AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಒಂದು ತಿಂಗಳು ಮುನ್ನವೇ ‘ಸಲಾರ್​’ ಅಡ್ವಾನ್ಸ್​ ಬುಕಿಂಗ್​ ಶುರು; ಅಮೆರಿಕದಲ್ಲಿ ಜೋರಾಗಿದೆ ಕ್ರೇಜ್​

ಟ್ರೇಡ್​ ವಿಶ್ಲೇಷಕ ಮನೋಬಲ ವಿಜಯಬಾಲನ್​ ಅವರು ‘ಸಲಾರ್​’ ಸಿನಿಮಾದ ಅಡ್ವಾನ್ಸ್​ ಬುಕಿಂಗ್​ ಬಗ್ಗೆ ಮಾಹಿತಿ ಹಂಚಿಕೊಂಡಿದ್ದಾರೆ. ಅಮೆರಿಕದಲ್ಲಿ ಮುಂಗಡ ಬುಕಿಂಗ್​ನಿಂದ 83 ಲಕ್ಷ ರೂಪಾಯಿ ಆದಾಯ ಬಂದಿದೆ ಎಂದು ಅವರು ಟ್ವೀಟ್​ ಮಾಡಿದ್ದಾರೆ. ಒಂದು ತಿಂಗಳಿಗೂ ಮುನ್ನವೇ ಈ ರೀತಿ ಬಿಸ್ನೆಸ್​ ಆಗುತ್ತಿದೆ. ಸಿನಿಮಾ ಬಗ್ಗೆ ಜನರಿಗೆ ಎಷ್ಟು ಕ್ರೇಜ್​ ಇದೆ ಎಂಬುದಕ್ಕೆ ಇದೇ ಸಾಕ್ಷಿ.

ಒಂದು ತಿಂಗಳು ಮುನ್ನವೇ ‘ಸಲಾರ್​’ ಅಡ್ವಾನ್ಸ್​ ಬುಕಿಂಗ್​ ಶುರು; ಅಮೆರಿಕದಲ್ಲಿ ಜೋರಾಗಿದೆ ಕ್ರೇಜ್​
ಪ್ರಶಾಂತ್ ನೀಲ್​
ಮದನ್​ ಕುಮಾರ್​
|

Updated on: Aug 23, 2023 | 3:34 PM

Share

ಟಾಲಿವುಡ್​ ನಟ ಪ್ರಭಾಸ್​ (Prabhas) ಅವರು ಕಳೆದ ಕೆಲವು ವರ್ಷಗಳಿಂದ ಸಾಲು ಸಾಲು ಸೋಲು ಕಂಡಿದ್ದಾರೆ. ‘ಸಾಹೋ’, ‘ರಾಧೆ ಶ್ಯಾಮ್​’ ಮತ್ತು ‘ಆದಿಪುರುಷ್​’ ಸಿನಿಮಾಗಳು ನಿರೀಕ್ಷೆಯ ಮಟ್ಟ ತಲುಪಲು ವಿಫಲವಾಗಿವೆ. ಈಗ ಅವರ ಗಮನವೆಲ್ಲ ‘ಸಲಾರ್​’ ಮತ್ತು ‘ಕಲ್ಕಿ 2898 ಎಡಿ’ ಸಿನಿಮಾದ ಮೇಲಿದೆ. ಆ ಪೈಕಿ ಸಲಾರ್​’ (Salaar) ಚಿತ್ರ ಮೊದಲು ಬಿಡುಗಡೆ ಆಗಲಿದೆ. ಸೆಪ್ಟೆಂಬರ್​ 28ರಂದು ಈ ಚಿತ್ರ ಅದ್ದೂರಿಯಾಗಿ ತೆರೆ ಕಾಣಲಿದೆ. ಅದಕ್ಕೆ ಇನ್ನೂ ಒಂದು ತಿಂಗಳು ಬಾಕಿ ಇದೆ. ಈಗಾಗಲೇ ಅಮೆರಿಕದಲ್ಲಿ ಅಡ್ವಾನ್ಸ್​ ಟಿಕೆಟ್​ ಬುಕಿಂಗ್​ ಓಪನ್ (Salaar Advance ticket booking)​ ಆಗಿದೆ. ಅಲ್ಲಿಯೂ ಪ್ರಭಾಸ್​ಗೆ ಅಭಿಮಾನಿಗಳು ಇದ್ದಾರೆ. ಈ ಸಿನಿಮಾವನ್ನು ಮೊದಲ ದಿನವೇ ಕಣ್ತುಂಬಿಕೊಳ್ಳಬೇಕು ಎಂಬ ಕಾರಣಕ್ಕೆ ಜನರು ಮುಗಿಬಿದ್ದು ಟಿಕೆಟ್​ ಬುಕ್​ ಮಾಡುತ್ತಿದ್ದಾರೆ. ಹಾಗಾಗಿ ಬಿಡುಗಡೆಗೂ ಮುನ್ನವೇ ಈ ಸಿನಿಮಾ ಭರ್ಜರಿ ಬಿಸ್ನೆಸ್​ ಮಾಡುತ್ತಿದೆ.

ಪ್ರಶಾಂತ್​ ನೀಲ್​ ಅವರು ‘ಕೆಜಿಎಫ್​: ಚಾಪ್ಟರ್​ 2’ ಸಿನಿಮಾ ಮೂಲಕ ಭಾರಿ ಜನಪ್ರಿಯತೆ ಗಳಿಸಿದರು. ಅವರ ನಿರ್ದೇಶನದಲ್ಲಿ ‘ಸಲಾರ್’ ಸಿನಿಮಾ ಮೂಡಿಬರುತ್ತಿರುವುದರಿಂದ ಸಹಜವಾಗಿಯೇ ನಿರೀಕ್ಷೆ ಮನೆ ಮಾಡಿದೆ. ಪ್ರತಿಷ್ಠಿತ ‘ಹೊಂಬಾಳೆ ಫಿಲ್ಮ್ಸ್​’ ಸಂಸ್ಥೆ ಮೂಲಕ ಈ ಚಿತ್ರ ನಿರ್ಮಾಣ ಆಗುತ್ತಿದೆ. ಈಗಾಗಲೇ ಬಿಡುಗಡೆ ಆಗಿರುವ ಟೀಸರ್​ ನೋಡಿ ಜನರು ವಾವ್​ ಎಂದಿದ್ದಾರೆ. ಅದರ ಪರಿಣಾಮವಾಗಿ ಅಡ್ವಾನ್ಸ್​ ಟಿಕೆಟ್​ ಬುಕಿಂಗ್​ ಬಹಳ ವೇಗವಾಗಿ ಆಗುತ್ತಿದೆ.

ಮನೋಬಲ ವಿಜಯಬಾಲನ್ ಟ್ವೀಟ್​:

ಟ್ರೇಡ್​ ವಿಶ್ಲೇಷಕ ಮನೋಬಲ ವಿಜಯಬಾಲನ್​ ಅವರು ‘ಸಲಾರ್​’ ಸಿನಿಮಾದ ಅಡ್ವಾನ್ಸ್​ ಬುಕಿಂಗ್​ ಬಗ್ಗೆ ಮಾಹಿತಿ ಹಂಚಿಕೊಂಡಿದ್ದಾರೆ. ಅಮೆರಿಕದಲ್ಲಿ ಮುಂಗಡ ಬುಕಿಂಗ್​ನಿಂದ 83 ಲಕ್ಷ ರೂಪಾಯಿ ಆದಾಯ ಬಂದಿದೆ ಎಂದು ಅವರು ಟ್ವೀಟ್​ ಮಾಡಿದ್ದಾರೆ. ಒಂದು ತಿಂಗಳಿಗೂ ಮುನ್ನವೇ ಈ ರೀತಿ ಬಿಸ್ನೆಸ್​ ಆಗುತ್ತಿದೆ. ಇನ್ನು, ರಿಲೀಸ್​ ಡೇಟ್​ ಹತ್ತಿರವಾದರೆ ಬಹುಕೋಟಿ ರೂಪಾಯಿ ಬಿಸ್ನೆಸ್​ ಆಗಲಿದೆ ಎಂಬುದು ಖಚಿತ. ಈ ಸಿನಿಮಾ ಬಗ್ಗೆ ಪ್ರೇಕ್ಷಕರಿಗೆ ಎಷ್ಟು ನಿರೀಕ್ಷೆ ಇದೆ ಎಂಬುದಕ್ಕೆ ಅಡ್ವಾನ್ಸ್​ ಬುಕಿಂಗ್​ನ ವೇಗವೇ ಸಾಕ್ಷಿ ಒದಗಿಸುತ್ತಿದೆ.

Salaar: ‘ಸಲಾರ್​ ಸಿನಿಮಾ 2 ಸಾವಿರ ಕೋಟಿ ರೂ. ಕಲೆಕ್ಷನ್​ ಮಾಡಲಿದೆ’: ಭವಿಷ್ಯ ನುಡಿದ ಹಾಸ್ಯ ನಟ

ಭಾರತದಲ್ಲಿ ‘ಸಲಾರ್​’ ಸಿನಿಮಾಗೆ ಅಡ್ವಾನ್ಸ್​ ಬುಕಿಂಗ್​ ಇನ್ನೂ ಆರಂಭ ಆಗಿಲ್ಲ. ಅದಕ್ಕಾಗಿ ಪ್ರೇಕ್ಷಕರು ಕಾದಿದ್ದಾರೆ. ಈ ಸಿನಿಮಾದಲ್ಲಿ ಪ್ರಭಾಸ್​ಗೆ ಜೋಡಿಯಾಗಿ ಶ್ರುತಿ ಹಾಸನ್​ ನಟಿಸುತ್ತಿದ್ದಾರೆ. ಮಲಯಾಳಂ ಸ್ಟಾರ್​ ನಟ ಪೃಥ್ವಿರಾಜ್​ ಸುಕುಮಾರನ್​ ಅವರು ಕೂಡ ಬಹುಮುಖ್ಯ ಪಾತ್ರ ಮಾಡುತ್ತಿದ್ದಾರೆ. ಈ ಸಿನಿಮಾಗೂ ‘ಕೆಜಿಎಫ್​ 2’ ಕತೆಗೂ ಲಿಂಕ್​ ಇರಬಹುದು ಎಂದು ಅನೇಕರು ಈ ಊಹಿಸಿದ್ದಾರೆ. ಸಿನಿಮಾ ರಿಲೀಸ್​ ಆದ ಬಳಿಕವೇ ಆ ಬಗ್ಗೆ ಸ್ಪಷ್ಟ ಚಿತ್ರಣ ಸಿಗಲಿದೆ. ಅದ್ದೂರಿ ಸೆಟ್​ಗಳಲ್ಲಿ ಈ ಸಿನಿಮಾದ ಚಿತ್ರೀಕರಣ ಮಾಡಲಾಗಿದೆ. ಸದ್ಯಕ್ಕೆ ಕೊನೇ ಹಂತದ ಪೋಸ್ಟ್​ ಪ್ರೊಡಕ್ಷನ್​ ಕೆಲಸಗಳು ನಡೆಯುತ್ತಿವೆ.

ಹೆಚ್ಚಿನ ಸಿನಿಮಾ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್​ ಮಾಡಿ.

Follow Us
Madan Kumar
Madan Kumar

ಮಾಧ್ಯಮ ಲೋಕದಲ್ಲಿ ಕಳೆದ 10 ವರ್ಷಗಳಿಂದ ಸಕ್ರಿಯವಾಗಿದ್ದೇನೆ. ಕನ್ನಡದ ವಿವಿಧ ಪ್ರತಿಷ್ಠಿತ ಮಾಧ್ಯಮಗಳಲ್ಲಿ ಕೆಲಸ ಮಾಡಿದ ಅನುಭವ ಹೊಂದಿದ್ದೇನೆ. ಸಿನಿಮಾ ವರದಿಗಾರಿಕೆ ಮತ್ತು ವಿಮರ್ಶೆಯಲ್ಲಿ ಪರಿಣತಿ ಇದೆ. 2014ರಿಂದ 2019ರ ತನಕ ವಿಜಯವಾಣಿ ದಿನ ಪತ್ರಿಕೆಯಲ್ಲಿ ಸಿನಿಮಾ ವರದಿಗಾರನಾಗಿ ಕೆಲಸ ಮಾಡಿ ಅನುಭವ ಪಡೆದಿದ್ದೇನೆ. ಬಳಿಕ ವಿಜಯ ಕರ್ನಾಟಕ ಡಿಜಿಟಲ್ (ಟೈಮ್ಸ್​ ಇಂಟರ್​ನೆಟ್​) ಸಂಸ್ಥೆಯಲ್ಲಿ ಕಂಟೆಂಟ್​ ಪ್ರೊಡ್ಯೂಸರ್​ ಆಗಿ ಕೆಲಸ ಮಾಡಿದ್ದೇನೆ. ಪ್ರಸ್ತುತ ‘ಟಿವಿ9 ಕನ್ನಡ ಡಿಜಿಟಲ್​’ನ ಸಿನಿಮಾ/ಮನರಂಜನೆ ವಿಭಾಗದಲ್ಲಿ ಕೆಲಸ ಮಾಡುತ್ತಿದ್ದೇನೆ. ಎಲ್ಲ ಭಾಷೆಯ ಸಿನಿಮಾಗಳ ವೀಕ್ಷಣೆಯಲ್ಲಿ ಆಸಕ್ತಿ ಇದೆ. ಸದಾ ಕನ್ನಡ-ಇಂಗ್ಲಿಷ್​ ಸಾಹಿತ್ಯದ ವಿದ್ಯಾರ್ಥಿ.

Read More
ನಾಯಕತ್ವ ಬದಲಾವಣೆ ಗುದ್ದಾಟಕ್ಕೆ ಸ್ಫೋಟಕ ತಿರುವು ನೀಡಿದ ಸಭೆ
ನಾಯಕತ್ವ ಬದಲಾವಣೆ ಗುದ್ದಾಟಕ್ಕೆ ಸ್ಫೋಟಕ ತಿರುವು ನೀಡಿದ ಸಭೆ
ಹುಬ್ಬಳ್ಳಿಯಲ್ಲಿ ಮತ್ತೊಂದು ಲವ್ ಜಿಹಾದ್ ಕೇಸ್: ಯುವಕನಿಗೆ ಗೂಸಾ
ಹುಬ್ಬಳ್ಳಿಯಲ್ಲಿ ಮತ್ತೊಂದು ಲವ್ ಜಿಹಾದ್ ಕೇಸ್: ಯುವಕನಿಗೆ ಗೂಸಾ
ಅತ್ಯಾಚಾರ ಪ್ರಕರಣದಲ್ಲಿ ಜೈಲಿಂದ ಬಿಡುಗಡೆಯಾದ ಆರೋಪಿಗೆ ಹಾರ ಹಾಕಿ ಮೆರವಣಿಗೆ!
ಅತ್ಯಾಚಾರ ಪ್ರಕರಣದಲ್ಲಿ ಜೈಲಿಂದ ಬಿಡುಗಡೆಯಾದ ಆರೋಪಿಗೆ ಹಾರ ಹಾಕಿ ಮೆರವಣಿಗೆ!
ಕಾಂಗ್ರೆಸ್ ಮುಖಂಡ ಹಾಜಿ ಸೈಯದ್ ಜಿಯಾವುಲ್ಲಾ ಅಂತಿಮ ದರ್ಶನ ಪಡೆದ ಡಿಕೆಶಿ
ಕಾಂಗ್ರೆಸ್ ಮುಖಂಡ ಹಾಜಿ ಸೈಯದ್ ಜಿಯಾವುಲ್ಲಾ ಅಂತಿಮ ದರ್ಶನ ಪಡೆದ ಡಿಕೆಶಿ
ಮನೆ ಮೇಲೆ ಬಿದ್ದ ಬೃಹತ್​ ಮರ: ಆಚೆ ಬರಲಾಗದೇ ಮನೆಯೊಳಗೆ ಮೂವರು ಲಾಕ್
ಮನೆ ಮೇಲೆ ಬಿದ್ದ ಬೃಹತ್​ ಮರ: ಆಚೆ ಬರಲಾಗದೇ ಮನೆಯೊಳಗೆ ಮೂವರು ಲಾಕ್
ಹತ್ತು ತಿಂಗಳ ಬಳಿಕ ಪತ್ನಿ-ಮಗನ ಮುಖಾ-ಮುಖಿ ಭೇಟಿಯಾದ ದರ್ಶನ್
ಹತ್ತು ತಿಂಗಳ ಬಳಿಕ ಪತ್ನಿ-ಮಗನ ಮುಖಾ-ಮುಖಿ ಭೇಟಿಯಾದ ದರ್ಶನ್
ಕಾದಾಟದಲ್ಲಿ ಗಾಯಗೊಂಡಿದ್ದ ಮಾರ್ತಾಂಡ ಆನೆ ಸಾವು, ತಪ್ಪು ಯಾರದ್ದು?
ಕಾದಾಟದಲ್ಲಿ ಗಾಯಗೊಂಡಿದ್ದ ಮಾರ್ತಾಂಡ ಆನೆ ಸಾವು, ತಪ್ಪು ಯಾರದ್ದು?
ವಿವಾಹ ವಾರ್ಷಿಕೋತ್ಸವ: ದರ್ಶನ್ ಭೇಟಿಗೆ ಜೈಲಿಗೆ ಬಂದ ವಿಜಯಲಕ್ಷ್ಮಿ
ವಿವಾಹ ವಾರ್ಷಿಕೋತ್ಸವ: ದರ್ಶನ್ ಭೇಟಿಗೆ ಜೈಲಿಗೆ ಬಂದ ವಿಜಯಲಕ್ಷ್ಮಿ
ಲಿಫ್ಟ್‌ನಲ್ಲಿ ಸಿಲುಕಿದ್ದ 9 ಜನರನ್ನ ರಕ್ಷಿಸಿದ ಅಗ್ನಿಶಾಮಕ ಸಿಬ್ಬಂದಿ
ಲಿಫ್ಟ್‌ನಲ್ಲಿ ಸಿಲುಕಿದ್ದ 9 ಜನರನ್ನ ರಕ್ಷಿಸಿದ ಅಗ್ನಿಶಾಮಕ ಸಿಬ್ಬಂದಿ
ಯತ್ನಾಳ್​​ ಹೇಳಿಕೆ ಬೆಂಬಲಿಸಿದ ಗಂಗಾವತಿ ಶಾಸಕ ಜನಾರ್ದನ ರೆಡ್ಡಿ!
ಯತ್ನಾಳ್​​ ಹೇಳಿಕೆ ಬೆಂಬಲಿಸಿದ ಗಂಗಾವತಿ ಶಾಸಕ ಜನಾರ್ದನ ರೆಡ್ಡಿ!