AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಜೈಲಿಗೆ ಹೋಗಲಿರುವ ಪ್ರಭಾಸ್; ಆದರೆ ಅಭಿಮಾನಿಗಳಿಗೆ ಆತಂಕ ಬೇಡ

‘ಅರ್ಜುನ್ ರೆಡ್ಡಿ’, ‘ಅನಿಮಲ್’ ರೀತಿಯ ರಗಡ್ ಸಿನಿಮಾಗಳನ್ನು ಮಾಡಿದ ಸಂದೀಪ್ ರೆಡ್ಡಿ ವಂಗಾ ಜೊತೆ ನಟ ಪ್ರಭಾಸ್ ಅವರು ‘ಸ್ಪಿರಿಟ್’ ಸಿನಿಮಾ ಮಾಡುತ್ತಿದ್ದಾರೆ. ಇದಕ್ಕಾಗಿ ಹೈದರಾಬಾದ್‌ನ ಚಂಚಲಗೂಡ ಜೈಲಿಗೆ ಅವರು ಜೈಲಿಗೆ ಹೋಗಬೇಕಾಗಿದೆ. ಜೈಲು ಎಂದರೆ ಆತಂಕ ಬೇಡ. ಅವರು ಅಲ್ಲಿಗೆ ಹೋಗುತ್ತಿರುವುದು ಶೂಟಿಂಗ್ ಸಲುವಾಗಿ ಮಾತ್ರ!

ಜೈಲಿಗೆ ಹೋಗಲಿರುವ ಪ್ರಭಾಸ್; ಆದರೆ ಅಭಿಮಾನಿಗಳಿಗೆ ಆತಂಕ ಬೇಡ
Prabhas
ಮದನ್​ ಕುಮಾರ್​
|

Updated on: Jun 21, 2026 | 8:10 AM

Share

ಪ್ಯಾನ್-ಇಂಡಿಯಾ ಸ್ಟಾರ್ ನಟ ಪ್ರಭಾಸ್ (Prabhas) ಅವರು ಈಗ ‘ಸ್ಪಿರಿಟ್’ ಸಿನಿಮಾದ ಕೆಲಸಗಳಲ್ಲಿ ಬ್ಯುಸಿ ಆಗಿದ್ದಾರೆ. ಈ ಚಿತ್ರದ ಶೂಟಿಂಗ್ ಭರದಿಂದ ಸಾಗುತ್ತಿದೆ. ಈ ಸಿನಿಮಾಗೆ ಸ್ಟಾರ್ ನಿರ್ದೇಶಕ ಸಂದೀಪ್ ರೆಡ್ಡಿ ವಂಗಾ (Sandeep Reddy Vanga) ಅವರು ಆ್ಯಕ್ಷನ್-ಕಟ್ ಹೇಳಿರುವುದರಿಂದ ನಿರೀಕ್ಷೆ ಜಾಸ್ತಿ ಇದೆ. ಈ ನಡುವೆ ಪ್ರಭಾಸ್ ಅವರು ಜೈಲಿಗೆ ಹೋಗಲಿದ್ದಾರೆ ಎಂಬ ಸುದ್ದಿ ಕೇಳಿಬಂದಿದೆ. ಅಂದರೆ, ಅವರು ಜೈಲಿನ ಒಳಗೆ ಕಾಲಿಟ್ಟಿರುವುದು ‘ಸ್ಪಿರಿಟ್’ (Spirit) ಸಿನಿಮಾದ ಶೂಟಿಂಗ್ ಸಲುವಾಗಿ! ಅದಕ್ಕಾಗಿ ಚಿತ್ರತಂಡ ಸಂಪೂರ್ಣ ತಯಾರಿ ಮಾಡಿಕೊಂಡಿದೆ.

ಚಿತ್ರರಂಗದ ಲೇಟೆಸ್ಟ್ ಮಾಹಿತಿ ಪ್ರಕಾರ, ‘ಸ್ಪಿರಿಟ್’ ಚಿತ್ರದ ಅತ್ಯಂತ ಪ್ರಮುಖ ದೃಶ್ಯಗಳ ಚಿತ್ರೀಕರಣ ಹೈದರಾಬಾದ್‌ನ ಪ್ರಸಿದ್ಧ ಚಂಚಲಗೂಡ ಜೈಲಿನಲ್ಲಿ ನಡೆಯುತ್ತಿದೆ. ಪ್ರಭಾಸ್ ಈ ಶೂಟಿಂಗ್ ಶೆಡ್ಯೂಲ್‌ನಲ್ಲಿ ಭಾಗವಹಿಸಲಿದ್ದು, ಪ್ರಮುಖ ಆ್ಯಕ್ಷನ್ ಹಾಗೂ ಹೈ-ವೋಲ್ಟೇಜ್ ಸನ್ನಿವೇಶಗಳನ್ನು ಸೆರೆಹಿಡಿಯಲಾಗುತ್ತಿದೆ. ಈ ಜೈಲು ಶೆಡ್ಯೂಲ್ ಮುಗಿದ ಬೆನ್ನಲ್ಲೇ ಚಿತ್ರತಂಡ ತನ್ನ ಮುಂದಿನ ಹಂತದ ಚಿತ್ರೀಕರಣಕ್ಕೆ ಸಜ್ಜಾಗಲಿದೆ.

ಬೃಹತ್ ಬಜೆಟ್‌ನಲ್ಲಿ ತಯಾರಾಗುತ್ತಿರುವ ‘ಸ್ಪಿರಿಟ್’ ಚಿತ್ರದಲ್ಲಿ ಬಾಲಿವುಡ್ ನಟಿ ತೃಪ್ತಿ ದಿಮ್ರಿ ನಾಯಕಿಯಾಗಿ ನಟಿಸುತ್ತಿದ್ದು, ವಿವೇಕ್ ಒಬೆರಾಯ್ ಖಳನಾಯಕನಾಗಿ ಅಬ್ಬರಿಸಲಿದ್ದಾರೆ. ಹಿರಿಯ ನಟಿ ಕಾಂಚನಾ ಕೂಡ ಪ್ರಮುಖ ಪಾತ್ರದಲ್ಲಿದ್ದಾರೆ. ಹರ್ಷವರ್ಧನ್ ರಾಮೇಶ್ವರ್ ಸಂಗೀತ ನಿರ್ದೇಶನವಿರುವ ಈ ಪ್ಯಾನ್-ಇಂಡಿಯಾ ಬಿಗ್ ಬಜೆಟ್ ಚಿತ್ರವು 2027ರ ಮಾರ್ಚ್ 5ರಂದು ವಿಶ್ವಾದ್ಯಂತ ಚಿತ್ರಮಂದಿರಗಳಲ್ಲಿ ಬಿಡುಗಡೆಯಾಗಲಿದೆ.

ಸಂದೀಪ್ ರೆಡ್ಡಿ ವಂಗಾ ಇನ್​ಸ್ಟಾಗ್ರಾಮ್ ಪೋಸ್ಟ್:

ದಿನದಿಂದ ದಿನಕ್ಕೆ ‘ಸ್ಪಿರಿಟ್’ ಸಿನಿಮಾ ಭಾರಿ ಸೌಂಡ್ ಮಾಡುತ್ತಿದೆ. ಈ ಚಿತ್ರದಲ್ಲಿ ಪ್ರಭಾಸ್ ಅವರು ತಮ್ಮ ವೃತ್ತಿಜೀವನದಲ್ಲೇ ಮೊದಲ ಬಾರಿಗೆ ಪೊಲೀಸ್ ಅಧಿಕಾರಿಯ ಪಾತ್ರದಲ್ಲಿ ಕಾಣಿಸಿಕೊಳ್ಳುತ್ತಿರುವುದು ಅಭಿಮಾನಿಗಳಲ್ಲಿ ರೋಮಾಂಚನ ಉಂಟುಮಾಡಿದೆ. ತಮ್ಮದೇ ಶೈಲಿಯ ಸಿನಿಮಾಗಳಿಂದ ಗುರುತಿಸಿಕೊಂಡಿರುವ ಸಂದೀಪ್ ರೆಡ್ಡಿ ವಂಗಾ ಅವರು ಪ್ರಭಾಸ್ ಅವರನ್ನು ಈ ಬಾರಿ ಡಿಫರೆಂಟ್ ಆಗಿ ತೋರಿಸಲಿದ್ದಾರೆ.

ಇದನ್ನೂ ಓದಿ: ಒಂದೇ ವರ್ಷದಲ್ಲಿ ಮೂರು ಸಿನಿಮಾಗಳ ಬಿಡುಗಡೆಗೆ ರೆಡಿಯಾದ ನಟ ಪ್ರಭಾಸ್?

ಇತ್ತೀಚೆಗಷ್ಟೇ ನಿರ್ದೇಶಕ ಸಂದೀಪ್ ರೆಡ್ಡಿ ವಂಗಾ ಅವರು ಚಿತ್ರದ ರಹಸ್ಯಮಯ ಪೋಸ್ಟರ್ ಒಂದನ್ನು ಬಿಡುಗಡೆ ಮಾಡಿದ್ದು, ಇದು ಸೋಶಿಯಲ್ ಮೀಡಿಯಾದಲ್ಲಿ ಸಖತ್ ವೈರಲ್ ಆಗಿದೆ. ಈ ಪೋಸ್ಟರ್‌ನಲ್ಲಿ ಪ್ರಭಾಸ್ ಮತ್ತು ಸಂದೀಪ್ ಇಬ್ಬರ ನೆರಳು ಕಾಣಿಸುತ್ತಿದ್ದು, ಚಿತ್ರದ ಮೇಲಿನ ಕುತೂಹಲವನ್ನು ಮತ್ತಷ್ಟು ಹೆಚ್ಚಿಸಿದೆ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

Follow Us
ರೈಲ್ವೆ ನಿಲ್ದಾಣಗಳಲ್ಲಿ ಆಹಾರ ಸೇವಿಸುವವರೇ ಹುಷಾರ್: ವಿಡಿಯೋ ನೋಡಿ
ರೈಲ್ವೆ ನಿಲ್ದಾಣಗಳಲ್ಲಿ ಆಹಾರ ಸೇವಿಸುವವರೇ ಹುಷಾರ್: ವಿಡಿಯೋ ನೋಡಿ
ED ತನಿಖೆಯಲ್ಲಿ KPSC ಕರ್ಮಕಾಂಡ ಸ್ಫೋಟಕ ಸಂಗತಿ ಬಯಲು
ED ತನಿಖೆಯಲ್ಲಿ KPSC ಕರ್ಮಕಾಂಡ ಸ್ಫೋಟಕ ಸಂಗತಿ ಬಯಲು
ರೈಲ್ವೆ ನಿಲ್ದಾಣಗಳ ಆಹಾರ ಮಳಿಗೆಗಳಲ್ಲಿ ತಪಾಸಣೆ: ಯುಟಿ ಖಾದರ್ ಹೇಳಿದ್ದಿಷ್ಟು
ರೈಲ್ವೆ ನಿಲ್ದಾಣಗಳ ಆಹಾರ ಮಳಿಗೆಗಳಲ್ಲಿ ತಪಾಸಣೆ: ಯುಟಿ ಖಾದರ್ ಹೇಳಿದ್ದಿಷ್ಟು
ವಿಧಾನಸಭೆಯಲ್ಲಿ ಆಕ್ಷೇಪಾರ್ಹ ಪದ ಬಳಸಿದ ಸಚಿವ ಶಿವಲಿಂಗೇಗೌಡ
ವಿಧಾನಸಭೆಯಲ್ಲಿ ಆಕ್ಷೇಪಾರ್ಹ ಪದ ಬಳಸಿದ ಸಚಿವ ಶಿವಲಿಂಗೇಗೌಡ
KPSC Scam: ಇಡಿಯಿಂದಲೂ ಅಭ್ಯರ್ಥಿಗಳಿಗೆ ಟೆಸ್ಟ್
KPSC Scam: ಇಡಿಯಿಂದಲೂ ಅಭ್ಯರ್ಥಿಗಳಿಗೆ ಟೆಸ್ಟ್
ಮೌನದಿಂದಲೇ ಆಧ್ಯಾತ್ಮ: ರಾಷ್ಟ್ರಭಕ್ತಿ ಬಿತ್ತುವ ಹವಾ ಮಲ್ಲಿನಾಥ ಮಹಾರಾಜರು
ಮೌನದಿಂದಲೇ ಆಧ್ಯಾತ್ಮ: ರಾಷ್ಟ್ರಭಕ್ತಿ ಬಿತ್ತುವ ಹವಾ ಮಲ್ಲಿನಾಥ ಮಹಾರಾಜರು
ವರಮಹಾಲಕ್ಷ್ಮಿ ವ್ರತ:ಇಷ್ಟಾರ್ಥ ಸಿದ್ಧಿಗಾಗಿ ಪೂಜಾ ವಿಧಿವಿಧಾನಗಳ ಮಾರ್ಗದರ್ಶಿ
ವರಮಹಾಲಕ್ಷ್ಮಿ ವ್ರತ:ಇಷ್ಟಾರ್ಥ ಸಿದ್ಧಿಗಾಗಿ ಪೂಜಾ ವಿಧಿವಿಧಾನಗಳ ಮಾರ್ಗದರ್ಶಿ
ಚಿತ್ರರಂಗಕ್ಕೆ ಬಂದು 10 ವರ್ಷ, ಅಭಿಮಾನಿಗಳೊಟ್ಟಿಗೆ ನಟಿ ಆಶಿಕಾ ಸಂಭ್ರಮಾಚರಣೆ
ಚಿತ್ರರಂಗಕ್ಕೆ ಬಂದು 10 ವರ್ಷ, ಅಭಿಮಾನಿಗಳೊಟ್ಟಿಗೆ ನಟಿ ಆಶಿಕಾ ಸಂಭ್ರಮಾಚರಣೆ
ಹೊಳೆ ಆಲೂರು - ಅಮರಗೋಳ ರಸ್ತೆ ಸಂಪೂರ್ಣ ಅದ್ವಾನ
ಹೊಳೆ ಆಲೂರು - ಅಮರಗೋಳ ರಸ್ತೆ ಸಂಪೂರ್ಣ ಅದ್ವಾನ
ತೀವ್ರ ವಿರೋಧದ ನಡುವೆಯೂ ಮೈಸೂರಿನಲ್ಲಿ ಕಂಬಳಕ್ಕೆ ಟ್ರ್ಯಾಕ್ ನಿರ್ಮಾಣ ಶುರು
ತೀವ್ರ ವಿರೋಧದ ನಡುವೆಯೂ ಮೈಸೂರಿನಲ್ಲಿ ಕಂಬಳಕ್ಕೆ ಟ್ರ್ಯಾಕ್ ನಿರ್ಮಾಣ ಶುರು