AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Kalki 2898 AD Twitter Review: ಹೇಗಿದೆ ‘ಕಲ್ಕಿ 2898 ಎಡಿ’ ಸಿನಿಮಾ? ಇಲ್ಲಿದೆ ಟ್ವಿಟರ್ ವಿಮರ್ಶೆ

‘ಕಲ್ಕಿ 2898 ಎಡಿ’ ಸಿನಿಮಾ ಇಂದು (ಜೂನ್ 27) ರಿಲೀಸ್ ಆಗಿದೆ. ಪ್ರಭಾಸ್, ಕಮಲ್ ಹಾಸನ್, ದೀಪಿಕಾ ಪಡುಕೋಣೆ, ಅಮಿತಾಭ್ ಬಚ್ಚನ್ ಅವರು ‘ಕಲ್ಕಿ 2898 ಎಡಿ’ ಸಿನಿಮಾದಲ್ಲಿ ನಟಿಸಿದ್ದಾರೆ. ಕಲ್ಕಿ ‘ಚಿತ್ರಕ್ಕೆ ಐತಿಹಾಸಿಕದ ಟಚ್ ಕೊಟ್ಟಿದ್ದು ಸಹಕಾರಿ ಆಗಿದೆ. ಕೊನೆಯ 30 ನಿಮಿಷ ಥ್ರಿಲ್ಲಿಂಗ್ ಆಗಿದೆ’ ಎಂದು ಫ್ಯಾನ್ಸ್ ಹೇಳಿದ್ದಾರೆ.

Kalki 2898 AD Twitter Review: ಹೇಗಿದೆ ‘ಕಲ್ಕಿ 2898 ಎಡಿ’ ಸಿನಿಮಾ? ಇಲ್ಲಿದೆ ಟ್ವಿಟರ್ ವಿಮರ್ಶೆ
ಕಲ್ಕಿ 2898 ಎಡಿ
ರಾಜೇಶ್ ದುಗ್ಗುಮನೆ
|

Updated on: Jun 27, 2024 | 7:28 AM

Share

ಪ್ರಭಾಸ್ (Prabhas) ನಟನೆಯ, ನಾಗ್ ಅಶ್ವಿನ್ ನಿರ್ದೇಶನದ ‘ಕಲ್ಕಿ 2898 ಎಡಿ’ ಸಿನಿಮಾ ಇಂದು (ಜೂನ್ 27) ರಿಲೀಸ್ ಆಗಿದೆ. ಚಿತ್ರಕ್ಕೆ ಎಲ್ಲ ಕಡೆಗಳಿಂದ ಮೆಚ್ಚುಗೆ ಸಿಗುತ್ತಿದೆ. 600 ಕೋಟಿ ರೂಪಾಯಿ ಬಜೆಟ್​ನಲ್ಲಿ ಸಿದ್ಧವಾದ ಈ ಚಿತ್ರವನ್ನು ಜನರು ಹೊಗಳುತ್ತಿದ್ದಾರೆ. ಒಬ್ಬೊಬ್ಬರಿಗೆ ಒಂದೊಂದು ವಿಚಾರ ಇಷ್ಟ ಆಗಿದೆ. ಸೋಶಿಯಲ್ ಮೀಡಿಯಾದಲ್ಲಿ ಈ ಬಗ್ಗೆ ಟ್ವೀಟ್ ಮಾಡುವ ಕೆಲಸ ಆಗುತ್ತಿದೆ.

ಪ್ರಭಾಸ್, ಕಮಲ್ ಹಾಸನ್, ದೀಪಿಕಾ ಪಡುಕೋಣೆ, ಅಮಿತಾಭ್ ಬಚ್ಚನ್ ಅವರು ‘ಕಲ್ಕಿ 2898 ಎಡಿ’ ಸಿನಿಮಾದಲ್ಲಿ ನಟಿಸಿದ್ದಾರೆ. ಸೈನ್ಸ್​ ಫಿಕ್ಷನ್ ಶೈಲಿಯಲ್ಲಿ ಸಿನಿಮಾ ಮೂಡಿ ಬಂದಿದೆ. ಚಿತ್ರದ ಟ್ರೇಲರ್ ರಿಲೀಸ್ ಆದಾಗಲೇ ಜನರಿಗೆ ಸಾಕಷ್ಟು ನಿರೀಕ್ಷೆ ಇತ್ತು. ಸಿನಿಮಾ ನೋಡಿದವರಿಗೆ ನಿರೀಕ್ಷೆ ಸುಳ್ಳಲಾಗಿಲ್ಲ.

ಇದನ್ನೂ ಓದಿ: ಸಾವಿರ ಕೋಟಿ ರೂಪಾಯಿ ಕಲೆಕ್ಷನ್​ ಮಾಡುತ್ತಾ ‘ಕಲ್ಕಿ 2898 ಎಡಿ’ ಸಿನಿಮಾ?

‘ಕಲ್ಕಿ ಸಿನಿಮಾ ಸೈನ್ಸ್ ಫಿಕ್ಷನ್ ಚಿತ್ರ. ಇದು ಸಾಮಾನ್ಯ ಕಥೆಗಿಂತ ಭಿನ್ನವಾಗಿದೆ. ಸಿನಿಮಾದ ದೃಶ್ಯಗಳು ಹಾಗೂ ಸಿನಿಮಾದಲ್ಲಿ ಬರೋ ಜಗತ್ತನ್ನು ಕಟ್ಟಿಕೊಟ್ಟಿರೋದು ಇದೇ ಮೊದಲು’ ಎಂದು ಕೆಲವರು ಬರೆದುಕೊಂಡಿದ್ದಾರೆ. ‘ಇದನ್ನು ಥಿಯೇಟರ್​ನಲ್ಲೇ ನೋಡಬೇಕು. ನಾಗ್ ಅಶ್ವಿನ್, ಪ್ರಭಾಸ್ ಬಗ್ಗೆ ಹೆಮ್ಮೆ ಆಗುತ್ತದೆ. ಅಮಿತಾಭ್ ಬಚ್ಚನ್ ಅವರು ತಾವು ಏಕೆ ಲೆಜೆಂಡ್ ಎಂಬುದನ್ನು ಸಾಬೀತು ಮಾಡುತ್ತಾರೆ’ ಎಂದಿದ್ದಾರೆ ಕೆಲವರು.

‘ಕಲ್ಕಿ ಚಿತ್ರಕ್ಕೆ ಐತಿಹಾಸಿಕದ ಟಚ್ ಕೊಟ್ಟಿದ್ದು ಸಹಕಾರಿ ಆಗಿದೆ. ಕೊನೆಯ 30 ನಿಮಿಷ ಥ್ರಿಲ್ಲಿಂಗ್ ಆಗಿದೆ. ಪ್ರಭಾಸ್, ಅಮಿತಾಭ್ ಬಚ್ಚನ್, ದೀಪಿಕಾ ಪಡುಕೋಣೆ ಅವರ ನಟನೆ ಅದ್ಭುತ. ಕಲರ್ ಗ್ರೇಡಿಂಗ್ ಅದ್ಭುತವಾಗಿದೆ’ ಎಂದು ಅವರು ಬರೆದುಕೊಂಡಿದ್ದಾರೆ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

ಸಿದ್ದರಾಮಯ್ಯ ಅಧಿಕಾರದಿಂದ ಇಳಿಯೋದು ಯಾವಾಗ?: ಕೋಡಿಮಠ ಶ್ರೀ ಸ್ಪೋಟಕ ಭವಿಷ್ಯ
ಸಿದ್ದರಾಮಯ್ಯ ಅಧಿಕಾರದಿಂದ ಇಳಿಯೋದು ಯಾವಾಗ?: ಕೋಡಿಮಠ ಶ್ರೀ ಸ್ಪೋಟಕ ಭವಿಷ್ಯ
ಕೂಲಿ ಕಾರ್ಮಿಕ ಮಹಿಳೆ ಜತೆ ಲವ್ವಿಡವ್ವಿ: ಗುತ್ತಿಗೆದಾರನನ್ನ ಕೊಚ್ಚಿ ಕೊಂದ್ರು
ಕೂಲಿ ಕಾರ್ಮಿಕ ಮಹಿಳೆ ಜತೆ ಲವ್ವಿಡವ್ವಿ: ಗುತ್ತಿಗೆದಾರನನ್ನ ಕೊಚ್ಚಿ ಕೊಂದ್ರು
ನಮ್ಮಿಂದ ತಪ್ಪಾಗಿದೆ ಕ್ಷಮಿಸಿ: ಕನ್ನಡಿಗರ ಕ್ಷಮೆಯಾಚಿಸಿದ ಬೆಂಗಳೂರಿನ ಕಂಪನಿ
ನಮ್ಮಿಂದ ತಪ್ಪಾಗಿದೆ ಕ್ಷಮಿಸಿ: ಕನ್ನಡಿಗರ ಕ್ಷಮೆಯಾಚಿಸಿದ ಬೆಂಗಳೂರಿನ ಕಂಪನಿ
ರಿಜ್ವಾನ್ ಬ್ಯಾಟಿಂಗ್‌ ಅರ್ಧಕ್ಕೆ ನಿಲ್ಲಿಸಿ ವಾಪಸ್ ಕರೆಸಿಕೊಂಡ ನಾಯಕ
ರಿಜ್ವಾನ್ ಬ್ಯಾಟಿಂಗ್‌ ಅರ್ಧಕ್ಕೆ ನಿಲ್ಲಿಸಿ ವಾಪಸ್ ಕರೆಸಿಕೊಂಡ ನಾಯಕ
ಸಿದ್ರಾಮಯ್ಯ ಮೈಸೂರು, ಡಿಕೆಶಿ ಕನಕಪುರ ಇದ್ದಂಗೆ ನಮ್ಗೆ ಆಗ್ಬೇಕು ಎಂದ ಖರ್ಗೆ
ಸಿದ್ರಾಮಯ್ಯ ಮೈಸೂರು, ಡಿಕೆಶಿ ಕನಕಪುರ ಇದ್ದಂಗೆ ನಮ್ಗೆ ಆಗ್ಬೇಕು ಎಂದ ಖರ್ಗೆ
ಲಕ್ಕುಂಡಿಯಲ್ಲಿ ಸಿಕ್ಕ ನಿಧಿಗೆ ವಾರಸುದಾರರು ಯಾರು? ಕಾಯ್ದೆ ಹೇಳೋದೇನು?
ಲಕ್ಕುಂಡಿಯಲ್ಲಿ ಸಿಕ್ಕ ನಿಧಿಗೆ ವಾರಸುದಾರರು ಯಾರು? ಕಾಯ್ದೆ ಹೇಳೋದೇನು?
ಹಿಮಾಚಲದ ಕಟ್ಟಡದಲ್ಲಿ ಬೆಂಕಿ ಅವಘಡ; 8 ವರ್ಷದ ಮಗು ಸಾವು, ಹಲವರಿಗೆ ಗಾಯ
ಹಿಮಾಚಲದ ಕಟ್ಟಡದಲ್ಲಿ ಬೆಂಕಿ ಅವಘಡ; 8 ವರ್ಷದ ಮಗು ಸಾವು, ಹಲವರಿಗೆ ಗಾಯ
ಉಚ್ಛಾಟಿತ ಶಾಸಕ ಯತ್ನಾಳ್​ ಸಂಪರ್ಕದಲ್ಲಿದ್ಯಾ BJP ಹೈಕಮಾಂಡ್​?
ಉಚ್ಛಾಟಿತ ಶಾಸಕ ಯತ್ನಾಳ್​ ಸಂಪರ್ಕದಲ್ಲಿದ್ಯಾ BJP ಹೈಕಮಾಂಡ್​?
ತಮ್ಮ ಬಟ್ಟೆ ಬಗ್ಗೆ ಅಶ್ಲೀಲ ಕಾಮೆಂಟ್​ ಮಾಡಿದವರಿಗೆ ತಿರುಗೇಟು ಕೊಟ್ಟ ಶಾಸಕಿ
ತಮ್ಮ ಬಟ್ಟೆ ಬಗ್ಗೆ ಅಶ್ಲೀಲ ಕಾಮೆಂಟ್​ ಮಾಡಿದವರಿಗೆ ತಿರುಗೇಟು ಕೊಟ್ಟ ಶಾಸಕಿ
ಯೂಟ್ಯೂಬ್​​ನಲ್ಲಿರೋ ಟಾಕ್ಸಿಕ್’ ಟೀಸರ್​​ನ ಆ ದೃಶ್ಯಕ್ಕೆ ಬೀಳುತ್ತಾ ಕತ್ತರಿ?
ಯೂಟ್ಯೂಬ್​​ನಲ್ಲಿರೋ ಟಾಕ್ಸಿಕ್’ ಟೀಸರ್​​ನ ಆ ದೃಶ್ಯಕ್ಕೆ ಬೀಳುತ್ತಾ ಕತ್ತರಿ?