AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಬಯಲಾಯ್ತು ಪ್ರಭಾಸ್​-ಪ್ರಶಾಂತ್​ ನೀಲ್​ ‘ಸಲಾರ್’ ಚಿತ್ರದ ಇನ್ನೊಂದು ಸೀಕ್ರೆಟ್​

ಆದಿಪುರುಷ್​ ಚಿತ್ರದಲ್ಲಿ ಪ್ರಭಾಸ್​ ರಾಮನ ಅವತಾರ ತಾಳಿದ್ದಾರೆ. ಈ ಸಿನಿಮಾದ ಪೋಸ್ಟರ್​ ಈಗಾಗಲೇ ಸಾಕಷ್ಟು ಕುತೂಹಲ ಮೂಡಿಸಿದೆ. ಇನ್ನು, ರಾಧೆ ಶ್ಯಾಮ್​ ಚಿತ್ರದಲ್ಲಿ ಲವರ್​ ಬಾಯ್​ ಆಗಿ ಪ್ರಭಾಸ್​ ಕಾಣಿಸಿಕೊಳ್ಳಲಿದ್ದಾರೆ.

ಬಯಲಾಯ್ತು ಪ್ರಭಾಸ್​-ಪ್ರಶಾಂತ್​ ನೀಲ್​ ‘ಸಲಾರ್’ ಚಿತ್ರದ ಇನ್ನೊಂದು ಸೀಕ್ರೆಟ್​
ನಟ ಪ್ರಭಾಸ್
ರಾಜೇಶ್ ದುಗ್ಗುಮನೆ
| Edited By: |

Updated on: May 18, 2021 | 7:21 AM

Share

ಪ್ರಭಾಸ್​ ಏಕಕಾಲಕ್ಕೆ ಮೂರು ಚಿತ್ರಗಳಲ್ಲಿ ನಟಿಸುತ್ತಿದ್ದಾರೆ. ಮೂರು ಸಿನಿಮಾಗಳು ಒಂದಕ್ಕಿಂತ ಒಂದು ಭಿನ್ನ. ಹೀಗಾಗಿ, ಅಭಿಮಾನಿಗಳು ಸಾಕಷ್ಟು ನಿರೀಕ್ಷೆ ಇಟ್ಟುಕೊಂಡಿದ್ದಾರೆ. ಈಗ ಬಹು ನಿರೀಕ್ಷಿತ ಸಲಾರ್​ ಸಿನಿಮಾದಲ್ಲಿ ಅವರ ಪಾತ್ರ ಹೇಗಿರಲಿದೆ ಎನ್ನುವ ವಿಚಾರ ರಿವೀಲ್​ ಆಗಿದೆ.

ಆದಿಪುರುಷ್​ ಚಿತ್ರದಲ್ಲಿ ಪ್ರಭಾಸ್​ ರಾಮನ ಅವತಾರ ತಾಳಿದ್ದಾರೆ. ಈ ಸಿನಿಮಾದ ಪೋಸ್ಟರ್​ ಈಗಾಗಲೇ ಸಾಕಷ್ಟು ಕುತೂಹಲ ಮೂಡಿಸಿದೆ. ಇನ್ನು, ರಾಧೆ ಶ್ಯಾಮ್​ ಚಿತ್ರದಲ್ಲಿ ಲವರ್​ ಬಾಯ್​ ಆಗಿ ಪ್ರಭಾಸ್​ ಕಾಣಿಸಿಕೊಳ್ಳಲಿದ್ದಾರೆ. ಪೂಜಾ ಹೆಗ್ಡೆ ಅವರ ಜತೆಗಿನ ಕಾಂಬಿನೇಷನ್​ ಪ್ರೇಕ್ಷಕರಿಗೆ ಇಷ್ಟವಾಗುತ್ತಿದೆ. ಈಗ ಸಲಾರ್​ ಸಿನಿಮಾದಲ್ಲಿ ಪ್ರಭಾಸ್​ ಪಾತ್ರ ಹೇಗಿದೆ ಎನ್ನುವ ವಿಚಾರ ರಿವೀಲ್​ ಆಗಿದೆ.

ಮೂಲಗಳ ಪ್ರಕಾರ ಪ್ರಭಾಸ್​ ದ್ವಿಪಾತ್ರದಲ್ಲಿ ಕಾಣಿಸಿಕೊಳ್ಳುತ್ತಿದ್ದಾರೆ ಎನ್ನುವ ಮಾತಿದೆ. ಸೇನಾಧಿಕಾರಿ​ ಆಗಿ ಒಂದರಲ್ಲಿ ಕಾಣಿಸಿಕೊಂಡರೆ, ಮತ್ತೊಂದು ಪಾತ್ರದಲ್ಲಿ ಹೇಗೆ ಕಾಣಿಸಿಕೊಳ್ಳುತ್ತಿದ್ದಾರೆ ಎನ್ನುವ ಕುತೂಹಲ ಹಾಗೆಯೇ ಉಳಿದುಕೊಂಡಿದೆ.

ಈಗಾಗಲೇ ತೆಲುಗಿನಲ್ಲಿ ಸಾಕಷ್ಟು ಸಿನಿಮಾಗಳು ಸೇನೆಯ ಕಥೆಯ ಹಿನ್ನೆಲೆ ಆಧರಿಸಿ ಬಂದಿವೆ. ಈ ಸಾಲಿಗೆ ಸಲಾರ್​ ಕೂಡ ಸೇರಿಕೊಳ್ಳುತ್ತಿದೆ. ಅಂದಹಾಗೆ, ಇಡೀ ಸಿನಿಮಾದಲ್ಲಿ ಸೇನಾಧಿಕಾರಿ ಪಾತ್ರ ತುಂಬಾನೇ ಹೈಲೈಟ್​ ಆಗಲಿದೆಯಂತೆ. ಸಾಕಷ್ಟು ಆ್ಯಕ್ಷನ್​ ಕೂಡ ಇರಲಿದೆ ಎನ್ನುವ ಮಾತು ಕೇಳಿ ಬಂದಿದೆ.

ಸಲಾರ್​ ಸಿನಿಮಾ 2014ರಲ್ಲಿ ತೆರೆಕಂಡ ಉಗ್ರಂ ಚಿತ್ರದ ರಿಮೇಕ್​ ಎಂದು ಹೇಳಲಾಗಿತ್ತು. ಇದನ್ನು ಸಂಗೀತ ನಿರ್ದೇಶಕ ರವಿ ಬಸ್ರೂಸ್​ ಖಚಿತಪಡಿಸಿದ್ದರು. ಆದರೆ, ಈಗ ಕೇಳಿ ಬರುತ್ತಿರುವ ಹೊಸ ಅಪ್​ಡೇಟ್​ಗಳು ಸಾಕಷ್ಟು ಕುತೂಹಲ ಹಾಗೂ ಅಚ್ಚರಿ ಮೂಡಿಸುತ್ತಿವೆ.

ಮೂಲಗಳ ಪ್ರಕಾರ ಸಲಾರ್​ ಸಿನಿಮಾ ತುಂಬಾನೇ ಅದ್ದೂರಿಯಾಗಿ ಸಿದ್ಧಗೊಳ್ಳುತ್ತಿದೆಯಂತೆ. ಇದೇ ಕಾರಣಕ್ಕೆ, ಸಿನಿಮಾದ ಬಜೆಟ್​ 150 ಕೋಟಿ ರೂಪಾಯಿ ತಲುಪಿದೆ. ಅಲ್ಲದೆ, ಕೆಜಿಎಫ್​ನಲ್ಲಿ ಕೆಲಸ ಮಾಡಿದ ತಂತ್ರಜ್ಞರೇ ಸಲಾರ್​ ಸಿನಿಮಾದಲ್ಲಿ ಕೆಲಸ ಮಾಡುತ್ತಿರುವುದರಿಂದ ಇವರು ದೊಡ್ಡ ಮೊತ್ತದ ಸಂಭಾವನೆ ಜೇಬಿಗೆ ಇಳಿಸಿಕೊಳ್ಳುತ್ತಿದ್ದಾರೆ. ಹೀಗಾಗಿ ಸಿನಿಮಾ ಬಜೆಟ್​ ಹಿರಿದಾಗಿದೆ.

ಇದನ್ನೂ ಓದಿ: ಕೆಜಿಎಫ್ 2-ಸಲಾರ್​ಗೂ ಇದೆ ಲಿಂಕ್​; ವಿಶೇಷ ವಿಚಾರ ಬಿಚ್ಚಿಟ್ಟ ಪ್ರಶಾಂತ್​ ನೀಲ್​

Follow Us
ಜೆಸ್ಕಾಂ ನಿರ್ಲಕ್ಷ್ಯ: ಬೆಳೆಗೆ ನೀರುಣಿಸಲು ವಿದ್ಯುತ್‌ಗಾಗಿ ರೈತರ ಹರಸಾಹಸ
ಜೆಸ್ಕಾಂ ನಿರ್ಲಕ್ಷ್ಯ: ಬೆಳೆಗೆ ನೀರುಣಿಸಲು ವಿದ್ಯುತ್‌ಗಾಗಿ ರೈತರ ಹರಸಾಹಸ
ಧರ್ಮಸ್ಥಳದಲ್ಲಿ BJP ಶಾಸಕರಿಂದ ಆಣೆ ಪ್ರಮಾಣ: ಪ್ರಿಯಾಂಕ್​​ ಖರ್ಗೆ ವ್ಯಂಗ್ಯ
ಧರ್ಮಸ್ಥಳದಲ್ಲಿ BJP ಶಾಸಕರಿಂದ ಆಣೆ ಪ್ರಮಾಣ: ಪ್ರಿಯಾಂಕ್​​ ಖರ್ಗೆ ವ್ಯಂಗ್ಯ
ವಿದ್ಯಾರ್ಥಿಗಳು ನೀಟ್ ಪರೀಕ್ಷೆಯಿಂದ ವಂಚಿತರಾಗಲು ಕಾಂಗ್ರೆಸ್ ಕಾರಣ ಎಂದ ಅಶೋಕ
ವಿದ್ಯಾರ್ಥಿಗಳು ನೀಟ್ ಪರೀಕ್ಷೆಯಿಂದ ವಂಚಿತರಾಗಲು ಕಾಂಗ್ರೆಸ್ ಕಾರಣ ಎಂದ ಅಶೋಕ
ಎಡೆ ಹೊಡೆಯಲು ಎತ್ತುಗಳಂತೆ ನೊಗಕ್ಕೆ ಹೆಗಲು ಕೊಟ್ಟ ರೈತ ಕುಟುಂಬಸ್ಥರು!
ಎಡೆ ಹೊಡೆಯಲು ಎತ್ತುಗಳಂತೆ ನೊಗಕ್ಕೆ ಹೆಗಲು ಕೊಟ್ಟ ರೈತ ಕುಟುಂಬಸ್ಥರು!
ಅಮೆರಿಕದಿಂದ ಇರಾನ್​ಗೆ 300 ಡಾಲರ್ ಆರ್ಥಿಕ ನೆರವು
ಅಮೆರಿಕದಿಂದ ಇರಾನ್​ಗೆ 300 ಡಾಲರ್ ಆರ್ಥಿಕ ನೆರವು
ಬೆಂಗಳೂರಿನಲ್ಲಿ ನಕಲಿ ನಾಗಸಾಧುಗಳಿಂದ ಉಂಗುರ ಕಳ್ಳತನ
ಬೆಂಗಳೂರಿನಲ್ಲಿ ನಕಲಿ ನಾಗಸಾಧುಗಳಿಂದ ಉಂಗುರ ಕಳ್ಳತನ
ಕೋಲಾರದಲ್ಲಿ ವಾಹನಗಳನ್ನು ತಡೆದು ಮಾವು ಬೆಳೆಗಾರರ ಪ್ರತಿಭಟನೆ!
ಕೋಲಾರದಲ್ಲಿ ವಾಹನಗಳನ್ನು ತಡೆದು ಮಾವು ಬೆಳೆಗಾರರ ಪ್ರತಿಭಟನೆ!
ಬ್ರಹ್ಮರಕೂಟ್ಲು ಟೋಲ್ ಗೇಟ್‌ನಲ್ಲಿ ಸಿಪಿಐಎಂ ಕಾರ್ಯಕರ್ತರ ದಾಂಧಲೆ
ಬ್ರಹ್ಮರಕೂಟ್ಲು ಟೋಲ್ ಗೇಟ್‌ನಲ್ಲಿ ಸಿಪಿಐಎಂ ಕಾರ್ಯಕರ್ತರ ದಾಂಧಲೆ
ಉತ್ತರ ಕರ್ನಾಟಕದಲ್ಲಿ ಮಳೆ ಕೊರತೆಯ ಪರಿಣಾಮ ಭೀಕರ: ಅನ್ನದಾತರು ಕಂಗಾಲು
ಉತ್ತರ ಕರ್ನಾಟಕದಲ್ಲಿ ಮಳೆ ಕೊರತೆಯ ಪರಿಣಾಮ ಭೀಕರ: ಅನ್ನದಾತರು ಕಂಗಾಲು
ಆಸ್ಪತ್ರೆಗೆ ಹೋಗಿ ಬರುವಷ್ಟರಲ್ಲಿ ಮನೆ ಎಲ್ಲ ದೋಚಿದ ಖದೀಮರು!
ಆಸ್ಪತ್ರೆಗೆ ಹೋಗಿ ಬರುವಷ್ಟರಲ್ಲಿ ಮನೆ ಎಲ್ಲ ದೋಚಿದ ಖದೀಮರು!