AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕಟೀಲು ದುರ್ಗಾಪರಮೇಶ್ವರಿ ದೇವಾಲಯಕ್ಕೆ ಪ್ರಭಾಸ್ ಭೇಟಿ: ಕಾರಣವೇನು?

Prabhas: ‘ಸಲಾರ್’ ಸಿನಿಮಾದ ಗೆಲುವಿನ ಖುಷಿಯಲ್ಲಿರುವ ನಟ ಪ್ರಭಾಸ್, ದಕ್ಷಿಣ ಕನ್ನಡ ಜಿಲ್ಲೆಯ ಕಟೀಲಿನ ದುರ್ಗಾಪರಮೇಶ್ವರಿ ದೇವಾಲಯಕ್ಕೆ ಭೇಟಿ ನೀಡಿದ್ದಾರೆ.

ಕಟೀಲು ದುರ್ಗಾಪರಮೇಶ್ವರಿ ದೇವಾಲಯಕ್ಕೆ ಪ್ರಭಾಸ್ ಭೇಟಿ: ಕಾರಣವೇನು?
ಪ್ರಭಾಸ್
ಮಂಜುನಾಥ ಸಿ.
|

Updated on:Jan 12, 2024 | 6:17 PM

Share

ಕೆಲ ವರ್ಷಗಳಿಂದ ಬ್ಲಾಕ್ ಬಸ್ಟರ್ (Block Buster) ಸಿನಿಮಾ ನೀಡಲಾಗದೆ ಸತತ ಸೋಲು ಕಂಡಿದ್ದ ಪ್ರಭಾಸ್ (Prabhas) ಇದೀಗ ‘ಸಲಾರ್’ ಸಿನಿಮಾದ ಗೆಲುವಿನ ಮೂಲಕ ಮತ್ತೆ ಜಯದ ಹಳಿಗೆ ಮರಳಿದ್ದಾರೆ. ‘ಸಲಾರ್’ ಸಿನಿಮಾ ತಂಡ ಕೆಲವು ದಿನಗಳ ಹಿಂದಷ್ಟೆ ಸಿನಿಮಾದ ಗೆಲುವಿನ ಸಂಭ್ರಮ ಆಚರಣೆ ಮಾಡಿದೆ. ಇದೇ ಖುಷಿಯಲ್ಲಿ ಇದೀಗ ಪ್ರಭಾಸ್ ಕರ್ನಾಟಕದ ಕಟೀಲು ದುರ್ಗಾಪರಮೇಶ್ವರಿ ದೇವಾಲಯಕ್ಕೆ ಭೇಟಿ ನೀಡಿದ್ದಾರೆ. ಪ್ರಭಾಸ್, ಶುಕ್ರವಾರದಂದು ದಕ್ಷಿಣ ಕನ್ನಡ ಜಿಲ್ಲೆಯ ಕಟೀಲು ಕ್ಷೇತ್ರದ ದುರ್ಗಾಪರಮೇಶ್ವರಿ ದೇವಾಲಯಕ್ಕೆ ಭೇಟಿ ನೀಡಿ ವಿಶೇಷ ಪೂಜೆ ಸಲ್ಲಿಸಿದರು. ಈ ಸಂದರ್ಭದಲ್ಲಿ ಹೊಂಬಾಳೆ ನಿರ್ಮಾಣ ಸಂಸ್ಥೆಯ ಮಾಲೀಕ ‘ಸಲಾರ್’ ಸಿನಿಮಾದ ನಿರ್ಮಾಪಕ ವಿಜಯ್ ಕಿರಗಂದೂರು ಸಹ ಪ್ರಭಾಸ್​ರ ಜೊತೆಗಿದ್ದರು. ದುರ್ಗಾಪರಮೇಶ್ವರಿ ದೇವಿಗೆ ವಿಶೇಷ ಪೂಜೆ ಸಲ್ಲಿಸಿ ಆಶೀರ್ವಾದ ಪಡೆದ ಪ್ರಭಾಸ್​ಗೆ ದೇವಾಲಯದ ವತಿಯಿಂದ ದೇವಿಯ ವಿಗ್ರಹ ನೀಡಿ ಗೌರವ ಸಲ್ಲಿಸಲಾಗಿದೆ.

ನಿರ್ಮಾಪಕ ವಿಜಯ್ ಕಿರಗಂದೂರು ಅವರು ದುರ್ಗಾಪರಮೇಶ್ವರಿಯ ಪರಮ ಭಕ್ತರು. ಕಿರಗಂದೂರು ಅವರು ಹಲವು ಭಾರಿ ಕಟೀಲಿಗೆ ಭೇಟಿ ನೀಡಿ ದೇವಿಯ ದರ್ಶನ ಪಡೆದಿದ್ದಾರೆ. ‘ಸಲಾರ್’ ಸಿನಿಮಾ ಗೆದ್ದ ಬಳಿಕ ಇದೀಗ ಪ್ರಭಾಸ್ ಅವರನ್ನೂ ಜೊತೆಗೆ ಕರೆತಂದು ದೇವಿಯ ದರ್ಶನ ಮಾಡಿದ್ದಾರೆ.

ಪ್ರಭಾಸ್ ಸಹ ದೈವ ಭಕ್ತರು. ಅವರ ಕುಟುಂಬ ಕಾಳಹಸ್ತಿಯ ಶ್ರೀಕಾಲಹಸ್ತೀಶ್ವರ ದೇವಾಲಯಕ್ಕೆ ದಶಕಗಳಿಂದಲೂ ನಡೆದುಕೊಂಡು ಬಂದಿದ್ದಾರೆ. ಪ್ರಭಾಸ್​ರ ದೊಡ್ಡಪ್ಪನವರಿಗೆ ಪ್ರಭಾಸ್, ಕಾಲಹಸ್ತೀಶ್ವರನ ಸಿನಿಮಾದಲ್ಲಿ ನಟಿಸಬೇಕೆಂಬ ಆಸೆ ಇತ್ತಂತೆ. ಇದೇ ಕಾರಣಕ್ಕೆ ಈಗ ತೆಲುಗಿನಲ್ಲಿ ನಿರ್ಮಾಣವಾಗುತ್ತಿರುವ ‘ಕಣ್ಣಪ್ಪ’ ಸಿನಿಮಾದ ಅತಿಥಿ ಪಾತ್ರದಲ್ಲಿ ನಟಸಲಿದ್ದಾರೆ ಎನ್ನಲಾಗುತ್ತಿದೆ. ಇತ್ತೀಚೆಗಷ್ಟೆ ಪ್ರಭಾಸ್, ‘ಆದಿಪುರುಷ’ ಸಿನಿಮಾದಲ್ಲಿ ಶ್ರೀರಾಮನ ಪಾತ್ರದಲ್ಲಿ ನಟಿಸಿದ್ದರು. ಆದರೆ ಸಿನಿಮಾ ಹಿಟ್ ಎನಿಸಿಕೊಳ್ಳಲಿಲ್ಲ.

ಇದನ್ನೂ ಓದಿ:ಪ್ರಭಾಸ್ ಸಿನಿಮಾಗಳನ್ನು ಆಯ್ಕೆ ಮಾಡಿಕೊಳ್ಳುವುದು ಹೇಗೆ?

ಪ್ರಭಾಸ್​, ‘ಬಾಹುಬಲಿ’ ಸಿನಿಮಾದ ಬಳಿಕ ನಟಿಸಿದ ಎಲ್ಲ ಸಿನಿಮಾಗಳ್ಯಾವುವೂ ಸಹ ಬ್ಲಾಕ್ ಬಸ್ಟರ್ ಎನಿಸಿಕೊಳ್ಳಲಿಲ್ಲ. ‘ಸಾಹೋ’, ‘ರಾಧೆ-ಶ್ಯಾಮ್’, ‘ಆದಿಪುರಷ’ ಸಿನಿಮಾಗಳು ಪ್ರೇಕ್ಷಕರ ಮೆಚ್ಚುಗೆ ಗಳಿಸಿರಲಿಲ್ಲ. ಆದರೆ ಡಿಸೆಂಬರ್​ನಲ್ಲಿ ಬಿಡುಗಡೆ ಆದ ‘ಸಲಾರ್’ ಸಿನಿಮಾ ಬ್ಲಾಕ್ ಬಸ್ಟರ್ ಎನಿಸಿಕೊಂಡಿದ್ದು, ಹಲವು ವರ್ಷಗಳ ಬಳಿಕ ಪ್ರಭಾಸ್ ಗೆಲುವಿನ ಹಾದಿಗೆ ಮರಳಿದ್ದಾರೆ.

ಪ್ರಭಾಸ್ ಪ್ರಸ್ತುತ ‘ಕಲ್ಕಿ 2989’ ಸಿನಿಮಾದಲ್ಲಿ ನಟಿಸುತ್ತಿದ್ದಾರೆ. ಸಿನಿಮಾದ ಚಿತ್ರೀಕರಣ ಬಹುತೇಕ ಅಂತ್ಯಗೊಂಡಿದ್ದು, ಸಿನಿಮಾ ಏಪ್ರಿಲ್ ತಿಂಗಳಲ್ಲಿ ಬಿಡುಗಡೆ ಆಗಲಿದೆ. ಆ ಸಿನಿಮಾದ ಜೊತೆಗೆ ನಿರ್ದೇಶಕ ಮಾರುತಿ ನಿರ್ದೇಶಿಸುತ್ತಿರುವ ಹಾರರ್ ಥ್ರಿಲ್ಲರ್ ಸಿನಿಮಾ ಒಂದರಲ್ಲಿ ನಟಿಸಲು ಆರಂಭಿಸಿದ್ದಾರೆ. ಆ ಸಿನಿಮಾ ಅಂತ್ಯವಾಗುತ್ತಿದ್ದಂತೆ ಸಂದೀಪ್ ರೆಡ್ಡಿ ವಂಗಾ ನಿರ್ದೇಶನದ ‘ಸ್ಪಿರಿಟ್’ ಸಿನಿಮಾದಲ್ಲಿ ನಟಿಸಲಿದ್ದಾರೆ.

ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Published On - 6:12 pm, Fri, 12 January 24

Follow Us
ಮಂಜುನಾಥ ಸಿ.
ಮಂಜುನಾಥ ಸಿ.

ಮಂಜುನಾಥ ಸಿ, ಬೆಂಗಳೂರು ಗ್ರಾಮಾಂತರ, ವಿಜಯರಪುರ ಪಟ್ಟಣ ನಿವಾಸಿ. ಕಳೆದ ಏಳು ವರ್ಷಗಳಿಂದ ಪತ್ರಿಕೋದ್ಯಮದಲ್ಲಿ ಸಕ್ರಿಯನಾಗಿದ್ದೇನೆ. ಕಳೆದ ಐದು ವರ್ಷದಿಂದ ಡಿಜಿಟಲ್ ಪತ್ರಿಕೋದ್ಯಮದಲ್ಲಿ ತೊಡಗಿಕೊಂಡಿದ್ದೇನೆ. ಈ ಹಿಂದೆ ಪ್ರಜಾವಾಣಿ, ಒನ್ ಇಂಡಿಯಾ ಕನ್ನಡ ಸಂಸ್ಥೆಗಳ ವಿವಿಧ ವಿಭಾಗಗಳಲ್ಲಿ ಕೆಲಸ ಮಾಡಿದ್ದೇನೆ. ಪ್ರಸ್ತುತ ಟಿವಿ9 ಕನ್ನಡ ಡಿಜಿಟಲ್​ನ ಸಿನಿಮಾ ವಿಭಾಗದಲ್ಲಿ ಕೆಲಸ ಮಾಡುತ್ತಿದ್ದೇನೆ. ಮೆಚ್ಚಿನ ಹವ್ಯಾಸ ಸಿನಿಮಾ ವೀಕ್ಷಣೆ, ಪುಸ್ತಕಗಳನ್ನು ಓದುವುದು.

Read More
ಗಂಡು ಮಕ್ಕಳಿಗೆ ಕಿವಿ ಚುಚ್ಚಿಸುವುದು ಯಾಕೆ ಗೊತ್ತಾ?
ಗಂಡು ಮಕ್ಕಳಿಗೆ ಕಿವಿ ಚುಚ್ಚಿಸುವುದು ಯಾಕೆ ಗೊತ್ತಾ?
ಇಂದು ಈ ರಾಶಿಯವರ ಆರ್ಥಿಕ ವಿಷಯದಲ್ಲಿ ಸ್ವಲ್ಪ ತೊಂದರೆ ಕಾಡಬಹುದು
ಇಂದು ಈ ರಾಶಿಯವರ ಆರ್ಥಿಕ ವಿಷಯದಲ್ಲಿ ಸ್ವಲ್ಪ ತೊಂದರೆ ಕಾಡಬಹುದು
ಎತ್ತಿನ ಬದಲು ಹೆಂಡತಿಯನ್ನೇ ನೊಗಕ್ಕೆ ಕಟ್ಟಿ ಹೊಲ ಉಳುಮೆ ಮಾಡಿದ ರೈತ!
ಎತ್ತಿನ ಬದಲು ಹೆಂಡತಿಯನ್ನೇ ನೊಗಕ್ಕೆ ಕಟ್ಟಿ ಹೊಲ ಉಳುಮೆ ಮಾಡಿದ ರೈತ!
ಧರ್ಮಸ್ಥಳಕ್ಕೆ ಕಳಂಕ ತರಲು ಗ್ಯಾಂಗ್ ಹುನ್ನಾರ:ಚಿನ್ನಯ್ಯನಿಂದ ಸ್ಫೋಟಕ ಮಾಹಿತಿ
ಧರ್ಮಸ್ಥಳಕ್ಕೆ ಕಳಂಕ ತರಲು ಗ್ಯಾಂಗ್ ಹುನ್ನಾರ:ಚಿನ್ನಯ್ಯನಿಂದ ಸ್ಫೋಟಕ ಮಾಹಿತಿ
‘ನಾಗುಗೆ ವಧು ಬೇಕಾಗಿದೆ’ ಟೈಟಲ್ ವಿಶೇಷತೆ ಬಗ್ಗೆ ವಿವರಿಸಿದ ನಿರ್ದೇಶಕ ಚೇತನ್
‘ನಾಗುಗೆ ವಧು ಬೇಕಾಗಿದೆ’ ಟೈಟಲ್ ವಿಶೇಷತೆ ಬಗ್ಗೆ ವಿವರಿಸಿದ ನಿರ್ದೇಶಕ ಚೇತನ್
ಗೊರಗುಂಟೆಪಾಳ್ಯ ಭೀಕರ ರಸ್ತೆ ಅಪಘಾತ: ಸ್ಫೋಟಕ ಮಾಹಿತಿ ನೀಡಿದ ಡಿಸಿಪಿ
ಗೊರಗುಂಟೆಪಾಳ್ಯ ಭೀಕರ ರಸ್ತೆ ಅಪಘಾತ: ಸ್ಫೋಟಕ ಮಾಹಿತಿ ನೀಡಿದ ಡಿಸಿಪಿ
ಗೃಹಲಕ್ಷ್ಮೀ ಯೋಜನೆ ಪರಿಷ್ಕರಣೆ: 3.89 ಲಕ್ಷ ಜನ ಸ್ಕೀಂನಿಂದ ಔಟ್!
ಗೃಹಲಕ್ಷ್ಮೀ ಯೋಜನೆ ಪರಿಷ್ಕರಣೆ: 3.89 ಲಕ್ಷ ಜನ ಸ್ಕೀಂನಿಂದ ಔಟ್!
ವಿಡಿಯೋ: ಸಿನಿಮಾಗಳಲ್ಲಿ ಆಕ್ಷನ್ ದೃಶ್ಯ ಎಷ್ಟು ಕಷ್ಟವಾಗಿರುತ್ತೆ ನೋಡಿ
ವಿಡಿಯೋ: ಸಿನಿಮಾಗಳಲ್ಲಿ ಆಕ್ಷನ್ ದೃಶ್ಯ ಎಷ್ಟು ಕಷ್ಟವಾಗಿರುತ್ತೆ ನೋಡಿ
ಬೈಕ್​​​ಗೆ ಗುದ್ದಿ ನೇರವಾಗಿ ಅಡಿಕೆ ತೋಟಕ್ಕೆ ನುಗ್ಗಿದ KSRTC ಬಸ್
ಬೈಕ್​​​ಗೆ ಗುದ್ದಿ ನೇರವಾಗಿ ಅಡಿಕೆ ತೋಟಕ್ಕೆ ನುಗ್ಗಿದ KSRTC ಬಸ್
ಮತದಾನವಿಲ್ಲದೇ ಕರ್ನಾಟಕದಿಂದ ನಾಲ್ವರು ರಾಜ್ಯಸಭೆಗೆ ಅವಿರೋಧವಾಗಿ ಆಯ್ಕೆ
ಮತದಾನವಿಲ್ಲದೇ ಕರ್ನಾಟಕದಿಂದ ನಾಲ್ವರು ರಾಜ್ಯಸಭೆಗೆ ಅವಿರೋಧವಾಗಿ ಆಯ್ಕೆ