AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Prabhas: ಆದಿಪುರುಷ್​ಗಾಗಿ ಬಾಡಿ ಬೆಳೆಸಲು ಸ್ಟಿರಾಯ್ಡ್​ ಬಳಸಿದ್ದಾರಾ ಪ್ರಭಾಸ್​? ಸಹನಟ ತೆರೆದಿಟ್ಟ ಸತ್ಯ ಇಲ್ಲಿದೆ

Adipurush: ಬಾಡಿ ಬಿಲ್ಡ್​ ಮಾಡಲು ಪ್ರಭಾಸ್​ ಯಾವ ಮಾರ್ಗ ಅನುಸರಿಸುತ್ತಿದ್ದಾರೆ? ಡಯೆಟ್​ ಯಾವ ರೀತಿ ಇದೆ ಎಂಬ ಬಗ್ಗೆ ಕೌತುಕ ಮನೆ ಮಾಡಿದೆ. ಈ ಬಗ್ಗೆ ಆದಿಪುರುಷ್​ ಸಿನಿಮಾದ ಇನ್ನೋರ್ವ ನಟ ಸನ್ನಿ​ ಸಿಂಗ್​ ಮಾತನಾಡಿದ್ದಾರೆ.

Prabhas: ಆದಿಪುರುಷ್​ಗಾಗಿ ಬಾಡಿ ಬೆಳೆಸಲು ಸ್ಟಿರಾಯ್ಡ್​ ಬಳಸಿದ್ದಾರಾ ಪ್ರಭಾಸ್​? ಸಹನಟ ತೆರೆದಿಟ್ಟ ಸತ್ಯ ಇಲ್ಲಿದೆ
ಪ್ರಭಾಸ್​ - ಸನ್ನಿ ಸಿಂಗ್​
ಮದನ್​ ಕುಮಾರ್​
|

Updated on: May 22, 2021 | 8:15 AM

Share

ಬಾಹುಬಲಿ ಸಿನಿಮಾಗಾಗಿ ಹಲವು ವರ್ಷಗಳನ್ನು ಮೀಸಲಿಟ್ಟಿದ್ದ ಟಾಲಿವುಡ್ ನಟ​ ಪ್ರಭಾಸ್​ ಅವರು ಈಗ ಬೇಗ ಬೇಗ ಸಿನಿಮಾ ಮಾಡುತ್ತಿದ್ದಾರೆ. ಬ್ಯಾಕ್​ ಟು ಬ್ಯಾಕ್ ಚಿತ್ರಗಳನ್ನು ಒಪ್ಪಿಕೊಂಡು ಅವುಗಳ ಶೂಟಿಂಗ್​ ಮುಗಿಸುತ್ತಿದ್ದಾರೆ. ಒಂದೊಂದು ಸಿನಿಮಾದಲ್ಲಿ ಅವರಿಗೆ ಒಂದೊಂದು ರೀತಿಯ ಗೆಟಪ್​ಗಳಿವೆ. ಸದ್ಯ ಪ್ರಭಾಸ್​ ಕೈಯಲ್ಲಿ ರಾಧೆ ಶ್ಯಾಮ್​, ಆದಿಪುರುಷ್​, ಸಲಾರ್​ ಮುಂತಾದ ಸಿನಿಮಾಗಳಿವೆ. ಈ ಎಲ್ಲ ಪ್ರಾಜೆಕ್ಟ್​ಗಳ ಮೇಲೂ ಅಭಿಮಾನಿಗಳು ಸಿಕ್ಕಾಪಟ್ಟೆ ನಿರೀಕ್ಷೆ ಇಟ್ಟುಕೊಂಡಿದ್ದಾರೆ. ಆದಿಪುರುಷ್​ ಚಿತ್ರದಲ್ಲಿ ಪ್ರಭಾಸ್​ ಅವರು ರಾಮನ ಪಾತ್ರ ಮಾಡುತ್ತಿರುವುದು ವಿಶೇಷ. ಅದಕ್ಕಾಗಿ ಅವರು ಭರ್ಜರಿಯಾಗಿ ಬಾಡಿ ಬಿಲ್ಡ್​ ಮಾಡುತ್ತಿದ್ದಾರೆ.

ಮೊದಲೇ ಹೇಳಿದಂತೆ ಪ್ರಭಾಸ್​ ನಟನೆಯ ಎಲ್ಲ ಸಿನಿಮಾಗಳ ಕೆಲಸಗಳು ವೇಗವಾಗಿ ಸಾಗುತ್ತಿವೆ. ಎಲ್ಲ ಪಾತ್ರಗಳಿಗಾಗಿಯೂ ಅವರು ಬೇಗ ಬೇಗ ಸಿದ್ಧರಾಗುತ್ತಿದ್ದಾರೆ. ಆದಿಪುರುಷ್​ ಚಿತ್ರಕ್ಕಾಗಿ ಅವರು ಕಟ್ಟುಮಸ್ತಾಗಿ ಬಾಡಿ ಬೆಳೆಸುತ್ತಿದ್ದು, ಆ ಬಗ್ಗೆಯೂ ಅಭಿಮಾನಿಗಳಿಗೆ ಕುತೂಹಲ ಇದೆ. ಬಾಡಿ ಬಿಲ್ಡ್​ ಮಾಡಲು ಪ್ರಭಾಸ್​ ಯಾವ ಮಾರ್ಗ ಅನುಸರಿಸುತ್ತಿದ್ದಾರೆ? ಡಯೆಟ್​ ಯಾವ ರೀತಿ ಇದೆ ಎಂಬ ಬಗ್ಗೆಯೂ ಕೌತುಕ ಮನೆ ಮಾಡಿದೆ. ಈ ಬಗ್ಗೆ ಈ ಸಿನಿಮಾದ ಇನ್ನೋರ್ವ ನಟ ಸನ್ನಿ​ ಸಿಂಗ್​ ಮಾತನಾಡಿದ್ದಾರೆ.

‘ಈ ಸಿನಿಮಾಗಾಗಿ ನಾವು ಕಠಿಣ ಡಯೆಟ್​ ಮಾಡುತ್ತಿದ್ದೇವೆ. ಶೇ.50 ಕಾರ್ಬ್ಸ್​ ಹಾಗೂ ಶೇ.50 ಪ್ರೋಟೀನ್​ ಸೇವಿಸುತ್ತಿದ್ದೇವೆ. ಪ್ರತಿ ದಿನ 15 ಅಥವಾ 10 ಮೊಟ್ಟೆ ತಿನ್ನುತ್ತಿದ್ದೇನೆ. ಈ ಚಿತ್ರದಲ್ಲಿ ನಾನು ಮತ್ತು ಪ್ರಭಾಸ್​ ಕಟ್ಟುಮಸ್ತಾಗಿ ಕಾಣಬೇಕಿದೆ. ಪಾತ್ರಕ್ಕೆ ಅದು ಅನಿವಾರ್ಯವಾಗಿದೆ. ಯಾವುದೇ ಸ್ಟಿರಾಯ್ಡ್​ ಅಥವಾ ಸಪ್ಲಿಮೆಂಟ್​ಗಳನ್ನು ನಾವು ಬಳಸುತ್ತಿಲ್ಲ. ತುಂಬ ನ್ಯಾಚುರಲ್​ ಆಗಿ ಬಾಡಿ ಬೆಳೆಸುತ್ತಿದ್ದೇವೆ’ ಎಂದು ಸನ್ನಿ ಸಿಂಗ್​ ಹೇಳಿದ್ದಾರೆ. ಈ ಚಿತ್ರದಲ್ಲಿ ಅವರು ಲಕ್ಷ್ಮಣನ ಪಾತ್ರ ಮಾಡುತ್ತಿದ್ದಾರೆ.

‘ತಾನಾಜಿ: ದಿ ಅನ್​ಸಂಗ್​ ವಾರಿಯರ್​’ ಸಿನಿಮಾ ಮೂಲಕ ಭಾರಿ ಯಶಸ್ಸು ಪಡೆದ ನಿರ್ದೇಶಕ ಓಂ ರಾವುತ್​ ಅವರು ‘ಆದಿಪುರುಷ್​’ ಚಿತ್ರಕ್ಕೆ ಆ್ಯಕ್ಷನ್​-ಕಟ್​ ಹೇಳುತ್ತಿದ್ದಾರೆ. ರಾಮನಾಗಿ ಪ್ರಭಾಸ್​ ನಟಿಸಿದರೆ, ಸೀತೆಯಾಗಿ ಕೃತಿ ಸನೋನ್​ ಕಾಣಿಸಿಕೊಳ್ಳಲಿದ್ದಾರೆ. ರಾವಣನಾಗಿ ಸೈಫ್​ ಅಲಿ ಖಾನ್​ ಅಭಿನಯಿಸುತ್ತಿದ್ದಾರೆ. ಇನ್ನೂ ಹಲವು ಕಲಾವಿದರ ಹೆಸರು ಕೇಳಿಬರುತ್ತಿದೆ. ಆದರೆ ಆ ಬಗ್ಗೆ ಚಿತ್ರತಂಡ ಅಧಿಕೃತವಾಗಿ ಏನನ್ನೂ ಹೇಳಿಲ್ಲ. ಇದೊಂದು ಪೌರಾಣಿಕ ಸಿನಿಮಾ ಆಗಿರುವುದರಿಂದ ಪ್ರಭಾಸ್​ ಅಭಿಮಾನಿಗಳು ಭಾರಿ ನಿರೀಕ್ಷೆ ಇಟ್ಟುಕೊಂಡಿದ್ದಾರೆ. ಸದ್ಯ ಲಾಕ್​ಡೌನ್​ನಿಂದಾಗಿ ಸಿನಿಮಾದ ಚಿತ್ರೀಕರಣ ಸ್ಥಗಿತಗೊಂಡಿದೆ.

ಇದನ್ನೂ ಓದಿ:

ಬಯಲಾಯ್ತು ಪ್ರಭಾಸ್​-ಪ್ರಶಾಂತ್​ ನೀಲ್​ ‘ಸಲಾರ್’ ಚಿತ್ರದ ಇನ್ನೊಂದು ಸೀಕ್ರೆಟ್​

ಬಿಗ್ ಬಾಸ್​ ಸ್ಪರ್ಧಿಗೆ ಖ್ಯಾತ ತೆಲುಗು ನಟ ಪ್ರಭಾಸ್​ ಜತೆ ನಟಿಸೋ ಅವಕಾಶ

Follow Us
Madan Kumar
Madan Kumar

ಮಾಧ್ಯಮ ಲೋಕದಲ್ಲಿ ಕಳೆದ 10 ವರ್ಷಗಳಿಂದ ಸಕ್ರಿಯವಾಗಿದ್ದೇನೆ. ಕನ್ನಡದ ವಿವಿಧ ಪ್ರತಿಷ್ಠಿತ ಮಾಧ್ಯಮಗಳಲ್ಲಿ ಕೆಲಸ ಮಾಡಿದ ಅನುಭವ ಹೊಂದಿದ್ದೇನೆ. ಸಿನಿಮಾ ವರದಿಗಾರಿಕೆ ಮತ್ತು ವಿಮರ್ಶೆಯಲ್ಲಿ ಪರಿಣತಿ ಇದೆ. 2014ರಿಂದ 2019ರ ತನಕ ವಿಜಯವಾಣಿ ದಿನ ಪತ್ರಿಕೆಯಲ್ಲಿ ಸಿನಿಮಾ ವರದಿಗಾರನಾಗಿ ಕೆಲಸ ಮಾಡಿ ಅನುಭವ ಪಡೆದಿದ್ದೇನೆ. ಬಳಿಕ ವಿಜಯ ಕರ್ನಾಟಕ ಡಿಜಿಟಲ್ (ಟೈಮ್ಸ್​ ಇಂಟರ್​ನೆಟ್​) ಸಂಸ್ಥೆಯಲ್ಲಿ ಕಂಟೆಂಟ್​ ಪ್ರೊಡ್ಯೂಸರ್​ ಆಗಿ ಕೆಲಸ ಮಾಡಿದ್ದೇನೆ. ಪ್ರಸ್ತುತ ‘ಟಿವಿ9 ಕನ್ನಡ ಡಿಜಿಟಲ್​’ನ ಸಿನಿಮಾ/ಮನರಂಜನೆ ವಿಭಾಗದಲ್ಲಿ ಕೆಲಸ ಮಾಡುತ್ತಿದ್ದೇನೆ. ಎಲ್ಲ ಭಾಷೆಯ ಸಿನಿಮಾಗಳ ವೀಕ್ಷಣೆಯಲ್ಲಿ ಆಸಕ್ತಿ ಇದೆ. ಸದಾ ಕನ್ನಡ-ಇಂಗ್ಲಿಷ್​ ಸಾಹಿತ್ಯದ ವಿದ್ಯಾರ್ಥಿ.

Read More
ದಿಢೀರ್​​ ಜಮೀರ್​ ಅಹ್ಮದ್​​ ಭೇಟಿಯಾದ ಡಿ.ಕೆ. ಸುರೇಶ್
ದಿಢೀರ್​​ ಜಮೀರ್​ ಅಹ್ಮದ್​​ ಭೇಟಿಯಾದ ಡಿ.ಕೆ. ಸುರೇಶ್
ಸಿದ್ದರಾಮಯ್ಯ ಹಾಗೂ ವಿದೇಶಾಂಗ ಸಚಿವ ಎಸ್ ಜೈಶಂಕರ್ ಆಕಸ್ಮಿಕ ಭೇಟಿ!
ಸಿದ್ದರಾಮಯ್ಯ ಹಾಗೂ ವಿದೇಶಾಂಗ ಸಚಿವ ಎಸ್ ಜೈಶಂಕರ್ ಆಕಸ್ಮಿಕ ಭೇಟಿ!
ಕಬಿನಿ ಹಿನ್ನೀರಿನಲ್ಲಿ ಆಹಾರ ಸಿಗದೆ ಆನೆಗಳ ಪರದಾಟ: ಮಳೆ ಕೊರತೆಯಿಂದ ಸಮಸ್ಯೆ
ಕಬಿನಿ ಹಿನ್ನೀರಿನಲ್ಲಿ ಆಹಾರ ಸಿಗದೆ ಆನೆಗಳ ಪರದಾಟ: ಮಳೆ ಕೊರತೆಯಿಂದ ಸಮಸ್ಯೆ
ಹೊಸಕೋಟೆ: ಕಣ್ಣೂರಹಳ್ಳಿ ರಸ್ತೆಯಲ್ಲಿ 23 ನಾಗರಹಾವು ಮರಿಗಳ ಪತ್ತೆ!
ಹೊಸಕೋಟೆ: ಕಣ್ಣೂರಹಳ್ಳಿ ರಸ್ತೆಯಲ್ಲಿ 23 ನಾಗರಹಾವು ಮರಿಗಳ ಪತ್ತೆ!
ಕರ್ಕಾಟಕ ರಾಶಿಗೆ ಗುರು ಪ್ರವೇಶ; 12ರಾಶಿಗಳ ಮೇಲೆ ಇದರ ಪ್ರಭಾವ ಹೇಗಿರಲಿದೆ?
ಕರ್ಕಾಟಕ ರಾಶಿಗೆ ಗುರು ಪ್ರವೇಶ; 12ರಾಶಿಗಳ ಮೇಲೆ ಇದರ ಪ್ರಭಾವ ಹೇಗಿರಲಿದೆ?
ವಿಶ್ವ ದಾಖಲೆ... ಒಂದೇ ಓವರ್‌ನಲ್ಲಿ ೬ ಸಿಕ್ಸ್ ಸಿಡಿಸಿದ ಕುಶಾಲ್!
ವಿಶ್ವ ದಾಖಲೆ... ಒಂದೇ ಓವರ್‌ನಲ್ಲಿ ೬ ಸಿಕ್ಸ್ ಸಿಡಿಸಿದ ಕುಶಾಲ್!
ಕೈಯಿಂದ ಪದೇ ಪದೇ ಎಣ್ಣೆ, ಹಾಲು ಜಾರಿಬಿದ್ರೆ ಏನರ್ಥ?
ಕೈಯಿಂದ ಪದೇ ಪದೇ ಎಣ್ಣೆ, ಹಾಲು ಜಾರಿಬಿದ್ರೆ ಏನರ್ಥ?
ಇಂದು ಈ ರಾಶಿಯವರು ಆರ್ಥಿಕ ವಿಷಯಗಳಲ್ಲಿ ಎಚ್ಚರಿಕೆ ವಹಿಸಬೇಕು
ಇಂದು ಈ ರಾಶಿಯವರು ಆರ್ಥಿಕ ವಿಷಯಗಳಲ್ಲಿ ಎಚ್ಚರಿಕೆ ವಹಿಸಬೇಕು
ಡಿಕೆ ಶಿವಕುಮಾರ್ ಜತೆ ಸಂಪುಟ ಸೇರೋ ಸಂಭಾವ್ಯ ಸಚಿವರ ಪಟ್ಟಿ ಇಲ್ಲಿದೆ
ಡಿಕೆ ಶಿವಕುಮಾರ್ ಜತೆ ಸಂಪುಟ ಸೇರೋ ಸಂಭಾವ್ಯ ಸಚಿವರ ಪಟ್ಟಿ ಇಲ್ಲಿದೆ
‘ಮ್ಯಾಂಗೋ ಪಚ್ಚ’ ಚಿತ್ರದಲ್ಲಿ ಕಿಚ್ಚ ಸುದೀಪ್​ಗೆ ನೀಡಲಾಗಿದೆ ಟ್ರಿಬ್ಯೂಟ್
‘ಮ್ಯಾಂಗೋ ಪಚ್ಚ’ ಚಿತ್ರದಲ್ಲಿ ಕಿಚ್ಚ ಸುದೀಪ್​ಗೆ ನೀಡಲಾಗಿದೆ ಟ್ರಿಬ್ಯೂಟ್