆಯಂತೆ.

ಇದನ್ನೂ ಓದಿ: ಯಾಕೆ ಹೀಗೆ ಆಗಿದ್ದಾರೆ ಪ್ರಭಾಸ್​? ಬಾಡಿದ ಮುಖ ನೋಡಿ ಅಭಿಮಾನಿಗಳಿಗೆ ಚಿಂತೆ

‘ನಾವು ಸಾಕಷ್ಟು ಸೆಟ್​ಗಳನ್ನು ಹಾಕಬೇಕಿತ್ತು. ಹೊಸ ರೀತಿಯ ವಾಹನಗಳನ್ನು ಸಿದ್ಧಪಡಿಸಬೇಕಿತ್ತು. ಇವುಗಳ ನಿರ್ಮಾಣಕ್ಕೆ ಸಾಕಷ್ಟು ಸಮಯ ಹಿಡಿಯಿತು’ ಎಂದು ಹೇಳಿದ್ದಾರೆ ನಾಗ್ ಅಶ್ವಿನ್. ಪ್ರಭಾಸ್ ಅಭಿಮಾನಿಗಳು ಈ ಸಿನಿಮಾ ಕಣ್ತುಂಬಿಕೊಳ್ಳಲು ಕಾದಿದ್ದಾರೆ. ಈ ಚಿತ್ರ ದೊಡ್ಡ ಬಜೆಟ್​ನಲ್ಲಿ ಸಿದ್ಧವಾಗುತ್ತಿದೆ. ಈ ಸಿನಿಮಾ ಮೇ 9ರಂದು ರಿಲೀಸ್ ಆಗಲಿದೆ.

‘ವೈಜಯಂತಿ ಮೂವೀಸ್​’ ಎಕ್ಸ್​ (ಟ್ವಿಟರ್​) ಪೋಸ್ಟ್​:

ಇತ್ತೀಚೆಗೆ ಸಿನಿಮಾ ರಿಲೀಸ್ ಮುಂದಕ್ಕೆ ಹೋಗಿದೆ ಎನ್ನುವ ಸುದ್ದಿ ಹರಿದಾಡಿತ್ತು. ಇದಕ್ಕೆ ನಿರ್ಮಾಪಕ ಸಿ. ಅಶ್ವಿನಿ ದತ್ ಅವರು ಉತ್ತರ ನೀಡಿದ್ದರು.  ನಿರ್ಮಾಣ ಸಂಸ್ಥೆ ‘ವೈಜಯಂತಿ ಮೂವೀಸ್​’ ಮೂಲಕ ಸಿನಿಮಾದ ರಿಲೀಸ್ ದಿನಾಂಕದ ಬಗ್ಗೆ ಸ್ಪಷ್ಟನೆ ನೀಡಲಾಗಿದೆ.

ಇನ್ನಷ್ಟು ಸಿನಿಮಾ ಸುದ್ದಿಗಾಗಿ ಇಲ್ಲಿ ಕ್ಲಿಕ್​ ಮಾಡಿ

ಸಿಕ್ಕ ಸಿಕ್ಕ ಜಾನುವಾರುಗಳನ್ನು ತಿಂದು ತೇಗಿದ ಚಿರತೆ ಬೋನಿಗೆ ಬಿತ್ತು
ಸಿಕ್ಕ ಸಿಕ್ಕ ಜಾನುವಾರುಗಳನ್ನು ತಿಂದು ತೇಗಿದ ಚಿರತೆ ಬೋನಿಗೆ ಬಿತ್ತು
ಗೋಪಾಲ್‌ಗಂಜ್‌ನ ದೇವಸ್ಥಾನದಿಂದ 50 ಲಕ್ಷ ಮೌಲ್ಯದ ಚಿನ್ನದ ಕಿರೀಟ, ಆಭರಣ ಕಳವು
ಗೋಪಾಲ್‌ಗಂಜ್‌ನ ದೇವಸ್ಥಾನದಿಂದ 50 ಲಕ್ಷ ಮೌಲ್ಯದ ಚಿನ್ನದ ಕಿರೀಟ, ಆಭರಣ ಕಳವು
ಕಾಳಹಸ್ತಿ ದೇವಸ್ಥಾನದಲ್ಲಿ ನೆಲದ ಮೇಲೆ ಕುಳಿತು ಪ್ರಸಾದ ಸೇವಿಸಿದ ರಷ್ಯನ್ನರು
ಕಾಳಹಸ್ತಿ ದೇವಸ್ಥಾನದಲ್ಲಿ ನೆಲದ ಮೇಲೆ ಕುಳಿತು ಪ್ರಸಾದ ಸೇವಿಸಿದ ರಷ್ಯನ್ನರು
ಪ್ರೇಮ್ ಕಹಾನಿ: 19 ವರ್ಷದ ಯುವತಿ ಹಿಂದೆ ಬಿದ್ದು ದುರಂತ ಅಂತ್ಯಕಂಡ 40 ಅಂಕಲ್
ಪ್ರೇಮ್ ಕಹಾನಿ: 19 ವರ್ಷದ ಯುವತಿ ಹಿಂದೆ ಬಿದ್ದು ದುರಂತ ಅಂತ್ಯಕಂಡ 40 ಅಂಕಲ್
ಬೇರೆ ಮಹಿಳೆ ಜತೆ ಲವ್ವಿಡವ್ವಿ: ಹೆಂಡ್ತಿ ಹತ್ಯೆಗೆ ಸುಪಾರಿ ಕೊಟ್ಟ ಪತಿ
ಬೇರೆ ಮಹಿಳೆ ಜತೆ ಲವ್ವಿಡವ್ವಿ: ಹೆಂಡ್ತಿ ಹತ್ಯೆಗೆ ಸುಪಾರಿ ಕೊಟ್ಟ ಪತಿ
ಡಿಕೆಶಿ ಪ್ರಾರ್ಥನೆಗೆ ಅಸ್ತು ಎಂದಳಾ ಶಕ್ತಿದೇವಿ? ಅರ್ಚಕರು ಹೇಳಿದ್ದಿಷ್ಟು
ಡಿಕೆಶಿ ಪ್ರಾರ್ಥನೆಗೆ ಅಸ್ತು ಎಂದಳಾ ಶಕ್ತಿದೇವಿ? ಅರ್ಚಕರು ಹೇಳಿದ್ದಿಷ್ಟು
ಸಂಜು ಹೊಡೆತಕ್ಕೆ ಸಿಲುಕಿ ನೋವಿನಿಂದ ನರಳಾಡಿದ ಅಂಪೈರ್
ಸಂಜು ಹೊಡೆತಕ್ಕೆ ಸಿಲುಕಿ ನೋವಿನಿಂದ ನರಳಾಡಿದ ಅಂಪೈರ್
ರೈಲಿನಿಂದ ಬೀಳುತ್ತಿದ್ದ ಪ್ರಯಾಣಿಕನನ್ನು ಕಾಪಾಡಿದ ಸ್ಟೇಷನ್ ಮಾಸ್ಟರ್
ರೈಲಿನಿಂದ ಬೀಳುತ್ತಿದ್ದ ಪ್ರಯಾಣಿಕನನ್ನು ಕಾಪಾಡಿದ ಸ್ಟೇಷನ್ ಮಾಸ್ಟರ್
ಗೃಹಲಕ್ಷ್ಮೀ ಹಣದ ಬಗ್ಗೆ ಸ್ಫೋಟಕ ಮಾಹಿತಿ ಬಿಚ್ಚಿಟ್ಟ ಸಿಎಂ ಆರ್ಥಿಕ ಸಲಹೆಗಾರ
ಗೃಹಲಕ್ಷ್ಮೀ ಹಣದ ಬಗ್ಗೆ ಸ್ಫೋಟಕ ಮಾಹಿತಿ ಬಿಚ್ಚಿಟ್ಟ ಸಿಎಂ ಆರ್ಥಿಕ ಸಲಹೆಗಾರ
ಮೋದಿಯಿಂದ ನಾಳೆ ಉದ್ಘಾಟನೆಯಾಗಲಿದೆ ಅಸ್ಸಾಂನ ಅತಿದೊಡ್ಡ ವಿಮಾನ ನಿಲ್ದಾಣ
ಮೋದಿಯಿಂದ ನಾಳೆ ಉದ್ಘಾಟನೆಯಾಗಲಿದೆ ಅಸ್ಸಾಂನ ಅತಿದೊಡ್ಡ ವಿಮಾನ ನಿಲ್ದಾಣ