ಪ್ರಭಾಸ್ ನಟನೆಯ ಮೂರು ಸಿನಿಮಾಗಳು ಒಟ್ಟಿಗೆ ಮರು ಬಿಡುಗಡೆ

Prabhas: ಪ್ರಭಾಸ್ ನಟನೆಯ ‘ಕಲ್ಕಿ’ ಸಿನಿಮಾ ಕೆಲ ತಿಂಗಳ ಹಿಂದಷ್ಟೆ ಬಿಡುಗಡೆ ಆಗಿ ಭಾರಿ ಯಶಸ್ಸು ಗಳಿಸಿತು. ಇದೀಗ ಪ್ರಭಾಸ್ ನಟನೆಯ ಮೂರು ಸಿನಿಮಾ ಒಟ್ಟಿಗೆ ಬಿಡುಗಡೆ ಆಗುತ್ತಿವೆ.

ಪ್ರಭಾಸ್ ನಟನೆಯ ಮೂರು ಸಿನಿಮಾಗಳು ಒಟ್ಟಿಗೆ ಮರು ಬಿಡುಗಡೆ
Follow us
|

Updated on: Oct 18, 2024 | 11:36 AM

ಭಾರತದ ಟಾಪ್ ಪ್ಯಾನ್ ಇಂಡಿಯಾ ಸ್ಟಾರ್ ಪ್ರಭಾಸ್ ನಟನೆಯ ‘ಕಲ್ಕಿ’ ಸಿನಿಮಾ ಕೆಲ ತಿಂಗಳ ಹಿಂದಷ್ಟೆ ಬಿಡುಗಡೆ ಆಗಿ ಬ್ಲಾಕ್ ಬಸ್ಟರ್ ಎನಿಸಿಕೊಂಡಿದೆ. ಪ್ರಭಾಸ್ ನಟನೆಯ ಮುಂದಿನ ಸಿನಿಮಾ ಬಿಡುಗಡೆ ಆಗಲು ವರ್ಷವೇ ಕಾಯಬೇಕಾಗಬಹುದೇನೋ. ಆದರೆ ಅವರ ಅಭಿಮಾನಿಗಳಿಗೆ ಖುಷಿ ಸುದ್ದಿಯೆಂದರೆ ಒಂದೇ ಸಮಯಕ್ಕೆ ಪ್ರಭಾಸ್ ನಟನೆಯ ಮೂರು ಸಿನಿಮಾಗಳು ಮರು ಬಿಡುಗಡೆ ಆಗುತ್ತಿವೆ. ಪ್ರಭಾಸ್ ಹುಟ್ಟುಹಬ್ಬ ಹತ್ತಿರದಲ್ಲೇ ಇದ್ದು, ಹಬುಟ್ಟುಹಬ್ಬದ ಪ್ರಯುಕ್ತ ಮೂರು ಸಿನಿಮಾಗಳನ್ನು ಮರು ಬಿಡುಗಡೆ ಮಾಡಲಾಗುತ್ತಿದೆ.

ಅಕ್ಟೋಬರ್ 23 ರಂದು ಪ್ರಭಾಸ್ ಹುಟ್ಟುಹಬ್ಬವಿದ್ದು, ಅಭಿಮಾನಿಗಳು ನೆಚ್ಚಿನ ನಟನ ಹುಟ್ಟುಹಬ್ಬವನ್ನು ಅದ್ಧೂರಿಯಾಗಿ ಆಚರಿಸಲು ಸಜ್ಜಾಗಿದ್ದಾರೆ. ಇದೇ ಸಂದರ್ಭದಲ್ಲಿ ಪ್ರಭಾಸ್ ನಟನೆಯ ಮೂರು ಹಳೆಯ ಸಿನಿಮಾಗಳು ಸಹ ಮರು ಬಿಡುಗಡೆ ಆಗಲಿವೆ. ಮೊದಲಿಗೆ ಅಕ್ಟೋಬರ್ 19 ರಂದು ಪ್ರಭಾಸ್ ನಟಿಸಿ ಪ್ರಶಾಂತ್ ನೀಲ್ ನಿರ್ದೇಶನ ಮಾಡಿರುವ ‘ಸಲಾರ್’ ಸಿನಿಮಾ ಬಿಡುಗಡೆ ಆಗಲಿದೆ. ಈ ಸಿನಿಮಾ ಕಳೆದ ವರ್ಷ ಡಿಸೆಂಬರ್​ನಲ್ಲಿ ಬಿಡುಗಡೆ ಆಗಿತ್ತು. ಸಿನಿಮಾ ಬಿಡುಗಡೆ ಆಗಿ ಒಂದು ವರ್ಷ ಕಳೆಯುವ ಮುನ್ನವೇ ಮರು ಬಿಡುಗಡೆ ಆಗುತ್ತಿದೆ. ಸಿನಿಮಾವನ್ನು ಹೊಂಬಾಳೆ ನಿರ್ಮಿಸಿತ್ತು.

ಇದನ್ನೂ ಓದಿ:ಪ್ರಭಾಸ್ ಪ್ರಕಾರ ಯಾರು ಬೆಸ್ಟ್? ಅಲ್ಲು ಅರ್ಜುನ್, ಜೂ ಎನ್​ಟಿಆರ್, ರಾಮ್ ಚರಣ್

ಅಕ್ಟೋಬರ್ 22 ರಂದು ಪ್ರಭಾಸ್ ನಟನೆಯ ‘ಮಿಸ್ಟರ್ ಪರ್ಫೆಕ್ಟ್’ ಸಿನಿಮಾ ಮರು ಬಿಡುಗಡೆ ಆಗಲಿದೆ. 2011 ರಲ್ಲಿ ಈ ಸಿನಿಮಾ ಬಿಡುಗಡೆ ಆಗಿತ್ತು. ಸಿನಿಮಾದಲ್ಲಿ ಕಾಜೊಲ್, ತಾಪ್ಸಿ ಪನ್ನು, ಪ್ರಕಾಶ್ ರೈ ಇನ್ನೂ ಕೆಲವು ಪ್ರಮುಖ ನಟರಿದ್ದರು. ವಿದೇಶದಲ್ಲಿ ಬೆಳೆದ ಯುವಕನೊಬ್ಬ ಭಾರತಕ್ಕೆ ಬಂದು ಸಂಬಂಧಗಳನ್ನು, ಪ್ರೀತಿಯನ್ನು ಅರ್ಥ ಮಾಡಿಕೊಳ್ಳುವ ಕತೆ ಈ ಸಿನಿಮಾದಲ್ಲಿದೆ. ಸಿನಿಮಾದ ಹಾಸ್ಯ ದೃಶ್ಯಗಳು, ಹಾಡುಗಳು ಸಖತ್ ಹಿಟ್ ಆಗಿದ್ದವು. ಅಕ್ಟೋಬರ್ 23 ಕ್ಕೆ ಪ್ರಭಾಸ್ ನಟನೆಯ ಮೊಟ್ಟ ಮೊದಲ ಸಿನಿಮಾ ‘ಈಶ್ವರ್’ ಬಿಡುಗಡೆ ಆಗಲಿದೆ. 2002 ರಲ್ಲಿ ಈ ಸಿನಿಮಾ ಬಿಡುಗಡೆ ಆಗಿತ್ತು. ಪ್ರಭಾಸ್ ನಟನೆಯ ಮೊಟ್ಟ ಮೊದಲ ಸಿನಿಮಾ ಇದು. ಸಿನಿಮಾದಲ್ಲಿ ಬಡ ಯುವಕನ ಪಾತ್ರದಲ್ಲಿ ಪ್ರಭಾಸ್ ನಟಿಸಿದ್ದರು.

ಪ್ರಭಾಸ್ ಪ್ರಸ್ತುತ ಹಲವು ಸಿನಿಮಾಗಳಲ್ಲಿ ಬ್ಯುಸಿಯಾಗಿದ್ದಾರೆ. ಹಾರರ್ ರೊಮ್ಯಾಂಟಿಕ್ ಸಿನಿಮಾ ‘ರಾಜಾ ಡಿಲಕ್ಸ್’ ಚಿತ್ರೀಕರಣವನ್ನು ಪ್ರಭಾಸ್ ಬಹುತೇಕ ಮುಗಿಸಿದ್ದಾರೆ. ಈಗ ರಘು ಹನುಪುಡಿ ನಿರ್ದೇಶನದ ಹೆಸರಿಡದ ಸಿನಿಮಾದಲ್ಲಿ ನಟಿಸುತ್ತಿದ್ದಾರೆ. ಅದರ ಬಳಿಕ ಸಂದೀಪ್ ರೆಡ್ಡಿ ವಂಗಾ ನಿರ್ದೇಶನ ಮಾಡಲಿರುವ ‘ಸ್ಪಿರಿಟ್’ ಸಿನಿಮಾದಲ್ಲಿ ನಟಿಸಲಿದ್ದಾರೆ. ಅದಾದ ಬಳಿಕ ಪ್ರಶಾಂತ್ ನೀಲ್ ನಿರ್ದೇಶನದ ‘ಸಲಾರ್ 2’ ಪ್ರಾರಂಭ ಆಗಲಿದೆ.

ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

ಮೆಜೆಸ್ಟಿಕ್​​ನಲ್ಲಿ ರಸ್ತೆ ಗುಂಡಿಗಳ ದರ್ಬಾರ್, ಸ್ವಲ್ಪ ಯಾಮಾರಿದರೆ ಡೇಂಜರ್
ಮೆಜೆಸ್ಟಿಕ್​​ನಲ್ಲಿ ರಸ್ತೆ ಗುಂಡಿಗಳ ದರ್ಬಾರ್, ಸ್ವಲ್ಪ ಯಾಮಾರಿದರೆ ಡೇಂಜರ್
ಶಿವಮೊಗ್ಗ: 20 ಕೆಜಿ ಕೇಕ್​ ಕತ್ತರಿಸಿ ಗೂಳಿಯ ಜನ್ಮದಿನ ಆಚರಣೆ
ಶಿವಮೊಗ್ಗ: 20 ಕೆಜಿ ಕೇಕ್​ ಕತ್ತರಿಸಿ ಗೂಳಿಯ ಜನ್ಮದಿನ ಆಚರಣೆ
ದಾವಣಗೆರೆಯಲ್ಲಿ ರೈತರ ಬೆಳೆ ಹಾಳು, ಮಳೆಯಾದರೂ ರೈತನಿಗೆ ಸಂಕಷ್ಟ ತಪ್ಪಿದ್ದಲ್ಲ
ದಾವಣಗೆರೆಯಲ್ಲಿ ರೈತರ ಬೆಳೆ ಹಾಳು, ಮಳೆಯಾದರೂ ರೈತನಿಗೆ ಸಂಕಷ್ಟ ತಪ್ಪಿದ್ದಲ್ಲ
‘ಇನ್ನೊಂದು ಅವಕಾಶ ಕೊಡಿ ಬಿಗ್ ಬಾಸ್’; ರಂಜಿತ್ ಹೊರಹೋಗುತ್ತಿದ್ದಂತೆ ಕಣ್ಣೀರು
‘ಇನ್ನೊಂದು ಅವಕಾಶ ಕೊಡಿ ಬಿಗ್ ಬಾಸ್’; ರಂಜಿತ್ ಹೊರಹೋಗುತ್ತಿದ್ದಂತೆ ಕಣ್ಣೀರು
ಪೂಜೆ ಸಮಯದಲ್ಲಿ ರೇಷ್ಮೆ ವಸ್ತ್ರ ಧರಿಸುವುದರ ಮಹತ್ವ ತಿಳಿಯಿರಿ
ಪೂಜೆ ಸಮಯದಲ್ಲಿ ರೇಷ್ಮೆ ವಸ್ತ್ರ ಧರಿಸುವುದರ ಮಹತ್ವ ತಿಳಿಯಿರಿ
ಈ ರಾಶಿಯವರು ಇಂದು ಕೆಲಸ ಕಾರ್ಯಗಳಲ್ಲಿ ಜಯಶಾಲಿಯಾಗುತ್ತಾರೆ
ಈ ರಾಶಿಯವರು ಇಂದು ಕೆಲಸ ಕಾರ್ಯಗಳಲ್ಲಿ ಜಯಶಾಲಿಯಾಗುತ್ತಾರೆ
ಪಂತ್ ಇಂಜುರಿ ಬಗ್ಗೆ ಬಿಗ್ ಅಪ್​ಡೇಟ್ ನೀಡಿದ ರೋಹಿತ್ ಶರ್ಮಾ
ಪಂತ್ ಇಂಜುರಿ ಬಗ್ಗೆ ಬಿಗ್ ಅಪ್​ಡೇಟ್ ನೀಡಿದ ರೋಹಿತ್ ಶರ್ಮಾ
ಟ್ರಾಫಿಕ್ ಪೊಲೀಸ್​ಗೆ ಕಾರಿನಲ್ಲಿ ಡಿಕ್ಕಿ ಹೊಡೆದು ಎಳೆದೊಯ್ದ ಚಾಲಕ
ಟ್ರಾಫಿಕ್ ಪೊಲೀಸ್​ಗೆ ಕಾರಿನಲ್ಲಿ ಡಿಕ್ಕಿ ಹೊಡೆದು ಎಳೆದೊಯ್ದ ಚಾಲಕ
ಎಐಸಿಸಿ ಮಹಿಳಾ ಘಟಕದ ಅಧ್ಯಕ್ಷೆ ಅಲ್ಕಾ ಲಂಬಾ ಕಾರ್ಯಕ್ರಮದಲ್ಲಿ ಭಾಗಿ
ಎಐಸಿಸಿ ಮಹಿಳಾ ಘಟಕದ ಅಧ್ಯಕ್ಷೆ ಅಲ್ಕಾ ಲಂಬಾ ಕಾರ್ಯಕ್ರಮದಲ್ಲಿ ಭಾಗಿ
ಸುಲಭ ಕ್ಯಾಚ್ ಕೈಚೆಲ್ಲಿ ಸುಮ್ಮನೆ ನಿಂತ ರಾಹುಲ್; ರೋಹಿತ್ ಕೆಂಡಾಮಂಡಲ
ಸುಲಭ ಕ್ಯಾಚ್ ಕೈಚೆಲ್ಲಿ ಸುಮ್ಮನೆ ನಿಂತ ರಾಹುಲ್; ರೋಹಿತ್ ಕೆಂಡಾಮಂಡಲ