ಬಯಲಾಯ್ತು ಪ್ರಭಾಸ್​-ಪ್ರಶಾಂತ್​ ನೀಲ್​ ‘ಸಲಾರ್’ ಚಿತ್ರದ ಇನ್ನೊಂದು ಸೀಕ್ರೆಟ್​

ಆದಿಪುರುಷ್​ ಚಿತ್ರದಲ್ಲಿ ಪ್ರಭಾಸ್​ ರಾಮನ ಅವತಾರ ತಾಳಿದ್ದಾರೆ. ಈ ಸಿನಿಮಾದ ಪೋಸ್ಟರ್​ ಈಗಾಗಲೇ ಸಾಕಷ್ಟು ಕುತೂಹಲ ಮೂಡಿಸಿದೆ. ಇನ್ನು, ರಾಧೆ ಶ್ಯಾಮ್​ ಚಿತ್ರದಲ್ಲಿ ಲವರ್​ ಬಾಯ್​ ಆಗಿ ಪ್ರಭಾಸ್​ ಕಾಣಿಸಿಕೊಳ್ಳಲಿದ್ದಾರೆ.

ಬಯಲಾಯ್ತು ಪ್ರಭಾಸ್​-ಪ್ರಶಾಂತ್​ ನೀಲ್​ ‘ಸಲಾರ್’ ಚಿತ್ರದ ಇನ್ನೊಂದು ಸೀಕ್ರೆಟ್​
ನಟ ಪ್ರಭಾಸ್
Follow us
| Updated By: ಮದನ್​ ಕುಮಾರ್​

Updated on: May 18, 2021 | 7:21 AM

ಪ್ರಭಾಸ್​ ಏಕಕಾಲಕ್ಕೆ ಮೂರು ಚಿತ್ರಗಳಲ್ಲಿ ನಟಿಸುತ್ತಿದ್ದಾರೆ. ಮೂರು ಸಿನಿಮಾಗಳು ಒಂದಕ್ಕಿಂತ ಒಂದು ಭಿನ್ನ. ಹೀಗಾಗಿ, ಅಭಿಮಾನಿಗಳು ಸಾಕಷ್ಟು ನಿರೀಕ್ಷೆ ಇಟ್ಟುಕೊಂಡಿದ್ದಾರೆ. ಈಗ ಬಹು ನಿರೀಕ್ಷಿತ ಸಲಾರ್​ ಸಿನಿಮಾದಲ್ಲಿ ಅವರ ಪಾತ್ರ ಹೇಗಿರಲಿದೆ ಎನ್ನುವ ವಿಚಾರ ರಿವೀಲ್​ ಆಗಿದೆ.

ಆದಿಪುರುಷ್​ ಚಿತ್ರದಲ್ಲಿ ಪ್ರಭಾಸ್​ ರಾಮನ ಅವತಾರ ತಾಳಿದ್ದಾರೆ. ಈ ಸಿನಿಮಾದ ಪೋಸ್ಟರ್​ ಈಗಾಗಲೇ ಸಾಕಷ್ಟು ಕುತೂಹಲ ಮೂಡಿಸಿದೆ. ಇನ್ನು, ರಾಧೆ ಶ್ಯಾಮ್​ ಚಿತ್ರದಲ್ಲಿ ಲವರ್​ ಬಾಯ್​ ಆಗಿ ಪ್ರಭಾಸ್​ ಕಾಣಿಸಿಕೊಳ್ಳಲಿದ್ದಾರೆ. ಪೂಜಾ ಹೆಗ್ಡೆ ಅವರ ಜತೆಗಿನ ಕಾಂಬಿನೇಷನ್​ ಪ್ರೇಕ್ಷಕರಿಗೆ ಇಷ್ಟವಾಗುತ್ತಿದೆ. ಈಗ ಸಲಾರ್​ ಸಿನಿಮಾದಲ್ಲಿ ಪ್ರಭಾಸ್​ ಪಾತ್ರ ಹೇಗಿದೆ ಎನ್ನುವ ವಿಚಾರ ರಿವೀಲ್​ ಆಗಿದೆ.

ಮೂಲಗಳ ಪ್ರಕಾರ ಪ್ರಭಾಸ್​ ದ್ವಿಪಾತ್ರದಲ್ಲಿ ಕಾಣಿಸಿಕೊಳ್ಳುತ್ತಿದ್ದಾರೆ ಎನ್ನುವ ಮಾತಿದೆ. ಸೇನಾಧಿಕಾರಿ​ ಆಗಿ ಒಂದರಲ್ಲಿ ಕಾಣಿಸಿಕೊಂಡರೆ, ಮತ್ತೊಂದು ಪಾತ್ರದಲ್ಲಿ ಹೇಗೆ ಕಾಣಿಸಿಕೊಳ್ಳುತ್ತಿದ್ದಾರೆ ಎನ್ನುವ ಕುತೂಹಲ ಹಾಗೆಯೇ ಉಳಿದುಕೊಂಡಿದೆ.

ಈಗಾಗಲೇ ತೆಲುಗಿನಲ್ಲಿ ಸಾಕಷ್ಟು ಸಿನಿಮಾಗಳು ಸೇನೆಯ ಕಥೆಯ ಹಿನ್ನೆಲೆ ಆಧರಿಸಿ ಬಂದಿವೆ. ಈ ಸಾಲಿಗೆ ಸಲಾರ್​ ಕೂಡ ಸೇರಿಕೊಳ್ಳುತ್ತಿದೆ. ಅಂದಹಾಗೆ, ಇಡೀ ಸಿನಿಮಾದಲ್ಲಿ ಸೇನಾಧಿಕಾರಿ ಪಾತ್ರ ತುಂಬಾನೇ ಹೈಲೈಟ್​ ಆಗಲಿದೆಯಂತೆ. ಸಾಕಷ್ಟು ಆ್ಯಕ್ಷನ್​ ಕೂಡ ಇರಲಿದೆ ಎನ್ನುವ ಮಾತು ಕೇಳಿ ಬಂದಿದೆ.

ಸಲಾರ್​ ಸಿನಿಮಾ 2014ರಲ್ಲಿ ತೆರೆಕಂಡ ಉಗ್ರಂ ಚಿತ್ರದ ರಿಮೇಕ್​ ಎಂದು ಹೇಳಲಾಗಿತ್ತು. ಇದನ್ನು ಸಂಗೀತ ನಿರ್ದೇಶಕ ರವಿ ಬಸ್ರೂಸ್​ ಖಚಿತಪಡಿಸಿದ್ದರು. ಆದರೆ, ಈಗ ಕೇಳಿ ಬರುತ್ತಿರುವ ಹೊಸ ಅಪ್​ಡೇಟ್​ಗಳು ಸಾಕಷ್ಟು ಕುತೂಹಲ ಹಾಗೂ ಅಚ್ಚರಿ ಮೂಡಿಸುತ್ತಿವೆ.

ಮೂಲಗಳ ಪ್ರಕಾರ ಸಲಾರ್​ ಸಿನಿಮಾ ತುಂಬಾನೇ ಅದ್ದೂರಿಯಾಗಿ ಸಿದ್ಧಗೊಳ್ಳುತ್ತಿದೆಯಂತೆ. ಇದೇ ಕಾರಣಕ್ಕೆ, ಸಿನಿಮಾದ ಬಜೆಟ್​ 150 ಕೋಟಿ ರೂಪಾಯಿ ತಲುಪಿದೆ. ಅಲ್ಲದೆ, ಕೆಜಿಎಫ್​ನಲ್ಲಿ ಕೆಲಸ ಮಾಡಿದ ತಂತ್ರಜ್ಞರೇ ಸಲಾರ್​ ಸಿನಿಮಾದಲ್ಲಿ ಕೆಲಸ ಮಾಡುತ್ತಿರುವುದರಿಂದ ಇವರು ದೊಡ್ಡ ಮೊತ್ತದ ಸಂಭಾವನೆ ಜೇಬಿಗೆ ಇಳಿಸಿಕೊಳ್ಳುತ್ತಿದ್ದಾರೆ. ಹೀಗಾಗಿ ಸಿನಿಮಾ ಬಜೆಟ್​ ಹಿರಿದಾಗಿದೆ.

ಇದನ್ನೂ ಓದಿ: ಕೆಜಿಎಫ್ 2-ಸಲಾರ್​ಗೂ ಇದೆ ಲಿಂಕ್​; ವಿಶೇಷ ವಿಚಾರ ಬಿಚ್ಚಿಟ್ಟ ಪ್ರಶಾಂತ್​ ನೀಲ್​

ಭಗವಾನ್ ಜಗನ್ನಾಥನ ವಿಗ್ರಹ ಖರೀದಿಸಿ, ಡಿಜಿಟಲ್ ಪೇಮೆಂಟ್ ಮಾಡಿದ ಪಿಎಂ ಮೋದಿ
ಭಗವಾನ್ ಜಗನ್ನಾಥನ ವಿಗ್ರಹ ಖರೀದಿಸಿ, ಡಿಜಿಟಲ್ ಪೇಮೆಂಟ್ ಮಾಡಿದ ಪಿಎಂ ಮೋದಿ
ತ್ರಿವರ್ಣ ಧ್ವಜದಲ್ಲಿ ಉರ್ದು ವಾಕ್ಯ ಬರೆದು ದರ್ಗಾಕ್ಕೆ ಕಟ್ಟಿದ ಯುವಕ:ವಿಡಿಯೋ
ತ್ರಿವರ್ಣ ಧ್ವಜದಲ್ಲಿ ಉರ್ದು ವಾಕ್ಯ ಬರೆದು ದರ್ಗಾಕ್ಕೆ ಕಟ್ಟಿದ ಯುವಕ:ವಿಡಿಯೋ
ದಸರಾ ಉದ್ಘಾಟನೆ ಅನಿರೀಕ್ಷಿತವಾಗಿ ಬಂದ ಸಂತೋಷದ ಕ್ಷಣ; ಹಂಪಾ ನಾಗರಾಜಯ್ಯ
ದಸರಾ ಉದ್ಘಾಟನೆ ಅನಿರೀಕ್ಷಿತವಾಗಿ ಬಂದ ಸಂತೋಷದ ಕ್ಷಣ; ಹಂಪಾ ನಾಗರಾಜಯ್ಯ
ಬಯೋಲಾಜಿಕಲ್ ವಾರ್ ರೀತಿ ಏಡ್ಸ್ ಇರುವವರನ್ನು ಬಳಸಿದ್ದಾರೆ: ಡಿಕೆ ಸುರೇಶ್​
ಬಯೋಲಾಜಿಕಲ್ ವಾರ್ ರೀತಿ ಏಡ್ಸ್ ಇರುವವರನ್ನು ಬಳಸಿದ್ದಾರೆ: ಡಿಕೆ ಸುರೇಶ್​
ಹೆಚ್​ಡಿ ಕುಮಾರಸ್ವಾಮಿ ಸುದ್ದಿಗೋಷ್ಠಿ
ಹೆಚ್​ಡಿ ಕುಮಾರಸ್ವಾಮಿ ಸುದ್ದಿಗೋಷ್ಠಿ
ನಕ್ಸಲರ ದಾಳಿಗೆ ತುತ್ತಾದ ಜನರ ಸಂಕಟ ತೆರೆದಿಡುವ ಸಾಕ್ಷ್ಯಚಿತ್ರವಿದು
ನಕ್ಸಲರ ದಾಳಿಗೆ ತುತ್ತಾದ ಜನರ ಸಂಕಟ ತೆರೆದಿಡುವ ಸಾಕ್ಷ್ಯಚಿತ್ರವಿದು
ಅಡ್ಡಲಾಗಿ ಬಿದ್ದ 10 ಚಕ್ರದ ಲಾರಿ, ರಿಂಗ್‌ ರೋಡಲ್ಲಿ ಫುಲ್ ಟ್ರಾಫಿಕ್ ಜಾಮ್
ಅಡ್ಡಲಾಗಿ ಬಿದ್ದ 10 ಚಕ್ರದ ಲಾರಿ, ರಿಂಗ್‌ ರೋಡಲ್ಲಿ ಫುಲ್ ಟ್ರಾಫಿಕ್ ಜಾಮ್
ಹೊಸ ಹಾನರ್ ಸ್ಮಾರ್ಟ್​ಫೋನ್​ನಲ್ಲಿದೆ 108 ಮೆಗಾಪಿಕ್ಸೆಲ್ ಸಖತ್ ಎಐ ಕ್ಯಾಮೆರಾ
ಹೊಸ ಹಾನರ್ ಸ್ಮಾರ್ಟ್​ಫೋನ್​ನಲ್ಲಿದೆ 108 ಮೆಗಾಪಿಕ್ಸೆಲ್ ಸಖತ್ ಎಐ ಕ್ಯಾಮೆರಾ
ಮುನಿರತ್ನ ವಿರುದ್ಧದ ಪ್ರಕರಣಗಳ ತನಿಖೆಗೆ SIT ರಚಿಸಿ: ಸಿಎಂಗೆ ಮನವಿ
ಮುನಿರತ್ನ ವಿರುದ್ಧದ ಪ್ರಕರಣಗಳ ತನಿಖೆಗೆ SIT ರಚಿಸಿ: ಸಿಎಂಗೆ ಮನವಿ
ಕಾಡಿಗೆ ಹೋಗುವ ದಾರಿ ಗೊತ್ತು ಅಂತ ಅರಣ್ಯ ಸಿಬ್ಬಂದಿ ಮೇಲೆ ತಿರುಗಿ ಬಿದ್ದ ಆನೆ
ಕಾಡಿಗೆ ಹೋಗುವ ದಾರಿ ಗೊತ್ತು ಅಂತ ಅರಣ್ಯ ಸಿಬ್ಬಂದಿ ಮೇಲೆ ತಿರುಗಿ ಬಿದ್ದ ಆನೆ