AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Prabhas: ರಾವಣನ ಪ್ರತಿಕೃತಿ ಸುಡಲು ಮುಂದಾದ ಪ್ರಭಾಸ್​; ಯಾಕೀ ನಿರ್ಧಾರ?

ಪ್ರಭಾಸ್ ಅವರು ‘ಆದಿ ಪುರುಷ್’ ಚಿತ್ರದಲ್ಲಿ ನಟಿಸುತ್ತಿದ್ದಾರೆ. ದೊಡ್ಡ ಬಜೆಟ್​ನಲ್ಲಿ ಸಿದ್ಧಾವಾಗುತ್ತಿರುವ ಈ ಸಿನಿಮಾದಲ್ಲಿ ಅವರು ರಾಮನ ಪಾತ್ರ ಮಾಡಿದ್ದಾರೆ.

Prabhas: ರಾವಣನ ಪ್ರತಿಕೃತಿ ಸುಡಲು ಮುಂದಾದ ಪ್ರಭಾಸ್​; ಯಾಕೀ ನಿರ್ಧಾರ?
ಪ್ರಭಾಸ್
TV9 Web
| Edited By: |

Updated on: Sep 12, 2022 | 9:51 PM

Share

ಸಾರ್ವಜನಿಕವಾಗಿ ಕಾಣಿಸಿಕೊಂಡ ಸಂದರ್ಭದಲ್ಲಿ ಸೆಲೆಬ್ರಿಟಿಗಳು ತಮ್ಮ ಸಿನಿಮಾ ಪ್ರಚಾರ ಮಾಡಲು ಹೆಚ್ಚು ಆದ್ಯತೆ ನೀಡುತ್ತಾರೆ. ಯಾವುದೇ ವಿಚಾರ ಎತ್ತಿದರೂ ಅದಕ್ಕೆ ತಾವು ನಟಿಸುತ್ತಿರುವ ಸಿನಿಮಾದ ಟಚ್ ನೀಡುತ್ತಾರೆ. ತಮ್ಮ ಚಿತ್ರದ ಪ್ರಚಾರಕ್ಕಾಗಿ ಹಲವು ಶೋಗಳಿಗೆ ತೆರಳುತ್ತಾರೆ. ನಟ ಪ್ರಭಾಸ್ ಕೂಡ ಇದಕ್ಕೆ ಹೊರತಾಗಿಲ್ಲ. ಹಲವು ಪ್ರಾಜೆಕ್ಟ್​ಗಳಲ್ಲಿ ಬ್ಯುಸಿ ಇರುವ ಅವರು ಸಮಯ ಸಿಕ್ಕಾಗೆಲ್ಲ ತಮ್ಮ ಚಿತ್ರಗಳ ಪ್ರಚಾರ ಮಾಡುತ್ತಿದ್ದಾರೆ. ಈ ಬಾರಿ ಪ್ರಭಾಸ್ ಅವರು ರಾವಣನ ಪ್ರತಿಕೃತಿ ಸುಡಲು ಮುಂದಾಗಿದ್ದಾರೆ. ಅಚ್ಚರಿ ಎಂದರೆ ಇದಕ್ಕೂ ಸಿನಿಮಾ ಟಚ್ ಇದೆ.

ಪ್ರಭಾಸ್ ಅವರು ‘ಆದಿ ಪುರುಷ್’ ಚಿತ್ರದಲ್ಲಿ ನಟಿಸುತ್ತಿದ್ದಾರೆ. ದೊಡ್ಡ ಬಜೆಟ್​ನಲ್ಲಿ ಸಿದ್ಧಾವಾಗುತ್ತಿರುವ ಈ ಸಿನಿಮಾದಲ್ಲಿ ಅವರು ರಾಮನ ಪಾತ್ರ ಮಾಡಿದ್ದಾರೆ. ಪ್ರತಿ ವರ್ಷ ದಸರಾ ಸಂದರ್ಭದಲ್ಲಿ ಹಲವು ಕಡೆಗಳಲ್ಲಿ ರಾವಣನ ಪ್ರತಿಕೃತಿ ಸುಡುವ ಸಂಪ್ರದಾಯ ಚಾಲ್ತಿಯಲ್ಲಿದೆ. ಇದಕ್ಕೆ ಕಾರಣವೂ ಇದೆ. ರಾವಣ ಕೆಟ್ಟವನು. ಹೀಗಾಗಿ ಸಮಾಜದ ದುಷ್ಟಶಕ್ತಿಗಳು ನಾಶವಾಗಲಿ ಎಂದು ಸಾಂಕೇತಿಕವಾಗಿ ರಾವಣನ ಪ್ರತಿಕೃತಿ ಸುಡಲಾಗುತ್ತದೆ. ರಾಮನ ಪಾತ್ರ ಮಾಡಿರುವುದರಿಂದ ಪ್ರಭಾಸ್ ಅವರು ರಾವಣನ ಪ್ರತಿಕೃತಿ ಸುಡಲು ಮುಂದಾಗಿದ್ದಾರೆ.

ದೆಹಲಿಯಲ್ಲಿ ಲವ್​ ಕುಶ್ ರಾಮ್​ಲೀಲಾ ಸಮಿತಿ ಪ್ರತಿವರ್ಷ ದಸರಾ ಆಚರಿಸುತ್ತದೆ. 10 ದಿನಗಳ ಕಾಲ ಈ ಆಚರಣೆ ಇರುತ್ತದೆ. ಕೊನೆಯ ದಿನ ರಾವಣನ ಪ್ರತಿಕೃತಿ ದಹನ ಮಾಡಲಾಗುತ್ತದೆ. ಈ ಬಾರಿ ಪ್ರಭಾಸ್ ಅವರು ಈ ಕಾರ್ಯಕ್ರಮದಲ್ಲಿ ಭಾಗಿ ಆಗಲಿದ್ದಾರೆ. ರಾವಣನ ಪ್ರತಿಕೃತಿಯನ್ನು ಅವರೇ ದಹನ ಮಾಡಲಿದ್ದಾರೆ. ಸೆಪ್ಟೆಂಬರ್ 26ರಿಂದ ಅಕ್ಟೋಬರ್ 5ರವರೆಗೆ ಕಾರ್ಯಕ್ರಮ ನಡೆಯಲಿದೆ.

ಇದನ್ನೂ ಓದಿ
Image
‘ಸಾಮ್ರಾಟ್​ ಪೃಥ್ವಿರಾಜ್​’ ಚಿತ್ರ ನೋಡಿ ಪತ್ನಿ ಎದುರು ಅಕ್ಷಯ್​ ಕುಮಾರ್​ ರೀತಿ ಡೈಲಾಗ್​ ಹೊಡೆದ ಅಮಿತ್​ ಶಾ
Image
 ಹರ್ಷನ ಮದುವೆ ಆಗಲು ವರುಧಿನಿ ಹೊಸ ಪ್ಲ್ಯಾನ್​; ಕೊನೇ ಕ್ಷಣದಲ್ಲಿ ವಧು ಬದಲು?
Image
Ilaiyaraaja Best Kannada Songs: ಎಂದೂ ಮರೆಯದ ಗೀತೆಗಳನ್ನು ನೀಡಿದ ಇಳಯರಾಜ; ಇಲ್ಲಿದೆ ಸೂಪರ್ ಹಿಟ್ ಹಾಡುಗಳ ಪಟ್ಟಿ
Image
Bairagee Movie: ಶಿವಣ್ಣ, ಶರಣ್​ ಕಂಠದಲ್ಲಿ ‘ರಿದಂ ಆಫ್​ ಶಿವಪ್ಪ’ ಹಾಡು; ಹೊಸ ಸಾಂಗ್​ ಮೂಲಕ ಹೈಪ್​ ಹೆಚ್ಚಿಸಿದ ‘ಬೈರಾಗಿ’

ಲವ್​ ಕುಶ್ ರಾಮ್​ಲೀಲಾ ಸಮಿತಿಯ ಮುಖ್ಯಸ್ಥ ಅರ್ಜುನ್​ ಕುಮಾರ್ ಅವರು ಈ ಬಗ್ಗೆ ಎಎನ್​ಐಗೆ ಮಾಹಿತಿ ನೀಡಿದ್ದಾರೆ. ‘ಪ್ರಭಾಸ್ ಅವರು ‘ಆದಿಪುರುಷ್​’ ಚಿತ್ರದಲ್ಲಿ ರಾಮನ ಪಾತ್ರ ಮಾಡಿದ್ದಾರೆ. ಈ ಕಾರಣಕ್ಕೆ ರಾವಣನ ಸುಡಲು ಅವರು ಸೂಕ್ತ ವ್ಯಕ್ತಿ ಎನಿಸಿತು. ಹೀಗಾಗಿ, ಅವರಿಗೆ ಆಹ್ವಾನ ನೀಡಿದ್ದೇವೆ. ಪ್ರತಿ ವರ್ಷದಂತೆ ಈ ಬಾರಿಯೂ ರಾವಣ, ಕುಂಭಕರ್ಣ ಹಾಗೂ ಇಂದ್ರಜಿತ್​ ಪ್ರತಿಕೃತಿ ಇರುತ್ತದೆ. ಬಾಣದ ತುದಿಗೆ ಬೆಂಕಿ ಅಂಟಿಸಿಕೊಂಡು ಬಿಲ್ಲಿನಿಂದ ಬಾಣವನ್ನು ಬಿಟ್ಟು ಪ್ರತಿಕೃತಿಯನ್ನು ಪ್ರಭಾಸ್ ಸುಡುತ್ತಾರೆ’ ಎಂದಿದ್ದಾರೆ ಅವರು.

ಇದನ್ನೂ ಓದಿ: Adipurush budget: ಪ್ರಭಾಸ್ ನಟನೆಯ ‘ಆದಿಪುರುಷ್’ಗೆ ಬಾಹುಬಲಿಗಿಂತಲೂ ಹೆಚ್ಚು ದುಡ್ಡು ಸುರಿದ ನಿರ್ಮಾಪಕರು; ಅಚ್ಚರಿಯ ವಿಚಾರ ಬಹಿರಂಗ

‘ಆದಿಪುರುಷ್’ ಮಾತ್ರವಲ್ಲದೆ, ಪ್ರಶಾಂತ್ ನೀಲ್ ನಿರ್ದೇಶನದ ‘ಸಲಾರ್’, ‘ಪ್ರಾಜೆಕ್ಟ್​ ಕೆ’ ಸೇರಿ ಇನ್ನೂ ಕೆಲ ಸಿನಿಮಾಗಳಲ್ಲಿ ಪ್ರಭಾಸ್ ನಟಿಸುತ್ತಿದ್ದಾರೆ. ‘ಬಾಹುಬಲಿ 2’ ಬಳಿಕ ಪ್ರಭಾಸ್​ಗೆ ಗೆಲುವು ಸಿಕ್ಕಿಲ್ಲ. ಈ ಕಾರಣದಿಂದ ಅವರು ಒಂದು ಗೆಲುವು ಕಾಣಲೇ ಬೇಕಾದ ಅನಿವಾರ್ಯತೆ ಇದೆ.

Follow Us
20ಕ್ಕೂ ಹೆಚ್ಚು ‘ಕೈ’ ಶಾಸಕರ ದೆಹಲಿ ಟೂರ್ ಸೀಕ್ರೆಟ್ ಬಿಚ್ಚಿಟ್ಟ ಜಯಚಂದ್ರ
20ಕ್ಕೂ ಹೆಚ್ಚು ‘ಕೈ’ ಶಾಸಕರ ದೆಹಲಿ ಟೂರ್ ಸೀಕ್ರೆಟ್ ಬಿಚ್ಚಿಟ್ಟ ಜಯಚಂದ್ರ
'ಅವನ ದೋಸ್ತನೇ ಮನೆಗೆ ನುಗ್ಗಿ ಕೊಂದಿದ್ದು!': ಫೈರೋಜ್ ತಾಯಿ
'ಅವನ ದೋಸ್ತನೇ ಮನೆಗೆ ನುಗ್ಗಿ ಕೊಂದಿದ್ದು!': ಫೈರೋಜ್ ತಾಯಿ
PSL 2026: ಪಿಎಸ್​ಎಲ್​ನಲ್ಲಿ ಹಿಂದೆಂದೂ ಕಂಡರಿಯದ ಗೆಲುವು
PSL 2026: ಪಿಎಸ್​ಎಲ್​ನಲ್ಲಿ ಹಿಂದೆಂದೂ ಕಂಡರಿಯದ ಗೆಲುವು
ಯೂತ್ ಕಾಂಗ್ರೆಸ್​ನ ಫೈರೋಜ್ ಪಠಾಣ್​ ಕೊಲೆ ಬಗ್ಗೆ ಸ್ಫೋಟಕ ಮಾಹಿತಿ ಬಯಲು!
ಯೂತ್ ಕಾಂಗ್ರೆಸ್​ನ ಫೈರೋಜ್ ಪಠಾಣ್​ ಕೊಲೆ ಬಗ್ಗೆ ಸ್ಫೋಟಕ ಮಾಹಿತಿ ಬಯಲು!
ಇಂಜಿನಿಯರ್ ಮನೇಲಿತ್ತು 6 ಕೆಜಿ ಚಿನ್ನ, 5 ಕೆಜಿ ಬೆಳ್ಳಿ, 14 ಕೋಟಿ ಆಸ್ತಿ!
ಇಂಜಿನಿಯರ್ ಮನೇಲಿತ್ತು 6 ಕೆಜಿ ಚಿನ್ನ, 5 ಕೆಜಿ ಬೆಳ್ಳಿ, 14 ಕೋಟಿ ಆಸ್ತಿ!
2nd PUCಯಲ್ಲಿ 6ನೇ ರ‍್ಯಾಂಕ್ ಗಳಿಸಿದ ವಿಕಾಸ್ ಹೇಳಿದ್ದೇನು ನೋಡಿ!
2nd PUCಯಲ್ಲಿ 6ನೇ ರ‍್ಯಾಂಕ್ ಗಳಿಸಿದ ವಿಕಾಸ್ ಹೇಳಿದ್ದೇನು ನೋಡಿ!
25 ವರ್ಷಗಳ ಬಳಿಕ ರೀ-ರಿಲೀಸ್ ಆದ ಕೋಟಿಗೊಬ್ಬ ಚಿತ್ರಕ್ಕೆ ಭರ್ಜರಿ ರೆಸ್ಪಾನ್ಸ್
25 ವರ್ಷಗಳ ಬಳಿಕ ರೀ-ರಿಲೀಸ್ ಆದ ಕೋಟಿಗೊಬ್ಬ ಚಿತ್ರಕ್ಕೆ ಭರ್ಜರಿ ರೆಸ್ಪಾನ್ಸ್
ಚಂದ್ರನ ಅಂಗಳ ಸುತ್ತಿ ಭೂಮಿಗೆ ಸುರಕ್ಷಿತವಾಗಿ ವಾಪಸಾದ ನಾಸಾ ತಂಡ
ಚಂದ್ರನ ಅಂಗಳ ಸುತ್ತಿ ಭೂಮಿಗೆ ಸುರಕ್ಷಿತವಾಗಿ ವಾಪಸಾದ ನಾಸಾ ತಂಡ
ಪಾಕಿಸ್ತಾನದಲ್ಲಿಂದು ಶಾಂತಿ ಮಾತುಕತೆ: ಇಸ್ಲಾಮಾಬಾದ್ ಕಂಪ್ಲೀಟ್ ಲಾಕ್​ಡೌನ್!
ಪಾಕಿಸ್ತಾನದಲ್ಲಿಂದು ಶಾಂತಿ ಮಾತುಕತೆ: ಇಸ್ಲಾಮಾಬಾದ್ ಕಂಪ್ಲೀಟ್ ಲಾಕ್​ಡೌನ್!
ನೀವು ಈ ಜಾಗಗಳಲ್ಲಿ ಎಡಗಾಲು ಮುಂದಕ್ಕಿಟ್ಟು ಒಳ ಹೋಗಬಹುದು!
ನೀವು ಈ ಜಾಗಗಳಲ್ಲಿ ಎಡಗಾಲು ಮುಂದಕ್ಕಿಟ್ಟು ಒಳ ಹೋಗಬಹುದು!