AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Prabhas: ಆದಿಪುರುಷ್​ಗಾಗಿ ಬಾಡಿ ಬೆಳೆಸಲು ಸ್ಟಿರಾಯ್ಡ್​ ಬಳಸಿದ್ದಾರಾ ಪ್ರಭಾಸ್​? ಸಹನಟ ತೆರೆದಿಟ್ಟ ಸತ್ಯ ಇಲ್ಲಿದೆ

Adipurush: ಬಾಡಿ ಬಿಲ್ಡ್​ ಮಾಡಲು ಪ್ರಭಾಸ್​ ಯಾವ ಮಾರ್ಗ ಅನುಸರಿಸುತ್ತಿದ್ದಾರೆ? ಡಯೆಟ್​ ಯಾವ ರೀತಿ ಇದೆ ಎಂಬ ಬಗ್ಗೆ ಕೌತುಕ ಮನೆ ಮಾಡಿದೆ. ಈ ಬಗ್ಗೆ ಆದಿಪುರುಷ್​ ಸಿನಿಮಾದ ಇನ್ನೋರ್ವ ನಟ ಸನ್ನಿ​ ಸಿಂಗ್​ ಮಾತನಾಡಿದ್ದಾರೆ.

Prabhas: ಆದಿಪುರುಷ್​ಗಾಗಿ ಬಾಡಿ ಬೆಳೆಸಲು ಸ್ಟಿರಾಯ್ಡ್​ ಬಳಸಿದ್ದಾರಾ ಪ್ರಭಾಸ್​? ಸಹನಟ ತೆರೆದಿಟ್ಟ ಸತ್ಯ ಇಲ್ಲಿದೆ
ಪ್ರಭಾಸ್​ - ಸನ್ನಿ ಸಿಂಗ್​
ಮದನ್​ ಕುಮಾರ್​
|

Updated on: May 22, 2021 | 8:15 AM

Share

ಬಾಹುಬಲಿ ಸಿನಿಮಾಗಾಗಿ ಹಲವು ವರ್ಷಗಳನ್ನು ಮೀಸಲಿಟ್ಟಿದ್ದ ಟಾಲಿವುಡ್ ನಟ​ ಪ್ರಭಾಸ್​ ಅವರು ಈಗ ಬೇಗ ಬೇಗ ಸಿನಿಮಾ ಮಾಡುತ್ತಿದ್ದಾರೆ. ಬ್ಯಾಕ್​ ಟು ಬ್ಯಾಕ್ ಚಿತ್ರಗಳನ್ನು ಒಪ್ಪಿಕೊಂಡು ಅವುಗಳ ಶೂಟಿಂಗ್​ ಮುಗಿಸುತ್ತಿದ್ದಾರೆ. ಒಂದೊಂದು ಸಿನಿಮಾದಲ್ಲಿ ಅವರಿಗೆ ಒಂದೊಂದು ರೀತಿಯ ಗೆಟಪ್​ಗಳಿವೆ. ಸದ್ಯ ಪ್ರಭಾಸ್​ ಕೈಯಲ್ಲಿ ರಾಧೆ ಶ್ಯಾಮ್​, ಆದಿಪುರುಷ್​, ಸಲಾರ್​ ಮುಂತಾದ ಸಿನಿಮಾಗಳಿವೆ. ಈ ಎಲ್ಲ ಪ್ರಾಜೆಕ್ಟ್​ಗಳ ಮೇಲೂ ಅಭಿಮಾನಿಗಳು ಸಿಕ್ಕಾಪಟ್ಟೆ ನಿರೀಕ್ಷೆ ಇಟ್ಟುಕೊಂಡಿದ್ದಾರೆ. ಆದಿಪುರುಷ್​ ಚಿತ್ರದಲ್ಲಿ ಪ್ರಭಾಸ್​ ಅವರು ರಾಮನ ಪಾತ್ರ ಮಾಡುತ್ತಿರುವುದು ವಿಶೇಷ. ಅದಕ್ಕಾಗಿ ಅವರು ಭರ್ಜರಿಯಾಗಿ ಬಾಡಿ ಬಿಲ್ಡ್​ ಮಾಡುತ್ತಿದ್ದಾರೆ.

ಮೊದಲೇ ಹೇಳಿದಂತೆ ಪ್ರಭಾಸ್​ ನಟನೆಯ ಎಲ್ಲ ಸಿನಿಮಾಗಳ ಕೆಲಸಗಳು ವೇಗವಾಗಿ ಸಾಗುತ್ತಿವೆ. ಎಲ್ಲ ಪಾತ್ರಗಳಿಗಾಗಿಯೂ ಅವರು ಬೇಗ ಬೇಗ ಸಿದ್ಧರಾಗುತ್ತಿದ್ದಾರೆ. ಆದಿಪುರುಷ್​ ಚಿತ್ರಕ್ಕಾಗಿ ಅವರು ಕಟ್ಟುಮಸ್ತಾಗಿ ಬಾಡಿ ಬೆಳೆಸುತ್ತಿದ್ದು, ಆ ಬಗ್ಗೆಯೂ ಅಭಿಮಾನಿಗಳಿಗೆ ಕುತೂಹಲ ಇದೆ. ಬಾಡಿ ಬಿಲ್ಡ್​ ಮಾಡಲು ಪ್ರಭಾಸ್​ ಯಾವ ಮಾರ್ಗ ಅನುಸರಿಸುತ್ತಿದ್ದಾರೆ? ಡಯೆಟ್​ ಯಾವ ರೀತಿ ಇದೆ ಎಂಬ ಬಗ್ಗೆಯೂ ಕೌತುಕ ಮನೆ ಮಾಡಿದೆ. ಈ ಬಗ್ಗೆ ಈ ಸಿನಿಮಾದ ಇನ್ನೋರ್ವ ನಟ ಸನ್ನಿ​ ಸಿಂಗ್​ ಮಾತನಾಡಿದ್ದಾರೆ.

‘ಈ ಸಿನಿಮಾಗಾಗಿ ನಾವು ಕಠಿಣ ಡಯೆಟ್​ ಮಾಡುತ್ತಿದ್ದೇವೆ. ಶೇ.50 ಕಾರ್ಬ್ಸ್​ ಹಾಗೂ ಶೇ.50 ಪ್ರೋಟೀನ್​ ಸೇವಿಸುತ್ತಿದ್ದೇವೆ. ಪ್ರತಿ ದಿನ 15 ಅಥವಾ 10 ಮೊಟ್ಟೆ ತಿನ್ನುತ್ತಿದ್ದೇನೆ. ಈ ಚಿತ್ರದಲ್ಲಿ ನಾನು ಮತ್ತು ಪ್ರಭಾಸ್​ ಕಟ್ಟುಮಸ್ತಾಗಿ ಕಾಣಬೇಕಿದೆ. ಪಾತ್ರಕ್ಕೆ ಅದು ಅನಿವಾರ್ಯವಾಗಿದೆ. ಯಾವುದೇ ಸ್ಟಿರಾಯ್ಡ್​ ಅಥವಾ ಸಪ್ಲಿಮೆಂಟ್​ಗಳನ್ನು ನಾವು ಬಳಸುತ್ತಿಲ್ಲ. ತುಂಬ ನ್ಯಾಚುರಲ್​ ಆಗಿ ಬಾಡಿ ಬೆಳೆಸುತ್ತಿದ್ದೇವೆ’ ಎಂದು ಸನ್ನಿ ಸಿಂಗ್​ ಹೇಳಿದ್ದಾರೆ. ಈ ಚಿತ್ರದಲ್ಲಿ ಅವರು ಲಕ್ಷ್ಮಣನ ಪಾತ್ರ ಮಾಡುತ್ತಿದ್ದಾರೆ.

‘ತಾನಾಜಿ: ದಿ ಅನ್​ಸಂಗ್​ ವಾರಿಯರ್​’ ಸಿನಿಮಾ ಮೂಲಕ ಭಾರಿ ಯಶಸ್ಸು ಪಡೆದ ನಿರ್ದೇಶಕ ಓಂ ರಾವುತ್​ ಅವರು ‘ಆದಿಪುರುಷ್​’ ಚಿತ್ರಕ್ಕೆ ಆ್ಯಕ್ಷನ್​-ಕಟ್​ ಹೇಳುತ್ತಿದ್ದಾರೆ. ರಾಮನಾಗಿ ಪ್ರಭಾಸ್​ ನಟಿಸಿದರೆ, ಸೀತೆಯಾಗಿ ಕೃತಿ ಸನೋನ್​ ಕಾಣಿಸಿಕೊಳ್ಳಲಿದ್ದಾರೆ. ರಾವಣನಾಗಿ ಸೈಫ್​ ಅಲಿ ಖಾನ್​ ಅಭಿನಯಿಸುತ್ತಿದ್ದಾರೆ. ಇನ್ನೂ ಹಲವು ಕಲಾವಿದರ ಹೆಸರು ಕೇಳಿಬರುತ್ತಿದೆ. ಆದರೆ ಆ ಬಗ್ಗೆ ಚಿತ್ರತಂಡ ಅಧಿಕೃತವಾಗಿ ಏನನ್ನೂ ಹೇಳಿಲ್ಲ. ಇದೊಂದು ಪೌರಾಣಿಕ ಸಿನಿಮಾ ಆಗಿರುವುದರಿಂದ ಪ್ರಭಾಸ್​ ಅಭಿಮಾನಿಗಳು ಭಾರಿ ನಿರೀಕ್ಷೆ ಇಟ್ಟುಕೊಂಡಿದ್ದಾರೆ. ಸದ್ಯ ಲಾಕ್​ಡೌನ್​ನಿಂದಾಗಿ ಸಿನಿಮಾದ ಚಿತ್ರೀಕರಣ ಸ್ಥಗಿತಗೊಂಡಿದೆ.

ಇದನ್ನೂ ಓದಿ:

ಬಯಲಾಯ್ತು ಪ್ರಭಾಸ್​-ಪ್ರಶಾಂತ್​ ನೀಲ್​ ‘ಸಲಾರ್’ ಚಿತ್ರದ ಇನ್ನೊಂದು ಸೀಕ್ರೆಟ್​

ಬಿಗ್ ಬಾಸ್​ ಸ್ಪರ್ಧಿಗೆ ಖ್ಯಾತ ತೆಲುಗು ನಟ ಪ್ರಭಾಸ್​ ಜತೆ ನಟಿಸೋ ಅವಕಾಶ

ಮಾನಸಿಕ ಒತ್ತಡ, ಖಿನ್ನತೆ ದೂರ ಮಾಡುತ್ತೆ ಕಿರಣ್: ಏನಿದು ಕಿರಣ್ ಸಹಾಯವಾಣಿ?
ಮಾನಸಿಕ ಒತ್ತಡ, ಖಿನ್ನತೆ ದೂರ ಮಾಡುತ್ತೆ ಕಿರಣ್: ಏನಿದು ಕಿರಣ್ ಸಹಾಯವಾಣಿ?
ಹಸುಗಳಿಗೆ AI ಅನ್ವಯದ ಬಗ್ಗೆ ಮೋದಿ ತುರ್ತು ನಿರ್ಧಾರ;ನಂದನ್ ನಿಲೇಕಣಿ ಬಣ್ಣನೆ
ಹಸುಗಳಿಗೆ AI ಅನ್ವಯದ ಬಗ್ಗೆ ಮೋದಿ ತುರ್ತು ನಿರ್ಧಾರ;ನಂದನ್ ನಿಲೇಕಣಿ ಬಣ್ಣನೆ
ಮಳೆ, ರಾಜ್ಯಕಾರಣದ ಬಗ್ಗೆ ಬಬಲಾದಿ ಕಾಲಜ್ಞಾನ ಸ್ಫೋಟಕ ಭವಿಷ್ಯ
ಮಳೆ, ರಾಜ್ಯಕಾರಣದ ಬಗ್ಗೆ ಬಬಲಾದಿ ಕಾಲಜ್ಞಾನ ಸ್ಫೋಟಕ ಭವಿಷ್ಯ
ಮೈಸೂರು: ಡಾ ಯತೀಂದ್ರ ಕಟೌಟ್ ನಿಲ್ಲಿಸಲು ರಸ್ತೆ ಬ್ಲಾಕ್; ಸವಾರರು ಆಕ್ರೋಶ
ಮೈಸೂರು: ಡಾ ಯತೀಂದ್ರ ಕಟೌಟ್ ನಿಲ್ಲಿಸಲು ರಸ್ತೆ ಬ್ಲಾಕ್; ಸವಾರರು ಆಕ್ರೋಶ
KSRTC, BMTC ಸಾರಿಗೆ ನೌಕರರ ಮುಷ್ಕರ ಏನಾಯ್ತು? ನಾಳೆ ಬಸ್ ಸಂಚಾರ ಇರುತ್ತಾ?
KSRTC, BMTC ಸಾರಿಗೆ ನೌಕರರ ಮುಷ್ಕರ ಏನಾಯ್ತು? ನಾಳೆ ಬಸ್ ಸಂಚಾರ ಇರುತ್ತಾ?
ವಿದ್ಯಾರ್ಥಿಗಳೇ ಪರೀಕ್ಷೆ ಹೊತ್ತಲ್ಲಿ ಭಯ ಬೇಡ.. ನಿಮಗಾಗಿ ಸಿಂಪಲ್ ಟಿಪ್ಸ್
ವಿದ್ಯಾರ್ಥಿಗಳೇ ಪರೀಕ್ಷೆ ಹೊತ್ತಲ್ಲಿ ಭಯ ಬೇಡ.. ನಿಮಗಾಗಿ ಸಿಂಪಲ್ ಟಿಪ್ಸ್
ಯುವತಿಯರಿಗೆ ಪ್ಲೈಯಿಂಗ್ ಕಿಸ್:ಬೀದಿ ಕಾಮಣ್ಣರ ವಿಡಿಯೋ ವೈರಲ್
ಯುವತಿಯರಿಗೆ ಪ್ಲೈಯಿಂಗ್ ಕಿಸ್:ಬೀದಿ ಕಾಮಣ್ಣರ ವಿಡಿಯೋ ವೈರಲ್
ಮಂಗಳೂರಿಗೆ ಹೂಡಿಕೆದಾರರು ಬರುತ್ತಿಲ್ಲ ಎಂದ ಖರ್ಗೆ ವಿರುದ್ಧ ಪೈ ಕಿಡಿ
ಮಂಗಳೂರಿಗೆ ಹೂಡಿಕೆದಾರರು ಬರುತ್ತಿಲ್ಲ ಎಂದ ಖರ್ಗೆ ವಿರುದ್ಧ ಪೈ ಕಿಡಿ
ಆ ಪಾತ್ರದಲ್ಲಿ ನಟಿಸುವ ಶಿವಣ್ಣನ ಆಸೆ ಇನ್ನೂ ಈಡೇರಿಲ್ಲ: ಯಾವುದು ಆ ಪಾತ್ರ?
ಆ ಪಾತ್ರದಲ್ಲಿ ನಟಿಸುವ ಶಿವಣ್ಣನ ಆಸೆ ಇನ್ನೂ ಈಡೇರಿಲ್ಲ: ಯಾವುದು ಆ ಪಾತ್ರ?
ಸರ್ಕಾರದ ಮುಖ್ಯ ಕಾರ್ಯದರ್ಶಿ ವಿರುದ್ಧವೂ 1.60 ಕೋಟಿ ರೂ. ಲಂಚ ಆರೋಪ
ಸರ್ಕಾರದ ಮುಖ್ಯ ಕಾರ್ಯದರ್ಶಿ ವಿರುದ್ಧವೂ 1.60 ಕೋಟಿ ರೂ. ಲಂಚ ಆರೋಪ