AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಪ್ರಭಾಸ್ ಅಭಿಮಾನಿಗಳಿಗೆ ಒಂದೇ ದಿನ ಎರಡೆರಡು ಉಡುಗೊರೆ

Prabhas Fans: ಪ್ರಭಾಸ್ ನಾಯಕನಾಗಿ ನಟಿಸಿದ ಸಿನಿಮಾ ಬಿಡುಗಡೆ ಆಗಿ ಎರಡು ವರ್ಷವಾಗುತ್ತಾ ಬಂದಿದೆ. ಆದರೆ ಇದೀಗ ಪ್ರಭಾಸ್ ಅಭಿಮಾನಿಗಳು ಖುಷಿ ಪಡುವ ಸುದ್ದಿ ದೊರೆತಿದೆ. ಪ್ರಭಾಸ್ ನಟನೆಯ ಎರಡು ಬಹು ನಿರೀಕ್ಷಿತ ಸಿನಿಮಾಗಳ ಬಗೆಗಿನ ಅಪ್​​ಡೇಟ್ ಒಂದೇ ದಿನ ಹೊರಬಿದ್ದಿದೆ. ಯಾವುವು ಆ ಸಿನಿಮಾಗಳು? ಅಪ್​​ಡೇಟ್ ಏನು?

ಪ್ರಭಾಸ್ ಅಭಿಮಾನಿಗಳಿಗೆ ಒಂದೇ ದಿನ ಎರಡೆರಡು ಉಡುಗೊರೆ
Prabhas
ಮಂಜುನಾಥ ಸಿ.
|

Updated on: Nov 23, 2025 | 7:56 PM

Share

ಪ್ರಭಾಸ್ (Prabhas), ಪ್ಯಾನ್ ಇಂಡಿಯಾ ಸ್ಟಾರ್ ನಟ. ಪ್ರಭಾಸ್ ನಾಯಕನಾಗಿ ನಟಿಸಿದ ಸಿನಿಮಾ ಒಂದು ಬಿಡುಗಡೆ ಆಗಿ ಸುಮಾರು ಎರಡು ವರ್ಷಗಳಾಗುತ್ತಾ ಬಂತು. 2024ರ ಜೂನ್ ತಿಂಗಳಲ್ಲಿ ಪ್ರಭಾಸ್ ನಟನೆಯ ‘ಕಲ್ಕಿ 2898 ಎಡಿ’ ಸಿನಿಮಾ ಬಿಡುಗಡೆ ಆಗಿತ್ತು. ಅದಾದ ಬಳಿಕ ಯಾವುದೇ ಸಿನಿಮಾಗಳು ಬಂದಿಲ್ಲ. ‘ದಿ ರಾಜಾ ಸಾಬ್’ ಸಿನಿಮಾ ಬಿಡುಗಡೆ ಆಗಿ ತಿಂಗಳುಗಳೇ ಆಗಬೇಕಿತ್ತು, ಆದರೆ ಅದರ ಬಿಡುಗಡೆ ಮುಂದೂಡುತ್ತಲೇ ಬರಲಾಗುತ್ತಿದೆ. ಮೆಚ್ಚಿನ ನಟನ ಸಿನಿಮಾ ಇಲ್ಲದೆ, ಸಿನಿಮಾಗಳ ಅಪ್​ಡೇಟ್ ಇಲ್ಲದೆ ಬೇಸರಗೊಂಡಿದ್ದ ಅಭಿಮಾನಿಗಳಿಗೆ ಒಂದೇ ದಿನ ಎರಡೆರಡು ಸಿಹಿ ಸುದ್ದಿ ಸಿಕ್ಕಿದೆ.

ಇಂದು (ನವೆಂಬರ್ 23) ಪ್ರಭಾಸ್ ಅವರ ಎರಡು ಸಿನಿಮಾಗಳ ಅಪ್​ಡೇಟ್​​ಗಳು ಹೊರ ಬಿದ್ದಿವೆ. ಪ್ರಭಾಸ್ ನಟನೆಯ ‘ದಿ ರಾಜಾ ಸಾಬ್’ ಸಿನಿಮಾದ ಹಾಡು ಬಿಡುಗಡೆ ಆಗಿದೆ. ‘ದಿ ರಾಜಾ ಸಾಬ್’ ಸಿನಿಮಾದ ‘ರೆಬೆಲ್ ಸಾಂಗ್’ ಇಂದು ಟಿ ಸೀರೀಸ್​​ ಯೂಟ್ಯೂಬ್ ಚಾನೆಲ್​​ನಲ್ಲಿ ಬಿಡುಗಡೆ ಆಗಿದೆ. ಈ ಹಾಡು ಪ್ರಭಾಸ್ ಅವರನ್ನು ಕೊಂಡಾಡುವ ಹಾಡಾಗಿದ್ದು, ‘ಪ್ಯಾನ್ ಇಂಡಿಯಾ ನಂಬರ್ 1’, ‘ರೆಬೆಲ್ ಸ್ಟಾರ್’ ಇತ್ಯಾದಿ ಪದಗಳನ್ನು ಬಳಸಿ, ಪ್ರಭಾಸ್ ಅಭಿಮಾನಿಗಳಿಗಾಗಿಯೇ ಮಾಡಿದ ಹಾಡಿನಂತಿದೆ.

ಇನ್ನು ಇದೇ ದಿನ ಪ್ರಭಾಸ್ ನಟನೆಯ ಹೊಸ ಸಿನಿಮಾ ‘ಸ್ಪಿರಿಟ್’ನ ಮುಹೂರ್ತವೂ ನಡೆದಿದ್ದು, ಅಧಿಕೃತವಾಗಿ ಸಿನಿಮಾದ ಚಿತ್ರೀಕರಣ ಪ್ರಾರಂಭ ಆಗಿದೆ. ಪ್ರಭಾಸ್ ನಟನೆಯ ‘ಸ್ಪಿರಿಟ್’ ಸಿನಿಮಾದ ಮುಹೂರ್ತ ಇಂದು (ನವೆಂಬರ್ 23) ನಡೆದಿದೆ. ಮೆಗಾಸ್ಟಾರ್ ಚಿರಂಜೀವಿ, ಮುಹೂರ್ತ ಕಾರ್ಯಕ್ರಮಕ್ಕೆ ಅತಿಥಿಯಾಗಿ ಆಗಮಿಸಿದ್ದು, ಕ್ಲ್ಯಾಪ್ ಮಾಡಿ ಚಿತ್ರತಂಡಕ್ಕೆ ಶುಭ ಕೋರಿದರು. ಮುಹೂರ್ತ ಕಾರ್ಯಕ್ರಮದಲ್ಲಿ ನಾಯಕಿ ತೃಪ್ತಿ ದಿಮ್ರಿ ಸಹ ಇದ್ದರು. ನಿರ್ದೇಶಕ ಸಂದೀಪ್ ರೆಡ್ಡಿ ವಂಗಾ ಸಹ ಹಾಜರಿದ್ದರು. ಮುಹೂರ್ತ ಸಮಯದಲ್ಲಿ ಪ್ರಭಾಸ್ ಸಹ ಇದ್ದರಾದರೂ ಪ್ರಭಾಸ್ ಅವರ ಚಿತ್ರಗಳನ್ನು ಹಂಚಿಕೊಳ್ಳಲಾಗಿಲ್ಲ.

ಇದನ್ನೂ ಓದಿ:ಪ್ರಭಾಸ್​​ಗೆ ಮೊದಲ ಅವಕಾಶ ಕೊಟ್ಟಿದ್ದು ಒಬ್ಬ ಕನ್ನಡಿಗ, ಆಗ ಸಂಭಾವನೆ ಎಷ್ಟು ಗೊತ್ತೆ?

‘ದಿ ರಾಜಾ ಸಾಬ್’ ಸಿನಿಮಾ ಹಾರರ್ ಕಾಮಿಡಿ ಸಿನಿಮಾ ಆಗಿದ್ದು, ಈ ಸಿನಿಮಾನಲ್ಲಿ ದ್ವಿಪಾತ್ರದಲ್ಲಿ ನಟ ಪ್ರಭಾಸ್ ಕಾಣಿಸಿಕೊಂಡಿದ್ದಾರೆ. ತಾತ ಹಾಗೂ ಮೊಮ್ಮಗನ ಪಾತ್ರದಲ್ಲಿ ಪ್ರಭಾಸ್ ನಟಿಸಿದ್ದಾರೆ. ಸಿನಿಮಾದ ವಿಎಫ್​​ಎಕ್ಸ್ ಕಾರ್ಯ ಪ್ರಭಾಸ್ ಅವರಿಗೆ ತೃಪ್ತಿ ನೀಡದ ಕಾರಣ ಸಿನಿಮಾದ ವಿಎಫ್​​ಎಕ್ಸ್ ಅನ್ನು ಮತ್ತೆ ಮಾಡಿಸಲಾಗಿದ್ದು, ಇದೇ ಕಾರಣಕ್ಕೆ ಸಿನಿಮಾದ ಬಿಡುಗಡೆ ತಡ ಆಗಿದೆ ಎನ್ನಲಾಗುತ್ತಿದೆ.

ಇನ್ನು ‘ಸ್ಪಿರಿಟ್’ ಸಿನಿಮಾವನ್ನು ಸಂದೀಪ್ ರೆಡ್ಡಿ ವಂಗಾ ನಿರ್ದೇಶನ ಮಾಡುತ್ತಿದ್ದು, ಭೂಷಣ್ ಕುಮಾರ್ ನಿರ್ಮಾಣ ಮಾಡುತ್ತಿದ್ದಾರೆ. ಈ ಸಿನಿಮಾನಲ್ಲಿ ಪ್ರಭಾಸ್ ನಿಷ್ಠಾವಂತ ಪೊಲೀಸ್ ಅಧಿಕಾರಿಯ ಪಾತ್ರದಲ್ಲಿ ನಟಿಸುತ್ತಿದ್ದಾರೆ. ಸಿನಿಮಾನಲ್ಲಿ ವಿವೇಕ್ ಒಬೆರಾಯ್ ಮತ್ತು ಪ್ರಕಾಶ್ ರೈ ಸಹ ನಟಿಸುತ್ತಿದ್ದಾರೆ. ತೃಪ್ತಿ ದಿಮ್ರಿ ಈ ಸಿನಿಮಾದ ನಾಯಕಿ.

ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Follow Us
ಮಂಜುನಾಥ ಸಿ.
ಮಂಜುನಾಥ ಸಿ.

ಮಂಜುನಾಥ ಸಿ, ಬೆಂಗಳೂರು ಗ್ರಾಮಾಂತರ, ವಿಜಯರಪುರ ಪಟ್ಟಣ ನಿವಾಸಿ. ಕಳೆದ ಏಳು ವರ್ಷಗಳಿಂದ ಪತ್ರಿಕೋದ್ಯಮದಲ್ಲಿ ಸಕ್ರಿಯನಾಗಿದ್ದೇನೆ. ಕಳೆದ ಐದು ವರ್ಷದಿಂದ ಡಿಜಿಟಲ್ ಪತ್ರಿಕೋದ್ಯಮದಲ್ಲಿ ತೊಡಗಿಕೊಂಡಿದ್ದೇನೆ. ಈ ಹಿಂದೆ ಪ್ರಜಾವಾಣಿ, ಒನ್ ಇಂಡಿಯಾ ಕನ್ನಡ ಸಂಸ್ಥೆಗಳ ವಿವಿಧ ವಿಭಾಗಗಳಲ್ಲಿ ಕೆಲಸ ಮಾಡಿದ್ದೇನೆ. ಪ್ರಸ್ತುತ ಟಿವಿ9 ಕನ್ನಡ ಡಿಜಿಟಲ್​ನ ಸಿನಿಮಾ ವಿಭಾಗದಲ್ಲಿ ಕೆಲಸ ಮಾಡುತ್ತಿದ್ದೇನೆ. ಮೆಚ್ಚಿನ ಹವ್ಯಾಸ ಸಿನಿಮಾ ವೀಕ್ಷಣೆ, ಪುಸ್ತಕಗಳನ್ನು ಓದುವುದು.

Read More
2028ರ ಎಲೆಕ್ಷನ್ ಗೆಲ್ಲಲು ಜೋಶಿಗೆ ಸಾರಥ್ಯ?ಇದಕ್ಕೆ ಅವರು ಹೇಳಿದ್ದೇನು?
2028ರ ಎಲೆಕ್ಷನ್ ಗೆಲ್ಲಲು ಜೋಶಿಗೆ ಸಾರಥ್ಯ?ಇದಕ್ಕೆ ಅವರು ಹೇಳಿದ್ದೇನು?
ದೀದಿ ಕೋಟೆಯನ್ನು ಬಿಜೆಪಿ ಛಿದ್ರಗೊಳಿಸಿದ್ದು ಹೇಗೆ? ಪ್ರಲ್ಹಾದ್ ಜೋಶಿ ಮಾಹಿತಿ
ದೀದಿ ಕೋಟೆಯನ್ನು ಬಿಜೆಪಿ ಛಿದ್ರಗೊಳಿಸಿದ್ದು ಹೇಗೆ? ಪ್ರಲ್ಹಾದ್ ಜೋಶಿ ಮಾಹಿತಿ
ಮಮತಾ ಬ್ಯಾನರ್ಜಿ ಮನೆ ಹೊರಗೆ ಟಿಎಂಸಿ ಶಾಸಕ ಕುನಾಲ್ ಘೋಷ್ ಮೇಲೆ ಮೊಟ್ಟೆ ದಾಳಿ
ಮಮತಾ ಬ್ಯಾನರ್ಜಿ ಮನೆ ಹೊರಗೆ ಟಿಎಂಸಿ ಶಾಸಕ ಕುನಾಲ್ ಘೋಷ್ ಮೇಲೆ ಮೊಟ್ಟೆ ದಾಳಿ
ಮಾಜಿ ಸೈನಿಕನ ಸಾವಿಗೆ ಟ್ವಿಸ್ಟ್​:FSL ವರದಿಯನ್ನೇ ತಿರುಚಿದ ಗ್ಯಾಂಗ್!
ಮಾಜಿ ಸೈನಿಕನ ಸಾವಿಗೆ ಟ್ವಿಸ್ಟ್​:FSL ವರದಿಯನ್ನೇ ತಿರುಚಿದ ಗ್ಯಾಂಗ್!
ಮೋದಿ ಅಧಿಕಾರ ಸಾಕು ಅಂದಿದ್ರು; ಅಚ್ಚರಿಯ ಸಂಗತಿ ಬಿಚ್ಚಿಟ್ಟ ಪ್ರಲ್ಹಾದ್ ಜೋಶಿ
ಮೋದಿ ಅಧಿಕಾರ ಸಾಕು ಅಂದಿದ್ರು; ಅಚ್ಚರಿಯ ಸಂಗತಿ ಬಿಚ್ಚಿಟ್ಟ ಪ್ರಲ್ಹಾದ್ ಜೋಶಿ
ಕಾಕ್ರೋಜ್‌ ಪಾರ್ಟಿ ಸಂಸ್ಥಾಪಕನಿಗೆ ಕಪಾಳಮೋಕ್ಷ: ವಿಡಿಯೋ ವೈರಲ್‌
ಕಾಕ್ರೋಜ್‌ ಪಾರ್ಟಿ ಸಂಸ್ಥಾಪಕನಿಗೆ ಕಪಾಳಮೋಕ್ಷ: ವಿಡಿಯೋ ವೈರಲ್‌
RSS ವಿವರಣೆ ಕೇಳಿದ ಪ್ರಿಯಾಂಕ್ ಖರ್ಗೆಗೆ ತೇಜಸ್ವಿ ಸೂರ್ಯ ಖಡಕ್ ಉತ್ತರ
RSS ವಿವರಣೆ ಕೇಳಿದ ಪ್ರಿಯಾಂಕ್ ಖರ್ಗೆಗೆ ತೇಜಸ್ವಿ ಸೂರ್ಯ ಖಡಕ್ ಉತ್ತರ
ಜಮೀರ್‌ಗೆ ಸಚಿವ ಸ್ಥಾನ ನೀಡಬೇಕೆಂದು ಪಟ್ಟು: ಪಾದರಾಯನಪುರದಲ್ಲಿ ಹೈಡ್ರಾಮಾ
ಜಮೀರ್‌ಗೆ ಸಚಿವ ಸ್ಥಾನ ನೀಡಬೇಕೆಂದು ಪಟ್ಟು: ಪಾದರಾಯನಪುರದಲ್ಲಿ ಹೈಡ್ರಾಮಾ
ತಾಯಿಯಿಂದ ಬೇರ್ಪಟ್ಟು ಗ್ರಾಮಕ್ಕೆ ಬಂದ ಮರಿಯಾನೆ: ಆಹಾರ ನೀಡಿದ ಗ್ರಾಮಸ್ಥರು!
ತಾಯಿಯಿಂದ ಬೇರ್ಪಟ್ಟು ಗ್ರಾಮಕ್ಕೆ ಬಂದ ಮರಿಯಾನೆ: ಆಹಾರ ನೀಡಿದ ಗ್ರಾಮಸ್ಥರು!
ಅನಾರೋಗ್ಯ ಹಿನ್ನೆಲೆ ಆಸ್ಪತ್ರೆಗೆ ದಾಖಲಾದ ಶಾಸಕ ಇಕ್ಬಾಲ್ ಹುಸೇನ್
ಅನಾರೋಗ್ಯ ಹಿನ್ನೆಲೆ ಆಸ್ಪತ್ರೆಗೆ ದಾಖಲಾದ ಶಾಸಕ ಇಕ್ಬಾಲ್ ಹುಸೇನ್