AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಪ್ರಭಾಸ್ ನಟನೆಯ ‘ರಾಜಾಸಾಬ್’ ಚಿತ್ರದ ನಾಲ್ಕು ದಿನದ ಶೂಟ್​ಗೆ ಖರ್ಚಾಯ್ತು ನಾಲ್ಕು ಕೋಟಿ ರೂಪಾಯಿ

ಮಾರುತಿ ನಿರ್ದೇಶನದ ‘ಈ ರೋಜುಲ್ಲೋ’ ಸಿನಿಮಾ ರಿ-ರಿಲೀಸ್ ಆಗಿದೆ. ಕೇವಲ 30 ಲಕ್ಷ ರೂಪಾಯಿ ಬಜೆಟ್​ನಲ್ಲಿ ಸಿದ್ಧವಾದ ಈ ಸಿನಿಮಾ ಬಾಕ್ಸ್ ಆಫೀಸ್​ನಲ್ಲಿ ಕೋಟ್ಯಂತರ ರೂಪಾಯಿ ಗಳಿಕೆ ಮಾಡಿತ್ತು. ಈಗ ಅವರು ಬಿಗ್ ಬಜೆಟ್​ನತ್ತ ಗಮನ ಹರಿಸುತ್ತಿದ್ದಾರೆ. ‘ರಾಜಾಸಾಬ್’ ಚಿತ್ರದ ಬಗ್ಗೆ ಮಾರುತಿ ಅವರು ಮಾತನಾಡಿದ್ದಾರೆ.

ಪ್ರಭಾಸ್ ನಟನೆಯ ‘ರಾಜಾಸಾಬ್’ ಚಿತ್ರದ ನಾಲ್ಕು ದಿನದ ಶೂಟ್​ಗೆ ಖರ್ಚಾಯ್ತು ನಾಲ್ಕು ಕೋಟಿ ರೂಪಾಯಿ
ರಾಜಾ ಸಾಬ್
ರಾಜೇಶ್ ದುಗ್ಗುಮನೆ
|

Updated on: Mar 25, 2024 | 9:08 AM

Share

ನಟ ಮಾರುತಿ ಅವರು ಪ್ರಭಾಸ್ (Prabhas) ಜೊತೆ ಕೈ ಜೋಡಿಸಿದ್ದಾರೆ. ಇವರ ಸಿನಿಮಾಗೆ ‘ರಾಜಾಸಾಬ್’ ಎನ್ನುವ ಶೀರ್ಷಿಕೆ ಇಡಲಾಗಿದೆ. ಈ ಚಿತ್ರದ ಬಗ್ಗೆ ಅಭಿಮಾನಿಗಳಿಗೆ ಸಖತ್ ನಿರೀಕ್ಷೆ ಇದೆ. ಈಗಾಗಲೇ ಸಿನಿಮಾ ಪೋಸ್ಟರ್ ಮೂಲಕ ಗಮನ ಸೆಳೆದಿದೆ. ಈ ಚಿತ್ರ ದೊಡ್ಡ ಬಜೆಟ್​ನಲ್ಲಿ ನಿರ್ಮಾಣ ಆಗುತ್ತಿದೆ. ಮಾರುತಿ ಅವರು ಸಣ್ಣ ಬಜೆಟ್​ನ ಸಿನಿಮಾಗಳನ್ನು ಮಾಡುತ್ತಾ ಬಂದವರು. ಅವರು ಇದೇ ಮೊದಲ ಬಾರಿಗೆ ದೊಡ್ಡ ಬಜೆಟ್​ನ ಸಿನಿಮಾ ಮಾಡಿದ್ದಾರೆ. ಈ ಸಿನಿಮಾದ ಬಜೆಟ್ ಬಗ್ಗೆ ಅವರೇ ಮಾಹಿತಿ ನೀಡಿದ್ದಾರೆ.

ಮಾರುತಿ ನಿರ್ದೇಶನದ ‘ಈ ರೋಜುಲ್ಲೋ’ ಸಿನಿಮಾ ರಿ-ರಿಲೀಸ್ ಆಗಿದೆ. ಕೇವಲ 30 ಲಕ್ಷ ರೂಪಾಯಿ ಬಜೆಟ್​ನಲ್ಲಿ ಸಿದ್ಧವಾದ ಈ ಸಿನಿಮಾ ಬಾಕ್ಸ್ ಆಫೀಸ್​ನಲ್ಲಿ ಕೋಟ್ಯಂತರ ರೂಪಾಯಿ ಗಳಿಕೆ ಮಾಡಿತ್ತು. ಈಗ ಅವರು ಬಿಗ್ ಬಜೆಟ್​ನತ್ತ ಗಮನ ಹರಿಸುತ್ತಿದ್ದಾರೆ. ‘ರಾಜಾಸಾಬ್’ ಚಿತ್ರದ ಬಗ್ಗೆ ಮಾರುತಿ ಅವರು ಮಾತನಾಡಿದ್ದಾರೆ. ಸಿನಿಮಾದ ಬಜೆಟ್ ಬಗ್ಗೆ ಅವರು ಅಚ್ಚರಿಯ ವಿಚಾರ ರಿವೀಲ್ ಮಾಡಿದ್ದಾರೆ.

ನಾಲ್ಕು ದಿನಗಳ ಶೂಟ್​ಗೆ ಅವರು ನಾಲ್ಕು ಕೋಟಿ ವ್ಯಯಿಸಿದ್ದಾರಂತೆ. ‘ಕೆಲವೇ ದಿನಗಳ ಹಿಂದೆ ನಾಲ್ಕು ದಿನ ಶೂಟ್ ಮಾಡಿದೆವು. ಇದಕ್ಕೆ 4 ಕೋಟಿ ಖರ್ಚಾಗಿದೆ. ಒಂದೊಮ್ಮೆ ಪ್ರಭಾಸ್ ಇಲ್ಲದೆ ಇದ್ದಿದ್ದರೆ ಈ ಬಜೆಟ್​ನಲ್ಲಿ ನಾನು 2-3 ಸಿನಿಮಾಗಳನ್ನು ಮಾಡುತ್ತಿದ್ದೆ. ಈ ಚಿತ್ರದ ಬಜೆಟ್ ದೊಡ್ಡದಾಗಿದೆ’ ಎಂದಿದ್ದಾರೆ ಅವರು.

ಇದನ್ನೂ ಓದಿ: ಆಗಸ್ಟ್ 15ಕ್ಕೆ ರಿಲೀಸ್ ಆಗಲಿದೆ ‘ಕಲ್ಕಿ 2898 ಎಡಿ’? ‘ಪುಷ್ಪ 2’ ಜೊತೆ ಸೆಣೆಸಾಟಕ್ಕೆ ನಿಂತ ಪ್ರಭಾಸ್ ಸಿನಿಮಾ

‘ರಾಜಾಸಾಬ್’ ಚಿತ್ರದ ಪ್ರಚಾರ ಯಾವಾಗಿನಿಂದ ಎನ್ನುವ ಪ್ರಶ್ನೆಗೂ ಉತ್ತರ ಸಿಕ್ಕಿದೆ. ‘ಕಲ್ಕಿ 2898 ಎಡಿ’ ಸಿನಿಮಾ ಮೇ 9ರಂದು ರಿಲೀಸ್ ಆಗಲಿದೆ. ಚುನಾವಣೆಯ ಅಬ್ಬರದ ಮಧ್ಯೆಯೂ ಸಿನಿಮಾ ಬಿಡುಗಡೆ ಆಗುತ್ತಿದೆ. ಈ ಚಿತ್ರ ರಿಲೀಸ್ ಆದ ಬಳಿಕ ‘ರಾಜಾಸಾಬ್’ ಚಿತ್ರದ ಪ್ರಚಾರವನ್ನು ಮಾರುತಿ ಪ್ರಾರಂಭಿಸಲಿದ್ದಾರೆ. ಅಲ್ಲಿಯವರೆಗೆ ಸಿನಿಮಾ ಬಗ್ಗೆ ಯಾವುದೇ ಮಾಹಿತಿಯನ್ನು ಹಂಚಿಕೊಳ್ಳದೆ ಇರಲು ತಂಡ ನಿರ್ಧರಿಸಿದೆ.

ಇನ್ನಷ್ಟು ಸಿನಿಮಾ ಸುದ್ದಿಗಾಗಿ ಇಲ್ಲಿ ಕ್ಲಿಕ್​ ಮಾಡಿ

Follow Us
ಹುಬ್ಬಳ್ಳಿ ಸ್ಟೇಡಿಯಂ ಪೆವಿಲಿಯನ್​ಗೆ ಸುನಿಲ್ ಜೋಶಿ ಹೆಸರು ನಾಮಕರಣ
ಹುಬ್ಬಳ್ಳಿ ಸ್ಟೇಡಿಯಂ ಪೆವಿಲಿಯನ್​ಗೆ ಸುನಿಲ್ ಜೋಶಿ ಹೆಸರು ನಾಮಕರಣ
ಎಕ್ಸಾಂನಲ್ಲಿ ಟೈಮ್ ಮ್ಯಾನೇಜ್​ಮೆಂಟ್ ಮಾಡೋಕೆ ಆಗ್ತಾ ಇಲ್ವಾ?
ಎಕ್ಸಾಂನಲ್ಲಿ ಟೈಮ್ ಮ್ಯಾನೇಜ್​ಮೆಂಟ್ ಮಾಡೋಕೆ ಆಗ್ತಾ ಇಲ್ವಾ?
ತಡರಾತ್ರಿ ಗ್ರಾಮದಲ್ಲಿ ಓಡಾಡಿದ ಕಾಡಾನೆಗಳ ಹಿಂಡು!
ತಡರಾತ್ರಿ ಗ್ರಾಮದಲ್ಲಿ ಓಡಾಡಿದ ಕಾಡಾನೆಗಳ ಹಿಂಡು!
ರಾಜ್ಯ ಸರ್ಕಾರ ದಿವಾಳಿ, ಸಂಬಳ ನೀಡಲೂ ಹಣವಿಲ್ಲ: ಅಶೋಕ್​​ ಸ್ಫೋಟಕ ಆರೋಪ
ರಾಜ್ಯ ಸರ್ಕಾರ ದಿವಾಳಿ, ಸಂಬಳ ನೀಡಲೂ ಹಣವಿಲ್ಲ: ಅಶೋಕ್​​ ಸ್ಫೋಟಕ ಆರೋಪ
ಉದ್ಯೋಗಾಕಾಂಕ್ಷಿಗಳ ಕಿಚ್ಚು: ಅನುಮತಿ ನಿರಾಕರಣೆ ನಡುವೆಯೂ ಬೃಹತ್​ ಪ್ರತಿಭಟನೆ
ಉದ್ಯೋಗಾಕಾಂಕ್ಷಿಗಳ ಕಿಚ್ಚು: ಅನುಮತಿ ನಿರಾಕರಣೆ ನಡುವೆಯೂ ಬೃಹತ್​ ಪ್ರತಿಭಟನೆ
ಪೊಲೀಸರ ವಿರೋಧದ ಮಧ್ಯೆಯೇ ಜಯನಗರ ವೃತ್ತದ ಕಡೆಗೆ ಯುವಕರ ಮೆರವಣಿಗೆ!
ಪೊಲೀಸರ ವಿರೋಧದ ಮಧ್ಯೆಯೇ ಜಯನಗರ ವೃತ್ತದ ಕಡೆಗೆ ಯುವಕರ ಮೆರವಣಿಗೆ!
Live: ಧಾರವಾಡದಲ್ಲಿ ಅಖಿಲ ಕರ್ನಾಟಕ ರಾಜ್ಯ ವಿದ್ಯಾರ್ಥಿ ಸಂಘಟನೆ ಪ್ರತಿಭಟನೆ
Live: ಧಾರವಾಡದಲ್ಲಿ ಅಖಿಲ ಕರ್ನಾಟಕ ರಾಜ್ಯ ವಿದ್ಯಾರ್ಥಿ ಸಂಘಟನೆ ಪ್ರತಿಭಟನೆ
ಬೆಂಗಳೂರು: ಸೈರನ್​ನಿಂದ ತಪ್ಪಿತು ಕೆನರಾ ಬ್ಯಾಂಕ್ ಕಳ್ಳತನ ಯತ್ನ!
ಬೆಂಗಳೂರು: ಸೈರನ್​ನಿಂದ ತಪ್ಪಿತು ಕೆನರಾ ಬ್ಯಾಂಕ್ ಕಳ್ಳತನ ಯತ್ನ!
ರೇಣುಕಾಸ್ವಾಮಿ ಕೊಲೆ ಕೇಸ್​​​ನಲ್ಲಿ ತನಿಖಾಧಿಕಾರಿಗಳಿಂದ ನಡೆದಿದೆ ಎಡವಟ್ಟು?
ರೇಣುಕಾಸ್ವಾಮಿ ಕೊಲೆ ಕೇಸ್​​​ನಲ್ಲಿ ತನಿಖಾಧಿಕಾರಿಗಳಿಂದ ನಡೆದಿದೆ ಎಡವಟ್ಟು?
ಮನೆಯಲ್ಲಿ ಅಗ್ನಿ ಅವಘಡ, ಅವಳಿ ಶಿಶುಗಳು ಸೇರಿ ಆರು ಮಂದಿ ಸಜೀವದಹನ
ಮನೆಯಲ್ಲಿ ಅಗ್ನಿ ಅವಘಡ, ಅವಳಿ ಶಿಶುಗಳು ಸೇರಿ ಆರು ಮಂದಿ ಸಜೀವದಹನ