AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

‘ಸಲಾರ್’ ಚಿತ್ರದ ಬಗ್ಗೆ ಹೊಸ ಅಪ್​ಡೇಟ್​; ಯಾವ ಹಂತದಲ್ಲಿದೆ ಪ್ರಶಾಂತ್ ನೀಲ್-ಪ್ರಭಾಸ್ ಸಿನಿಮಾ?

‘ಕೆಜಿಎಫ್ 2’ ತೆರೆಕಂಡು ಇನ್ನೇನು ‘ಸಲಾರ್’ ಸಿನಿಮಾದ ಶೂಟಿಂಗ್ ಆರಂಭವಾಯಿತು ಎನ್ನುವಾಗ ಪ್ರಭಾಸ್ ಶಸ್ತ್ರಚಿಕಿತ್ಸೆಗೆ ಒಳಗಾದರು. ಈಗ ಅವರು ಒಂದು ತಿಂಗಳು ವಿಶ್ರಾಂತಿ ಪಡೆದು ಶೂಟಿಂಗ್ ಸೆಟ್​ಗೆ ಆಗಮಿಸಿದ್ದಾರೆ.

‘ಸಲಾರ್’ ಚಿತ್ರದ ಬಗ್ಗೆ ಹೊಸ ಅಪ್​ಡೇಟ್​; ಯಾವ ಹಂತದಲ್ಲಿದೆ ಪ್ರಶಾಂತ್ ನೀಲ್-ಪ್ರಭಾಸ್ ಸಿನಿಮಾ?
ಶ್ರುತಿ-ಪ್ರಭಾಸ್
TV9 Web
| Edited By: |

Updated on: Jun 29, 2022 | 6:35 AM

Share

ನಿರ್ದೇಶಕ ಪ್ರಶಾಂತ್ ನೀಲ್ (Prashanth Neel) ಬಗ್ಗೆ ಜನರಲ್ಲಿ ಸಾಕಷ್ಟು ನಿರೀಕ್ಷೆಗಳು ಸೃಷ್ಟಿ ಆಗಿವೆ. ಅವರ ನಿರ್ದೇಶನದ ‘ಸಲಾರ್’ ಸಿನಿಮಾದ ಅಪ್​ಡೇಟ್​ಗಾಗಿ ಫ್ಯಾನ್ಸ್ ಕಾದು ಕೂತಿದ್ದಾರೆ. ‘ಕೆಜಿಎಫ್ 2’ (KGF:Chapter 2) ತೆರೆಕಂಡ ನಂತರದಲ್ಲಿ ಪ್ರಶಾಂತ್ ನೀಲ್ ಅವರು ಈ ಸಿನಿಮಾ ಕೆಲಸಗಳಲ್ಲಿ ತೊಡಗಿಕೊಂಡಿದ್ದಾರೆ. ಪ್ರಭಾಸ್ (Prabhas) ಅವರು ಈ ಚಿತ್ರದಲ್ಲಿ ಮುಖ್ಯ ಪಾತ್ರದಲ್ಲಿ ಕಾಣಿಸಿಕೊಳ್ಳುತ್ತಿದ್ದಾರೆ. ಅವರಿಗೆ ಶ್ರುತಿ ಹಾಸನ್ ಜತೆಯಾಗಿದ್ದಾರೆ.  ಸದ್ಯ, ಸಿನಿಮಾ ಬಗ್ಗೆ ಹೊಸ ಅಪ್​ಡೇಟ್ ಒಂದು ಸಿಕ್ಕಿದೆ. ಸಿನಿಮಾ ಯಾವ ಹಂತದಲ್ಲಿದೆ ಎನ್ನುವ ಬಗ್ಗೆ ಸಿನಿಮಾ ತಂಡದ ಮೂಲಗಳಿಂದ ಮಾಹಿತಿ ಸಿಕ್ಕಿದೆ.

‘ಸಲಾರ್’ ಸಿನಿಮಾ ಕೆಲಸಗಳು ಆರಂಭವಾಗಿ ಹಲವು ಸಮಯ ಕಳೆದಿದೆ. ಕೊವಿಡ್ ಕಾರಣದಿಂದ ಚಿತ್ರದ ಶೂಟಿಂಗ್ ವಿಳಂಬವಾಯಿತು. ಪ್ರಶಾಂತ್ ನೀಲ್ ‘ಕೆಜಿಎಫ್ 2’ ಚಿತ್ರದ ಬಿಡುಗಡೆ ಕೆಲಸದಲ್ಲಿ ಬ್ಯುಸಿ ಆಗಿದ್ದರಿಂದ ‘ಸಲಾರ್’ ಬಗ್ಗೆ ಗಮನ ಹರಿಸಲು ಅವರಿಗೆ ಸಾಧ್ಯವಾಗಿಲ್ಲ. ‘ಕೆಜಿಎಫ್ 2’ ತೆರೆಕಂಡು ಇನ್ನೇನು ‘ಸಲಾರ್’ ಸಿನಿಮಾದ ಶೂಟಿಂಗ್ ಆರಂಭವಾಯಿತು ಎನ್ನುವಾಗ ಪ್ರಭಾಸ್ ಶಸ್ತ್ರಚಿಕಿತ್ಸೆಗೆ ಒಳಗಾದರು. ಈಗ ಅವರು ಒಂದು ತಿಂಗಳು ವಿಶ್ರಾಂತಿ ಪಡೆದು ಶೂಟಿಂಗ್ ಸೆಟ್​ಗೆ ಆಗಮಿಸಿದ್ದಾರೆ.

ಹೈದರಾಬಾದ್​ನ ರಾಮೋಜಿ ಫಿಲ್ಮ್​ ಸಿಟಿಯಲ್ಲಿ ‘ಸಲಾರ್’ ಸಿನಿಮಾದ ಶೂಟಿಂಗ್ ಭರದಿಂದ ಸಾಗುತ್ತಿದೆ. ಪ್ರಭಾಸ್ ಹಾಗೂ ಶ್ರುತಿ ಹಾಸನ್ ಇಬ್ಬರೂ ಶೂಟಿಂಗ್​ನಲ್ಲಿ ಪಾಲ್ಗೊಳ್ಳುತ್ತಿದ್ದಾರೆ. ಪ್ರಮುಖ ಆ್ಯಕ್ಷನ್ ದೃಶ್ಯವೊಂದರ ಶೂಟಿಂಗ್ ನಡೆಯುತ್ತಿದೆ ಎಂದು ವರದಿ ಆಗಿದೆ. ಇಷ್ಟಾದರೂ ಅಪ್​ಡೇಟ್ ಸಿಕ್ಕಿತಲ್ಲ ಎಂದು ಫ್ಯಾನ್ಸ್ ಖುಷಿ ಪಟ್ಟಿದ್ದಾರೆ. ಈ ಮೊದಲು ಚಿತ್ರದ ಶೇ.35 ಶೂಟಿಂಗ್ ಪೂರ್ಣಗೊಂಡಿತ್ತು.

ಇದನ್ನೂ ಓದಿ
Image
‘ಸಲಾರ್ ಚಿತ್ರದಲ್ಲಿ ನಾನೂ ನಟಿಸುತ್ತಿದ್ದೇನೆ’; ಬ್ರೇಕಿಂಗ್ ನ್ಯೂಸ್ ನೀಡಿದ ನಟ ಪೃಥ್ವಿರಾಜ್​ ಸುಕುಮಾರನ್
Image
‘ಕೆಜಿಎಫ್ 2’ ಬಳಿಕ ಮಹತ್ವದ ಬದಲಾವಣೆ ಮಾಡಿಕೊಂಡ ಪ್ರಶಾಂತ್ ನೀಲ್​; ಏನದು?
Image
‘ನಿಮ್ಮ ತುಟಿಗಳ ಸೈಜ್​ ಏನು’? ಶ್ರುತಿ ಹಾಸನ್​ಗೆ ಪ್ರಶ್ನೆ ಕೇಳಿದ ಭೂಪ; ನಟಿಯಿಂದ ಬಂತು ಪ್ರತಿಕ್ರಿಯೆ
Image
‘ಕೆಜಿಎಫ್ 2’ ರಿಲೀಸ್ ದಿನವೇ ಅಭಿಮಾನಿಗಳಿಗೆ ಸಿಕ್ತು ಎರಡೆರಡು ಸರ್​ಪ್ರೈಸ್

ಮೇ ಅಂತ್ಯಕ್ಕೆ ‘ಸಲಾರ್’ ಚಿತ್ರದ ಟೀಸರ್ ರಿಲೀಸ್ ಆಗಲಿದೆ ಎನ್ನುವ ಸುದ್ದಿ ಹೊರಬಿದ್ದಿತ್ತು. ಆದರೆ, ಚಿತ್ರತಂಡದಿಂದ ಆ ರೀತಿಯ ಯಾವುದೇ ಅಪ್​ಡೇಟ್ ಬರಲಿಲ್ಲ. ‘ಸಲಾರ್’ ಸಿನಿಮಾದ ಕೆಲ ಪೋಸ್ಟರ್​ಗಳು ಮಾತ್ರ ರಿಲೀಸ್ ಆಗಿವೆ. ಅದನ್ನು ಹೊರತುಪಡಿಸಿ ಸೆಟ್​ನ ಕೆಲ ಫೋಟೋ ಹಾಗೂ ಶೂಟಿಂಗ್ ಸಂದರ್ಭದ ಕೆಲ ದೃಶ್ಯಗಳು ಈ ಮೊದಲು ಲೀಕ್ ಆಗಿದ್ದವು. ಈ ಬಗ್ಗೆ ಚಿತ್ರತಂಡ ಅಸಮಾಧಾನ ಹೊರಹಾಕಿತ್ತು.

‘ಕೆಜಿಎಫ್ 2’ ಬಳಿಕ ಪ್ರಶಾಂತ್ ನೀಲ್ ಹಾಗೂ ನಿರ್ಮಾಪಕ ವಿಜಯ್ ಕಿರಗಂದೂರು ‘ಸಲಾರ್’ ಚಿತ್ರಕ್ಕಾಗಿ ಮತ್ತೆ ಒಂದಾಗಿದ್ದಾರೆ. ಈ ಸಿನಿಮಾಗೆ ಹೊಂಬಾಳೆ ಫಿಲ್ಮ್ಸ್ ಬಂಡವಾಳ ಹೂಡುತ್ತಿದೆ. ಬಿಗ್ ಬಜೆಟ್​ನಲ್ಲಿ ಚಿತ್ರ ಮೂಡಿ ಬರುತ್ತಿದೆ.

ಇದನ್ನೂ ಓದಿ: ದುನಿಯಾ ವಿಜಯ್​ ನಟನೆಯ ತೆಲುಗು ಚಿತ್ರದ ಶೂಟಿಂಗ್​ನಲ್ಲಿ ಪಾಲ್ಗೊಂಡ ‘ಸಲಾರ್’ ಬೆಡಗಿ ಶ್ರುತಿ ಹಾಸನ್​

‘ಸಲಾರ್ ಚಿತ್ರದಲ್ಲಿ ನಾನೂ ನಟಿಸುತ್ತಿದ್ದೇನೆ’; ಬ್ರೇಕಿಂಗ್ ನ್ಯೂಸ್ ನೀಡಿದ ನಟ ಪೃಥ್ವಿರಾಜ್​ ಸುಕುಮಾರನ್

Follow Us
ಸಿಲಿಂಡರ್ ಕದ್ದು ಪರಾರಿಯಾದ ಕಳ್ಳರು; ಸಿಸಿಟಿವಿಯಲ್ಲಿ ಖತರ್ನಾಕ್ ಕೃತ್ಯ ಸೆರೆ
ಸಿಲಿಂಡರ್ ಕದ್ದು ಪರಾರಿಯಾದ ಕಳ್ಳರು; ಸಿಸಿಟಿವಿಯಲ್ಲಿ ಖತರ್ನಾಕ್ ಕೃತ್ಯ ಸೆರೆ
ಪಶುವೈದ್ಯೆ ಸಾವು: ಅಧಿಕಾರಿಗಳ ನಿರ್ಲಕ್ಷ್ಯವೇ ಕಾರಣ; ಸಮೀಕ್ಷಾ ರೆಡ್ಡಿ ಮಾವ
ಪಶುವೈದ್ಯೆ ಸಾವು: ಅಧಿಕಾರಿಗಳ ನಿರ್ಲಕ್ಷ್ಯವೇ ಕಾರಣ; ಸಮೀಕ್ಷಾ ರೆಡ್ಡಿ ಮಾವ
ಪ್ರವಾಹದಿಂದ ಬಿಹಾರದ ವಿಕ್ರಮಶಿಲಾ ಸೇತುವೆಯ ಕಂಬಕ್ಕೆ ಹಾನಿ
ಪ್ರವಾಹದಿಂದ ಬಿಹಾರದ ವಿಕ್ರಮಶಿಲಾ ಸೇತುವೆಯ ಕಂಬಕ್ಕೆ ಹಾನಿ
ಡಿಕೆಶಿ​​​ನ್ನ ಸಿಎಂ ಮಾಡಿ ಎಂದಿದ್ದಕ್ಕೆ ಬಜೆಟ್​​ನಲ್ಲಿ 1 ರೂ ನೀಡಿಲ್ಲ
ಡಿಕೆಶಿ​​​ನ್ನ ಸಿಎಂ ಮಾಡಿ ಎಂದಿದ್ದಕ್ಕೆ ಬಜೆಟ್​​ನಲ್ಲಿ 1 ರೂ ನೀಡಿಲ್ಲ
ರೂಮಿನಲ್ಲಿ ಕೂಡಿ ಹಾಕಿ ಬೆಲ್ಟ್‌ನಿಂದ ಬಾರಿಸಿದ ಪ್ರಿನ್ಸಿಪಾಲ್!
ರೂಮಿನಲ್ಲಿ ಕೂಡಿ ಹಾಕಿ ಬೆಲ್ಟ್‌ನಿಂದ ಬಾರಿಸಿದ ಪ್ರಿನ್ಸಿಪಾಲ್!
ರಂಜಾನ್ ನಮಾಜ್ ವೇಳೆ ಹೆಜ್ಜೇನು ದಾಳಿ
ರಂಜಾನ್ ನಮಾಜ್ ವೇಳೆ ಹೆಜ್ಜೇನು ದಾಳಿ
‘ಸಿನಿಮಾ ಸೋತಾಗ ಆ ಮಾತನ್ನು ಯಾರಿಗೂ ಹೇಳೇಡಿ’; ರವಿಚಂದ್ರನ್ ಕೋರಿಕೆ
‘ಸಿನಿಮಾ ಸೋತಾಗ ಆ ಮಾತನ್ನು ಯಾರಿಗೂ ಹೇಳೇಡಿ’; ರವಿಚಂದ್ರನ್ ಕೋರಿಕೆ
IPLಗೆ ಚಿನ್ನಸ್ವಾಮಿ ಸಜ್ಜು, ಏನೇನು ಮುನ್ನೆಚ್ಚೆರಿಕೆ ಕೈಗೊಂಡಿದ್ದಾರೆ ನೋಡಿ!
IPLಗೆ ಚಿನ್ನಸ್ವಾಮಿ ಸಜ್ಜು, ಏನೇನು ಮುನ್ನೆಚ್ಚೆರಿಕೆ ಕೈಗೊಂಡಿದ್ದಾರೆ ನೋಡಿ!
ವಿದ್ಯುತ್ ಕಂಬಕ್ಕೆ ಡಿಕ್ಕಿ ಹೊಡೆದು ಕೆಎಸ್​ಆರ್​ಟಿಸಿ ಬಸ್ ಪಲ್ಟಿ!
ವಿದ್ಯುತ್ ಕಂಬಕ್ಕೆ ಡಿಕ್ಕಿ ಹೊಡೆದು ಕೆಎಸ್​ಆರ್​ಟಿಸಿ ಬಸ್ ಪಲ್ಟಿ!
ಪೆಟ್ರೋಲ್, ಡೀಸೆಲ್​ಗಾಗಿ ರಿಪ್ಪನ್‌ಪೇಟೆ ಬಂಕ್ ಮುಂದೆ ಮುಗಿಬಿದ್ರು ಜನ!
ಪೆಟ್ರೋಲ್, ಡೀಸೆಲ್​ಗಾಗಿ ರಿಪ್ಪನ್‌ಪೇಟೆ ಬಂಕ್ ಮುಂದೆ ಮುಗಿಬಿದ್ರು ಜನ!