AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಪ್ರಭಾಸ್ ನಟನೆಯ ‘ರಾಜಾ ಸಾಬ್’ ಪೋಸ್ಟರ್ ಬಿಡುಗಡೆ: ಅಭಿಮಾನಿಗಳಿಗೆ ನಿರಾಸೆ

The Raja Saab Movie Poster: ಪ್ರಭಾಸ್ ನಟನೆಯ ‘ದಿ ರಾಜಾ ಸಾಬ್’ ಸಿನಿಮಾ, ಸಂಕ್ರಾಂತಿಗೆ ಅಭಿಮಾನಿಗಳಿಗೆ ವಿಶೇಷ ಉಡುಗೊರೆ ಕೊಡುವುದಾಗಿ ಹೇಳಿತ್ತು. ಅಂತೆಯೇ ಸಿನಿಮಾದ ಹೊಸ ಪೋಸ್ಟರ್ ಬಿಡುಗಡೆ ಮಾಡಲಾಗಿದೆ. ಪೋಸ್ಟರ್ ನೋಡಿದ ಪ್ರಭಾಸ್ ಅಭಿಮಾನಿಗಳಿಗೆ ನಿರಾಸೆ ಉಂಟಾಗಿದೆ. ಕಾರಣ ಇಲ್ಲಿ ತಿಳಿಯಿರಿ.

ಪ್ರಭಾಸ್ ನಟನೆಯ ‘ರಾಜಾ ಸಾಬ್’ ಪೋಸ್ಟರ್ ಬಿಡುಗಡೆ: ಅಭಿಮಾನಿಗಳಿಗೆ ನಿರಾಸೆ
Raja Saab
ಮಂಜುನಾಥ ಸಿ.
|

Updated on:Jan 14, 2025 | 12:02 PM

Share

ಪ್ರಭಾಸ್ ನಟನೆಯ ‘ದಿ ರಾಜಾ ಸಾಬ್’ ಸಿನಿಮಾದ ಬಿಡುಗಡೆ ಮುಂದೂಡಲಾಗಿರುವ ಸುದ್ದಿ ಕೆಲವು ದಿನಗಳ ಹಿಂದಷ್ಟೆ ಹೊರಬಿತ್ತು. ಇದು ಅಭಿಮಾನಿಗಳಿಗೆ ತೀವ್ರ ನಿರಾಸೆ ಮೂಡಿಸಿತ್ತು. ಆದರೆ ತಾವು ಸಂಕ್ರಾಂತಿಗೆ ಒಳ್ಳೆಯ ಅಪ್​ಡೇಟ್ ನೀಡುವುದಾಗಿ ಚಿತ್ರತಂಡ ಹೇಳಿಕೊಂಡಿತ್ತು. ಪ್ರಭಾಸ್ ಅಭಿಮಾನಿಗಳು ಸಹ ಇದಕ್ಕಾಗಿ ಕಾಯುತ್ತಿದ್ದರು. ಕೊಟ್ಟ ಮಾತಿನಂತೆ ಸಂಕ್ರಾಂತಿಗೆ ಸಿನಿಮಾದ ಪೋಸ್ಟರ್​ ಅನ್ನು ಚಿತ್ರತಂಡ ಬಿಡುಗಡೆ ಮಾಡಿದೆಯಾದರೂ ಇದು ಅಭಿಮಾನಿಗಳಿಗೆ ನಿರಾಸೆಯನ್ನೇ ಮೂಡಿಸಿದೆ.

‘ದಿ ರಾಜಾ ಸಾಬ್’ ಪೋಸ್ಟರ್ ಹೆಸರಲ್ಲಿ ಪ್ರಭಾಸ್​ರ ಒಂದು ಫೋಟೊ ಅನ್ನಷ್ಟೆ ನೀಡಲಾಗಿದೆ. ಪೋಸ್ಟರ್​ ನಲ್ಲಿ ಯಾವುದೇ ವಿಶೇಷತೆ ಇಲ್ಲ. ಪ್ರಭಾಸ್​ ನಗುತ್ತಿರುವ ಒಂದು ಪೋಟ್ರೆಟ್ ಮಾದರಿಯ ಫೋಟೊ ಇದಾಗಿದೆ. ಪ್ರಭಾಸ್ ಅಭಿಮಾನಿಗಳು ಇನ್ನೂ ವಿಶೇಷವಾದುದು ಏನನ್ನೋ ನಿರೀಕ್ಷಿಸುತ್ತಿದ್ದರು. ಆದರೆ ಈಗ ಬಿಡುಗಡೆ ಮಾಡಲಾಗಿರುವ ಪೋಸ್ಟರ್​ ಪ್ರಭಾಸ್ ಅಭಿಮಾನಿಗಳಿಗೆ ನಿರಾಸೆ ಮೂಡಿಸಿದೆ.

ಇದನ್ನೂ ಓದಿ:ಪ್ರಭಾಸ್ ಅಭಿಮಾನಿಗಳಿಗೆ ನಿರಾಸೆ, ‘ರಾಜಾ ಸಾಬ್’ ಬಿಡುಗಡೆ ಮುಂದೂಡಿಕೆ

ಪೋಸ್ಟರ್ ನೋಡಿದ ಕೆಲವರು ‘ಕೂಲ್ ಲುಕ್’ ಎಂದು ಕಮೆಂಟ್ ಮಾಡಿದ್ದರೆ, ಅಪ್​ಡೇಟ್ ಕೊಡಿ, ಪೋಸ್ಟರ್ ರಿಲೀಸ್ ಮಾಡಿ ಎಂದರೆ ಬರೀ ಪಾಸ್​ಪೋರ್ಟ್ ಸೈಜ್ ಫೋಟೊ ರಿಲೀಸ್ ಮಾಡಿದ್ದೀರಿ ಎಂದು ಕೆಲವರು ಟೀಕಿಸಿದ್ದಾರೆ. ಇನ್ನು ಕೆಲವರು, ಈ ಪೋಸ್ಟರ್​ನಲ್ಲಿ ಪ್ರಭಾಸ್, ಅಕ್ಕಿನೇನಿ ನಾಗಾರ್ಜುನ ರೀತಿ ಕಾಣುತ್ತಿದ್ದಾರೆ ಎಂದು ಟೀಕೆ ಮಾಡಿದ್ದಾರೆ. ಪೋಸ್ಟರ್ ಮೂಲಕ ಎಲ್ಲರಿಗೂ ಸಂಕ್ರಾಂತಿಯ ಶುಭಾಶಯಗಳನ್ನು ಚಿತ್ರತಂಡ ಕೋರಿದೆ.

‘ದಿ ರಾಜಾ ಸಾಬ್’ ಪ್ರಭಾಸ್ ನಟಿಸುತ್ತಿರುವ ಮೊದಲ ಹಾರರ್ ಕಾಮಿಡಿ ಸಿನಿಮಾ ಆಗಿದೆ. ಸಿನಿಮಾದಲ್ಲಿ ಪ್ರಭಾಸ್ ದೆವ್ವವಾಗಿ ನಟಿಸುತ್ತಿದ್ದಾರಂತೆ. ಸಿನಿಮಾದಲ್ಲಿ ಹಾರರ್ ಜೊತೆಗೆ ರೊಮ್ಯಾಂಟಿಕ್ ಲವ್ ಸ್ಟೋರಿ ಹಾಗೂ ಭರಪೂರ ಹಾಸ್ಯ ದೃಶ್ಯಗಳು ಸಹ ಇರಲಿವೆಯಂತೆ. ಸಿನಿಮಾವನ್ನು ಮಾರುತಿ ನಿರ್ದೇಶನ ಮಾಡುತ್ತಿದ್ದಾರೆ. ನಾಯಕಿಯಾಗಿ ಮಾಳವಿಕಾ ಮೋಹನನ್ ನಟಿಸುತ್ತಿದ್ದಾರೆ. ಸಿನಿಮಾ ಏಪ್ರಿಲ್​ನಲ್ಲಿ ಬಿಡುಗಡೆ ಆಗಬೇಕಿತ್ತು. ಆದರೆ ಬಿಡುಗಡೆ ಮತ್ತೆ ಮುಂದೂಡಲ್ಪಟ್ಟಿದೆ.

ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Published On - 11:32 am, Tue, 14 January 25

Follow Us
ಗ್ಯಾಸ್​ ಇಲ್ಲಿದೇ ಬೆಂಗಳೂರಿನ ಗಲ್ಲಿ ಗಲ್ಲಿಯಲ್ಲೂ ನಿಂತ ಆಟೋಗಳು!
ಗ್ಯಾಸ್​ ಇಲ್ಲಿದೇ ಬೆಂಗಳೂರಿನ ಗಲ್ಲಿ ಗಲ್ಲಿಯಲ್ಲೂ ನಿಂತ ಆಟೋಗಳು!
ಅಧಿಕಾರಿ ಮೇಲೆ ಪಾಲಿಕೆ ಸದಸ್ಯ ಹಲ್ಲೆ: ಪ್ರಕರಣದಲ್ಲಿ​ ಶಾಸಕ ರೆಡ್ಡಿ ಎಂಟ್ರಿ
ಅಧಿಕಾರಿ ಮೇಲೆ ಪಾಲಿಕೆ ಸದಸ್ಯ ಹಲ್ಲೆ: ಪ್ರಕರಣದಲ್ಲಿ​ ಶಾಸಕ ರೆಡ್ಡಿ ಎಂಟ್ರಿ
ಹಿಂದೆ ಸಂಬಂಧಿಯನ್ನ ಕೊಂದ್ರು, ಈಗ ಅಳಿಯನ ಹತ್ಯೆ:ಮಾಜಿ ಸಚಿವ ಬೆಳಮಗಿ ಕಣ್ಣೀರು
ಹಿಂದೆ ಸಂಬಂಧಿಯನ್ನ ಕೊಂದ್ರು, ಈಗ ಅಳಿಯನ ಹತ್ಯೆ:ಮಾಜಿ ಸಚಿವ ಬೆಳಮಗಿ ಕಣ್ಣೀರು
6,6,6,6,6.. ಪಂಜಾಬ್ ವಿರುದ್ಧ ಅಬ್ಬರಿಸಿದ ಆಯುಷ್ ಮ್ಹಾತ್ರೆ
6,6,6,6,6.. ಪಂಜಾಬ್ ವಿರುದ್ಧ ಅಬ್ಬರಿಸಿದ ಆಯುಷ್ ಮ್ಹಾತ್ರೆ
ರಂಗೇರಿದ ಚುನಾವಣಾ ಅಖಾಡ; ಪುದುಚೇರಿಯಲ್ಲಿ ಪ್ರಧಾನಿ ಮೋದಿ ಬೃಹತ್ ರೋಡ್ ಶೋ
ರಂಗೇರಿದ ಚುನಾವಣಾ ಅಖಾಡ; ಪುದುಚೇರಿಯಲ್ಲಿ ಪ್ರಧಾನಿ ಮೋದಿ ಬೃಹತ್ ರೋಡ್ ಶೋ
ಅಧಿಕಾರಿ ಮೇಲೆ ಪಾಲಿಕೆ ಸದಸ್ಯನಿಂದ ಹಲ್ಲೆ: ಕಮಿಷನರ್ ಶಾಕಿಂಗ್‌ ರಿಯಾಕ್ಷನ್‌
ಅಧಿಕಾರಿ ಮೇಲೆ ಪಾಲಿಕೆ ಸದಸ್ಯನಿಂದ ಹಲ್ಲೆ: ಕಮಿಷನರ್ ಶಾಕಿಂಗ್‌ ರಿಯಾಕ್ಷನ್‌
ಜೈಪುರದಲ್ಲಿ ಬಿರುಗಾಳಿ ಸಹಿತ ಭಾರೀ ಮಳೆ, ಜನಜೀವನ ಅಸ್ತವ್ಯಸ್ತ
ಜೈಪುರದಲ್ಲಿ ಬಿರುಗಾಳಿ ಸಹಿತ ಭಾರೀ ಮಳೆ, ಜನಜೀವನ ಅಸ್ತವ್ಯಸ್ತ
ಹಳೇ ಸೇಡು ತೀರಿಸಿಲು ದಾವಣಗೆರೆಯಲ್ಲಿ ಷಡ್ಯಂತ್ರ ನಡೆದಿದೆ ಎಂದ ಶ್ರೀರಾಮುಲು
ಹಳೇ ಸೇಡು ತೀರಿಸಿಲು ದಾವಣಗೆರೆಯಲ್ಲಿ ಷಡ್ಯಂತ್ರ ನಡೆದಿದೆ ಎಂದ ಶ್ರೀರಾಮುಲು
ಹಬ್ಬಳ್ಳಿ ಲವ್ ಜಿಹಾದ್​​​ಗೆ ಸ್ಫೋಟಕ ಟ್ವಿಸ್ಟ್:ಜಿಮ್ ಟ್ರೈನರ್​​ನ ಕಾಮಕಾಂಡ
ಹಬ್ಬಳ್ಳಿ ಲವ್ ಜಿಹಾದ್​​​ಗೆ ಸ್ಫೋಟಕ ಟ್ವಿಸ್ಟ್:ಜಿಮ್ ಟ್ರೈನರ್​​ನ ಕಾಮಕಾಂಡ
ವೇದಿಕೆ ಮೇಲೆ ವಾಂತಿ: ಸಂತೋಷ್ ಹೆಗ್ಡೆ ಆರೋಗ್ಯದ ಬಗ್ಗೆ ಖಾದರ್ ಮಾಹಿತಿ
ವೇದಿಕೆ ಮೇಲೆ ವಾಂತಿ: ಸಂತೋಷ್ ಹೆಗ್ಡೆ ಆರೋಗ್ಯದ ಬಗ್ಗೆ ಖಾದರ್ ಮಾಹಿತಿ