AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಪ್ರಭಾಸ್ ನಟನೆಯ ‘ರಾಜಾ ಸಾಬ್’ ಪೋಸ್ಟರ್ ಬಿಡುಗಡೆ: ಅಭಿಮಾನಿಗಳಿಗೆ ನಿರಾಸೆ

The Raja Saab Movie Poster: ಪ್ರಭಾಸ್ ನಟನೆಯ ‘ದಿ ರಾಜಾ ಸಾಬ್’ ಸಿನಿಮಾ, ಸಂಕ್ರಾಂತಿಗೆ ಅಭಿಮಾನಿಗಳಿಗೆ ವಿಶೇಷ ಉಡುಗೊರೆ ಕೊಡುವುದಾಗಿ ಹೇಳಿತ್ತು. ಅಂತೆಯೇ ಸಿನಿಮಾದ ಹೊಸ ಪೋಸ್ಟರ್ ಬಿಡುಗಡೆ ಮಾಡಲಾಗಿದೆ. ಪೋಸ್ಟರ್ ನೋಡಿದ ಪ್ರಭಾಸ್ ಅಭಿಮಾನಿಗಳಿಗೆ ನಿರಾಸೆ ಉಂಟಾಗಿದೆ. ಕಾರಣ ಇಲ್ಲಿ ತಿಳಿಯಿರಿ.

ಪ್ರಭಾಸ್ ನಟನೆಯ ‘ರಾಜಾ ಸಾಬ್’ ಪೋಸ್ಟರ್ ಬಿಡುಗಡೆ: ಅಭಿಮಾನಿಗಳಿಗೆ ನಿರಾಸೆ
Raja Saab
ಮಂಜುನಾಥ ಸಿ.
|

Updated on:Jan 14, 2025 | 12:02 PM

Share

ಪ್ರಭಾಸ್ ನಟನೆಯ ‘ದಿ ರಾಜಾ ಸಾಬ್’ ಸಿನಿಮಾದ ಬಿಡುಗಡೆ ಮುಂದೂಡಲಾಗಿರುವ ಸುದ್ದಿ ಕೆಲವು ದಿನಗಳ ಹಿಂದಷ್ಟೆ ಹೊರಬಿತ್ತು. ಇದು ಅಭಿಮಾನಿಗಳಿಗೆ ತೀವ್ರ ನಿರಾಸೆ ಮೂಡಿಸಿತ್ತು. ಆದರೆ ತಾವು ಸಂಕ್ರಾಂತಿಗೆ ಒಳ್ಳೆಯ ಅಪ್​ಡೇಟ್ ನೀಡುವುದಾಗಿ ಚಿತ್ರತಂಡ ಹೇಳಿಕೊಂಡಿತ್ತು. ಪ್ರಭಾಸ್ ಅಭಿಮಾನಿಗಳು ಸಹ ಇದಕ್ಕಾಗಿ ಕಾಯುತ್ತಿದ್ದರು. ಕೊಟ್ಟ ಮಾತಿನಂತೆ ಸಂಕ್ರಾಂತಿಗೆ ಸಿನಿಮಾದ ಪೋಸ್ಟರ್​ ಅನ್ನು ಚಿತ್ರತಂಡ ಬಿಡುಗಡೆ ಮಾಡಿದೆಯಾದರೂ ಇದು ಅಭಿಮಾನಿಗಳಿಗೆ ನಿರಾಸೆಯನ್ನೇ ಮೂಡಿಸಿದೆ.

‘ದಿ ರಾಜಾ ಸಾಬ್’ ಪೋಸ್ಟರ್ ಹೆಸರಲ್ಲಿ ಪ್ರಭಾಸ್​ರ ಒಂದು ಫೋಟೊ ಅನ್ನಷ್ಟೆ ನೀಡಲಾಗಿದೆ. ಪೋಸ್ಟರ್​ ನಲ್ಲಿ ಯಾವುದೇ ವಿಶೇಷತೆ ಇಲ್ಲ. ಪ್ರಭಾಸ್​ ನಗುತ್ತಿರುವ ಒಂದು ಪೋಟ್ರೆಟ್ ಮಾದರಿಯ ಫೋಟೊ ಇದಾಗಿದೆ. ಪ್ರಭಾಸ್ ಅಭಿಮಾನಿಗಳು ಇನ್ನೂ ವಿಶೇಷವಾದುದು ಏನನ್ನೋ ನಿರೀಕ್ಷಿಸುತ್ತಿದ್ದರು. ಆದರೆ ಈಗ ಬಿಡುಗಡೆ ಮಾಡಲಾಗಿರುವ ಪೋಸ್ಟರ್​ ಪ್ರಭಾಸ್ ಅಭಿಮಾನಿಗಳಿಗೆ ನಿರಾಸೆ ಮೂಡಿಸಿದೆ.

ಇದನ್ನೂ ಓದಿ:ಪ್ರಭಾಸ್ ಅಭಿಮಾನಿಗಳಿಗೆ ನಿರಾಸೆ, ‘ರಾಜಾ ಸಾಬ್’ ಬಿಡುಗಡೆ ಮುಂದೂಡಿಕೆ

ಪೋಸ್ಟರ್ ನೋಡಿದ ಕೆಲವರು ‘ಕೂಲ್ ಲುಕ್’ ಎಂದು ಕಮೆಂಟ್ ಮಾಡಿದ್ದರೆ, ಅಪ್​ಡೇಟ್ ಕೊಡಿ, ಪೋಸ್ಟರ್ ರಿಲೀಸ್ ಮಾಡಿ ಎಂದರೆ ಬರೀ ಪಾಸ್​ಪೋರ್ಟ್ ಸೈಜ್ ಫೋಟೊ ರಿಲೀಸ್ ಮಾಡಿದ್ದೀರಿ ಎಂದು ಕೆಲವರು ಟೀಕಿಸಿದ್ದಾರೆ. ಇನ್ನು ಕೆಲವರು, ಈ ಪೋಸ್ಟರ್​ನಲ್ಲಿ ಪ್ರಭಾಸ್, ಅಕ್ಕಿನೇನಿ ನಾಗಾರ್ಜುನ ರೀತಿ ಕಾಣುತ್ತಿದ್ದಾರೆ ಎಂದು ಟೀಕೆ ಮಾಡಿದ್ದಾರೆ. ಪೋಸ್ಟರ್ ಮೂಲಕ ಎಲ್ಲರಿಗೂ ಸಂಕ್ರಾಂತಿಯ ಶುಭಾಶಯಗಳನ್ನು ಚಿತ್ರತಂಡ ಕೋರಿದೆ.

‘ದಿ ರಾಜಾ ಸಾಬ್’ ಪ್ರಭಾಸ್ ನಟಿಸುತ್ತಿರುವ ಮೊದಲ ಹಾರರ್ ಕಾಮಿಡಿ ಸಿನಿಮಾ ಆಗಿದೆ. ಸಿನಿಮಾದಲ್ಲಿ ಪ್ರಭಾಸ್ ದೆವ್ವವಾಗಿ ನಟಿಸುತ್ತಿದ್ದಾರಂತೆ. ಸಿನಿಮಾದಲ್ಲಿ ಹಾರರ್ ಜೊತೆಗೆ ರೊಮ್ಯಾಂಟಿಕ್ ಲವ್ ಸ್ಟೋರಿ ಹಾಗೂ ಭರಪೂರ ಹಾಸ್ಯ ದೃಶ್ಯಗಳು ಸಹ ಇರಲಿವೆಯಂತೆ. ಸಿನಿಮಾವನ್ನು ಮಾರುತಿ ನಿರ್ದೇಶನ ಮಾಡುತ್ತಿದ್ದಾರೆ. ನಾಯಕಿಯಾಗಿ ಮಾಳವಿಕಾ ಮೋಹನನ್ ನಟಿಸುತ್ತಿದ್ದಾರೆ. ಸಿನಿಮಾ ಏಪ್ರಿಲ್​ನಲ್ಲಿ ಬಿಡುಗಡೆ ಆಗಬೇಕಿತ್ತು. ಆದರೆ ಬಿಡುಗಡೆ ಮತ್ತೆ ಮುಂದೂಡಲ್ಪಟ್ಟಿದೆ.

ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Published On - 11:32 am, Tue, 14 January 25

Follow Us
Manjunatha C
Manjunatha C

ಮಂಜುನಾಥ ಸಿ, ಬೆಂಗಳೂರು ಗ್ರಾಮಾಂತರ, ವಿಜಯರಪುರ ಪಟ್ಟಣ ನಿವಾಸಿ. ಕಳೆದ ಏಳು ವರ್ಷಗಳಿಂದ ಪತ್ರಿಕೋದ್ಯಮದಲ್ಲಿ ಸಕ್ರಿಯನಾಗಿದ್ದೇನೆ. ಕಳೆದ ಐದು ವರ್ಷದಿಂದ ಡಿಜಿಟಲ್ ಪತ್ರಿಕೋದ್ಯಮದಲ್ಲಿ ತೊಡಗಿಕೊಂಡಿದ್ದೇನೆ. ಈ ಹಿಂದೆ ಪ್ರಜಾವಾಣಿ, ಒನ್ ಇಂಡಿಯಾ ಕನ್ನಡ ಸಂಸ್ಥೆಗಳ ವಿವಿಧ ವಿಭಾಗಗಳಲ್ಲಿ ಕೆಲಸ ಮಾಡಿದ್ದೇನೆ. ಪ್ರಸ್ತುತ ಟಿವಿ9 ಕನ್ನಡ ಡಿಜಿಟಲ್​ನ ಸಿನಿಮಾ ವಿಭಾಗದಲ್ಲಿ ಕೆಲಸ ಮಾಡುತ್ತಿದ್ದೇನೆ. ಮೆಚ್ಚಿನ ಹವ್ಯಾಸ ಸಿನಿಮಾ ವೀಕ್ಷಣೆ, ಪುಸ್ತಕಗಳನ್ನು ಓದುವುದು.

Read More
ಅತಾವುಲ್ಲಾ ಹತ್ಯೆ ಪ್ರಕರಣದ ಬಗ್ಗೆ ಸ್ಫೋಟಕ ಹೇಳಿಕೆ ನೀಡಿದ ಪೊಲೀಸರು
ಅತಾವುಲ್ಲಾ ಹತ್ಯೆ ಪ್ರಕರಣದ ಬಗ್ಗೆ ಸ್ಫೋಟಕ ಹೇಳಿಕೆ ನೀಡಿದ ಪೊಲೀಸರು
34 ರನ್​ಗಳಿದ್ದಾಗ ಕ್ಯಾಚ್ ಬಿಟ್ಟ ಸಿರಾಜ್; 93 ರನ್ ಚಚ್ಚಿದ ಅಲೆನ್
34 ರನ್​ಗಳಿದ್ದಾಗ ಕ್ಯಾಚ್ ಬಿಟ್ಟ ಸಿರಾಜ್; 93 ರನ್ ಚಚ್ಚಿದ ಅಲೆನ್
9 ಗಂಟೆ ಕಾರ್ಯಾಚರಣೆ ಬಳಿಕ ಬೋರ್​​ವೆಲ್​ನಿಂದ 4 ವರ್ಷದ ಬಾಲಕನ ರಕ್ಷಣೆ!
9 ಗಂಟೆ ಕಾರ್ಯಾಚರಣೆ ಬಳಿಕ ಬೋರ್​​ವೆಲ್​ನಿಂದ 4 ವರ್ಷದ ಬಾಲಕನ ರಕ್ಷಣೆ!
ಬಿಸಿಸಿಐನ ರೋಬೋ ಶ್ವಾನ ಚಂಪಕ್ ಮೇಲೆ ಕೊಹ್ಲಿ ಅಸಮಾಧಾನ
ಬಿಸಿಸಿಐನ ರೋಬೋ ಶ್ವಾನ ಚಂಪಕ್ ಮೇಲೆ ಕೊಹ್ಲಿ ಅಸಮಾಧಾನ
ಲಕ್ಕುಂಡಿಯಲ್ಲಿ ಪತ್ತೆಯಾಗಿದ್ದ ನಿಧಿ ಮೌಲ್ಯ 8 ಕೋಟಿ ರೂ
ಲಕ್ಕುಂಡಿಯಲ್ಲಿ ಪತ್ತೆಯಾಗಿದ್ದ ನಿಧಿ ಮೌಲ್ಯ 8 ಕೋಟಿ ರೂ
ಝಲ್ಮುರಿ ಇಲ್ಲಿಗೂ ತಲುಪಿತೇ? ಮೋದಿ ಪ್ರಶ್ನೆಗೆ ಭಾರತೀಯ ವಲಸಿಗರ ಕರತಾಡನ
ಝಲ್ಮುರಿ ಇಲ್ಲಿಗೂ ತಲುಪಿತೇ? ಮೋದಿ ಪ್ರಶ್ನೆಗೆ ಭಾರತೀಯ ವಲಸಿಗರ ಕರತಾಡನ
ಹಾವೇರಿ: ಸಿನಿಮೀಯ ಶೈಲಿಯಲ್ಲಿ ಕಳ್ಳತನ; ಲಕ್ಷಾಂತರ ಮೌಲ್ಯದ ಚಿನ್ನಾಭರಣ ಲೂಟಿ
ಹಾವೇರಿ: ಸಿನಿಮೀಯ ಶೈಲಿಯಲ್ಲಿ ಕಳ್ಳತನ; ಲಕ್ಷಾಂತರ ಮೌಲ್ಯದ ಚಿನ್ನಾಭರಣ ಲೂಟಿ
ಪ್ರಧಾನಿ ಮೋದಿಗೆ ಹೇಗ್‌ನಲ್ಲಿ ಯುವ ಕಲಾವಿದರಿಂದ ಸಂಗೀತ, ನೃತ್ಯದ ಸ್ವಾಗತ
ಪ್ರಧಾನಿ ಮೋದಿಗೆ ಹೇಗ್‌ನಲ್ಲಿ ಯುವ ಕಲಾವಿದರಿಂದ ಸಂಗೀತ, ನೃತ್ಯದ ಸ್ವಾಗತ
ಭೀಕರ ಅಪಘಾತ; ಫುಟ್‌ಪಾತ್‌ಗೆ ನುಗ್ಗಿದ ಕಾರು, ಮಗು ಸೇರಿ ಮೂವರಿಗೆ ಗಂಭೀರ ಗಾಯ
ಭೀಕರ ಅಪಘಾತ; ಫುಟ್‌ಪಾತ್‌ಗೆ ನುಗ್ಗಿದ ಕಾರು, ಮಗು ಸೇರಿ ಮೂವರಿಗೆ ಗಂಭೀರ ಗಾಯ
ಜೆ.ಪಿ. ಪಾರ್ಕ್ ಫ್ಲೈಓವರ್ ಕೆಳಗೆ ಕಸದ ರಾಶಿ! GBA ನಿದ್ದೆ ಜಾರಿದೆಯೇ?
ಜೆ.ಪಿ. ಪಾರ್ಕ್ ಫ್ಲೈಓವರ್ ಕೆಳಗೆ ಕಸದ ರಾಶಿ! GBA ನಿದ್ದೆ ಜಾರಿದೆಯೇ?