AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಹಿಂದಿ ಚಿತ್ರರಂಗದಲ್ಲಿ ಧೂಳಿಪಟವಾಯ್ತು ಪ್ರಭಾಸ್ ಹೆಸರು; ದಿಟ್ಟ ನಿರ್ಧಾರ ತೆಗೆದುಕೊಂಡ ಪ್ರಭಾಸ್​?

‘ರಾಧೆ ಶ್ಯಾಮ್​’ ಸಿನಿಮಾ ಬಗ್ಗೆ ಅಭಿಮಾನಿಗಳಿಗೆ ದೊಡ್ಡ ಮಟ್ಟದ ನಿರೀಕ್ಷೆ ಹುಟ್ಟಿತ್ತು. ಇದಕ್ಕೆ ಕಾರಣವಾಗಿದ್ದು ಚಿತ್ರದ ಟ್ರೇಲರ್. ಈ ಸಿನಿಮಾದ ಟ್ರೇಲರ್ ಭಿನ್ನ ಫೀಲ್​ ಕೊಟ್ಟಿದ್ದರಿಂದ ಸಿನಿಮಾ ಹಿಂದಿ ಹಕ್ಕನ್ನು ಕೊಂಡುಕೊಳ್ಳೋಕೆ ಅನೇಕರು ಮುಂದೆ ಬಂದಿದ್ದರು.

ಹಿಂದಿ ಚಿತ್ರರಂಗದಲ್ಲಿ ಧೂಳಿಪಟವಾಯ್ತು ಪ್ರಭಾಸ್ ಹೆಸರು; ದಿಟ್ಟ ನಿರ್ಧಾರ ತೆಗೆದುಕೊಂಡ ಪ್ರಭಾಸ್​?
ರಾಧೆ ಶ್ಯಾಮ್​
TV9 Web
| Edited By: |

Updated on: Mar 17, 2022 | 4:35 PM

Share

ನಟ ಪ್ರಭಾಸ್ ನಟನೆಯ ‘ಬಾಹುಬಲಿ’ ಸಿನಿಮಾ (Bahubali Movie) ಹಿಂದಿ ಚಿತ್ರರಂಗದಲ್ಲೂ ಮೋಡಿ ಮಾಡಿತ್ತು. ರಾಜಮೌಳಿ (SS Rajamouli) ನಿರ್ದೇಶನದ ಈ ಚಿತ್ರ ದೊಡ್ಡ ಮೊತ್ತದ ಕಲೆಕ್ಷನ್​ ಮಾಡಿತ್ತು. ಅದೇ ರೀತಿ ‘ರಾಧೆ ಶ್ಯಾಮ್​’ ಚಿತ್ರ ಕೂಡ ಹಿಂದಿ ಚಿತ್ರರಂಗದಲ್ಲಿ ದೊಡ್ಡ ಮಟ್ಟದಲ್ಲಿ ಯಶಸ್ಸು ಗಳಿಸಲಿದೆ ಎನ್ನಲಾಗಿತ್ತು. ಆದರೆ, ಲೆಕ್ಕಾಚಾರ ತಲೆಕೆಳಗಾಗಿದೆ. ಪ್ರಭಾಸ್​ ಅವರು ಈ ಸಿನಿಮಾದಿಂದ ಹಿಂದಿ ಚಿತ್ರರಂಗದಲ್ಲಿ ತೀವ್ರ ಮುಖಭಂಗ ಅನುಭವಿಸಿದ್ದಾರೆ. ಈ ಸಿನಿಮಾ 20 ಕೋಟಿ ರೂಪಾಯಿ ಗಳಿಕೆ ಮಾಡೋಕೂ ಒದ್ದಾಡುತ್ತಿದೆ. ಇದು ಪ್ರಭಾಸ್ (Prabhas) ಕರಿಯರ್​ನಲ್ಲೇ ದೊಡ್ಡ ಸೋಲು ಎಂದು ಬಣ್ಣಿಸಲಾಗುತ್ತಿದೆ.

‘ರಾಧೆ ಶ್ಯಾಮ್​’ ಸಿನಿಮಾ ಬಗ್ಗೆ ಅಭಿಮಾನಿಗಳಿಗೆ ದೊಡ್ಡ ಮಟ್ಟದ ನಿರೀಕ್ಷೆ ಹುಟ್ಟಿತ್ತು. ಇದಕ್ಕೆ ಕಾರಣವಾಗಿದ್ದು ಚಿತ್ರದ ಟ್ರೇಲರ್. ಈ ಸಿನಿಮಾದ ಟ್ರೇಲರ್ ಭಿನ್ನ ಫೀಲ್​ ಕೊಟ್ಟಿದ್ದರಿಂದ ಸಿನಿಮಾ ಹಿಂದಿ ಹಕ್ಕನ್ನು ಕೊಂಡುಕೊಳ್ಳೋಕೆ ಅನೇಕರು ಮುಂದೆ ಬಂದಿದ್ದರು. ಮೂಲಗಳ ಪ್ರಕಾರ, ‘ರಾಧೆ ಶ್ಯಾಮ್’ ಚಿತ್ರದ ಹಿಂದಿ ವರ್ಷನ್ ಹಂಚಿಕೆ ಹಕ್ಕು 100 ಕೋಟಿ ರೂಪಾಯಿಗೆ ಮಾರಾಟ ಆಗಿದೆ. ಆದರೆ, ಈ ಚಿತ್ರ ಹಿಂದಿ ಅವತರಣಿಕೆಯಲ್ಲಿ ಕಲೆಕ್ಟ್​ ಆಗಿದ್ದು 20 ಕೋಟಿ ರೂಪಾಯಿಗೂ ಕಡಿಮೆ.

‘ರಾಧೆ ಶ್ಯಾಮ್​’ ಸಿನಿಮಾ ಮೊದಲ ದಿನ (ಮಾರ್ಚ್​ 11) 4.5 ಕೋಟಿ ಕಲೆಕ್ಷನ್​ ಮಾಡಿತ್ತು. ಮಾರ್ಚ್​ 12ರಂದು 4.5 ಕೋಟಿ ರೂಪಾಯಿ, ಮಾರ್ಚ್​ 13ರಂದು 5 ಕೋಟಿ ಕಲೆಕ್ಷನ್​ ಮಾಡಿದೆ ಈ ಸಿನಿಮಾ. ನಂತರ ಈ ಚಿತ್ರದ ಕಲೆಕ್ಷನ್​ ಕುಸಿದಿದೆ. ಮಾರ್ಚ್​ 14 ಹಾಗೂ ಮಾರ್ಚ್​​ 15ರಂದು ಈ ಚಿತ್ರ ತಲಾ 1.15 ಕೋಟಿ ಗಳಿಸಿದೆ.  ಈ ಮೂಲಕ ಸಿನಿಮಾ ಹಿಂದಿ ಬಾಕ್ಸ್​ ಆಫೀಸ್​ನಲ್ಲಿ 16.65 ಕೋಟಿ ರೂಪಾಯಿ ಬಾಚಿಕೊಂಡಿದೆ.

ಅಲ್ಲು ಅರ್ಜುನ್ ನಟನೆಯ ‘ಪುಷ್ಪ’ ಸಿನಿಮಾ ಹಿಂದಿ ವರ್ಷನ್​ನಿಂದ 100 ಕೋಟಿ ರೂಪಾಯಿ ಬಾಕ್ಸ್ ಆಫೀಸ್​ ಕಲೆಕ್ಷನ್​ ಮಾಡಿತ್ತು. ಪ್ರಭಾಸ್ ಚಿತ್ರ ಕೂಡ ಇದೇ ಮಾದರಿಯಲ್ಲಿ ಕಲೆಕ್ಟ್​​​ ಮಾಡಲಿದೆ ಎಂದು ಹೇಳಲಾಗಿತ್ತು. ಆದರೆ, ಈ ವಿಚಾರ ತಲೆಕೆಳಗಾಗಿದೆ. ಪ್ರಭಾಸ್ ಆ್ಯಕ್ಷನ್​ ಶೈಲಿಯನ್ನು ಆಯ್ಕೆ ಮಾಡಿಕೊಳ್ಳದೆ ಒಂದು ಪ್ರೀತಿ-ಪ್ರೇಮದ ಕಥೆಯನ್ನು ಆಯ್ಕೆ ಮಾಡಿಕೊಂಡಿದ್ದರು. ಸಿನಿಮಾದಲ್ಲಿ ಯಾವುದೇ ಫೈಟ್​ ಇಲ್ಲ. ಇದು ಚಿತ್ರಕ್ಕೆ ದೊಡ್ಡ ಮಟ್ಟದಲ್ಲಿ ಹಿನ್ನಡೆ ತಂದಿತ್ತು. ಅವರು ಮಾಸ್ ಅವತಾರ ತಾಳದೆ ಇದ್ದಿದ್ದು ಪ್ರೇಕ್ಷಕರಿಗೆ ಕೊಂಚವೂ ಇಷ್ಟವಾಗಿಲ್ಲ.

ಪ್ರಭಾಸ್ ಈ ಸೋಲಿನಿಂದ ಅಸಮಾಧಾನಗೊಂಡಿದ್ದಾರೆ. ಮುಂದಿನ ದಿನಗಳಲ್ಲಿ ಸಿನಿಮಾ ಆಯ್ಕೆ ವೇಳೆ ಹೆಚ್ಚು ಗಮನವಹಿಸಲು ನಿರ್ಧರಿಸಿದ್ದಾರೆ. ಅಭಿಮಾನಿಗಳು ಇಷ್ಟಪಡುವ ಸಿನಿಮಾ  ಮಾಡೋಕೆ ಅವರು ಆದ್ಯತೆ ನೀಡಲು ನಿರ್ಧರಿಸಿದ್ದಾರೆ ಎನ್ನಲಾಗಿದೆ.

ಇದನ್ನೂ ಓದಿ: Radhe Shyam First Half Review: ಹೇಗಿದೆ ಪ್ರಭಾಸ್​ ನಟನೆಯ ‘ರಾಧೆ ಶ್ಯಾಮ್​’ ಸಿನಿಮಾದ ಮೊದಲಾರ್ಧ?; ಇಲ್ಲಿದೆ ರಿಪೋರ್ಟ್​

ಕರ್ನಾಟಕದಲ್ಲಿ ಮಗಿಯಲಿದೆ ಪ್ರಭಾಸ್ ಆಟ; ‘ರಾಧೆ ಶ್ಯಾಮ್​’ ಬಹುತೇಕ ಶೋಗಳು ಅಂತ್ಯ?

3 ಮಾದರಿಯ ಸರಣಿಗಾಗಿ ಆಸ್ಟ್ರೇಲಿಯಾ ತಲುಪಿದ ಟೀಂ ಇಂಡಿಯಾ
3 ಮಾದರಿಯ ಸರಣಿಗಾಗಿ ಆಸ್ಟ್ರೇಲಿಯಾ ತಲುಪಿದ ಟೀಂ ಇಂಡಿಯಾ
SC ST ಸಮುದಾಯದವರಿಗೆ ಸೈಟ್: ಸತೀಶ್ ಜಾರಕಿಹೊಳಿ ಮಹತ್ವದ ಘೋಷಣೆ
SC ST ಸಮುದಾಯದವರಿಗೆ ಸೈಟ್: ಸತೀಶ್ ಜಾರಕಿಹೊಳಿ ಮಹತ್ವದ ಘೋಷಣೆ
ಜೆಡಿಎಸ್-ಬಿಜೆಪಿ ಮೈತ್ರಿಯಲ್ಲಿ ಅಸಮಾಧಾನ ಸ್ಫೋಟ: ಪ್ರೀತಂಗೆ ನಿಖಿಲ್ ಕೌಂಟರ್
ಜೆಡಿಎಸ್-ಬಿಜೆಪಿ ಮೈತ್ರಿಯಲ್ಲಿ ಅಸಮಾಧಾನ ಸ್ಫೋಟ: ಪ್ರೀತಂಗೆ ನಿಖಿಲ್ ಕೌಂಟರ್
ಗಂಡ 12 ಸಾವಿರದ ಬಟ್ಟೆ ತೆಗೆದುಕೊಟ್ಟಿಲ್ಲ ಎಂದು ಕಣ್ಣೀರು ಹಾಕಿದ ಪತ್ನಿ
ಗಂಡ 12 ಸಾವಿರದ ಬಟ್ಟೆ ತೆಗೆದುಕೊಟ್ಟಿಲ್ಲ ಎಂದು ಕಣ್ಣೀರು ಹಾಕಿದ ಪತ್ನಿ
ಬೆಂಗಳೂರಲ್ಲಿ ಬಿಎಂಟಿಸಿಯಿಂದ ಮತ್ತೊಂದು ಡೆಡ್ಲಿ ಆ್ಯಕ್ಸಿಡೆಂಟ್!
ಬೆಂಗಳೂರಲ್ಲಿ ಬಿಎಂಟಿಸಿಯಿಂದ ಮತ್ತೊಂದು ಡೆಡ್ಲಿ ಆ್ಯಕ್ಸಿಡೆಂಟ್!
ಮೋದಿ ವಿರುದ್ಧ ಕಾಂಗ್ರೆಸ್ ಫ್ಲೆಕ್ಸ್: ಪೊಲೀಸ್ ದೂರು ದಾಖಲಿಸಿದ ಬಿಜೆಪಿ
ಮೋದಿ ವಿರುದ್ಧ ಕಾಂಗ್ರೆಸ್ ಫ್ಲೆಕ್ಸ್: ಪೊಲೀಸ್ ದೂರು ದಾಖಲಿಸಿದ ಬಿಜೆಪಿ
ಪತ್ನಿಗೆ ಡಿವೋರ್ಸ್​​ ನೀಡದೆ 2ನೇ ಮದುವೆಗೆ ಯತ್ನ: ವ್ಯಕ್ತಿಗೆ ಡಬಲ್​​ ಶಾಕ್​
ಪತ್ನಿಗೆ ಡಿವೋರ್ಸ್​​ ನೀಡದೆ 2ನೇ ಮದುವೆಗೆ ಯತ್ನ: ವ್ಯಕ್ತಿಗೆ ಡಬಲ್​​ ಶಾಕ್​
ನಿರ್ಮಾಣವಾಗುತ್ತಿರುವ ಹಿಂದೂ ದೇವಾಲಯದ ಗೋಡೆ ಕೆಡವಿದ ಮುಸ್ಲಿಂ ಮಹಿಳೆಯರು
ನಿರ್ಮಾಣವಾಗುತ್ತಿರುವ ಹಿಂದೂ ದೇವಾಲಯದ ಗೋಡೆ ಕೆಡವಿದ ಮುಸ್ಲಿಂ ಮಹಿಳೆಯರು
ಕಲಾಕಾರ ಈ ಕಮಲಾಕರ: ಜ್ಯೋತಿಷಿಯ ನವರಂಗಿ ಆಟದ ಸ್ಪೋಟಕ ಆಡಿಯೋ ಇಲ್ಲಿದೆ
ಕಲಾಕಾರ ಈ ಕಮಲಾಕರ: ಜ್ಯೋತಿಷಿಯ ನವರಂಗಿ ಆಟದ ಸ್ಪೋಟಕ ಆಡಿಯೋ ಇಲ್ಲಿದೆ
ಲಂಬೋರ್ಘಿನಿ ಕಾರನ್ನು ಪಾದಚಾರಿಗಳ ಮೇಲೆ ಹತ್ತಿಸಿದ ತಂಬಾಕು ಉದ್ಯಮಿ ಮಗ
ಲಂಬೋರ್ಘಿನಿ ಕಾರನ್ನು ಪಾದಚಾರಿಗಳ ಮೇಲೆ ಹತ್ತಿಸಿದ ತಂಬಾಕು ಉದ್ಯಮಿ ಮಗ