AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ವಿಳಂಬವಾಗಬಹುದು ‘ರಾಧೆ ಶ್ಯಾಮ್​’ ಒಟಿಟಿ ರಿಲೀಸ್​; ಇದಕ್ಕಿದೆ ಮಹತ್ವದ ಕಾರಣ

ರಾಧೆ ಶ್ಯಾಮ್ ಸಿನಿಮಾದ ಟ್ರೇಲರ್ ನೋಡಿದ ವೀಕ್ಷಕರಿಗೆ ದೊಡ್ಡ ನಿರೀಕ್ಷೆ ಹುಟ್ಟಿದೆ. ಸಿನಿಮಾ ಗೆಲ್ಲಬಹುದು ಎನ್ನುವ ಅಭಿಪ್ರಾಯದಲ್ಲಿ ಪ್ರಭಾಸ್​ ಅಭಿಮಾನಿಗಳಿದ್ದಾರೆ. ಈ ಮಧ್ಯೆ ಚಿತ್ರದ ಒಟಿಟಿ ರಿಲೀಸ್​ ದಿನಾಂಕ ವಿಳಂಬವಾಗುವ ಸೂಚನೆ ಸಿಕ್ಕಿದೆ

ವಿಳಂಬವಾಗಬಹುದು ‘ರಾಧೆ ಶ್ಯಾಮ್​’ ಒಟಿಟಿ ರಿಲೀಸ್​; ಇದಕ್ಕಿದೆ ಮಹತ್ವದ ಕಾರಣ
ಪ್ರಭಾಸ್​-ಪೂಜಾ ಹೆಗ್ಡೆ
TV9 Web
| Edited By: |

Updated on: Feb 07, 2022 | 2:07 PM

Share

ಪ್ರಭಾಸ್​ (Prabhas) ನಟನೆಯ ‘ರಾಧೆ ಶ್ಯಾಮ್​’ (Radhe Shyam) ಸಿನಿಮಾ ಮಾರ್ಚ್​ 11ರಂದು ತೆರೆಗೆ ಬರೋಕೆ ರೆಡಿ ಆಗಿದೆ. ಈ ಚಿತ್ರದ ಬಗ್ಗೆ ವೀಕ್ಷಕರಿಗೆ ಸಖತ್​ ನಿರೀಕ್ಷೆ ಇದೆ. ಕೊವಿಡ್​ ಮೂರನೇ ಅಲೆ ಕಾಣಿಸಿಕೊಳ್ಳದೆ ಇದ್ದಿದ್ದರೆ ಈಗಾಗಲೇ ಸಿನಿಮಾ ತೆರೆಗೆ ಅಪ್ಪಳಿಸಿರುತ್ತಿತ್ತು. ಆದರೆ, ಹಾಗಾಗಲಿಲ್ಲ. ಜನವರಿ 14ರಂದು ತೆರೆಗೆ ಬರಬೇಕಿದ್ದ ಸಿನಿಮಾದ ರಿಲೀಸ್​ ದಿನಾಂಕ ವಿಳಂಬವಾಯಿತು. ಈಗ ಸಿನಿಮಾ ತಂಡ ಮಾರ್ಚ್​​ ತಿಂಗಳಲ್ಲಿ ಬರೋಕೆ ಡೇಟ್​ ಲಾಕ್​ ಮಾಡಿದೆ. ಸಿನಿಮಾದ ಟ್ರೇಲರ್ ನೋಡಿದ ವೀಕ್ಷಕರಿಗೆ ದೊಡ್ಡ ನಿರೀಕ್ಷೆ ಹುಟ್ಟಿದೆ. ಸಿನಿಮಾ ಗೆಲ್ಲಬಹುದು ಎನ್ನುವ ಅಭಿಪ್ರಾಯದಲ್ಲಿ ಪ್ರಭಾಸ್​ ಅಭಿಮಾನಿಗಳಿದ್ದಾರೆ. ಈ ಮಧ್ಯೆ ಚಿತ್ರದ ಒಟಿಟಿ ರಿಲೀಸ್​ ದಿನಾಂಕ ವಿಳಂಬವಾಗುವ ಸೂಚನೆ ಸಿಕ್ಕಿದೆ. ಇದಕ್ಕೆ ಕಾರಣವಾಗಿದ್ದು, ಚಿತ್ರದ ಸಂಗೀತ ನಿರ್ದೇಶಕ ಎಸ್​. ಥಮನ್​ (S. Thaman) ನೀಡಿದ ಹೇಳಿಕೆ.

ಒಟಿಟಿ ವ್ಯಾಪ್ತಿ ದಿನ ಕಳೆದಂತೆ ಹೆಚ್ಚುತ್ತಲೇ ಇದೆ. ಅಮೇಜಾನ್​ ಪ್ರೈಮ್​ ವಿಡಿಯೋ, ನೆಟ್​ಫ್ಲಿಕ್ಸ್​ ಸೇರಿ ಅನೇಕ ಒಟಿಟಿ ಪ್ಲಾಟ್​ಫಾರ್ಮ್​ಗಳು ಸ್ಟಾರ್​ ನಟರ ಚಿತ್ರಗಳನ್ನು ಖರೀದಿ ಮಾಡೋಕೆ ಹೆಚ್ಚು ಆಸಕ್ತಿ ತೋರಿಸುತ್ತಿವೆ. ಕೆಲ ಸಿನಿಮಾಗಳನ್ನು ಚಿತ್ರಮಂದಿರಗಳಲ್ಲಿ ರಿಲೀಸ್ ಮಾಡಬೇಕು ಎನ್ನುವ ಉದ್ದೇಶದಿಂದ ಸಿದ್ಧಪಡಿಸಿರಲಾಗುತ್ತದೆ. ಹೀಗಾಗಿ, ನೇರವಾಗಿ ಒಟಿಟಿಗೆ ಕಾಲಿಡೋಕೆ ಚಿತ್ರತಂಡ ಇಷ್ಟಪಡುವುದಿಲ್ಲ. ಆದರೆ, ರಿಲೀಸ್​ ಆದ ಕೆಲವೇ ವಾರಗಳಲ್ಲಿ ದೊಡ್ಡ ಚಿತ್ರಗಳು ಒಟಿಟಿಗೆ ಬಂದ ಉದಾಹರಣೆ ಸಾಕಷ್ಟಿದೆ. ಆದರೆ, ‘ರಾಧೆ ಶ್ಯಾಮ್​’ ಚಿತ್ರ ಈ ರೀತಿ ಆಗೋದಿಲ್ಲ ಎನ್ನುವ ಸೂಚನೆಯನ್ನು ಥಮನ್​ ಅವರು ನೀಡಿದ್ದಾರೆ.

ಈ ಬಗ್ಗೆ ಮಾತನಾಡಿರುವ ಥಮನ್​, ‘ಪ್ರಭಾಸ್ ನಟನೆಯ ‘ರಾಧೆ ಶ್ಯಾಮ್​’ ಚಿತ್ರ ನಿಜಕ್ಕೂ ಅದ್ಭುತ ಚಿತ್ರ. ಈ ಸಿನಿಮಾ ಚಿತ್ರಮಂದಿರದಲ್ಲಿ ಸಾಕಷ್ಟು ದಿನಗಳ ಕಾಲ ಇರಲಿದೆ. ಈ ಸಿನಿಮಾವನ್ನು ತಡೆಯೋರು ಯಾರು ಇಲ್ಲ ಅನ್ನೋದು ನನ್ನ ಅಭಿಪ್ರಾಯ. ಈ ಚಿತ್ರ ನನ್ನನ್ನು ಬೇರೆಯದೇ ಲೋಕಕ್ಕೆ ಕರೆದೊಯ್ದಿತ್ತು’ ಎಂದಿದ್ದಾರೆ. ಈ ಮೂಲಕ ಚಿತ್ರದ ಬಗ್ಗೆ ಹೆಚ್ಚು ನಿರೀಕ್ಷೆ ಇದೆ ಎಂದಿದ್ದಾರೆ.

‘ಪ್ರೀತಿ ಇದ್ದರೆ, ಪ್ರೀತಿ ನಿಜವಾಗಿದ್ದರೆ, ‘ರಾಧೆ ಶ್ಯಾಮ್’ ನಿಜವಾಗಿಯೂ ಗೆಲ್ಲುವ ಚಿತ್ರವಾಗಲಿದೆ. ನಿರ್ದೇಶಕ ರಾಧಾಕೃಷ್ಣ ಚಿತ್ರವನ್ನು ನಿಜವಾಗಿಯೂ ಬೇರೊಂದು ಹಂತಕ್ಕೆ ಕರೆದೊಯ್ದಿದ್ದಾರೆ’ ಎಂದು ಥಮನ್ ಸಂದರ್ಶನದಲ್ಲಿ ಹೇಳಿದ್ದಾರೆ.

ಈ ಚಿತ್ರಕ್ಕೆ ರಾಧಾಕೃಷ್ಣ ಕುಮಾರ್​ ಅವರು ನಿರ್ದೇಶನ ಮಾಡಿದ್ದಾರೆ. ತೆಲುಗು ಮಾತ್ರವಲ್ಲದೇ ಕನ್ನಡ, ತಮಿಳು, ಮಲಯಾಳಂ ಮತ್ತು ಹಿಂದಿ ಭಾಷೆಗಳಲ್ಲಿ ‘ರಾಧೆ ಶ್ಯಾಮ್​’ ತೆರೆಕಾಣಲಿದೆ. ರೊಮ್ಯಾಂಟಿಕ್​ ಲವ್​ ಸ್ಟೋರಿ ಹೊಂದಿರುವ ಈ ಸಿನಿಮಾ ಪ್ರಭಾಸ್​ ವೃತ್ತಿಜೀವನದ ಡಿಫರೆಂಟ್ ಚಿತ್ರ ಎನ್ನಲಾಗುತ್ತಿದೆ.

ಇದನ್ನೂ ಓದಿ: ‘ಸಲಾರ್​’ಗೂ ‘ಕೆಜಿಎಫ್​’ ಫಾರ್ಮುಲಾ; ಎರಡು ಪಾರ್ಟ್​​ನಲ್ಲಿ ಬರಲಿದೆ ಪ್ರಭಾಸ್​-ಪ್ರಶಾಂತ್​ ನೀಲ್​ ಸಿನಿಮಾ

ಹೊಸ ಬಿಡುಗಡೆ ದಿನಾಂಕ ಘೋಷಿಸಿದ ರಾಧೆ ಶ್ಯಾಮ್ ಚಿತ್ರ ತಂಡ; ಪ್ರಭಾಸ್ ಅಭಿಮಾನಿಗಳು ಫುಲ್ ಖುಷ್

Follow Us
Web contact
Web contact

TV9 Kannada

Read More
ರಾಹುಲ್,ಸೋನಿಯಾ ಅತ್ಯಾಪ್ತನನ್ನು ಬಿಟ್ಟು ಸತೀಶನ್ ಆಯ್ಕೆ ಹಿಂದಿನ ಕಾರಣವೇನು?
ರಾಹುಲ್,ಸೋನಿಯಾ ಅತ್ಯಾಪ್ತನನ್ನು ಬಿಟ್ಟು ಸತೀಶನ್ ಆಯ್ಕೆ ಹಿಂದಿನ ಕಾರಣವೇನು?
ನಾಯಂಡಹಳ್ಳಿ ಗೋದಾಮಿನಲ್ಲಿ ಅಗ್ನಿ ಅನಾಹುತ: ಧಗ ಧಗಿಸಿದ ವಸ್ತುಗಳು
ನಾಯಂಡಹಳ್ಳಿ ಗೋದಾಮಿನಲ್ಲಿ ಅಗ್ನಿ ಅನಾಹುತ: ಧಗ ಧಗಿಸಿದ ವಸ್ತುಗಳು
ಬುರ್ಖಾ ಧರಿಸಿ ಬಂದು ಚಿನ್ನದಂಗಡಿ ಮಾಲೀಕನ ಕಣ್ಣಿಗೆ ಖಾರದಪುಡಿ ಎರಚಿದ ಮಹಿಳೆ
ಬುರ್ಖಾ ಧರಿಸಿ ಬಂದು ಚಿನ್ನದಂಗಡಿ ಮಾಲೀಕನ ಕಣ್ಣಿಗೆ ಖಾರದಪುಡಿ ಎರಚಿದ ಮಹಿಳೆ
ಮೋದಿ ರೀತಿ ಬೆಂಗಾವಲು ಪಡೆ ವಾಹನ ಕಡಿಮೆ ಮಾಡ್ತಾರಾ ಸಿಎಂ? ಹೇಳಿದ್ದೇನು ನೋಡಿ
ಮೋದಿ ರೀತಿ ಬೆಂಗಾವಲು ಪಡೆ ವಾಹನ ಕಡಿಮೆ ಮಾಡ್ತಾರಾ ಸಿಎಂ? ಹೇಳಿದ್ದೇನು ನೋಡಿ
ಅಜ್ಜನ ಹೆಸರ ಮೇಲೆ ಶಾಸಕರಾಗಿ ಪ್ರಮಾಣ ವಚನ ಸ್ವೀಕರಿಸಿದ ಸಮರ್ಥ್ ಶಾಮನೂರು!
ಅಜ್ಜನ ಹೆಸರ ಮೇಲೆ ಶಾಸಕರಾಗಿ ಪ್ರಮಾಣ ವಚನ ಸ್ವೀಕರಿಸಿದ ಸಮರ್ಥ್ ಶಾಮನೂರು!
ದಿಲೀಪ್​​ರ ಉಳಿಸಿಕೊಳ್ಳಲು ಪತ್ನಿ ಮಾಡಿದ ಪ್ರಯತ್ನಗಳ ವಿವರಿಸಿದ ಆಟೋ ಚಾಲಕ
ದಿಲೀಪ್​​ರ ಉಳಿಸಿಕೊಳ್ಳಲು ಪತ್ನಿ ಮಾಡಿದ ಪ್ರಯತ್ನಗಳ ವಿವರಿಸಿದ ಆಟೋ ಚಾಲಕ
ಇಂದಿರಾ ಗಾಂಧಿ ಬಳಿಕ ಮೋದಿಯೇ ಮಾಸ್​​ ಲೀಡರ್​​ ಎಂದ ಕೆ.ಎನ್​​. ರಾಜಣ್ಣ
ಇಂದಿರಾ ಗಾಂಧಿ ಬಳಿಕ ಮೋದಿಯೇ ಮಾಸ್​​ ಲೀಡರ್​​ ಎಂದ ಕೆ.ಎನ್​​. ರಾಜಣ್ಣ
ದಿಲೀಪ್ ಕೊನೆಯ ಕ್ಷಣಗಳನ್ನು ವಿವರಿಸಿದ ಆಟೋ ಚಾಲಕ
ದಿಲೀಪ್ ಕೊನೆಯ ಕ್ಷಣಗಳನ್ನು ವಿವರಿಸಿದ ಆಟೋ ಚಾಲಕ
ಪೊಲೀಸ್ ಠಾಣೆ ಎದುರೇ ಬೈಕ್ ಬಾಕ್ಸ್​ನಲ್ಲಿದ್ದ ಲಕ್ಷ ರೂ. ಹಣ ದೋಚಿದ ಕಳ್ಳರು!
ಪೊಲೀಸ್ ಠಾಣೆ ಎದುರೇ ಬೈಕ್ ಬಾಕ್ಸ್​ನಲ್ಲಿದ್ದ ಲಕ್ಷ ರೂ. ಹಣ ದೋಚಿದ ಕಳ್ಳರು!
ಚಿಕ್ಕೋಡಿ: ಭಾರಿ ಗಾಳಿ ಮಳೆಗೆ ಹಾರಿಹೋದ 5 ಮನೆಗಳ ಛಾವಣಿ
ಚಿಕ್ಕೋಡಿ: ಭಾರಿ ಗಾಳಿ ಮಳೆಗೆ ಹಾರಿಹೋದ 5 ಮನೆಗಳ ಛಾವಣಿ