AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಹಿಂದಿ ಚಿತ್ರರಂಗದಲ್ಲಿ ಧೂಳಿಪಟವಾಯ್ತು ಪ್ರಭಾಸ್ ಹೆಸರು; ದಿಟ್ಟ ನಿರ್ಧಾರ ತೆಗೆದುಕೊಂಡ ಪ್ರಭಾಸ್​?

‘ರಾಧೆ ಶ್ಯಾಮ್​’ ಸಿನಿಮಾ ಬಗ್ಗೆ ಅಭಿಮಾನಿಗಳಿಗೆ ದೊಡ್ಡ ಮಟ್ಟದ ನಿರೀಕ್ಷೆ ಹುಟ್ಟಿತ್ತು. ಇದಕ್ಕೆ ಕಾರಣವಾಗಿದ್ದು ಚಿತ್ರದ ಟ್ರೇಲರ್. ಈ ಸಿನಿಮಾದ ಟ್ರೇಲರ್ ಭಿನ್ನ ಫೀಲ್​ ಕೊಟ್ಟಿದ್ದರಿಂದ ಸಿನಿಮಾ ಹಿಂದಿ ಹಕ್ಕನ್ನು ಕೊಂಡುಕೊಳ್ಳೋಕೆ ಅನೇಕರು ಮುಂದೆ ಬಂದಿದ್ದರು.

ಹಿಂದಿ ಚಿತ್ರರಂಗದಲ್ಲಿ ಧೂಳಿಪಟವಾಯ್ತು ಪ್ರಭಾಸ್ ಹೆಸರು; ದಿಟ್ಟ ನಿರ್ಧಾರ ತೆಗೆದುಕೊಂಡ ಪ್ರಭಾಸ್​?
ರಾಧೆ ಶ್ಯಾಮ್​
TV9 Web
| Edited By: |

Updated on: Mar 17, 2022 | 4:35 PM

Share

ನಟ ಪ್ರಭಾಸ್ ನಟನೆಯ ‘ಬಾಹುಬಲಿ’ ಸಿನಿಮಾ (Bahubali Movie) ಹಿಂದಿ ಚಿತ್ರರಂಗದಲ್ಲೂ ಮೋಡಿ ಮಾಡಿತ್ತು. ರಾಜಮೌಳಿ (SS Rajamouli) ನಿರ್ದೇಶನದ ಈ ಚಿತ್ರ ದೊಡ್ಡ ಮೊತ್ತದ ಕಲೆಕ್ಷನ್​ ಮಾಡಿತ್ತು. ಅದೇ ರೀತಿ ‘ರಾಧೆ ಶ್ಯಾಮ್​’ ಚಿತ್ರ ಕೂಡ ಹಿಂದಿ ಚಿತ್ರರಂಗದಲ್ಲಿ ದೊಡ್ಡ ಮಟ್ಟದಲ್ಲಿ ಯಶಸ್ಸು ಗಳಿಸಲಿದೆ ಎನ್ನಲಾಗಿತ್ತು. ಆದರೆ, ಲೆಕ್ಕಾಚಾರ ತಲೆಕೆಳಗಾಗಿದೆ. ಪ್ರಭಾಸ್​ ಅವರು ಈ ಸಿನಿಮಾದಿಂದ ಹಿಂದಿ ಚಿತ್ರರಂಗದಲ್ಲಿ ತೀವ್ರ ಮುಖಭಂಗ ಅನುಭವಿಸಿದ್ದಾರೆ. ಈ ಸಿನಿಮಾ 20 ಕೋಟಿ ರೂಪಾಯಿ ಗಳಿಕೆ ಮಾಡೋಕೂ ಒದ್ದಾಡುತ್ತಿದೆ. ಇದು ಪ್ರಭಾಸ್ (Prabhas) ಕರಿಯರ್​ನಲ್ಲೇ ದೊಡ್ಡ ಸೋಲು ಎಂದು ಬಣ್ಣಿಸಲಾಗುತ್ತಿದೆ.

‘ರಾಧೆ ಶ್ಯಾಮ್​’ ಸಿನಿಮಾ ಬಗ್ಗೆ ಅಭಿಮಾನಿಗಳಿಗೆ ದೊಡ್ಡ ಮಟ್ಟದ ನಿರೀಕ್ಷೆ ಹುಟ್ಟಿತ್ತು. ಇದಕ್ಕೆ ಕಾರಣವಾಗಿದ್ದು ಚಿತ್ರದ ಟ್ರೇಲರ್. ಈ ಸಿನಿಮಾದ ಟ್ರೇಲರ್ ಭಿನ್ನ ಫೀಲ್​ ಕೊಟ್ಟಿದ್ದರಿಂದ ಸಿನಿಮಾ ಹಿಂದಿ ಹಕ್ಕನ್ನು ಕೊಂಡುಕೊಳ್ಳೋಕೆ ಅನೇಕರು ಮುಂದೆ ಬಂದಿದ್ದರು. ಮೂಲಗಳ ಪ್ರಕಾರ, ‘ರಾಧೆ ಶ್ಯಾಮ್’ ಚಿತ್ರದ ಹಿಂದಿ ವರ್ಷನ್ ಹಂಚಿಕೆ ಹಕ್ಕು 100 ಕೋಟಿ ರೂಪಾಯಿಗೆ ಮಾರಾಟ ಆಗಿದೆ. ಆದರೆ, ಈ ಚಿತ್ರ ಹಿಂದಿ ಅವತರಣಿಕೆಯಲ್ಲಿ ಕಲೆಕ್ಟ್​ ಆಗಿದ್ದು 20 ಕೋಟಿ ರೂಪಾಯಿಗೂ ಕಡಿಮೆ.

‘ರಾಧೆ ಶ್ಯಾಮ್​’ ಸಿನಿಮಾ ಮೊದಲ ದಿನ (ಮಾರ್ಚ್​ 11) 4.5 ಕೋಟಿ ಕಲೆಕ್ಷನ್​ ಮಾಡಿತ್ತು. ಮಾರ್ಚ್​ 12ರಂದು 4.5 ಕೋಟಿ ರೂಪಾಯಿ, ಮಾರ್ಚ್​ 13ರಂದು 5 ಕೋಟಿ ಕಲೆಕ್ಷನ್​ ಮಾಡಿದೆ ಈ ಸಿನಿಮಾ. ನಂತರ ಈ ಚಿತ್ರದ ಕಲೆಕ್ಷನ್​ ಕುಸಿದಿದೆ. ಮಾರ್ಚ್​ 14 ಹಾಗೂ ಮಾರ್ಚ್​​ 15ರಂದು ಈ ಚಿತ್ರ ತಲಾ 1.15 ಕೋಟಿ ಗಳಿಸಿದೆ.  ಈ ಮೂಲಕ ಸಿನಿಮಾ ಹಿಂದಿ ಬಾಕ್ಸ್​ ಆಫೀಸ್​ನಲ್ಲಿ 16.65 ಕೋಟಿ ರೂಪಾಯಿ ಬಾಚಿಕೊಂಡಿದೆ.

ಅಲ್ಲು ಅರ್ಜುನ್ ನಟನೆಯ ‘ಪುಷ್ಪ’ ಸಿನಿಮಾ ಹಿಂದಿ ವರ್ಷನ್​ನಿಂದ 100 ಕೋಟಿ ರೂಪಾಯಿ ಬಾಕ್ಸ್ ಆಫೀಸ್​ ಕಲೆಕ್ಷನ್​ ಮಾಡಿತ್ತು. ಪ್ರಭಾಸ್ ಚಿತ್ರ ಕೂಡ ಇದೇ ಮಾದರಿಯಲ್ಲಿ ಕಲೆಕ್ಟ್​​​ ಮಾಡಲಿದೆ ಎಂದು ಹೇಳಲಾಗಿತ್ತು. ಆದರೆ, ಈ ವಿಚಾರ ತಲೆಕೆಳಗಾಗಿದೆ. ಪ್ರಭಾಸ್ ಆ್ಯಕ್ಷನ್​ ಶೈಲಿಯನ್ನು ಆಯ್ಕೆ ಮಾಡಿಕೊಳ್ಳದೆ ಒಂದು ಪ್ರೀತಿ-ಪ್ರೇಮದ ಕಥೆಯನ್ನು ಆಯ್ಕೆ ಮಾಡಿಕೊಂಡಿದ್ದರು. ಸಿನಿಮಾದಲ್ಲಿ ಯಾವುದೇ ಫೈಟ್​ ಇಲ್ಲ. ಇದು ಚಿತ್ರಕ್ಕೆ ದೊಡ್ಡ ಮಟ್ಟದಲ್ಲಿ ಹಿನ್ನಡೆ ತಂದಿತ್ತು. ಅವರು ಮಾಸ್ ಅವತಾರ ತಾಳದೆ ಇದ್ದಿದ್ದು ಪ್ರೇಕ್ಷಕರಿಗೆ ಕೊಂಚವೂ ಇಷ್ಟವಾಗಿಲ್ಲ.

ಪ್ರಭಾಸ್ ಈ ಸೋಲಿನಿಂದ ಅಸಮಾಧಾನಗೊಂಡಿದ್ದಾರೆ. ಮುಂದಿನ ದಿನಗಳಲ್ಲಿ ಸಿನಿಮಾ ಆಯ್ಕೆ ವೇಳೆ ಹೆಚ್ಚು ಗಮನವಹಿಸಲು ನಿರ್ಧರಿಸಿದ್ದಾರೆ. ಅಭಿಮಾನಿಗಳು ಇಷ್ಟಪಡುವ ಸಿನಿಮಾ  ಮಾಡೋಕೆ ಅವರು ಆದ್ಯತೆ ನೀಡಲು ನಿರ್ಧರಿಸಿದ್ದಾರೆ ಎನ್ನಲಾಗಿದೆ.

ಇದನ್ನೂ ಓದಿ: Radhe Shyam First Half Review: ಹೇಗಿದೆ ಪ್ರಭಾಸ್​ ನಟನೆಯ ‘ರಾಧೆ ಶ್ಯಾಮ್​’ ಸಿನಿಮಾದ ಮೊದಲಾರ್ಧ?; ಇಲ್ಲಿದೆ ರಿಪೋರ್ಟ್​

ಕರ್ನಾಟಕದಲ್ಲಿ ಮಗಿಯಲಿದೆ ಪ್ರಭಾಸ್ ಆಟ; ‘ರಾಧೆ ಶ್ಯಾಮ್​’ ಬಹುತೇಕ ಶೋಗಳು ಅಂತ್ಯ?

Follow Us
TV9 Web
TV9 Web

TV9 Kannada

Read More
ವೆನೆಜುವೆಲಾ ದರೋಡೆಕೋರನ ಮೇಲಿನ ವೈಮಾನಿಕ ದಾಳಿಯ ವಿಡಿಯೋ ಹಂಚಿಕೊಂಡ ಟ್ರಂಪ್
ವೆನೆಜುವೆಲಾ ದರೋಡೆಕೋರನ ಮೇಲಿನ ವೈಮಾನಿಕ ದಾಳಿಯ ವಿಡಿಯೋ ಹಂಚಿಕೊಂಡ ಟ್ರಂಪ್
ಬೆಳಗ್ಗೆ 10 ಗಂಟೆಗೆ ಕಚೇರಿಯಲ್ಲಿ ಹಾಜರಿರಬೇಕು: ಅಧಿಕಾರಿಗಳಿಗೆ ಸಿಎಂ ಸೂಚನೆ
ಬೆಳಗ್ಗೆ 10 ಗಂಟೆಗೆ ಕಚೇರಿಯಲ್ಲಿ ಹಾಜರಿರಬೇಕು: ಅಧಿಕಾರಿಗಳಿಗೆ ಸಿಎಂ ಸೂಚನೆ
ಮತ್ತೆ ವಿದೇಶಕ್ಕೆ ತೆರಳಿದ ಪ್ರಧಾನಿ ಮೋದಿ; ಫ್ರಾನ್ಸ್​, ಸ್ಲೋವಾಕಿಯಾಗೆ ಭೇಟಿ
ಮತ್ತೆ ವಿದೇಶಕ್ಕೆ ತೆರಳಿದ ಪ್ರಧಾನಿ ಮೋದಿ; ಫ್ರಾನ್ಸ್​, ಸ್ಲೋವಾಕಿಯಾಗೆ ಭೇಟಿ
ಮನಾಲಿಗೆ ಹೊರಟ ಪ್ರವಾಸಿಗರಿಂದ ಕುಲು-ಮಂಡಿ ಮಾರ್ಗದಲ್ಲಿ ಟ್ರಾಫಿಕ್ ಜಾಮ್
ಮನಾಲಿಗೆ ಹೊರಟ ಪ್ರವಾಸಿಗರಿಂದ ಕುಲು-ಮಂಡಿ ಮಾರ್ಗದಲ್ಲಿ ಟ್ರಾಫಿಕ್ ಜಾಮ್
ಪ್ರಥಮ ದರ್ಜೆ ನೌಕರನಿಗೆ ಚಪ್ಪಲಿ ಏಟು ಕೊಟ್ಟ ರೈತ! ಯಾಕೆ ಗೊತ್ತಾ?
ಪ್ರಥಮ ದರ್ಜೆ ನೌಕರನಿಗೆ ಚಪ್ಪಲಿ ಏಟು ಕೊಟ್ಟ ರೈತ! ಯಾಕೆ ಗೊತ್ತಾ?
ಬಿಡದಿ ಟೌನ್​ಶಿಪ್​ ಯೋಜನೆ ವಿರೋಧಿಸಿ ಜೂನ್ 22ರಂದು ಬೃಹತ್ ಪ್ರತಿಭಟನೆ!
ಬಿಡದಿ ಟೌನ್​ಶಿಪ್​ ಯೋಜನೆ ವಿರೋಧಿಸಿ ಜೂನ್ 22ರಂದು ಬೃಹತ್ ಪ್ರತಿಭಟನೆ!
ಕಲಬುರಗಿಯಲ್ಲಿ ನಕಲಿ ಡಿಎಪಿ ರಸಗೊಬ್ಬರ ಮಾರಾಟ: ರೈತರ ತೀವ್ರ ಆಕ್ರೋಶ
ಕಲಬುರಗಿಯಲ್ಲಿ ನಕಲಿ ಡಿಎಪಿ ರಸಗೊಬ್ಬರ ಮಾರಾಟ: ರೈತರ ತೀವ್ರ ಆಕ್ರೋಶ
ಬಿಡದಿ ಟೌನ್​ಶಿಪ್​​ ಯೋಜನೆ ಲೂಟಿ ಸ್ಕೀಮ್​​​ ಡೌಟೇ ಬೇಡ: ಕುಮಾರಸ್ವಾಮಿ
ಬಿಡದಿ ಟೌನ್​ಶಿಪ್​​ ಯೋಜನೆ ಲೂಟಿ ಸ್ಕೀಮ್​​​ ಡೌಟೇ ಬೇಡ: ಕುಮಾರಸ್ವಾಮಿ
ಕೊಲೆ ಆರೋಪಿಗಳಿಂದ ಜೈಲಿನಲ್ಲಿ ಪುಂಡಾಟ: ವಾರ್ಡನ್ ಮೇಲೆ ಹಲ್ಲೆ!
ಕೊಲೆ ಆರೋಪಿಗಳಿಂದ ಜೈಲಿನಲ್ಲಿ ಪುಂಡಾಟ: ವಾರ್ಡನ್ ಮೇಲೆ ಹಲ್ಲೆ!
‘ಯತ್ನಾಳ್ ಯಾವುದೋ ಒಂದು ಕೋತಿಯ ಬ್ರೀಡ್’: ಪ್ರದೀಪ್ ಈಶ್ವರ್ ವಾಗ್ದಾಳಿ
‘ಯತ್ನಾಳ್ ಯಾವುದೋ ಒಂದು ಕೋತಿಯ ಬ್ರೀಡ್’: ಪ್ರದೀಪ್ ಈಶ್ವರ್ ವಾಗ್ದಾಳಿ