AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಸಲಾರ್​ ಚಿತ್ರದಲ್ಲಿ 2 ಪ್ರಮುಖ ಬದಲಾವಣೆ; ಪ್ರಭಾಸ್​, ಪ್ರಶಾಂತ್​ ನೀಲ್​ ಬಳಗದಲ್ಲಿ ಏನು ನಡೀತಿದೆ?

ಬಾಹುಬಲಿ ಸರಣಿ ಸಿನಿಮಾಕ್ಕಾಗಿ ಹೆಚ್ಚು ಸಮಯ ತೆಗೆದುಕೊಂಡಿದ್ದ ಪ್ರಭಾಸ್​ ಅವರು ಈಗ ವೇಗವಾಗಿ ಸಿನಿಮಾಗಳನ್ನು ಮಾಡುತ್ತಿದ್ದಾರೆ. ಸಾಹೋ ನಂತರ ಅವರು ಬ್ಯಾಕ್​ ಟು ಬ್ಯಾಕ್​ ಹೊಸ ಚಿತ್ರಗಳನ್ನು ಒಪ್ಪಿಕೊಂಡಿದ್ದಾರೆ.

ಸಲಾರ್​ ಚಿತ್ರದಲ್ಲಿ 2 ಪ್ರಮುಖ ಬದಲಾವಣೆ; ಪ್ರಭಾಸ್​, ಪ್ರಶಾಂತ್​ ನೀಲ್​ ಬಳಗದಲ್ಲಿ ಏನು ನಡೀತಿದೆ?
ಪ್ರಶಾಂತ್​ ನೀಲ್​, ಪ್ರಭಾಸ್​
TV9 Web
| Edited By: |

Updated on: Jul 25, 2021 | 3:32 PM

Share

‘ಕೆಜಿಎಫ್​: ಚಾಪ್ಟರ್​ 1’ ಚಿತ್ರದಿಂದ ಭಾರಿ ಜನಪ್ರಿಯತೆ ಪಡೆದ ಪ್ರಶಾಂತ್​ ನೀಲ್​ (Prashanth Neel), ಬಳಿಕ ಪರಭಾಷೆಯಲ್ಲೂ ಬಹುಬೇಡಿಕೆಯ ನಿರ್ದೇಶಕರಾದರು. ಯಶ್​ ಜೊತೆ ಮಾಡುತ್ತಿರುವ ‘ಕೆಜಿಎಫ್​: ಚಾಪ್ಟರ್​ 2’ ಚಿತ್ರ ಬಿಡುಗಡೆ ಆಗುವುದಕ್ಕೂ ಮುನ್ನವೇ ಅವರು ‘ಸಲಾರ್’ (Salaar) ಚಿತ್ರವನ್ನು ಕೈಗೆತ್ತಿಕೊಂಡರು. ಪ್ರಭಾಸ್​ (Prabhas) ನಾಯಕತ್ವದ ಈ ಸಿನಿಮಾ ಬಗ್ಗೆ ಅಭಿಮಾನಿಗಳಿಗೆ ಸಖತ್​ ನಿರೀಕ್ಷೆ ಇದೆ. ಈಗಾಗಲೇ ಬಿಡುಗಡೆ ಆಗಿರುವ ಪೋಸ್ಟರ್​ಗಳು ಹೈಪ್​ ಸೃಷ್ಟಿ ಮಾಡಿವೆ. ದೊಡ್ಡ ಕ್ಯಾನ್ವಾಸ್​ನಲ್ಲಿ ಈ ಚಿತ್ರ ತಯಾರಾಗುತ್ತಿದೆ. ಈಗ ‘ಸಲಾರ್​’ ಬಗ್ಗೆ ಎರಡು ಹೊಸ ಗುಸುಗುಸು ಕೇಳಿಬರುತ್ತಿದೆ.

ಮೂಲಗಳ ಪ್ರಕಾರ, ‘ಸಲಾರ್​’ ಚಿತ್ರದಲ್ಲಿ ಎರಡು ಪ್ರಮುಖ ಬೆಳವಣಿಗೆಗಳು ಆಗವೆ. ಈ ಚಿತ್ರದ ಕಥೆಗೆ ಒಂದು ಫ್ಲ್ಯಾಶ್​ಬ್ಯಾಕ್​ ದೃಶ್ಯವನ್ನು ಸೇರಿಸಲು ಪ್ರಶಾಂತ್​ ನೀಲ್​ ಪ್ಲ್ಯಾನ್​ ಮಾಡಿದ್ದಾರೆ ಎಂಬ ಮಾತು ಕೇಳಿಬರುತ್ತಿದೆ. ಈ ಮೊದಲಿನ ಸ್ಕ್ರಿಪ್ಟ್​ನಲ್ಲಿ ಈ ದೃಶ್ಯ ಇರಲೇ ಇಲ್ಲ. ಈಗ ಹೊಸದಾಗಿ ಫ್ಲ್ಯಾಶ್​ಬ್ಯಾಕ್ ಸೇರಿಸಲಾಗುತ್ತಿದ್ದು, ಅದರಲ್ಲಿ ಬಾಲಿವುಡ್​ನ ಹಿರಿಯ ನಟರೊಬ್ಬರು ಅಭಿನಯಿಸಲಿದ್ದಾರೆ ಎನ್ನಲಾಗುತ್ತಿದೆ.

‘ಸಲಾರ್​’ ಬಗ್ಗೆ ಕೇಳಿಬರುತ್ತಿರುವ ಇನ್ನೊಂದು ಗಾಸಿಪ್​ ಕೆಜಿಎಫ್​ ನಟಿ ಶ್ರೀನಿಧಿ ಶೆಟ್ಟಿಗೆ ಸಂಬಂಧಿಸಿದ್ದು. ‘ಸಲಾರ್​’ನಲ್ಲಿ ಒಂದು ಐಟಂ ಸಾಂಗ್​ ಇರಲಿದ್ದು, ಅದಕ್ಕೆ ಶ್ರೀನಿಧಿ ಶೆಟ್ಟಿ ಹೆಜ್ಜೆ ಹಾಕಿದರೆ ಸೂಕ್ತ ಎಂಬ ಆಲೋಚನೆ ಪ್ರಶಾಂತ್​ ನೀಲ್​ ಮನದಲ್ಲಿ ಮೂಡಿದೆ. ಆದರೆ ಅದರ ಬಗ್ಗೆ ಚಿತ್ರತಂಡದಿಂದ ಇನ್ನಷ್ಟೇ ಅಧಿಕೃತ ಘೋಷಣೆ ಆಗಿಬೇಕಿದೆ ಎಂಬ ಸುದ್ದಿ ಸೋಶಿಯಲ್​ ಮೀಡಿಯಾದಲ್ಲಿ ಹರಿದಾಡುತ್ತಿದೆ.

ಬಾಹುಬಲಿ ಸರಣಿ ಸಿನಿಮಾಕ್ಕಾಗಿ ಹೆಚ್ಚು ಸಮಯ ತೆಗೆದುಕೊಂಡಿದ್ದ ಪ್ರಭಾಸ್​ ಅವರು ಈಗ ವೇಗವಾಗಿ ಸಿನಿಮಾಗಳನ್ನು ಮಾಡುತ್ತಿದ್ದಾರೆ. ಸಾಹೋ ನಂತರ ಅವರು ಬ್ಯಾಕ್​ ಟು ಬ್ಯಾಕ್​ ಹೊಸ ಚಿತ್ರಗಳನ್ನು ಒಪ್ಪಿಕೊಂಡಿದ್ದಾರೆ. ‘ರಾಧೆ ಶ್ಯಾಮ್​’, ‘ಸಲಾರ್​’, ‘ಆದಿಪುರುಷ್​’ ಮುಂತಾದ ಸಿನಿಮಾಗಳಲ್ಲಿ ಅವರು ಬ್ಯುಸಿ ಆಗಿದ್ದಾರೆ. ಇತ್ತ ಪ್ರಶಾಂತ್​ ನೀಲ್​ ಕೂಡ ಬ್ಯುಸಿ. ‘ಕೆಜಿಎಫ್​: ಚಾಪ್ಟರ್​ 2’ ಚಿತ್ರದ ಕೆಲಸಗಳು ಲಾಕ್​ಡೌನ್​ ಕಾರಣದಿಂದ ತಡವಾಗಿವೆ. ಹಾಗಾಗಿ ಬಿಡುಗಡೆ ದಿನಾಂಕ ಕೂಡ ಮುಂದೆ ಹೋಗಿದೆ. ಆದಷ್ಟು ಬೇಗ ಚಿತ್ರವನ್ನು ತೆರೆಗೆ ತರಬೇಕು ಎಂದು ಅವರು ಶ್ರಮಿಸುತ್ತಿದ್ದಾರೆ. ಶೀಘ್ರದಲ್ಲೇ ‘ಕೆಜಿಎಫ್​ 2’ ಚಿತ್ರದ ಹೊಸ ಬಿಡುಗಡೆ ದಿನಾಂಕ ಘೋಷಣೆ ಆಗುವ ನಿರೀಕ್ಷೆ ಇದೆ.

ಇದನ್ನೂ ಓದಿ:

ಪ್ರಶಾಂತ್​ ನೀಲ್​ ಕಡೆಯಿಂದ ‘ಕೆಜಿಎಫ್ 2’​ ಫಸ್ಟ್​ ಡೇ ಫಸ್ಟ್​ ಶೋ ಟಿಕೆಟ್​ ಪಡೆಯಲಿರುವ ವಿಶೇಷ ಅಭಿಮಾನಿ

Prabhas: ‘ಸಲಾರ್​​’ ಜೊತೆ ಕೇಳಿಬಂತು ಜ್ಯೋತಿಕಾ ಹೆಸರು; ಹರಿದಾಡುತ್ತಿರುವ ಸುದ್ದಿಯ ಅಸಲಿಯತ್ತು ಏನು?

ಮನುಷ್ಯರು ಅಷ್ಟೇ ಅಲ್ಲ ಪ್ರಾಣಿಗಳಿಗೂ ಕೂಡ ಒಂಟಿಯಾಗಿರೋದು ಕಷ್ಟ
ಮನುಷ್ಯರು ಅಷ್ಟೇ ಅಲ್ಲ ಪ್ರಾಣಿಗಳಿಗೂ ಕೂಡ ಒಂಟಿಯಾಗಿರೋದು ಕಷ್ಟ
ಶಿವಾಜಿ ಜಯಂತಿ ಮೆರವಣಿಗೆ ವೇಳೆ ಕಲ್ಲುತೂರಾಟ: ಘಟನೆಗೆ ಕಾರಣ ರಿವೀಲ್​​
ಶಿವಾಜಿ ಜಯಂತಿ ಮೆರವಣಿಗೆ ವೇಳೆ ಕಲ್ಲುತೂರಾಟ: ಘಟನೆಗೆ ಕಾರಣ ರಿವೀಲ್​​
ತಟ್ಟೆಯಲ್ಲಿ ಉಳಿದಿದ್ದ ಆಹಾರವನ್ನು ಒಟ್ಟು ಮಾಡಿದ ಯುಪಿಎಸ್​​ಸಿ ಆಕಾಂಕ್ಷಿ
ತಟ್ಟೆಯಲ್ಲಿ ಉಳಿದಿದ್ದ ಆಹಾರವನ್ನು ಒಟ್ಟು ಮಾಡಿದ ಯುಪಿಎಸ್​​ಸಿ ಆಕಾಂಕ್ಷಿ
ಕೋಪದಲ್ಲಿದ್ದಾಗ ಮನುಷ್ಯ ಈ ಮೂರು ನಿರ್ಧಾರಗಳನ್ನು ತೆಗೆದುಕೊಳ್ಳಬಾರದು!
ಕೋಪದಲ್ಲಿದ್ದಾಗ ಮನುಷ್ಯ ಈ ಮೂರು ನಿರ್ಧಾರಗಳನ್ನು ತೆಗೆದುಕೊಳ್ಳಬಾರದು!
ಇಂದು ಈ ರಾಶಿಯವರ ಆದಾಯದಲ್ಲಿ ಏರಿಕೆ
ಇಂದು ಈ ರಾಶಿಯವರ ಆದಾಯದಲ್ಲಿ ಏರಿಕೆ
ಹೋಟೆಲ್ ಉದ್ಯಮದಿಂದ ಭಾರಿ ತೆರಿಗೆ ವಂಚನೆ: 70 ಸಾವಿರ ಕೋಟಿ ಅಕ್ರಮ ಬಯಲು
ಹೋಟೆಲ್ ಉದ್ಯಮದಿಂದ ಭಾರಿ ತೆರಿಗೆ ವಂಚನೆ: 70 ಸಾವಿರ ಕೋಟಿ ಅಕ್ರಮ ಬಯಲು
ಮಾನಸಿಕ ಒತ್ತಡ, ಖಿನ್ನತೆ ದೂರ ಮಾಡುತ್ತೆ ಕಿರಣ್: ಏನಿದು ಕಿರಣ್ ಸಹಾಯವಾಣಿ?
ಮಾನಸಿಕ ಒತ್ತಡ, ಖಿನ್ನತೆ ದೂರ ಮಾಡುತ್ತೆ ಕಿರಣ್: ಏನಿದು ಕಿರಣ್ ಸಹಾಯವಾಣಿ?
ಹಸುಗಳಿಗೆ AI ಅನ್ವಯದ ಬಗ್ಗೆ ಮೋದಿ ತುರ್ತು ನಿರ್ಧಾರ;ನಂದನ್ ನಿಲೇಕಣಿ ಬಣ್ಣನೆ
ಹಸುಗಳಿಗೆ AI ಅನ್ವಯದ ಬಗ್ಗೆ ಮೋದಿ ತುರ್ತು ನಿರ್ಧಾರ;ನಂದನ್ ನಿಲೇಕಣಿ ಬಣ್ಣನೆ
ದರ್ಶನ್ ಕರೆದರೆ ಮರುದಿನವೇ ಸಿನಿಮಾ ಮಾಡಲು ರೆಡಿ: ತರುಣ್ ಸುಧೀರ್
ದರ್ಶನ್ ಕರೆದರೆ ಮರುದಿನವೇ ಸಿನಿಮಾ ಮಾಡಲು ರೆಡಿ: ತರುಣ್ ಸುಧೀರ್
ಮಳೆ, ರಾಜ್ಯಕಾರಣದ ಬಗ್ಗೆ ಬಬಲಾದಿ ಕಾಲಜ್ಞಾನ ಸ್ಫೋಟಕ ಭವಿಷ್ಯ
ಮಳೆ, ರಾಜ್ಯಕಾರಣದ ಬಗ್ಗೆ ಬಬಲಾದಿ ಕಾಲಜ್ಞಾನ ಸ್ಫೋಟಕ ಭವಿಷ್ಯ