AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಪ್ರಭಾಸ್​ರ ಹೊಸ ಚಿತ್ರ ಶೂಟಿಂಗ್​ಗೆ ಮುಹೂರ್ತ ಫಿಕ್ಸ್, ಬಿಡುಗಡೆ ಯಾವಾಗ?

Prabhas: ಪ್ರಭಾಸ್ ನಟನೆಯ ‘ದಿ ರಾಜಾ ಸಾಬ್’ ಸಿನಿಮಾದ ಚಿತ್ರೀಕರಣ ಮುಗಿದು ಹೋಗಿದೆ. ರಘು ಹನುಪುಡಿ ನಿರ್ದೇಶಿಸುತ್ತಿರುವ ಸಿನಿಮಾದಲ್ಲಿ ಪ್ರಭಾಸ್ ನಟಿಸುತ್ತಿದ್ದಾರೆ. ಇದೀಗ ಹೊಸದೊಂದು ಸಿನಿಮಾದ ಚಿತ್ರೀಕರಣದಲ್ಲಿ ಪ್ರಭಾಸ್ ಪ್ರಾರಂಭ ಮಾಡಲಿದ್ದಾರೆ. ಯಾವುದು ಆ ಸಿನಿಮಾ? ಬಿಡುಗಡೆ ಆಗುವುದು ಯಾವಾಗ? ಇಲ್ಲಿದೆ ಮಾಹಿತಿ...

ಪ್ರಭಾಸ್​ರ ಹೊಸ ಚಿತ್ರ ಶೂಟಿಂಗ್​ಗೆ ಮುಹೂರ್ತ ಫಿಕ್ಸ್, ಬಿಡುಗಡೆ ಯಾವಾಗ?
Prabhas
ಮಂಜುನಾಥ ಸಿ.
|

Updated on:Jan 30, 2025 | 7:24 PM

Share

ಪ್ಯಾನ್ ಇಂಡಿಯಾ ಸ್ಟಾರ್ ನಟ ಪ್ರಭಾಸ್ ಕೋವಿಡ್​ಗೆ ಮುಂಚೆ ವರ್ಷಕ್ಕೆ ಒಂದೇ ಸಿನಿಮಾದಲ್ಲಿ ನಟಿಸುವ ನಿಯಮವನ್ನು ತಮಗೆ ತಾವೇ ಹಾಕಿಕೊಂಡಿದ್ದರು. ‘ಬಾಹುಬಲಿ’ ಮತ್ತು ಅದರ ಎರಡನೇ ಭಾಗಕ್ಕೆ ನಾಲ್ಕು ವರ್ಷ ತೆಗೆದುಕೊಂಡರು. ಅದಾದ ಬಳಿಕವೂ ವರ್ಷಕ್ಕೆ ಒಂದೇ ಸಿನಿಮಾ ಎಂಬ ನಿಯಮ ಪಾಲಿಸುತ್ತಿದ್ದ ಪ್ರಭಾಸ್ 2023 ರಲ್ಲಿ ಆ ನಿಯಮ ಮುರಿದರು. 2023 ರಲ್ಲಿ ಪ್ರಭಾಸ್ ನಟನೆಯ ಮೂರು ಸಿನಿಮಾ ಬಿಡುಗಡೆ ಆದವು. ಈಗ ವರ್ಷಕ್ಕೆ ಎರಡು ಸಿನಿಮಾ ಎಂಬ ನಿಯಮ ಪಾಲಿಸುತ್ತಾ ಸಾಗುತ್ತಿದ್ದಾರೆ. ಇದೀಗ ಈ ವರ್ಷ ಪ್ರಭಾಸ್ ನಟನೆಯ ಎರಡು ಸಿನಿಮಾ ಬಿಡುಗಡೆ ಆಗಲಿದ್ದು, ಹೊಸ ಸಿನಿಮಾದ ಶೂಟಿಂಗ್ ಸಹ ಆರಂಭಿಸಲಿದ್ದಾರೆ.

ಪ್ರಭಾಸ್ ನಟನೆಯ ‘ದಿ ರಾಜಾ ಸಾಬ್’ ಸಿನಿಮಾದ ಚಿತ್ರೀಕರಣ ಈಗಾಗಲೇ ಮುಗಿದಿದ್ದು ಅದರ ಜೊತೆಗೆ ಹನು ರಘುಪುಡಿ ನಿರ್ದೇಶನದ ಸಿನಿಮಾದ ಚಿತ್ರೀಕರಣ ಸಾಗುತ್ತಿದೆ. ಅದರ ಜೊತೆಗೆ ಸಂದೀಪ್ ರೆಡ್ಡಿ ವಂಗಾ ನಿರ್ದೇಶನದ ‘ಸ್ಪಿರಿಟ್’ ಸಿನಿಮಾದ ಚಿತ್ರೀಕರಣ ಪ್ರಾರಂಭಿಸುತ್ತಿದ್ದಾರೆ. ಮೇ ತಿಂಗಳಲ್ಲಿ ‘ಸ್ಪಿರಿಟ್’ ಸಿನಿಮಾದ ಚಿತ್ರೀಕರಣ ಆರಂಭ ಮಾಡುತ್ತಿದ್ದಾರೆ. ಒಂದು ವರ್ಷದಲ್ಲಿ ಸಿನಿಮಾದ ಚಿತ್ರೀಕರಣ ಪೂರ್ಣಗೊಳ್ಳಲಿದೆ. 2026ರ ಆರಂಭದಲ್ಲಿ ಅಥವಾ ಮಧ್ಯ ಭಾಗದಲ್ಲಿ ‘ಸ್ಪಿರಿಟ್’ ಸಿನಿಮಾದ ಬಿಡುಗಡೆ ಆಗಲಿದೆ.

ಇದನ್ನೂ ಓದಿ:ಪ್ರಭಾಸ್​ ಮೇಲೆ ಹೆವಿ ಲವ್ ಅಂತೆ ಈ ಸುಂದರ ನಟಿಗೆ

‘ಸ್ಪಿರಿಟ್’ ಸಿನಿಮಾ ಪ್ರಾಮಾಣಿಕ ಪೊಲೀಸ್ ಅಧಿಕಾರಿಯೊಬ್ಬನ ಸೇಡಿನ ಕತೆಯಂತೆ. ಪ್ರಾಮಾಣಿಕತೆಯ ಕಾರಣಕ್ಕೆ ಉದ್ಯೋಗ ಕಳೆದುಕೊಂಡ ಪೊಲೀಸ್ ಅಧಿಕಾರಿ, ತನ್ನ ಕುಟುಂಬವನ್ನು ಕೊಲ್ಲಲು ಪ್ರಯತ್ನಿಸಿದ ವಿಲನ್​ ಅನ್ನು ಹುಡುಕಿ ಕೊಲ್ಲುವ ಕತೆಯನ್ನು ಈ ಸಿನಿಮಾ ಒಳಗೊಂಡಿದೆ. ಸಿನಿಮಾದ ಮೊದಲಾರ್ಧ ಪ್ರಾಮಾಣಿಕ, ಶಿಸ್ತಿನ ವ್ಯಕ್ತಿಯಾಗಿರುವ ಪ್ರಭಾಸ್ ದ್ವೀತೀಯಾರ್ಧದಲ್ಲಿ ಮದ್ಯ ವ್ಯಸನಿ, ಹಿಂಸಾತ್ಮಕ ಪ್ರವೃತ್ತಿಯ ವ್ಯಕ್ತಿಯ ಪಾತ್ರದಲ್ಲಿ ಕಾಣಿಸಿಕೊಳ್ಳಲಿದ್ದಾರಂತೆ.

‘ಅರ್ಜುನ್ ರೆಡ್ಡಿ’, ‘ಅನಿಮಲ್’ ರೀತಿ ಚರ್ಚಾತ್ಮಕ ಸಿನಿಮಾಗಳನ್ನು ನಿರ್ದೇಶಿಸಿರುವ ಸಂದೀಪ್ ರೆಡ್ಡಿ ಈ ಸಿನಿಮಾ ನಿರ್ದೇಶನ ಮಾಡುತ್ತಿದ್ದು, ತಮ್ಮ ಹಿಂದಿನ ಎರಡು ಸಿನಿಮಾಗಳಿಗಿಂತಲೂ ಈ ಸಿನಿಮಾ ಭಿನ್ನವಾಗಿರಲಿದೆ ಎಂದಿದ್ದಾರೆ. ಸಿನಿಮಾಕ್ಕೆ ಹಿಂದಿಯ ಭೂಷಣ್ ಕುಮಾರ್ ಬಂಡವಾಳ ಹೂಡಿದ್ದಾರೆ. ಈ ಹಿಂದೆ ಪ್ರಭಾಸ್​ರ ‘ಆದಿಪುರಷ್’ ಸಿನಿಮಾಕ್ಕೆ ಇದೇ ಭೂಷಣ್ ಕುಮಾರ್ ಬಂಡವಾಳ ತೊಡಗಿಸಿದ್ದರು. ಆ ಸಿನಿಮಾ ಫ್ಲಾಪ್ ಎನಿಸಿಕೊಂಡಿತ್ತು. ಈಗ ಮತ್ತೊಮ್ಮೆ ಇವರೇ ಪ್ರಭಾಸ್ ಮೇಲೆ ಬಂಡವಾಳ ಹಾಕಿದ್ದಾರೆ.

ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Published On - 7:23 pm, Thu, 30 January 25

Follow Us
Manjunatha C
Manjunatha C

ಮಂಜುನಾಥ ಸಿ, ಬೆಂಗಳೂರು ಗ್ರಾಮಾಂತರ, ವಿಜಯರಪುರ ಪಟ್ಟಣ ನಿವಾಸಿ. ಕಳೆದ ಏಳು ವರ್ಷಗಳಿಂದ ಪತ್ರಿಕೋದ್ಯಮದಲ್ಲಿ ಸಕ್ರಿಯನಾಗಿದ್ದೇನೆ. ಕಳೆದ ಐದು ವರ್ಷದಿಂದ ಡಿಜಿಟಲ್ ಪತ್ರಿಕೋದ್ಯಮದಲ್ಲಿ ತೊಡಗಿಕೊಂಡಿದ್ದೇನೆ. ಈ ಹಿಂದೆ ಪ್ರಜಾವಾಣಿ, ಒನ್ ಇಂಡಿಯಾ ಕನ್ನಡ ಸಂಸ್ಥೆಗಳ ವಿವಿಧ ವಿಭಾಗಗಳಲ್ಲಿ ಕೆಲಸ ಮಾಡಿದ್ದೇನೆ. ಪ್ರಸ್ತುತ ಟಿವಿ9 ಕನ್ನಡ ಡಿಜಿಟಲ್​ನ ಸಿನಿಮಾ ವಿಭಾಗದಲ್ಲಿ ಕೆಲಸ ಮಾಡುತ್ತಿದ್ದೇನೆ. ಮೆಚ್ಚಿನ ಹವ್ಯಾಸ ಸಿನಿಮಾ ವೀಕ್ಷಣೆ, ಪುಸ್ತಕಗಳನ್ನು ಓದುವುದು.

Read More
ಮಂತ್ರಿ ಸ್ಥಾನ ಫಿಕ್ಸ್: ಹೈಕಮಾಂಡ್ ಕೊಟ್ಟ ಮಾತು ಬಿಚ್ಚಿಟ್ಟ ಯತೀಂದ್ರ
ಮಂತ್ರಿ ಸ್ಥಾನ ಫಿಕ್ಸ್: ಹೈಕಮಾಂಡ್ ಕೊಟ್ಟ ಮಾತು ಬಿಚ್ಚಿಟ್ಟ ಯತೀಂದ್ರ
ಆರ್​ಸಿಬಿ ಮಾಲೀಕರನ್ನೂ ಬಿಡದೆ ಎಲ್ಲರ ಕಾಲೆಳೆದ ಮಿ. ನಾಗ್ಸ್
ಆರ್​ಸಿಬಿ ಮಾಲೀಕರನ್ನೂ ಬಿಡದೆ ಎಲ್ಲರ ಕಾಲೆಳೆದ ಮಿ. ನಾಗ್ಸ್
ರಾಜ್ಯ ರಾಜಕೀಯ ರಂಗದ ಮೇಲೆ ಗುರು ಪ್ರಭಾವೇನು? ಡಿಕೆಶಿಗೆ ಸಿಗಲಿದೆಯಾ ಗುರುಬಲ?
ರಾಜ್ಯ ರಾಜಕೀಯ ರಂಗದ ಮೇಲೆ ಗುರು ಪ್ರಭಾವೇನು? ಡಿಕೆಶಿಗೆ ಸಿಗಲಿದೆಯಾ ಗುರುಬಲ?
ಕಾಂಗ್ರೆಸ್​​ನಲ್ಲಿ ಸಂಚಲನ ಮೂಡಿಸಿದ ಜಮಿರ್ ಅಹಮ್ಮದ್ ಆಡಿಯೋ
ಕಾಂಗ್ರೆಸ್​​ನಲ್ಲಿ ಸಂಚಲನ ಮೂಡಿಸಿದ ಜಮಿರ್ ಅಹಮ್ಮದ್ ಆಡಿಯೋ
ಜಿಮ್​​ನಲ್ಲಿ ವಾರ್ಮ್​ ಅಪ್ ಮಾಡಿ ನಿದ್ದೆಗೆ ಜಾರಿದ ಯುವಕ
ಜಿಮ್​​ನಲ್ಲಿ ವಾರ್ಮ್​ ಅಪ್ ಮಾಡಿ ನಿದ್ದೆಗೆ ಜಾರಿದ ಯುವಕ
IPL 2026: ಕನ್ನಡಿಗನ ಪಾಲಾದ 'ಬೆಸ್ಟ್ ಕ್ಯಾಚ್' ಪ್ರಶಸ್ತಿ
IPL 2026: ಕನ್ನಡಿಗನ ಪಾಲಾದ 'ಬೆಸ್ಟ್ ಕ್ಯಾಚ್' ಪ್ರಶಸ್ತಿ
ಗವರ್ನರ್​ಗಾಗಿ ರಸ್ತೆ ಬಂದ್: ನಡು ಮಾರ್ಗದಲ್ಲಿ ಕುಳಿತು ವ್ಯಕ್ತಿಯ ಪ್ರತಿಭಟನೆ
ಗವರ್ನರ್​ಗಾಗಿ ರಸ್ತೆ ಬಂದ್: ನಡು ಮಾರ್ಗದಲ್ಲಿ ಕುಳಿತು ವ್ಯಕ್ತಿಯ ಪ್ರತಿಭಟನೆ
ಬಾಲಕಿಯನ್ನು ಹೊತ್ತೊಯ್ಯುವಾಗ ಬಾಗಿಲಲ್ಲೇ ತಡೆದ ಬಾಲಕ
ಬಾಲಕಿಯನ್ನು ಹೊತ್ತೊಯ್ಯುವಾಗ ಬಾಗಿಲಲ್ಲೇ ತಡೆದ ಬಾಲಕ
ಸ್ಪೆಷಲ್ ಫ್ಲೈಟ್​ನಲ್ಲಿ ದೆಹಲಿಗೆ ತೆರಳಿದ ಡಿಕೆ ಶಿವಕುಮಾರ್, ಸಿದ್ದರಾಮಯ್ಯ!
ಸ್ಪೆಷಲ್ ಫ್ಲೈಟ್​ನಲ್ಲಿ ದೆಹಲಿಗೆ ತೆರಳಿದ ಡಿಕೆ ಶಿವಕುಮಾರ್, ಸಿದ್ದರಾಮಯ್ಯ!
ನರ್ಮದಾ-ಕ್ಷಿಪ್ರ ಪೈಪ್​ಲೈನ್ ಸ್ಫೋಟ, ಮುಗಿಲೆತ್ತರಕ್ಕೆ ಚಿಮ್ಮಿದ ನೀರು
ನರ್ಮದಾ-ಕ್ಷಿಪ್ರ ಪೈಪ್​ಲೈನ್ ಸ್ಫೋಟ, ಮುಗಿಲೆತ್ತರಕ್ಕೆ ಚಿಮ್ಮಿದ ನೀರು