AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ನಗೆಪಾಟಲಿಗೆ ಈಡಾದ ಮೈಸೂರಿನ ಪ್ರಭಾಸ್​ ಪ್ರತಿಮೆ; ತಕ್ಷಣ ತೆಗೆಸಲು ಮುಂದಾದ ‘ಬಾಹುಬಲಿ’ ನಿರ್ಮಾಪಕರು

Prabhas Wax Statue: ‘ಬಾಹುಬಲಿ’ ಸಿನಿಮಾದ ನಿರ್ಮಾಪಕ ಶೋಭು ಯರ್ಲಗಡ್ಡ ಅವರು ಈ ಬಗ್ಗೆ ಪ್ರತಿಕ್ರಿಯಿಸಿದ್ದಾರೆ. ‘ಇದು ಸೂಕ್ತವಾಗಿ ಅನುಮತಿ ಪಡೆದು ಮಾಡಿದ ಕೆಲಸ ಅಲ್ಲ. ನಮ್ಮ ಗಮನಕ್ಕೆ ಬಾರದಂತೆ, ಅನುಮತಿಯನ್ನೂ ಪಡೆಯದೇ ಇದನ್ನು ಮಾಡಲಾಗಿದೆ. ಇದನ್ನು ತೆಗೆಸಲು ಕೂಡಲೇ ಕ್ರಮ ಕೈಗೊಳ್ಳಲಾಗುವುದು’ ಎಂದು ಅವರು ಪೋಸ್ಟ್​ ಮಾಡಿದ್ದಾರೆ.

ನಗೆಪಾಟಲಿಗೆ ಈಡಾದ ಮೈಸೂರಿನ ಪ್ರಭಾಸ್​ ಪ್ರತಿಮೆ; ತಕ್ಷಣ ತೆಗೆಸಲು ಮುಂದಾದ ‘ಬಾಹುಬಲಿ’ ನಿರ್ಮಾಪಕರು
ಪ್ರಭಾಸ್​ ಮೇಣದ ಪ್ರತಿಮೆ
ಮದನ್​ ಕುಮಾರ್​
|

Updated on: Sep 26, 2023 | 12:49 PM

Share

ಸದ್ಯಕ್ಕಂತೂ ಪ್ರಭಾಸ್​ (Prabhas) ಅವರ ಟೈಮ್ ಅಷ್ಟೇನೂ ಚೆನ್ನಾಗಿಲ್ಲ ಎಂದೇ ಹೇಳಬಹುದು. ಅವರು ಏನೇ ಮಾಡಿದರೂ ಟ್ರೋಲ್​ ಆಗುತ್ತಿದ್ದಾರೆ. ‘ಸಾಹೋ’, ‘ರಾಧೆ ಶ್ಯಾಮ್​’, ‘ಆದಿಪುರುಷ್​’ ಸಿನಿಮಾಗಳ ಸೋಲಿನಿಂದ ಅವರು ಚಾರ್ಮ್​ ತಗ್ಗಿದೆ. ಫಿಟ್ನೆಸ್​ ಕಳೆದುಕೊಂಡಿದ್ದಾರೆ ಎಂಬ ವಿಚಾರದಲ್ಲೂ ಅವರನ್ನು ನೆಟ್ಟಿಗರು ಟೀಕಿಸಿದ್ದುಂಟು. ಅದೂ ಸಾಲದೆಂಬಂತೆ, ಈಗ ಅವರ ಪ್ರತಿಮೆ ಕೂಡ ಟ್ರೋಲ್​ಗೆ ಒಳಗಾಗುತ್ತಿದೆ. ಅದು ಕೂಡ ಮೈಸೂರಿನಲ್ಲಿ! ಹೌದು, ಮೈಸೂರಿನಲ್ಲಿ ಪ್ರಭಾಸ್​ ಅವರ ಮೇಣದ (Prabhas Wax Statue) ಪ್ರತಿಮೆ ಮಾಡಲಾಗಿದೆ. ಅದು ಸರಿಯಾದ ರೂಪ ಮತ್ತು ಆಕಾರದಲ್ಲಿ ಇಲ್ಲ ಎಂಬ ಕಾರಣಕ್ಕೆ ಅನೇಕರು ಸೋಶಿಯಲ್​ ಮೀಡಿಯಾದಲ್ಲಿ ಟ್ರೋಲ್​ ಮಾಡಿದ್ದಾರೆ. ಅದಕ್ಕೆ ‘ಬಾಹುಬಲಿ’ (Baahubali) ಸಿನಿಮಾ ನಿರ್ಮಾಪಕರು ಪ್ರತಿಕ್ರಿಯೆ ನೀಡಿದ್ದಾರೆ.

ಮೈಸೂರಿನಲ್ಲಿ ಸೆಲೆಬ್ರಿಟಿ ವ್ಯಾಕ್ಸ್​ ಮ್ಯೂಸಿಯಂ ಇದೆ. ಇಲ್ಲಿ ಅನೇಕ ನಟ-ನಟಿಯರ ಮೇಣದ ಪ್ರತಿಮೆಯನ್ನು ಮಾಡಿ ಇಡಲಾಗಿದೆ. ಪ್ರಭಾಸ್​ ಅವರು ‘ಬಾಹುಬಲಿ’ ಸಿನಿಮಾದ ಗೆಟಪ್​ನಲ್ಲಿ ನಿಂತಿರುವ ಪ್ರತಿಮೆಯನ್ನು ಇಲ್ಲಿ ತಯಾರಿಸಲಾಗಿದೆ. ‘ಬಾಹುಬಲಿ’ ಪಾತ್ರದ ಕಾಸ್ಟ್ಯೂಮ್​ ನೋಡಿದರೆ ಮಾತ್ರ ಇದು ಪ್ರಭಾಸ್​ ಪ್ರತಿಮೆ ಎಂಬುದು ಗೊತ್ತಾಗುತ್ತದೆ. ಇಲ್ಲದಿದ್ದರೆ ಯಾವುದೇ ಕಾರಣಕ್ಕೂ ಅದನ್ನು ಪ್ರಭಾಸ್​ ಪ್ರತಿಮೆ ಅಂತ ಗುರುತಿಸುವುದು ಕಷ್ಟ. ಆ ಕಾರಣದಿಂದ ನೆಟ್ಟಿಗರು ಈ ಪ್ರತಿಮೆಯನ್ನು ಟ್ರೋಲ್​ ಮಾಡಿದ್ದಾರೆ.

‘ಬಾಹುಬಲಿ’ ಸಿನಿಮಾದ ನಿರ್ಮಾಪಕ ಶೋಭು ಯರ್ಲಗಡ್ಡ ಅವರು ಈ ಬಗ್ಗೆ ಪ್ರತಿಕ್ರಿಯಿಸಿದ್ದಾರೆ. ‘ಇದು ಸೂಕ್ತವಾಗಿ ಅನುಮತಿ ಪಡೆದು ಮಾಡಿರುವ ಕೆಲಸ ಅಲ್ಲ. ನಮ್ಮ ಗಮನಕ್ಕೆ ಬಾರದಂತೆ, ಅನುಮತಿಯನ್ನೂ ಪಡೆಯದೇ ಇದನ್ನು ಮಾಡಲಾಗಿದೆ. ಇದನ್ನು ತೆಗೆಸಲು ಕೂಡಲೇ ಕ್ರಮ ಕೈಗೊಳ್ಳಲಾಗುವುದು’ ಎಂದು ಅವರು ಸೋಶಿಯಲ್​ ಮೀಡಿಯಾದಲ್ಲಿ ಪೋಸ್ಟ್​ ಮಾಡಿದ್ದಾರೆ. ಸದ್ಯಕ್ಕಂತೂ ಈ ಫೋಟೋ ಸಿಕ್ಕಾಪಟ್ಟೆ ವೈರಲ್​ ಆಗಿದೆ. ಪ್ರಭಾಸ್​ ಅಭಿಮಾನಿಗಳು ಬಗೆಬಗೆಯಲ್ಲಿ ಕಮೆಂಟ್​ ಮಾಡುತ್ತಿದ್ದಾರೆ.

ಇದನ್ನೂ ಓದಿ: ‘ಕಲ್ಕಿ 2898 ಎಡಿ’ ಚಿತ್ರದಲ್ಲಿ ರಾಜಮೌಳಿ ನಟನೆ? ಹಿರಿದಾಗುತ್ತಿದೆ ಪ್ರಭಾಸ್​ ಸಿನಿಮಾದ ಪಾತ್ರವರ್ಗ

ಪ್ರಭಾಸ್​ ಅವರು ಸತತ ಸೋಲಿನಿಂದ ಕಂಗೆಟ್ಟಿದ್ದಾರೆ. ಅವರು ಈಗ ‘ಸಲಾರ್​’ ಸಿನಿಮಾದಲ್ಲಿ ಮುಖ್ಯ ಪಾತ್ರ ಮಾಡಿದ್ದು, ಆ ಚಿತ್ರದ ಮೇಲೆ ಅಭಿಮಾನಿಗಳು ಸಖತ್​ ನಿರೀಕ್ಷೆ ಇಟ್ಟುಕೊಂಡಿದ್ದಾರೆ. ಪ್ರಶಾಂತ್​ ನೀಲ್​ ನಿರ್ದೇಶನ, ಹೊಂಬಾಳೆ ಫಿಲ್ಮ್ಸ್​ ನಿರ್ಮಾಣ ಎಂಬ ಕಾರಣಕ್ಕೆ ಹೈಪ್​ ಹೆಚ್ಚಾಗಿದೆ. ಈ ಸಿನಿಮಾದ ರಿಲೀಸ್​ ಡೇಟ್ ಬಗ್ಗೆ ಅಂತೆ-ಕಂತೆಗಳು ಹರಿದಾಡುತ್ತಿವೆ. ಡಿಸೆಂಬರ್​ ತಿಂಗಳಲ್ಲಿ ‘ಸಲಾರ್​’ ಬಿಡುಗಡೆ ಆಗಲಿದೆ ಎಂದು ಹೇಳಲಾಗುತ್ತಿದೆ. ಈ ಬಗ್ಗೆ ನಿರ್ಮಾಣ ಸಂಸ್ಥೆಯಿಂದ ಅಧಿಕೃತ ಮಾಹಿತಿ ಇನ್ನಷ್ಟೇ ಹೊರಬೀಳಬೇಕಿದೆ.

ಹೆಚ್ಚಿನ ಸಿನಿಮಾ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್​ ಮಾಡಿ.

ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ
2026ರಲ್ಲಿ ಈ ರಾಶಿಗೆ ಗುರು, ಶನಿ, ರಾಹು, ಕೇತು ಸಂಚಾರದಿಂದ ಆರ್ಥಿಕ ಲಾಭ
2026ರಲ್ಲಿ ಈ ರಾಶಿಗೆ ಗುರು, ಶನಿ, ರಾಹು, ಕೇತು ಸಂಚಾರದಿಂದ ಆರ್ಥಿಕ ಲಾಭ
ಸೀಬರ್ಡ್ ಬಸ್ ದುರಂತ: ಪ್ರಾಣ ಉಳಿಸಿಕೊಂಡವರ ಒಂದೊಂದು ಕಥೆ ರೋಚಕ
ಸೀಬರ್ಡ್ ಬಸ್ ದುರಂತ: ಪ್ರಾಣ ಉಳಿಸಿಕೊಂಡವರ ಒಂದೊಂದು ಕಥೆ ರೋಚಕ
ಯಾರ ಮನೆಯನ್ನೂ ಒಡೆಯಬಾರದು: ಫ್ಯಾನ್ಸ್ ವಾರ್ ಬಗ್ಗೆ ಶಿವಣ್ಣ ಖಡಕ್ ರಿಯಾಕ್ಷನ್
ಯಾರ ಮನೆಯನ್ನೂ ಒಡೆಯಬಾರದು: ಫ್ಯಾನ್ಸ್ ವಾರ್ ಬಗ್ಗೆ ಶಿವಣ್ಣ ಖಡಕ್ ರಿಯಾಕ್ಷನ್
ಮಾಡದ ತಪ್ಪಿಗೆ ಸುಟ್ಟು ಕರಕಲಾದ ಸೀಬರ್ಡ್ ಬಸ್ಸಿನ ಕೊನೆಯ ದೃಶ್ಯ
ಮಾಡದ ತಪ್ಪಿಗೆ ಸುಟ್ಟು ಕರಕಲಾದ ಸೀಬರ್ಡ್ ಬಸ್ಸಿನ ಕೊನೆಯ ದೃಶ್ಯ
ಚಾಮರಾಜನಗರ ಬೋನಿಗೆ ಬಿದ್ದ ಹುಲಿ
ಚಾಮರಾಜನಗರ ಬೋನಿಗೆ ಬಿದ್ದ ಹುಲಿ
2026 ವೃಶ್ಚಿಕ ರಾಶಿಗೆ ಗುರು ಸಂಚಾರದಿಂದ ಆರ್ಥಿಕ ಪ್ರಗತಿಯ ವರ್ಷ
2026 ವೃಶ್ಚಿಕ ರಾಶಿಗೆ ಗುರು ಸಂಚಾರದಿಂದ ಆರ್ಥಿಕ ಪ್ರಗತಿಯ ವರ್ಷ
ಬಸ್​ ದುರಂತದಲ್ಲಿ ಸುಟ್ಟು ಕರಕಲಾದ ಮೃತದೇಹಗಳ ಗುರುತು ಪತ್ತೆ ಹೇಗಿರುತ್ತೆ?
ಬಸ್​ ದುರಂತದಲ್ಲಿ ಸುಟ್ಟು ಕರಕಲಾದ ಮೃತದೇಹಗಳ ಗುರುತು ಪತ್ತೆ ಹೇಗಿರುತ್ತೆ?