AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಪ್ರಭಾಸ್ ನಟನೆಯ ‘ರಾಜಾಸಾಬ್’ ಚಿತ್ರದ ನಾಲ್ಕು ದಿನದ ಶೂಟ್​ಗೆ ಖರ್ಚಾಯ್ತು ನಾಲ್ಕು ಕೋಟಿ ರೂಪಾಯಿ

ಮಾರುತಿ ನಿರ್ದೇಶನದ ‘ಈ ರೋಜುಲ್ಲೋ’ ಸಿನಿಮಾ ರಿ-ರಿಲೀಸ್ ಆಗಿದೆ. ಕೇವಲ 30 ಲಕ್ಷ ರೂಪಾಯಿ ಬಜೆಟ್​ನಲ್ಲಿ ಸಿದ್ಧವಾದ ಈ ಸಿನಿಮಾ ಬಾಕ್ಸ್ ಆಫೀಸ್​ನಲ್ಲಿ ಕೋಟ್ಯಂತರ ರೂಪಾಯಿ ಗಳಿಕೆ ಮಾಡಿತ್ತು. ಈಗ ಅವರು ಬಿಗ್ ಬಜೆಟ್​ನತ್ತ ಗಮನ ಹರಿಸುತ್ತಿದ್ದಾರೆ. ‘ರಾಜಾಸಾಬ್’ ಚಿತ್ರದ ಬಗ್ಗೆ ಮಾರುತಿ ಅವರು ಮಾತನಾಡಿದ್ದಾರೆ.

ಪ್ರಭಾಸ್ ನಟನೆಯ ‘ರಾಜಾಸಾಬ್’ ಚಿತ್ರದ ನಾಲ್ಕು ದಿನದ ಶೂಟ್​ಗೆ ಖರ್ಚಾಯ್ತು ನಾಲ್ಕು ಕೋಟಿ ರೂಪಾಯಿ
ರಾಜಾ ಸಾಬ್
ರಾಜೇಶ್ ದುಗ್ಗುಮನೆ
|

Updated on: Mar 25, 2024 | 9:08 AM

Share

ನಟ ಮಾರುತಿ ಅವರು ಪ್ರಭಾಸ್ (Prabhas) ಜೊತೆ ಕೈ ಜೋಡಿಸಿದ್ದಾರೆ. ಇವರ ಸಿನಿಮಾಗೆ ‘ರಾಜಾಸಾಬ್’ ಎನ್ನುವ ಶೀರ್ಷಿಕೆ ಇಡಲಾಗಿದೆ. ಈ ಚಿತ್ರದ ಬಗ್ಗೆ ಅಭಿಮಾನಿಗಳಿಗೆ ಸಖತ್ ನಿರೀಕ್ಷೆ ಇದೆ. ಈಗಾಗಲೇ ಸಿನಿಮಾ ಪೋಸ್ಟರ್ ಮೂಲಕ ಗಮನ ಸೆಳೆದಿದೆ. ಈ ಚಿತ್ರ ದೊಡ್ಡ ಬಜೆಟ್​ನಲ್ಲಿ ನಿರ್ಮಾಣ ಆಗುತ್ತಿದೆ. ಮಾರುತಿ ಅವರು ಸಣ್ಣ ಬಜೆಟ್​ನ ಸಿನಿಮಾಗಳನ್ನು ಮಾಡುತ್ತಾ ಬಂದವರು. ಅವರು ಇದೇ ಮೊದಲ ಬಾರಿಗೆ ದೊಡ್ಡ ಬಜೆಟ್​ನ ಸಿನಿಮಾ ಮಾಡಿದ್ದಾರೆ. ಈ ಸಿನಿಮಾದ ಬಜೆಟ್ ಬಗ್ಗೆ ಅವರೇ ಮಾಹಿತಿ ನೀಡಿದ್ದಾರೆ.

ಮಾರುತಿ ನಿರ್ದೇಶನದ ‘ಈ ರೋಜುಲ್ಲೋ’ ಸಿನಿಮಾ ರಿ-ರಿಲೀಸ್ ಆಗಿದೆ. ಕೇವಲ 30 ಲಕ್ಷ ರೂಪಾಯಿ ಬಜೆಟ್​ನಲ್ಲಿ ಸಿದ್ಧವಾದ ಈ ಸಿನಿಮಾ ಬಾಕ್ಸ್ ಆಫೀಸ್​ನಲ್ಲಿ ಕೋಟ್ಯಂತರ ರೂಪಾಯಿ ಗಳಿಕೆ ಮಾಡಿತ್ತು. ಈಗ ಅವರು ಬಿಗ್ ಬಜೆಟ್​ನತ್ತ ಗಮನ ಹರಿಸುತ್ತಿದ್ದಾರೆ. ‘ರಾಜಾಸಾಬ್’ ಚಿತ್ರದ ಬಗ್ಗೆ ಮಾರುತಿ ಅವರು ಮಾತನಾಡಿದ್ದಾರೆ. ಸಿನಿಮಾದ ಬಜೆಟ್ ಬಗ್ಗೆ ಅವರು ಅಚ್ಚರಿಯ ವಿಚಾರ ರಿವೀಲ್ ಮಾಡಿದ್ದಾರೆ.

ನಾಲ್ಕು ದಿನಗಳ ಶೂಟ್​ಗೆ ಅವರು ನಾಲ್ಕು ಕೋಟಿ ವ್ಯಯಿಸಿದ್ದಾರಂತೆ. ‘ಕೆಲವೇ ದಿನಗಳ ಹಿಂದೆ ನಾಲ್ಕು ದಿನ ಶೂಟ್ ಮಾಡಿದೆವು. ಇದಕ್ಕೆ 4 ಕೋಟಿ ಖರ್ಚಾಗಿದೆ. ಒಂದೊಮ್ಮೆ ಪ್ರಭಾಸ್ ಇಲ್ಲದೆ ಇದ್ದಿದ್ದರೆ ಈ ಬಜೆಟ್​ನಲ್ಲಿ ನಾನು 2-3 ಸಿನಿಮಾಗಳನ್ನು ಮಾಡುತ್ತಿದ್ದೆ. ಈ ಚಿತ್ರದ ಬಜೆಟ್ ದೊಡ್ಡದಾಗಿದೆ’ ಎಂದಿದ್ದಾರೆ ಅವರು.

ಇದನ್ನೂ ಓದಿ: ಆಗಸ್ಟ್ 15ಕ್ಕೆ ರಿಲೀಸ್ ಆಗಲಿದೆ ‘ಕಲ್ಕಿ 2898 ಎಡಿ’? ‘ಪುಷ್ಪ 2’ ಜೊತೆ ಸೆಣೆಸಾಟಕ್ಕೆ ನಿಂತ ಪ್ರಭಾಸ್ ಸಿನಿಮಾ

‘ರಾಜಾಸಾಬ್’ ಚಿತ್ರದ ಪ್ರಚಾರ ಯಾವಾಗಿನಿಂದ ಎನ್ನುವ ಪ್ರಶ್ನೆಗೂ ಉತ್ತರ ಸಿಕ್ಕಿದೆ. ‘ಕಲ್ಕಿ 2898 ಎಡಿ’ ಸಿನಿಮಾ ಮೇ 9ರಂದು ರಿಲೀಸ್ ಆಗಲಿದೆ. ಚುನಾವಣೆಯ ಅಬ್ಬರದ ಮಧ್ಯೆಯೂ ಸಿನಿಮಾ ಬಿಡುಗಡೆ ಆಗುತ್ತಿದೆ. ಈ ಚಿತ್ರ ರಿಲೀಸ್ ಆದ ಬಳಿಕ ‘ರಾಜಾಸಾಬ್’ ಚಿತ್ರದ ಪ್ರಚಾರವನ್ನು ಮಾರುತಿ ಪ್ರಾರಂಭಿಸಲಿದ್ದಾರೆ. ಅಲ್ಲಿಯವರೆಗೆ ಸಿನಿಮಾ ಬಗ್ಗೆ ಯಾವುದೇ ಮಾಹಿತಿಯನ್ನು ಹಂಚಿಕೊಳ್ಳದೆ ಇರಲು ತಂಡ ನಿರ್ಧರಿಸಿದೆ.

ಇನ್ನಷ್ಟು ಸಿನಿಮಾ ಸುದ್ದಿಗಾಗಿ ಇಲ್ಲಿ ಕ್ಲಿಕ್​ ಮಾಡಿ

Follow Us
ಬದರಿನಾಥದ ಮಹಿಳೆಯರ ಜೊತೆ ಜಾನಪದ ನೃತ್ಯ ಮಾಡಿದ ಸಿಎಂ ಪುಷ್ಕರ್ ಸಿಂಗ್ ಧಾಮಿ!
ಬದರಿನಾಥದ ಮಹಿಳೆಯರ ಜೊತೆ ಜಾನಪದ ನೃತ್ಯ ಮಾಡಿದ ಸಿಎಂ ಪುಷ್ಕರ್ ಸಿಂಗ್ ಧಾಮಿ!
ವೇದಿಕೆ ಮೇಲೆಯೇ ಶಿಡ್ಲಘಟ್ಟ ತಹಶೀಲ್ದಾರ್​​ಗೆ ಡಿಸಿ ಕ್ಲಾಸ್
ವೇದಿಕೆ ಮೇಲೆಯೇ ಶಿಡ್ಲಘಟ್ಟ ತಹಶೀಲ್ದಾರ್​​ಗೆ ಡಿಸಿ ಕ್ಲಾಸ್
ಮಾಜಿ ಸಿಎಂ ಸಿದ್ದರಾಮಯ್ಯ ಹೇಳಿಕೆಗೆ ಹೆಚ್.ಸಿ. ಮಹದೇವಪ್ಪ ಟಾಂಗ್
ಮಾಜಿ ಸಿಎಂ ಸಿದ್ದರಾಮಯ್ಯ ಹೇಳಿಕೆಗೆ ಹೆಚ್.ಸಿ. ಮಹದೇವಪ್ಪ ಟಾಂಗ್
ಜಪಾನ್ ವಾಯುಪಡೆ ಮುಖ್ಯಸ್ಥರಿಂದ ಭಾರತದ ತೇಜಸ್ ಯುದ್ಧವಿಮಾನ ಹಾರಾಟ
ಜಪಾನ್ ವಾಯುಪಡೆ ಮುಖ್ಯಸ್ಥರಿಂದ ಭಾರತದ ತೇಜಸ್ ಯುದ್ಧವಿಮಾನ ಹಾರಾಟ
ಎಲಿಮಿನೇಷನ್​​​ಗೆ ಮುನ್ನ ಬಿಗ್​​ಬಾಸ್ ಮನೆಯಲ್ಲಿ ನಗುವೋ ನಗು: ವಿಡಿಯೋ
ಎಲಿಮಿನೇಷನ್​​​ಗೆ ಮುನ್ನ ಬಿಗ್​​ಬಾಸ್ ಮನೆಯಲ್ಲಿ ನಗುವೋ ನಗು: ವಿಡಿಯೋ
‘ನೂರೇ ದಿನದಲ್ಲಿ ಭರವಸೆ ಮೂಡಿಸಿದ ನಾಯಕ ಡಿಕೆ ಶಿವಕುಮಾರ್‘​​: ಬಿಜೆಪಿ ನಾಯಕ
‘ನೂರೇ ದಿನದಲ್ಲಿ ಭರವಸೆ ಮೂಡಿಸಿದ ನಾಯಕ ಡಿಕೆ ಶಿವಕುಮಾರ್‘​​: ಬಿಜೆಪಿ ನಾಯಕ
ಕರ್ನಾಟಕದಲ್ಲಿ ಫೈಜರ್ ಕಂಪನಿ ಔಷಧ ಮಾರಾಟಕ್ಕೆ ತಾತ್ಕಾಲಿಕ ತಡೆ
ಕರ್ನಾಟಕದಲ್ಲಿ ಫೈಜರ್ ಕಂಪನಿ ಔಷಧ ಮಾರಾಟಕ್ಕೆ ತಾತ್ಕಾಲಿಕ ತಡೆ
ರಮಾನಾಥ ರೈ ಕಾರು ಅಪಘಾತ: ಕೂದಲೆಳೆ ಅಂತರದಲ್ಲಿ ಮಾಜಿ ಸಚಿವರು ಪಾರು
ರಮಾನಾಥ ರೈ ಕಾರು ಅಪಘಾತ: ಕೂದಲೆಳೆ ಅಂತರದಲ್ಲಿ ಮಾಜಿ ಸಚಿವರು ಪಾರು
ಬೀದರ್‌ನ ದಟ್ಟ ಅರಣ್ಯದಲ್ಲಿ ಪತ್ತೆಯಾಯ್ತು ಪುರಾತನ ವಿಷ್ಣು ದೇವಸ್ಥಾನ!
ಬೀದರ್‌ನ ದಟ್ಟ ಅರಣ್ಯದಲ್ಲಿ ಪತ್ತೆಯಾಯ್ತು ಪುರಾತನ ವಿಷ್ಣು ದೇವಸ್ಥಾನ!
ರಾತ್ರಿ ಸುರಿದ ಭಾರಿ ಮಳೆಗೆ ಆನೇಕಲ್ ತತ್ತರ: ಅಂಡರ್‌ಪಾಸ್​​ ಜಲಾವೃತ
ರಾತ್ರಿ ಸುರಿದ ಭಾರಿ ಮಳೆಗೆ ಆನೇಕಲ್ ತತ್ತರ: ಅಂಡರ್‌ಪಾಸ್​​ ಜಲಾವೃತ