AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಪ್ರಭಾಸ್ ಅಭಿಮಾನಿಗಳಿಗೆ ಮತ್ತೆ ನಿರಾಸೆ, ‘ರಾಜಾ ಸಾಬ್’ ಬಿಡುಗಡೆ ಬಲು ದೂರ

Prabhas movies: ಪ್ರಭಾಸ್ ನಟನೆಯ ‘ದಿ ರಾಜಾ ಸಾಬ್’ ಸಿನಿಮಾದ ಬಿಡುಗಡೆ ಈಗಾಗಲೇ ಎರಡು ಬಾರಿ ಮುಂದೂಡಲಾಗಿದೆ. ಈ ಸಿನಿಮಾ ಇದೇ ವರ್ಷದ ಏಪ್ರಿಲ್​ನಲ್ಲಿಯೇ ಬಿಡುಗಡೆ ಆಗಲಿದೆ ಎನ್ನಲಾಗಿತ್ತು. ಆದರೆ ಈಗ ಸಿನಿಮಾದ ಬಿಡುಗಡೆ ಮತ್ತಷ್ಟು ಮುಂದಕ್ಕೆ ಹೋಗಲಿದೆ. ಈ ಬಗ್ಗೆ ಸ್ವತಃ ನಿರ್ಮಾಪಕರೇ ಮಾತನಾಡಿದ್ದಾರೆ.

ಪ್ರಭಾಸ್ ಅಭಿಮಾನಿಗಳಿಗೆ ಮತ್ತೆ ನಿರಾಸೆ, ‘ರಾಜಾ ಸಾಬ್’ ಬಿಡುಗಡೆ ಬಲು ದೂರ
The Raja Saab
ಮಂಜುನಾಥ ಸಿ.
|

Updated on: Aug 07, 2025 | 1:13 PM

Share

ಪ್ರಭಾಸ್ ನಟನೆಯ ‘ದಿ ರಾಜಾ ಸಾಬ್’ (The Raja Saab) ಸಿನಿಮಾದ ಬಿಡುಗಡೆ ಈಗಾಗಲೇ ಎರಡು ಬಾರಿ ಮುಂದೂಡಲಾಗಿದೆ. ಇದೇ ವರ್ಷದ ಆರಂಭದಲ್ಲಿಯೇ ಸಿನಿಮಾ ಬಿಡುಗಡೆ ಆಗಲಿದೆ ಎನ್ನಲಾಗಿತ್ತು. ಬಳಿಕ ಆಗಸ್ಟ್ ತಿಂಗಳಲ್ಲಿ ಸಿನಿಮಾ ಬಿಡುಗಡೆ ಆಗಲಿದೆ ಎಂಬ ಸುದ್ದಿ ಹರಿದಾಡಿತು. ಆದರೆ ಈಗ ಸ್ವತಃ ನಿರ್ಮಾಪರೇ ಹೇಳಿರುವಂತೆ ‘ದಿ ರಾಜಾ ಸಾಬ್’ ಸಿನಿಮಾ ಬಿಡುಗಡೆ ಮತ್ತೊಮ್ಮೆ ಮುಂದೂಡಲ್ಪಟ್ಟಿದೆ, ಈ ವರ್ಷ ‘ರಾಜಾ ಸಾಬ್’ ಸಿನಿಮಾ ಬಿಡುಗಡೆ ಆಗುವುದೇ ಅನುಮಾನ ಎನ್ನುವಂತಿದೆ ನಿರ್ಮಾಪಕರ ಮಾತುಗಳು.

ಪ್ರಭಾಸ್ ನಟಿಸಿರು ಹಾರರ್​ ಕಾಮಿಡಿ ಸಿನಿಮಾ ‘ದಿ ರಾಜಾ ಸಾಬ್’. ಸಿನಿಮಾನಲ್ಲಿ ಪ್ರಭಾಸ್ ಎರಡು ಶೇಡ್​ಗಳಲ್ಲಿ ನಟಿಸಿದ್ದಾರೆ. ಸಿನಿಮಾನಲ್ಲಿ ಹಾರರ್, ಕಾಮಿಡಿ ಜೊತೆಗೆ ಲವ್ ಸ್ಟೋರಿಯೂ ಸಹ ಇರಲಿದೆ. ಸಿನಿಮಾದ ಟೀಸರ್ ಈಗಾಗಲೇ ಬಿಡುಗಡೆ ಆಗಿದ್ದು ಗಮನ ಸೆಳೆದಿದೆ. ಆದರೆ ಸಿನಿಮಾದ ಬಿಡುಗಡೆ ಮಾತ್ರ ತಡವಾಗುತ್ತಲೇ ಸಾಗುತ್ತಿದೆ. ಮೊದಲಿಗೆ ವಿಎಫ್​ಎಕ್ಸ್ ಕಾರಣಕ್ಕೆ ತಡವಾಯ್ತು. ಆ ನಂತರ ಸಿನಿಮಾದ ಕೆಲವು ಭಾಗಗಳನ್ನು ಮತ್ತೆ ಚಿತ್ರೀಕರಣ ಮಾಡಿ, ಮತ್ತೆ ವಿಎಫ್​ಎಕ್ಸ್ ಕೆಲಸ ಮಾಡಲಾಯ್ತು. ಈಗ ಮತ್ತೆ ಸಿನಿಮಾ ಬಿಡುಗಡೆ ಮುಂದೂಡಿಕೆ ಆಗಿದೆ.

ಸಿನಿಮಾದ ನಿರ್ಮಾಪಕ ಟಿಜಿ ವಿಶ್ವಪ್ರಸಾದ್ ಹೇಳಿರುವಂತೆ, ‘ಹಲವು ಮಂದಿ ‘ದಿ ರಾಜಾ ಸಾಬ್’ ಸಿನಿಮಾ ಮುಂದಿನ ಸಂಕ್ರಾಂತಿಗೆ ಬಿಡುಗಡೆ ಆಗಬೇಕು ಎಂಬ ಅಭಿಪ್ರಾಯ ವ್ಯಕ್ತಪಡಿಸಿದ್ದಾರೆ. ಪ್ರಭಾಸ್ ಅಭಿಮಾನಿಗಳು ಸಹ ಅದನ್ನೇ ಕೋರಿಕೊಳ್ಳುತ್ತಿದ್ದಾರೆ, ತೆಲುಗು ಸಿನಿಮಾ ವ್ಯವಹಾರ ಪರಿಣಿತರೂ ಸಹ ಅದೇ ಅಭಿಪ್ರಾಯವನ್ನು ವ್ಯಕ್ತಪಡಿಸಿದ್ದಾರೆ’ ಎಂದಿದ್ದಾರೆ. ಆ ಮೂಲಕ ಪರೋಕ್ಷವಾಗಿ ‘ದಿ ರಾಜಾ ಸಾಬ್’ ಸಿನಿಮಾ ಅನ್ನು ಮುಂದಿನ ವರ್ಷ ಜನವರಿಯಲ್ಲಿ ಬಿಡುಗಡೆ ಮಾಡುವ ಉಮೇದನ್ನು ವ್ಯಕ್ತಪಡಿಸಿದ್ದಾರೆ.

ಇದನ್ನೂ ಓದಿ:‘ಆದಿಪುರುಷ್’ ಚೆನ್ನಾಗಿಲ್ಲ ಎಂದಾಗ ಪ್ರಭಾಸ್ ಹೇಳಿದ್ದೇನು?

ಮಾತು ಮುಂದುವರೆಸಿ, ‘ಜನವರಿ 9 ರ ಸಂಕ್ರಾಂತಿ ಸಮಯಕ್ಕೆ ಬಾಲಿವುಡ್ ನಟ ರಣ್ವೀರ್ ಸಿಂಗ್ ನಟನೆಯ ‘ದುರಂಧರ್’ ಸಿನಿಮಾ ಸಹ ಬಿಡುಗಡೆ ಆಗುತ್ತಿದ್ದು, ಬಾಲಿವುಡ್​ನ ಕೆಲವು ಮಂದಿ, ‘ದಿ ರಾಜಾ ಸಾಬ್’ ಸಿನಿಮಾ ಡಿಸೆಂಬರ್ 5ಕ್ಕೆ ಬಿಡುಗಡೆ ಮಾಡಬೇಕು ಎಂಬ ಅಭಿಪ್ರಾಯವನ್ನು ಸಹ ವ್ಯಕ್ತಪಡಿಸಿದ್ದಾರೆ. ಆದರೆ ನಾವು ಇನ್ನೂ ಯಾವುದೇ ದಿನಾಂಕ ನಿಗದಿಪಡಿಸಿಕೊಂಡಿಲ್ಲ. ಸಿನಿಮಾದ ಕೆಲಸ ಅಕ್ಟೋಬರ್ ತಿಂಗಳಲ್ಲಿ ಪೂರ್ಣವಾಗಲಿದ್ದು, ಆ ವೇಳೆಗೆ ಸಿನಿಮಾದ ಅಧಿಕೃತ ಬಿಡುಗಡೆ ದಿನಾಂಕ ಘೋಷಿಸಲಿದ್ದೇವೆ’ ಎಂದಿದ್ದಾರೆ.

ಸಿನಿಮಾದ ಬಗ್ಗೆ ಮತ್ತೊಂದು ಪ್ರಮುಖ ಅಂಶವನ್ನು ಬಹಿರಂಗಪಡಿಸಿರುವ ನಿರ್ಮಾಪಕ ಟಿಜಿ ವಿಶ್ವಪ್ರಸಾದ್, ‘ದಿ ರಾಜಾ ಸಾಬ್’ ಸಿನಿಮಾದ ಎರಡನೇ ಭಾಗವೂ ಬರಲಿದೆ. ಆದರೆ ಅದು ಇದೇ ಕತೆಯ ಮುಂದುವರೆದ ಭಾಗ ಆಗಿರುವುದಿಲ್ಲ ಆದರೆ ಇದೇ ಸಿನಿಮ್ಯಾಟಿಕ್ ಯೂನಿವರ್ಸ್​ನ ಭಾಗ ಆಗಿರಲಿದೆ. ಸಿನಿಮಾದ ಫುಟೇಜ್ ನಾಲ್ಕು ಗಂಟೆ ಮೂರು ನಿಮಿಷ ಇದ್ದು, ಅದನ್ನು ಸರಿಯಾಗಿ ಎಡಿಟ್ ಮಾಡಿ ಮೂರು ಗಂಟೆಗೆ ಇಳಿಸಲಾಗುತ್ತದೆ. ಕೆಲವು ದೃಶ್ಯಗಳನ್ನು ಮುಂದಿನ ಭಾಗದ ಸಿನಿಮಾನಲ್ಲಿ ಬಳಸಿಕೊಳ್ಳಲಾಗುತ್ತದೆ’ ಎಂದಿದ್ದಾರೆ.

‘ದಿ ರಾಜಾ ಸಾಬ್’ ಸಿನಿಮಾ ಹಾರರ್ ಕಾಮಿಡಿ ಆಗಿದ್ದು, ಸಿನಿಮಾನಲ್ಲಿ ಪ್ರಭಾಸ್ ಜೊತೆಗೆ ನಿಧಿ ಅಗರ್ವಾಲ್, ಮಾಳವಿಕಾ ಮೋಹನನ್ ನಟಿಸಿದ್ದಾರೆ. ಸಿನಿಮಾ ಅನ್ನು ಮಾರುತಿ ನಿರ್ದೇಶನ ಮಾಡಿದ್ದಾರೆ.

ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

ರಷ್ಯಾ-ಉಕ್ರೇನ್ ಶಾಂತಿ ಹಾದಿಯಲ್ಲಿ ಸಾಗುತ್ತೆ ಎನ್ನುವ ನಂಬಿಕೆ ಇದೆ: ಮೋದಿ
ರಷ್ಯಾ-ಉಕ್ರೇನ್ ಶಾಂತಿ ಹಾದಿಯಲ್ಲಿ ಸಾಗುತ್ತೆ ಎನ್ನುವ ನಂಬಿಕೆ ಇದೆ: ಮೋದಿ
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ಮಹಾತ್ಮ ಗಾಂಧಿ ಸ್ಮಾರಕಕ್ಕೆ ಗೌರವ ಸಲ್ಲಿಸಿದ ರಷ್ಯಾ ಅಧ್ಯಕ್ಷ ಪುಟಿನ್
ಮಹಾತ್ಮ ಗಾಂಧಿ ಸ್ಮಾರಕಕ್ಕೆ ಗೌರವ ಸಲ್ಲಿಸಿದ ರಷ್ಯಾ ಅಧ್ಯಕ್ಷ ಪುಟಿನ್
ವಧು-ವರರ ಆನ್​ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ
ವಧು-ವರರ ಆನ್​ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ
ದೇವಸ್ಥಾನಗಳಲ್ಲಿ ಮದುವೆ ಮಾಡಿಸಲು ಹಿಂದೇಟು; ಅರ್ಚಕರ ನಿರ್ಧಾರಕ್ಕೆ ಕಾರಣ ಏನು
ದೇವಸ್ಥಾನಗಳಲ್ಲಿ ಮದುವೆ ಮಾಡಿಸಲು ಹಿಂದೇಟು; ಅರ್ಚಕರ ನಿರ್ಧಾರಕ್ಕೆ ಕಾರಣ ಏನು
ಬೆಂಗಳೂರಿನ ಹಲವೆಡೆ ತುಂತುರು ಮಳೆ, ಚುಮು ಚುಮು ಚಳಿ
ಬೆಂಗಳೂರಿನ ಹಲವೆಡೆ ತುಂತುರು ಮಳೆ, ಚುಮು ಚುಮು ಚಳಿ
ತುಮಕೂರು: ಎಟಿಎಂ ಮಷಿನನ್ನೇ ಹೊತ್ತಯ್ದು ಕಸದ ಬುಟ್ಟಿ ಬಳಿ ಬಿಟ್ಟ ಕಳ್ಳರು!
ತುಮಕೂರು: ಎಟಿಎಂ ಮಷಿನನ್ನೇ ಹೊತ್ತಯ್ದು ಕಸದ ಬುಟ್ಟಿ ಬಳಿ ಬಿಟ್ಟ ಕಳ್ಳರು!
ಉತ್ತರಾಖಂಡ: ಕಂದಕಕ್ಕೆ ಬಿದ್ದ ಬೊಲೆರೊ, ಐವರು ಸಾವು
ಉತ್ತರಾಖಂಡ: ಕಂದಕಕ್ಕೆ ಬಿದ್ದ ಬೊಲೆರೊ, ಐವರು ಸಾವು
ಇಂಡಿಗೋ ವಿಮಾನ ರದ್ದು: ಕೆಎಸ್​ಆರ್​ಟಿಸಿ ಬಿಎಂಟಿಸಿ ಆದಾಯಕ್ಕೂ ಹೊಡೆತ
ಇಂಡಿಗೋ ವಿಮಾನ ರದ್ದು: ಕೆಎಸ್​ಆರ್​ಟಿಸಿ ಬಿಎಂಟಿಸಿ ಆದಾಯಕ್ಕೂ ಹೊಡೆತ