AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Radhe Shyam: ‘ನನಗೆ ಎಲ್ಲಾ ಗೊತ್ತು, ಆದರೆ ಅದನ್ನ ಯಾರಿಗೂ ಹೇಳೋದಿಲ್ಲ’ ಎಂ‌ದ ಪ್ರಭಾಸ್; ಏಕಂತೆ?

Prabhas Birthday: ಪ್ರಭಾಸ್ ಹಾಗೂ ಪೂಜಾ ಹೆಗ್ಡೆ ಮುಖ್ಯಭೂಮಿಕೆ ನಿಭಾಯಿಸಿರುವ ‘ರಾಧೆ ಶ್ಯಾಮ್’ ಚಿತ್ರದಲ್ಲಿನ ‘ವಿಕ್ರಮಾದಿತ್ಯ’ ಪಾತ್ರದ ಟೀಸರ್ ಬಿಡುಗಡೆಯಾಗಿದೆ. ಇದರಲ್ಲಿನ ಪ್ರಭಾಸ್ ಸಂಭಾಷಣೆ ಸದ್ಯ ಸಖತ್ ಸುದ್ದಿಯಾಗಿದೆ.

Radhe Shyam: 'ನನಗೆ ಎಲ್ಲಾ ಗೊತ್ತು, ಆದರೆ ಅದನ್ನ ಯಾರಿಗೂ ಹೇಳೋದಿಲ್ಲ' ಎಂ‌ದ ಪ್ರಭಾಸ್; ಏಕಂತೆ?
‘ರಾಧೆ ಶ್ಯಾಮ್’ ಚಿತ್ರದಲ್ಲಿ ಪ್ರಭಾಸ್
TV9 Web
| Updated By: shivaprasad.hs|

Updated on: Oct 23, 2021 | 3:09 PM

Share

ಟಾಲಿವುಡ್ ನಟ ಪ್ರಭಾಸ್ ಸದ್ಯ ಪ್ಯಾನ್ ಇಂಡಿಯಾ ಸ್ಟಾರ್ ಆಗಿ ಗುರುತಿಸಿಕೊಂಡಿದ್ದಾರೆ. ಪ್ರಸ್ತುತ ಅವರ ಬತ್ತಳಿಕೆಯಲ್ಲಿ ಹಲವು ಚಿತ್ರಗಳಿದ್ದು, ‘ರಾಧೆ ಶ್ಯಾಮ್’ ಚಿತ್ರ ಬಿಡುಗಡೆಗೆ ಸಿದ್ಧವಾಗಿದೆ. ಇಂದು (ಅಕ್ಟೋಬರ್ 23) ಪ್ರಭಾಸ್ ಜನ್ಮದಿನದ ಹಿನ್ನೆಲೆಯಲ್ಲಿ ‘ರಾಧೆ ಶ್ಯಾಮ್’ ಚಿತ್ರದಲ್ಲಿ ಪ್ರಭಾಸ್ ಪಾತ್ರವನ್ನು ಪರಿಚಯಿಸುವ ಟೀಸರ್ ಒಂದನ್ನು ಚಿತ್ರತಂಡ ಬಿಡುಗಡೆ ಮಾಡಿದೆ. ಈ ಟೀಸರ್ ಸದ್ಯ ಸಖತ್ ಸುದ್ದಿಯಾಗಿದ್ದು, ಇದರಲ್ಲಿ ಪ್ರಭಾಸ್ ಸ್ಟೈಲ್​ಗೆ, ಡೈಲಾಗ್ಸ್​ಗೆ ಹಾಗೂ ಚಿತ್ರದ ಮೇಕಿಂಗ್​ಗೆ ಅಭಿಮಾನಿಗಳು ಫಿದಾ ಆಗಿದ್ದಾರೆ. ಅಲ್ಲದೇ ಪ್ರಭಾಸ್ ನುಡಿದಿರುವ ಸಂಭಾಷಣೆಗಳು ಎಲ್ಲೆಡೆ ಟ್ರೆಂಡ್ ಕೂಡ ಆಗುತ್ತಿದೆ. ಅಷ್ಟಕ್ಕೂ ಪ್ರಭಾಸ್ ಹೇಳಿದ್ದೇನು? ಮುಂದೆ ಓದಿ.

‘ರಾಧೆ ಶ್ಯಾಮ್’ ಚಿತ್ರದ ಟ್ರೈಲರ್ ವೀಕ್ಷಕರಲ್ಲಿ ಹೊಸ ಕುತೂಹಲ ಹುಟ್ಟುಹಾಕಿದೆ. ಕಾರಣ ಇದುವರೆಗೆ ಈ ಚಿತ್ರ ಒಂದು ರೊಮ್ಯಾಂಟಿಕ್ ಚಿತ್ರವಾಗಿರಲಿದೆ ಎಂದು ಸುದ್ದಿಗಳು ಓಡಾಡಿದ್ದವು. ಅಲ್ಲದೇ ಚಿತ್ರದ ಟೀಸರ್ ಹಾಗೂ ಪೋಸ್ಟರ್​ಗಳೂ ಅದನ್ನೇ ಹೇಳಿದ್ದವು. ಆದರೆ ಪ್ರಭಾಸ್ ಪಾತ್ರ ಪರಿಚಯದ ಮುಖಾಂತರ ಚಿತ್ರವು ಕೇವಲ ರೊಮ್ಯಾಂಟಿಕ್ ಮಾದರಿಯ ಚಿತ್ರವಲ್ಲ ಎಂಬುದು ಸಾಬೀತಾಗಿದೆ. ಅಲ್ಲದೇ ಇದರಲ್ಲಿನ ಪ್ರಭಾಸ್ ಸಂಭಾಷಣೆ ಎಲ್ಲವನ್ನೂ ತಿಳಿದಿರುವ ನಾಯಕನ ಪರಿಚಯವನ್ನು ಮಾಡಿಸಿದೆ. ಈ ಮೂಲಕ ಚಿತ್ರದ ಹೊಸ ಆಯಾಮವೊಂದು ತೆರೆದುಕೊಂಡಂತಾಗಿದ್ದು, ಕುತೂಹಲ ಇಮ್ಮಡಿಯಾಗಿದೆ.

‘ರಾಧೆ ಶ್ಯಾಮ್’ ಚಿತ್ರದಲ್ಲಿ ಪ್ರಭಾಸ್ ವಿಕ್ರಮಾದಿತ್ಯ ಎಂಬ ಪಾತ್ರ ನಿರ್ವಹಿಸುತ್ತಿದ್ದಾರೆ. ಈ ಪಾತ್ರದ ಮುಖ್ಯ ಗುಣ ಹೇಗೆಂದರೆ, ಆತನಿಗೆ ಎಲ್ಲವೂ ತಿಳಿದಿದೆ. ಆದರೆ ಅದನ್ನು ಯಾರಿಗೂ ಹೇಳುವುದಿಲ್ಲ. ಇದನ್ನು ಪ್ರಭಾಸ್ ಡೈಲಾಗ್ಸ್ ಮುಖಾಂತರ ವಿವರಿಸಿದ್ದಾರೆ. ‘ನನಗೆ ನೀನು ಗೊತ್ತು. ಆದರೆ ನಿನಗೆ ನಾನು ಅದನ್ನು ಹೇಳುವುದಿಲ್ಲ. ನಿನ್ನ ಹೃದಯ ಛಿದ್ರವಾಗಿರುವುದು ತಿಳಿದಿದೆ. ಆದರೆ ನಿನಗದನ್ನು ಹೇಳುವುದಿಲ್ಲ. ನನಗೆ ನಿನ್ನ ಸಾವಿನ ಕುರಿತೂ ತಿಳಿದಿದೆ. ಆದರೆ ನಿನಗೆ ಅದನ್ನೂ ಹೇಳುವುದಿಲ್ಲ. ನನಗೆ ಎಲ್ಲವೂ ತಿಳಿದಿದೆ. ಆದರೆ ಯಾವುದನ್ನೂ ನಿನಗೆ ಹೇಳುವುದಿಲ್ಲ’ ಎಂದು ಪ್ರಭಾಸ್ ಸ್ವಗತದಲ್ಲಿ ಹೇಳಿಕೊಂಡಿದ್ದಾರೆ. ಅವರು ಯಾವುದನ್ನೂ ಹೇಳದಿರುವ ಕಾರಣವನ್ನೂ ವಿವರಿಸಿದ್ದಾರೆ.

‘‘ನನಗೆ ಎಲ್ಲವೂ ತಿಳಿದಿದೆ. ಆದರೆ ಯಾವುದನ್ನೂ ಹೇಳುವುದಿಲ್ಲ. ಏಕೆಂದರೆ ಅವ್ಯಾವುದೂ ನಿನಗೆ ಅರ್ಥವಾಗುವುದಿಲ್ಲ. ಎಲ್ಲವೂ ನಿನ್ನ ಆಲೋಚನೆಯನ್ನು ಮೀರಿದೆ. ನಾನೇನು ಅಸಾಮಾನ್ಯನಲ್ಲ. ಆದರೆ ನಿಮ್ಮೆಲ್ಲರಂತೆಯೂ ಅಲ್ಲ’’ ಎಂದಿದ್ದಾರೆ ಪ್ರಭಾಸ್. ಈ ಮೂಲಕ ಟೀಸರ್​ನಲ್ಲಿ ಒಂದು ಅಸಾಮಾನ್ಯ ಪಾತ್ರದ ಪರಿಚಯವನ್ನು ಮಾಡಲಾಗಿದೆ.

ಚಿತ್ರದ ಟೀಸರ್ ಇಲ್ಲಿದೆ:

ಪ್ರಭಾಸ್ ಹಾಗೂ ಪೂಜಾ ಹೆಗ್ಡೆ ನಟಿಸುತ್ತಿರುವ ‘ರಾಧೆ ಶ್ಯಾಮ್’ ಜನವರಿ 14ರ ಸಂಕ್ರಾಂತಿಯಂದು ತೆರೆಗೆ ಬರುತ್ತಿದೆ. ಹಿಂದಿ, ತೆಲುಗು, ತಮಿಳು, ಮಲಯಾಳಂನಲ್ಲಿ ಏಕಕಾಲದಲ್ಲಿ ಚಿತ್ರ ತಯಾರಾಗಿದೆ. ಕನ್ನಡದಲ್ಲೂ ಈ ಚಿತ್ರ ಬಿಡುಗಡೆಯಾಗುತ್ತಿದೆ. ಈ ಚಿತ್ರವನ್ನು ರಾಧಾ ಕೃಷ್ಣ ಕುಮಾರ್ ನಿರ್ದೇಶಿಸಿದ್ದಾರೆ.

ಪ್ರಭಾಸ್​​ಗೆ ಶುಭಕೋರಿದ ‘ಆದಿಪುರುಷ್’ ನಿರ್ದೇಶಕ ಓಂ ರಾವುತ್: ಪ್ರಭಾಸ್ ಸದ್ಯ ‘ಆದಿಪುರುಷ್’ ಚಿತ್ರದ ಶೂಟಿಂಗ್​ನಲ್ಲಿ ಬ್ಯುಸಿಯಿದ್ದಾರೆ. ಈ ಚಿತ್ರದಲ್ಲಿ ಸೈಫ್ ಅಲಿ ಖಾನ್, ಸನ್ನಿ ಸಿಂಗ್, ಕೃತಿ ಸನೋನ್ ಬಣ್ಣ ಹಚ್ಚುತ್ತಿದ್ದಾರೆ. ಚಿತ್ರದ ನಿರ್ದೇಶಕ ಓಂ ರಾವುತ್ ಟ್ವೀಟ್ ಮುಖಾಂತರ ಪ್ರಭಾಸ್​ಗೆ ಶುಭಕೋರಿದ್ದಾರೆ.

ಪ್ರಭಾಸ್ ಬತ್ತಳಿಕೆಯಲ್ಲಿ ಕೆಜಿಎಫ್ ಖ್ಯಾತಿಯ ಪ್ರಶಾಂತ್ ನೀಲ್ ನಿರ್ದೇಶನದ ‘ಸಲಾರ್’ ಚಿತ್ರವಿದೆ. ಈ ಚಿತ್ರದಲ್ಲಿ ಶೃತಿ ಹಾಸನ್ ನಾಯಕಿಯಾಗಿ ನಟಿಸುತ್ತಿದ್ದಾರೆ. ಈ ಚಿತ್ರವಲ್ಲದೇ ದೀಪಿಕಾ ಪಡುಕೋಣೆ ಹಾಗೂ ಅಮಿತಾಭ್ ಬಚ್ಚನ್ ನಟಿಸಲಿರುವ ‘ಪ್ರಾಜೆಕ್ಟ್ ಕೆ’ ಚಿತ್ರವೂ ಅನೌನ್ಸ್ ಆಗಿದೆ.

ಇದನ್ನೂ ಓದಿ:

Prabhas Birthday: ‘ಬಾಹುಬಲಿ’ಗೂ ಮುನ್ನವೇ ಆಕ್ಷನ್ ಸಿನಿಮಾಗಳಲ್ಲಿ ಧೂಳೆಬ್ಬಿಸಿದ್ದ ಪ್ರಭಾಸ್; ಯಾವುವು ಆ ಚಿತ್ರಗಳು?

ತುಂಬಾ ಕಿರಿಕಿರಿ ಮಾಡಿದ್ರೆ ರಶ್ಮಿಕಾ ಹೀಗೆ ಒದಿತಾರೆ; ವಿಡಿಯೋ ಸಮೇತ ವಿವರಿಸಿದ ನಟಿ

ಮುಂಬೈ-ಪುಣೆ ಎಕ್ಸ್‌ಪ್ರೆಸ್‌ವೇಯಲ್ಲಿ ಟ್ರಕ್ ಪಲ್ಟಿ, ಓರ್ವ ಸಾವು
ಮುಂಬೈ-ಪುಣೆ ಎಕ್ಸ್‌ಪ್ರೆಸ್‌ವೇಯಲ್ಲಿ ಟ್ರಕ್ ಪಲ್ಟಿ, ಓರ್ವ ಸಾವು
ಬಸನಗೌಡ ಯತ್ನಾಳ್ ಹೇಳಿದಕ್ಕೆಲ್ಲ ನಾನು ಪ್ರತಿಕ್ರಿಯಿಸಲ್ಲ: ಎಂಬಿ ಪಾಟೀಲ್
ಬಸನಗೌಡ ಯತ್ನಾಳ್ ಹೇಳಿದಕ್ಕೆಲ್ಲ ನಾನು ಪ್ರತಿಕ್ರಿಯಿಸಲ್ಲ: ಎಂಬಿ ಪಾಟೀಲ್
ಅಭಿಮಾನಿಗಳನ್ನು ಶಾಂತಗೊಳಿಸಲು ಶಿವಲಿಂಗೇಗೌಡರಿಂದ ಹರಸಾಹಸ
ಅಭಿಮಾನಿಗಳನ್ನು ಶಾಂತಗೊಳಿಸಲು ಶಿವಲಿಂಗೇಗೌಡರಿಂದ ಹರಸಾಹಸ
ಡಿಸಿಎಂ ಹೇಳಿದ್ದನ್ನು ಗಂಭೀರ ಮುಖಮುದ್ರೆಯೊಂದಿಗೆ ಕೇಳಿಸಿಕೊಂಡ ಸಿಎಂ
ಡಿಸಿಎಂ ಹೇಳಿದ್ದನ್ನು ಗಂಭೀರ ಮುಖಮುದ್ರೆಯೊಂದಿಗೆ ಕೇಳಿಸಿಕೊಂಡ ಸಿಎಂ
ಮುಂದಿನ ಮುಖ್ಯಮಂತ್ರಿ ಡಿಕೆ ಶಿವಕುಮಾರ್​​ಗೆ ಜೈ: ಮತ್ತೆ ಮೊಳಗಿತು ಘೋಷಣೆ
ಮುಂದಿನ ಮುಖ್ಯಮಂತ್ರಿ ಡಿಕೆ ಶಿವಕುಮಾರ್​​ಗೆ ಜೈ: ಮತ್ತೆ ಮೊಳಗಿತು ಘೋಷಣೆ
ಲೋಕಸಭಾ ಚುನಾವಣೆಯಲ್ಲಿ ಮತಗಳ್ಳತನ ನಡೆದಿರುವುದು ಸತ್ಯ: ಸತೀಶ್ ಜಾರಕಿಹೊಳಿ
ಲೋಕಸಭಾ ಚುನಾವಣೆಯಲ್ಲಿ ಮತಗಳ್ಳತನ ನಡೆದಿರುವುದು ಸತ್ಯ: ಸತೀಶ್ ಜಾರಕಿಹೊಳಿ
ಮಾಲ್ಡೀವ್ಸ್​ನ​ ಸ್ವಾತಂತ್ರ್ಯ ದಿನಾಚರಣೆಯಲ್ಲಿ ಪಾಲ್ಗೊಂಡ ಪ್ರಧಾನಿ ಮೋದಿ
ಮಾಲ್ಡೀವ್ಸ್​ನ​ ಸ್ವಾತಂತ್ರ್ಯ ದಿನಾಚರಣೆಯಲ್ಲಿ ಪಾಲ್ಗೊಂಡ ಪ್ರಧಾನಿ ಮೋದಿ
‘ಸು ಫ್ರಮ್ ಸೋ’ ಅರ್ಥ ಏನು? ಕತೆಯ ಒಳಗುಟ್ಟಗಳೇನು?
‘ಸು ಫ್ರಮ್ ಸೋ’ ಅರ್ಥ ಏನು? ಕತೆಯ ಒಳಗುಟ್ಟಗಳೇನು?
ಮಂತ್ರಿಯಾಗುವ ಆಸೆಯನ್ನು ಪದೇಪದೆ ಹೇಳಿಕೊಳ್ಳುತ್ತಿರುವ ಅರಸೀಕೆರೆ ಶಾಸಕ
ಮಂತ್ರಿಯಾಗುವ ಆಸೆಯನ್ನು ಪದೇಪದೆ ಹೇಳಿಕೊಳ್ಳುತ್ತಿರುವ ಅರಸೀಕೆರೆ ಶಾಸಕ
ನೆಲಮಂಗಲ: ಗನ್​ ತೋರಿಸಿ ಹೆದರಿಸಿ, ಚಿನ್ನದ ದೋಚಿದ ಆರೋಪಿಗಳು, ವಿಡಿಯೋ ವೈರಲ್
ನೆಲಮಂಗಲ: ಗನ್​ ತೋರಿಸಿ ಹೆದರಿಸಿ, ಚಿನ್ನದ ದೋಚಿದ ಆರೋಪಿಗಳು, ವಿಡಿಯೋ ವೈರಲ್