Sign In

By signing in or creating an account, you agree with Associated Broadcasting Company's Terms & Conditions and Privacy Policy.

Prabhas: ರಾವಣನ ಪ್ರತಿಕೃತಿ ಸುಡಲು ಮುಂದಾದ ಪ್ರಭಾಸ್​; ಯಾಕೀ ನಿರ್ಧಾರ?

ಪ್ರಭಾಸ್ ಅವರು ‘ಆದಿ ಪುರುಷ್’ ಚಿತ್ರದಲ್ಲಿ ನಟಿಸುತ್ತಿದ್ದಾರೆ. ದೊಡ್ಡ ಬಜೆಟ್​ನಲ್ಲಿ ಸಿದ್ಧಾವಾಗುತ್ತಿರುವ ಈ ಸಿನಿಮಾದಲ್ಲಿ ಅವರು ರಾಮನ ಪಾತ್ರ ಮಾಡಿದ್ದಾರೆ.

Prabhas: ರಾವಣನ ಪ್ರತಿಕೃತಿ ಸುಡಲು ಮುಂದಾದ ಪ್ರಭಾಸ್​; ಯಾಕೀ ನಿರ್ಧಾರ?
ಪ್ರಭಾಸ್
Follow us
TV9 Web
| Updated By: ರಾಜೇಶ್ ದುಗ್ಗುಮನೆ

Updated on: Sep 12, 2022 | 9:51 PM

ಸಾರ್ವಜನಿಕವಾಗಿ ಕಾಣಿಸಿಕೊಂಡ ಸಂದರ್ಭದಲ್ಲಿ ಸೆಲೆಬ್ರಿಟಿಗಳು ತಮ್ಮ ಸಿನಿಮಾ ಪ್ರಚಾರ ಮಾಡಲು ಹೆಚ್ಚು ಆದ್ಯತೆ ನೀಡುತ್ತಾರೆ. ಯಾವುದೇ ವಿಚಾರ ಎತ್ತಿದರೂ ಅದಕ್ಕೆ ತಾವು ನಟಿಸುತ್ತಿರುವ ಸಿನಿಮಾದ ಟಚ್ ನೀಡುತ್ತಾರೆ. ತಮ್ಮ ಚಿತ್ರದ ಪ್ರಚಾರಕ್ಕಾಗಿ ಹಲವು ಶೋಗಳಿಗೆ ತೆರಳುತ್ತಾರೆ. ನಟ ಪ್ರಭಾಸ್ ಕೂಡ ಇದಕ್ಕೆ ಹೊರತಾಗಿಲ್ಲ. ಹಲವು ಪ್ರಾಜೆಕ್ಟ್​ಗಳಲ್ಲಿ ಬ್ಯುಸಿ ಇರುವ ಅವರು ಸಮಯ ಸಿಕ್ಕಾಗೆಲ್ಲ ತಮ್ಮ ಚಿತ್ರಗಳ ಪ್ರಚಾರ ಮಾಡುತ್ತಿದ್ದಾರೆ. ಈ ಬಾರಿ ಪ್ರಭಾಸ್ ಅವರು ರಾವಣನ ಪ್ರತಿಕೃತಿ ಸುಡಲು ಮುಂದಾಗಿದ್ದಾರೆ. ಅಚ್ಚರಿ ಎಂದರೆ ಇದಕ್ಕೂ ಸಿನಿಮಾ ಟಚ್ ಇದೆ.

ಪ್ರಭಾಸ್ ಅವರು ‘ಆದಿ ಪುರುಷ್’ ಚಿತ್ರದಲ್ಲಿ ನಟಿಸುತ್ತಿದ್ದಾರೆ. ದೊಡ್ಡ ಬಜೆಟ್​ನಲ್ಲಿ ಸಿದ್ಧಾವಾಗುತ್ತಿರುವ ಈ ಸಿನಿಮಾದಲ್ಲಿ ಅವರು ರಾಮನ ಪಾತ್ರ ಮಾಡಿದ್ದಾರೆ. ಪ್ರತಿ ವರ್ಷ ದಸರಾ ಸಂದರ್ಭದಲ್ಲಿ ಹಲವು ಕಡೆಗಳಲ್ಲಿ ರಾವಣನ ಪ್ರತಿಕೃತಿ ಸುಡುವ ಸಂಪ್ರದಾಯ ಚಾಲ್ತಿಯಲ್ಲಿದೆ. ಇದಕ್ಕೆ ಕಾರಣವೂ ಇದೆ. ರಾವಣ ಕೆಟ್ಟವನು. ಹೀಗಾಗಿ ಸಮಾಜದ ದುಷ್ಟಶಕ್ತಿಗಳು ನಾಶವಾಗಲಿ ಎಂದು ಸಾಂಕೇತಿಕವಾಗಿ ರಾವಣನ ಪ್ರತಿಕೃತಿ ಸುಡಲಾಗುತ್ತದೆ. ರಾಮನ ಪಾತ್ರ ಮಾಡಿರುವುದರಿಂದ ಪ್ರಭಾಸ್ ಅವರು ರಾವಣನ ಪ್ರತಿಕೃತಿ ಸುಡಲು ಮುಂದಾಗಿದ್ದಾರೆ.

ದೆಹಲಿಯಲ್ಲಿ ಲವ್​ ಕುಶ್ ರಾಮ್​ಲೀಲಾ ಸಮಿತಿ ಪ್ರತಿವರ್ಷ ದಸರಾ ಆಚರಿಸುತ್ತದೆ. 10 ದಿನಗಳ ಕಾಲ ಈ ಆಚರಣೆ ಇರುತ್ತದೆ. ಕೊನೆಯ ದಿನ ರಾವಣನ ಪ್ರತಿಕೃತಿ ದಹನ ಮಾಡಲಾಗುತ್ತದೆ. ಈ ಬಾರಿ ಪ್ರಭಾಸ್ ಅವರು ಈ ಕಾರ್ಯಕ್ರಮದಲ್ಲಿ ಭಾಗಿ ಆಗಲಿದ್ದಾರೆ. ರಾವಣನ ಪ್ರತಿಕೃತಿಯನ್ನು ಅವರೇ ದಹನ ಮಾಡಲಿದ್ದಾರೆ. ಸೆಪ್ಟೆಂಬರ್ 26ರಿಂದ ಅಕ್ಟೋಬರ್ 5ರವರೆಗೆ ಕಾರ್ಯಕ್ರಮ ನಡೆಯಲಿದೆ.

ಇದನ್ನೂ ಓದಿ
Image
‘ಸಾಮ್ರಾಟ್​ ಪೃಥ್ವಿರಾಜ್​’ ಚಿತ್ರ ನೋಡಿ ಪತ್ನಿ ಎದುರು ಅಕ್ಷಯ್​ ಕುಮಾರ್​ ರೀತಿ ಡೈಲಾಗ್​ ಹೊಡೆದ ಅಮಿತ್​ ಶಾ
Image
 ಹರ್ಷನ ಮದುವೆ ಆಗಲು ವರುಧಿನಿ ಹೊಸ ಪ್ಲ್ಯಾನ್​; ಕೊನೇ ಕ್ಷಣದಲ್ಲಿ ವಧು ಬದಲು?
Image
Ilaiyaraaja Best Kannada Songs: ಎಂದೂ ಮರೆಯದ ಗೀತೆಗಳನ್ನು ನೀಡಿದ ಇಳಯರಾಜ; ಇಲ್ಲಿದೆ ಸೂಪರ್ ಹಿಟ್ ಹಾಡುಗಳ ಪಟ್ಟಿ
Image
Bairagee Movie: ಶಿವಣ್ಣ, ಶರಣ್​ ಕಂಠದಲ್ಲಿ ‘ರಿದಂ ಆಫ್​ ಶಿವಪ್ಪ’ ಹಾಡು; ಹೊಸ ಸಾಂಗ್​ ಮೂಲಕ ಹೈಪ್​ ಹೆಚ್ಚಿಸಿದ ‘ಬೈರಾಗಿ’

ಲವ್​ ಕುಶ್ ರಾಮ್​ಲೀಲಾ ಸಮಿತಿಯ ಮುಖ್ಯಸ್ಥ ಅರ್ಜುನ್​ ಕುಮಾರ್ ಅವರು ಈ ಬಗ್ಗೆ ಎಎನ್​ಐಗೆ ಮಾಹಿತಿ ನೀಡಿದ್ದಾರೆ. ‘ಪ್ರಭಾಸ್ ಅವರು ‘ಆದಿಪುರುಷ್​’ ಚಿತ್ರದಲ್ಲಿ ರಾಮನ ಪಾತ್ರ ಮಾಡಿದ್ದಾರೆ. ಈ ಕಾರಣಕ್ಕೆ ರಾವಣನ ಸುಡಲು ಅವರು ಸೂಕ್ತ ವ್ಯಕ್ತಿ ಎನಿಸಿತು. ಹೀಗಾಗಿ, ಅವರಿಗೆ ಆಹ್ವಾನ ನೀಡಿದ್ದೇವೆ. ಪ್ರತಿ ವರ್ಷದಂತೆ ಈ ಬಾರಿಯೂ ರಾವಣ, ಕುಂಭಕರ್ಣ ಹಾಗೂ ಇಂದ್ರಜಿತ್​ ಪ್ರತಿಕೃತಿ ಇರುತ್ತದೆ. ಬಾಣದ ತುದಿಗೆ ಬೆಂಕಿ ಅಂಟಿಸಿಕೊಂಡು ಬಿಲ್ಲಿನಿಂದ ಬಾಣವನ್ನು ಬಿಟ್ಟು ಪ್ರತಿಕೃತಿಯನ್ನು ಪ್ರಭಾಸ್ ಸುಡುತ್ತಾರೆ’ ಎಂದಿದ್ದಾರೆ ಅವರು.

ಇದನ್ನೂ ಓದಿ: Adipurush budget: ಪ್ರಭಾಸ್ ನಟನೆಯ ‘ಆದಿಪುರುಷ್’ಗೆ ಬಾಹುಬಲಿಗಿಂತಲೂ ಹೆಚ್ಚು ದುಡ್ಡು ಸುರಿದ ನಿರ್ಮಾಪಕರು; ಅಚ್ಚರಿಯ ವಿಚಾರ ಬಹಿರಂಗ

‘ಆದಿಪುರುಷ್’ ಮಾತ್ರವಲ್ಲದೆ, ಪ್ರಶಾಂತ್ ನೀಲ್ ನಿರ್ದೇಶನದ ‘ಸಲಾರ್’, ‘ಪ್ರಾಜೆಕ್ಟ್​ ಕೆ’ ಸೇರಿ ಇನ್ನೂ ಕೆಲ ಸಿನಿಮಾಗಳಲ್ಲಿ ಪ್ರಭಾಸ್ ನಟಿಸುತ್ತಿದ್ದಾರೆ. ‘ಬಾಹುಬಲಿ 2’ ಬಳಿಕ ಪ್ರಭಾಸ್​ಗೆ ಗೆಲುವು ಸಿಕ್ಕಿಲ್ಲ. ಈ ಕಾರಣದಿಂದ ಅವರು ಒಂದು ಗೆಲುವು ಕಾಣಲೇ ಬೇಕಾದ ಅನಿವಾರ್ಯತೆ ಇದೆ.

VIDEO: ಗುಜರಾತ್ ಟೈಟಾನ್ಸ್​ ತಂಡಕ್ಕೆ ಸ್ಕೂಟರ್​ನಲ್ಲಿ ಸಿರಾಜ್ ಎಂಟ್ರಿ
VIDEO: ಗುಜರಾತ್ ಟೈಟಾನ್ಸ್​ ತಂಡಕ್ಕೆ ಸ್ಕೂಟರ್​ನಲ್ಲಿ ಸಿರಾಜ್ ಎಂಟ್ರಿ
ಹುಲಿಗೆಮ್ಮ ದೇವಸ್ಥಾನ ಹುಂಡಿ ಎಣಿಕೆ: 40 ದಿನಗಳಲ್ಲಿ 99 ಲಕ್ಷ ರೂ. ಸಂಗ್ರಹ
ಹುಲಿಗೆಮ್ಮ ದೇವಸ್ಥಾನ ಹುಂಡಿ ಎಣಿಕೆ: 40 ದಿನಗಳಲ್ಲಿ 99 ಲಕ್ಷ ರೂ. ಸಂಗ್ರಹ
ಯಾವ ಮನೆಯಲ್ಲಿ ಲಕ್ಷ್ಮೀ ದೇವಿ ನೆಲೆಸುವುದಿಲ್ಲ ಅಂತ ನಿಮಗೆ ಗೊತ್ತಾ?
ಯಾವ ಮನೆಯಲ್ಲಿ ಲಕ್ಷ್ಮೀ ದೇವಿ ನೆಲೆಸುವುದಿಲ್ಲ ಅಂತ ನಿಮಗೆ ಗೊತ್ತಾ?
ಚಂದ್ರ ಸಿಂಹ ರಾಶಿಯಲ್ಲಿ ಸಂಚರಿಸುವ ಈ ದಿನದ ರಾಶಿ ಭವಿಷ್ಯ ತಿಳಿಯಿರಿ
ಚಂದ್ರ ಸಿಂಹ ರಾಶಿಯಲ್ಲಿ ಸಂಚರಿಸುವ ಈ ದಿನದ ರಾಶಿ ಭವಿಷ್ಯ ತಿಳಿಯಿರಿ
ಕೆಟ್ಟು ಹೋದ ಸಾರಿಗೆ ಬಸ್​ ವೈಪರ್: ಮಳೆಯಲ್ಲಿ ಚಲಾಯಿಸಲು ಪರದಾಡಿದ ಚಾಲಕ
ಕೆಟ್ಟು ಹೋದ ಸಾರಿಗೆ ಬಸ್​ ವೈಪರ್: ಮಳೆಯಲ್ಲಿ ಚಲಾಯಿಸಲು ಪರದಾಡಿದ ಚಾಲಕ
ತುಂಬ ಸಮಯದ ಬಳಿಕ ಎಸಿ ಆನ್ ಮಾಡುತ್ತೀರಾ? ಒಳಗೆ ಹಾವಿರಬಹುದು ಎಚ್ಚರ!
ತುಂಬ ಸಮಯದ ಬಳಿಕ ಎಸಿ ಆನ್ ಮಾಡುತ್ತೀರಾ? ಒಳಗೆ ಹಾವಿರಬಹುದು ಎಚ್ಚರ!
ಮೃಗಾಲಯದ ಪ್ರಾಣಿಗಳಿಗೂ ತಟ್ಟಿದ ಬೇಸಿಗೆ ಬಿಸಿ: ಸ್ಪ್ರಿಂಕ್ಲರ್ ವ್ಯವಸ್ಥೆ
ಮೃಗಾಲಯದ ಪ್ರಾಣಿಗಳಿಗೂ ತಟ್ಟಿದ ಬೇಸಿಗೆ ಬಿಸಿ: ಸ್ಪ್ರಿಂಕ್ಲರ್ ವ್ಯವಸ್ಥೆ
ಕನ್ನಡ ಚಿತ್ರರಂಗದಲ್ಲಿ ಪುನೀತ್ ರೀತಿ ಡ್ಯಾನ್ಸ್ ಮಾಡೋರು ಯಾರೂ ಇಲ್ಲ: ರಕ್ಷಿತ
ಕನ್ನಡ ಚಿತ್ರರಂಗದಲ್ಲಿ ಪುನೀತ್ ರೀತಿ ಡ್ಯಾನ್ಸ್ ಮಾಡೋರು ಯಾರೂ ಇಲ್ಲ: ರಕ್ಷಿತ
ಬಜೆಟ್​ ಅಧಿವೇಶನ ಸಂದರ್ಭದಲ್ಲೇ ವಿಧಾನಸೌಧಕ್ಕೆ ಬಂದ ಬುಸ್​ ಬುಸ್ ನಾಗಪ್ಪ..!
ಬಜೆಟ್​ ಅಧಿವೇಶನ ಸಂದರ್ಭದಲ್ಲೇ ವಿಧಾನಸೌಧಕ್ಕೆ ಬಂದ ಬುಸ್​ ಬುಸ್ ನಾಗಪ್ಪ..!
ಯಾರ ಬಗ್ಗೆಯೂ ಪುನೀತ್ ನೆಗೆಟಿವ್ ಮಾತಾಡಿದ್ದು ನಾನು ಕೇಳಿಲ್ಲ: ಕೆ. ಕಲ್ಯಾಣ್
ಯಾರ ಬಗ್ಗೆಯೂ ಪುನೀತ್ ನೆಗೆಟಿವ್ ಮಾತಾಡಿದ್ದು ನಾನು ಕೇಳಿಲ್ಲ: ಕೆ. ಕಲ್ಯಾಣ್