AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಹೃತಿಕ್​ ಜತೆ ಕೈ ಜೋಡಿಸಲಿದ್ದಾರೆ ದಕ್ಷಿಣ ಭಾರತದ ಹೀರೋ: 150 ಕೋಟಿ ದಾಟಲಿದೆ ಸಿನಿಮಾ ಬಜೆಟ್​!

ವಾರ್​​ಅನ್ನು ನಿರ್ದೇಶನ ಮಾಡಿದ್ದ ಸಿದ್ಧಾರ್ಥ್​ ಆನಂದ್​ ಈ ಹೊಸ ಚಿತ್ರಕ್ಕೆ ಆ್ಯಕ್ಷನ್​ ಕಟ್​ ಹೇಳುತ್ತಿದ್ದಾರೆ. ಈ ಸಿನಿಮಾದ ಬಜೆಟ್​ ಕೂಡ ದೊಡ್ಡ ಮಟ್ಟದಲ್ಲಿದೆ ಎನ್ನಲಾಗುತ್ತಿದೆ.

ಹೃತಿಕ್​ ಜತೆ ಕೈ ಜೋಡಿಸಲಿದ್ದಾರೆ ದಕ್ಷಿಣ ಭಾರತದ ಹೀರೋ: 150 ಕೋಟಿ ದಾಟಲಿದೆ ಸಿನಿಮಾ ಬಜೆಟ್​!
ಹೃತಿಕ್​-ಯಶ್​
ರಾಜೇಶ್ ದುಗ್ಗುಮನೆ
| Edited By: |

Updated on: Mar 09, 2021 | 5:31 PM

Share

2019ರ ಅಕ್ಟೋಬರ್​ ತಿಂಗಳಲ್ಲಿ ತೆರೆಗೆ ಬಂದಿದ್ದ ವಾರ್​ ಸಿನಿಮಾ ಬಾಕ್ಸ್​ ಆಫೀಸ್​ನಲ್ಲಿ ದೊಡ್ಡ ಮಟ್ಟದಲ್ಲಿ ಕಲೆಕ್ಷನ್​ ಮಾಡಿತ್ತು. 150 ಕೋಟಿ ಬಜೆಟ್​ನ ಈ ಚಿತ್ರ ಭಾರತದ ಬಾಕ್ಸ್​ ಆಫೀಸ್​ನಲ್ಲಿ ಕಲೆ ಹಾಕಿದ್ದು ಬರೋಬ್ಬರಿ 317 ಕೋಟಿ ರೂಪಾಯಿ. ಹೃತಿಕ್​ ರೋಷನ್​ ಹಾಗೂ ಟೈಗರ್​ ಶ್ರಾಫ್​ ಕಾಂಬಿನೇಷನ್​ನ ಈ ಆ್ಯಕ್ಷನ್​ ಸಿನಿಮಾ​ ಪ್ರೇಕ್ಷಕರಿಗೆ ಸಖತ್​ ಇಷ್ಟವಾಗಿತ್ತು. ಈಗ ಇದೇ ಮಾದರಿಯ ಸಿನಿಮಾವೊಂದು ಬಾಲಿವುಡ್​ನಲ್ಲಿ ಸಿದ್ಧಗೊಳ್ಳಲಿದೆಯಂತೆ. ಇದಕ್ಕೆ ಹೃತಿಕ್​ ಹಾಗೂ ದಕ್ಷಿಣ ಭಾರತದ ಹೀರೋ ಪ್ರಭಾಸ್​ ಒಂದಾಗಲಿದ್ದಾರಂತೆ. ಸದ್ಯ, ಬಾಲಿವುಡ್​ ಅಂಗಳದಲ್ಲಿ ಹೀಗೊಂದು ವಿಚಾರ ಹರಿದಾಡುತ್ತಿದೆ.

ರಾಧೆ ಶ್ಯಾಮ್​ ಸಿನಿಮಾ ಕೆಲಸಗಳು ಪೂರ್ಣಗೊಂಡಿವೆ. ಆದಿ ಪುರುಷ್​ ಚಿತ್ರದ ಶೂಟಿಂಗ್​ ನಡೆಯುತ್ತಿದ್ದು, ಇದರ ಜತೆ ಜತೆಗೆ ಪ್ರಶಾಂತ್​ ನೀಲ್​ ನಿರ್ದೇಶನದ ಸಲಾರ್​ ಸಿನಿಮಾದ ಕೆಲಸದಲ್ಲೂ ಪ್ರಭಾಸ್​ ತೊಡಗಿಕೊಂಡಿದ್ದಾರೆ. ಇನ್ನು, ನಾಗ್​ ಅಶ್ವಿನ್​ ನಿರ್ದೇಶನ ಮಾಡುತ್ತಿರುವ ಇನ್ನೂ ಹೆಸರಿಡದ ಸಿನಿಮಾದಲ್ಲೂ ಪ್ರಭಾಸ್​ ಬಣ್ಣ ಹಚ್ಚುತ್ತಿದ್ದಾರೆ. ಇವುಗಳ ಮಧ್ಯೆ ಪ್ರಭಾಸ್ ಮತ್ತೊಂದು ಸಿನಿಮಾ ಒಪ್ಪಿಕೊಂಡಿದ್ದಾರೆ.

ವಾರ್​​ಅನ್ನು ನಿರ್ದೇಶನ ಮಾಡಿದ್ದ ಸಿದ್ಧಾರ್ಥ್​ ಆನಂದ್​ ಈ ಹೊಸ ಚಿತ್ರಕ್ಕೆ ಆ್ಯಕ್ಷನ್​ ಕಟ್​ ಹೇಳುತ್ತಿದ್ದಾರೆ. ಹೃತಿಕ್​ ಜತೆ ಪ್ರಭಾಸ್​ ನಟಿಸಿದರೆ ಉತ್ತಮ ಎನ್ನುವ ಆಶಯ ಸಿದ್ಧಾರ್ಥ್​ ಅವರದ್ದು. ಈಗಾಗಲೇ ಪ್ರಭಾಸ್​ ಅವರ ಜತೆ ಒಂದು ಹಂತದ ಮಾತುಕತೆ ಪೂರ್ಣಗೊಂಡಿದೆ ಎನ್ನಲಾಗಿದೆ.

ಬಾಹುಬಲಿ ಸಿನಿಮಾ ಮೂಲಕ ಪ್ರಭಾಸ್​ ಹಿಂದಿ ಚಿತ್ರರಂಗಕ್ಕೆ ಪರಿಚಯಗೊಂಡಿದ್ದಾರೆ. ಅಲ್ಲಿ ಅವರಿಗೆ ದೊಡ್ಡ ಮಟ್ಟದ ಫ್ಯಾನ್ಸ್ ಇದ್ದಾರೆ. ಇನ್ನು, ದಕ್ಷಿಣ ಭಾರತದಲ್ಲಂತೂ ಪ್ರಭಾಸ್​ ಹವಾ ಸಣ್ಣ ಮಟ್ಟದ್ದೇನಲ್ಲ. ಈ ಎಲ್ಲಾ ಕಾರಣಕ್ಕೆ ಪ್ರಭಾಸ್​ ಸೂಕ್ತ ಎಂದು ನಿರ್ಧರಿಸಲಾಗಿದೆ.

ವಾರ್​ ಸಿನಿಮಾದ ಬಜೆಟ್​ ಬರೋಬ್ಬರಿ 150 ಕೋಟಿ ರೂಪಾಯಿ ಇತ್ತು. ಈಗ ಸಿದ್ಧಗೊಳ್ಳುತ್ತಿರುವ ಸಿನಿಮಾದ ಬಜೆಟ್​ ವಾರ್​ ಸಿನಿಮಾವನ್ನೂ ಮೀರಿಸಲಿದೆ ಎನ್ನಲಾಗುತ್ತಿದೆ. ಈ ವಿಚಾರ ಕೇಳಿ ಅಭಿಮಾನಿಗಳು ಸಖತ್​ ಎಗ್ಸೈಟ್​ ಆಗಿದ್ದಾರೆ.

ಇದನ್ನೂ ಓದಿ: Bigg Boss Kannada: ಬಿಗ್​ ಬಾಸ್​ ಮನೆಗೆ ಕಾಲಿಟ್ಟ ಆತಂಕಕಾರಿ ವೈರಸ್​? ನಿರ್ಮಲಾ ಚೆನ್ನಪ್ಪ ಅಸ್ವಸ್ಥ

ಅಖಾಡಕ್ಕಿಳಿದ ವಾಟಾಳ್ ನಾಗರಾಜ್, ಬಿಎಂಆರ್​​ಸಿಎಲ್​​​ಗೆ ಡೆಡ್​​ಲೈನ್
ಅಖಾಡಕ್ಕಿಳಿದ ವಾಟಾಳ್ ನಾಗರಾಜ್, ಬಿಎಂಆರ್​​ಸಿಎಲ್​​​ಗೆ ಡೆಡ್​​ಲೈನ್
ಕೆಎಲ್ ರಾಹುಲ್ 25ನೇ ಶತಕದ ಇನ್ನಿಂಗ್ಸ್​ನ ಝಲಕ್ ಇಲ್ಲಿದೆ
ಕೆಎಲ್ ರಾಹುಲ್ 25ನೇ ಶತಕದ ಇನ್ನಿಂಗ್ಸ್​ನ ಝಲಕ್ ಇಲ್ಲಿದೆ
ಬಜೆಟ್ ಪೂರ್ವಭಾವಿ ಸಭೆ ಬಿಟ್ಟು ದೆಹಲಿ ಪ್ರವಾಸ: ಡಿಕೆಶಿ ನಡೆಯೇ ಕುತೂಹಲ
ಬಜೆಟ್ ಪೂರ್ವಭಾವಿ ಸಭೆ ಬಿಟ್ಟು ದೆಹಲಿ ಪ್ರವಾಸ: ಡಿಕೆಶಿ ನಡೆಯೇ ಕುತೂಹಲ
3 ಮಾದರಿಯ ಸರಣಿಗಾಗಿ ಆಸ್ಟ್ರೇಲಿಯಾ ತಲುಪಿದ ಟೀಂ ಇಂಡಿಯಾ
3 ಮಾದರಿಯ ಸರಣಿಗಾಗಿ ಆಸ್ಟ್ರೇಲಿಯಾ ತಲುಪಿದ ಟೀಂ ಇಂಡಿಯಾ
SC ST ಸಮುದಾಯದವರಿಗೆ ಸೈಟ್: ಸತೀಶ್ ಜಾರಕಿಹೊಳಿ ಮಹತ್ವದ ಘೋಷಣೆ
SC ST ಸಮುದಾಯದವರಿಗೆ ಸೈಟ್: ಸತೀಶ್ ಜಾರಕಿಹೊಳಿ ಮಹತ್ವದ ಘೋಷಣೆ
ಜೆಡಿಎಸ್-ಬಿಜೆಪಿ ಮೈತ್ರಿಯಲ್ಲಿ ಅಸಮಾಧಾನ ಸ್ಫೋಟ: ಪ್ರೀತಂಗೆ ನಿಖಿಲ್ ಕೌಂಟರ್
ಜೆಡಿಎಸ್-ಬಿಜೆಪಿ ಮೈತ್ರಿಯಲ್ಲಿ ಅಸಮಾಧಾನ ಸ್ಫೋಟ: ಪ್ರೀತಂಗೆ ನಿಖಿಲ್ ಕೌಂಟರ್
ಗಂಡ 12 ಸಾವಿರದ ಬಟ್ಟೆ ತೆಗೆದುಕೊಟ್ಟಿಲ್ಲ ಎಂದು ಕಣ್ಣೀರು ಹಾಕಿದ ಪತ್ನಿ
ಗಂಡ 12 ಸಾವಿರದ ಬಟ್ಟೆ ತೆಗೆದುಕೊಟ್ಟಿಲ್ಲ ಎಂದು ಕಣ್ಣೀರು ಹಾಕಿದ ಪತ್ನಿ
ಬೆಂಗಳೂರಲ್ಲಿ ಬಿಎಂಟಿಸಿಯಿಂದ ಮತ್ತೊಂದು ಡೆಡ್ಲಿ ಆ್ಯಕ್ಸಿಡೆಂಟ್!
ಬೆಂಗಳೂರಲ್ಲಿ ಬಿಎಂಟಿಸಿಯಿಂದ ಮತ್ತೊಂದು ಡೆಡ್ಲಿ ಆ್ಯಕ್ಸಿಡೆಂಟ್!
‘ನನ್ನನ್ನು ಹಾಗೆ ಕರೀ ಬೇಡಿ ಪ್ಲೀಸ್’; ಎಲ್ಲರ ಎದುರು ಕೋರಿಕೊಂಡ ಗಿಲ್ಲಿ ನಟ
‘ನನ್ನನ್ನು ಹಾಗೆ ಕರೀ ಬೇಡಿ ಪ್ಲೀಸ್’; ಎಲ್ಲರ ಎದುರು ಕೋರಿಕೊಂಡ ಗಿಲ್ಲಿ ನಟ
ಮೋದಿ ವಿರುದ್ಧ ಕಾಂಗ್ರೆಸ್ ಫ್ಲೆಕ್ಸ್: ಪೊಲೀಸ್ ದೂರು ದಾಖಲಿಸಿದ ಬಿಜೆಪಿ
ಮೋದಿ ವಿರುದ್ಧ ಕಾಂಗ್ರೆಸ್ ಫ್ಲೆಕ್ಸ್: ಪೊಲೀಸ್ ದೂರು ದಾಖಲಿಸಿದ ಬಿಜೆಪಿ