AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

MAA election ಸೋತ ಬೆನ್ನಲ್ಲೇ ಮಹತ್ವದ ನಿರ್ಧಾರ ತೆಗೆದುಕೊಂಡ ಪ್ರಕಾಶ್​ ರಾಜ್​

ಪ್ರಕಾಶ್​ ರೈ ಅವರು ಮೂಲತಃ ತೆಲುಗು ನಟ ಅಲ್ಲ. ಹಾಗಾಗಿ ಅವರು ಈ ಚುನಾವಣೆಯಲ್ಲಿ ಸ್ಪರ್ಧಿಸಬಾರದು ಎಂದು ವಿರೋಧ ವ್ಯಕ್ತಪಡಿಸಲಾಗಿತ್ತು. ಅವರು ಹೊರಗಿನವರು ಎನ್ನುವ ರೀತಿಯಲ್ಲೇ ಮೊದಲಿನಿಂದಲೂ ಬಿಂಬಿಸುತ್ತಲೇ ಬರಲಾಯಿತು

MAA election ಸೋತ ಬೆನ್ನಲ್ಲೇ ಮಹತ್ವದ ನಿರ್ಧಾರ ತೆಗೆದುಕೊಂಡ ಪ್ರಕಾಶ್​ ರಾಜ್​
ಪ್ರಕಾಶ್​ ರೈ
TV9 Web
| Edited By: |

Updated on: Oct 11, 2021 | 1:46 PM

Share

ಭಾರೀ ಹೈಪ್​ ಪಡೆದುಕೊಂಡಿದ್ದ ಮೂವೀ ಆರ್ಟಿಸ್ಟ್ ಅಸೋಸಿಯೇಷನ್ (MAA) ಚುನಾವಣೆಯಲ್ಲಿ ವಿಚ್ಣು ಮಂಚು ಗೆದ್ದಿದ್ದಾರೆ. ಈ ಮೂಲಕ ಬಹುಭಾಷಾ ನಟ ಪ್ರಕಾಶ್​ ರಾಜ್​ಗೆ ಸೋಲಾಗಿದೆ. ಈ ಸೋಲನ್ನು ಅವರು ಸ್ವೀಕರಿಸುವುದರ ಜತೆಗೆ ಒಂದು ಮಹತ್ವದ ನಿರ್ಧಾರ ತೆಗೆದುಕೊಂಡಿದ್ದಾರೆ. ಅಲ್ಲದೆ, ಈ ಬಗ್ಗೆ ಅವರು ಓಪನ್​ ಆಗಿ ಹೇಳಿಕೆ ನೀಡಿದ್ದಾರೆ.

ಪ್ರಕಾಶ್​ ರೈ ಅವರು ಮೂಲತಃ ತೆಲುಗು ನಟ ಅಲ್ಲ. ಹಾಗಾಗಿ ಅವರು ಈ ಚುನಾವಣೆಯಲ್ಲಿ ಸ್ಪರ್ಧಿಸಬಾರದು ಎಂದು ವಿರೋಧ ವ್ಯಕ್ತಪಡಿಸಲಾಗಿತ್ತು. ಅವರು ತೆಲುಗು ಚಿತ್ರರಂಗಕ್ಕೆ ಕೇವಲ ಅತಿಥಿ. ಅವರು ಹೊರಗಿನವರು ಎನ್ನುವ ರೀತಿಯಲ್ಲೇ ಮೊದಲಿನಿಂದಲೂ ಬಿಂಬಿಸುತ್ತಲೇ ಬರಲಾಯಿತು. ಈ ತಂತ್ರ ಯಶಸ್ವಿಯಾಗಿದೆ. ಪ್ರಕಾಶ್​ ರೈ ಸೋಲೋಕೆ ಇದು ಪ್ರಮುಖ ಕಾರಣವಾಗಿದೆ. ವಿಷ್ಣು ಮಂಚು 381 ಮತ ಗಳಿಸಿದರೆ ಪ್ರಕಾಶ್ ರಾಜ್ 274 ಮತ ಗಳಿಸಲಷ್ಟೇ ಶಕ್ತರಾದರು. ಈ ಮೂಲಕ ಭರ್ಜರಿ ಅಂತರದಿಂದ ವಿಷ್ಣು ಗೆದ್ದರು. ಇದು ಪ್ರಕಾಶ್​ ರಾಜ್​ಗೆ ಪಾಠವಾಗಿದೆ. ಈ ಬಗ್ಗೆ ಅವರು ಹೇಳಿಕೆ ನೀಡಿದ್ದಾರೆ.

‘ನಾನು ತೆಲುಗು ಚಿತ್ರರಂಗದವನಲ್ಲ ಎಂದು ಹೇಳುತ್ತಲೇ ಬಂದರು ಮತ್ತು ಮಾ ಪೀಠಕ್ಕೆ ತೆಲುಗು ಹಿನ್ನೆಲೆ ಹೊಂದಿರುವ ವ್ಯಕ್ತಿಯನ್ನೇ ಅಧ್ಯಕ್ಷನನ್ನಾಗಿ ಆಯ್ಕೆ ಮಾಡಿದರು. ನಾನು ಅತಿಥಿ ಎಂದು ಜನರು ಹೇಳಿದ್ದಾರೆ. ನಾನು ಹಾಗೆಯೇ ಇರುತ್ತೇನೆ. ವಿಷ್ಣು ಮಂಚು ಗೆಲುವನ್ನು ಸ್ವಾಗತಿಸುತ್ತೇನೆ. ನಾನು ಇನ್ನುಮುಂದೆ ಮಾ ಪ್ರಕ್ರಿಯೆಯಲ್ಲಿ ಪಾಲ್ಗೊಳ್ಳುವುದಿಲ್ಲ. ನನ್ನ ಸಿನಿಮಾ ಬಗ್ಗೆ ಮಾತ್ರ ಗಮನ ಹರಿಸುತ್ತೇನೆ’ ಎಂದಿದ್ದಾರೆ. ಇದರ ಜತೆಗೆ ಮಾ ಸದಸ್ಯತ್ವಕ್ಕೆ ಅವರು ರಾಜೀನಾಮೆ ನೀಡಿದ್ದಾರೆ.

ಪ್ರಕಾಶ್​ ರಾಜ್​ ಅವರು ಮಾ ಜತೆ 22 ವರ್ಷದ ನಂಟು ಹೊಂದಿದ್ದಾರೆ. ಆದರೆ, ಅವರು ಚುನಾವಣೆಗೆ ನಿಂತ ನಂತರದಲ್ಲಿ ಹೊರಗಿನವರು vs ತೆಲುಗು ನಾಡಿನವರು ಎನ್ನುವ ಚರ್ಚೆ ಆರಂಭವಾಗಿತ್ತು. ಇದು ಅವರಿಗೆ ಬೇಸರ ತರಿಸಿದೆ. ಈ ಕಾರಣಕ್ಕೆ ಮಾ ಸದಸ್ಯತ್ವಕ್ಕೆ ರಾಜೀನಾಮೆ ನೀಡಿದ್ದಾರೆ. ಮಾ ಚುನಾವಣೆ ಭಾನುವಾರ (ಅಕ್ಟೋಬರ್​ 10) ನಡೆದಿತ್ತು. ಅಂದೇ ರಾತ್ರಿ ಫಲಿತಾಂಶ ಹೊರ ಬಿದ್ದಿತ್ತು.

ಇದನ್ನೂ ಓದಿ: MAA Election Result: ಕನ್ನಡದ ಪ್ರಕಾಶ್​ ರಾಜ್​ಗೆ ಮುಖಭಂಗ; ತೆಲುಗು ನಟ ವಿಷ್ಣು ಮಂಚುಗೆ ಜಯ

Follow Us
ಜೀವಜಲಕ್ಕಾಗಿ 2 ಕಿ.ಮೀ ನಡೆದುಕೊಂಡು ಹೋಗ್ಬೇಕು! ನರಲಗುಡ್ಡ ನಿವಾಸಿಗಳ ಪರದಾಟ!
ಜೀವಜಲಕ್ಕಾಗಿ 2 ಕಿ.ಮೀ ನಡೆದುಕೊಂಡು ಹೋಗ್ಬೇಕು! ನರಲಗುಡ್ಡ ನಿವಾಸಿಗಳ ಪರದಾಟ!
ನೆಲಮಂಗಲದಲ್ಲಿ ಹೊತ್ತಿ ಉರಿದ ಫ್ಲೈವುಡ್ ಗೋದಾಮು
ನೆಲಮಂಗಲದಲ್ಲಿ ಹೊತ್ತಿ ಉರಿದ ಫ್ಲೈವುಡ್ ಗೋದಾಮು
ಬಿರುಗಾಳಿ ಮಳೆಗೆ ಧರೆಗುರುಳಿದ ಬೃಹತ್​​ ಮರ: 15ಕ್ಕೂ ಹೆಚ್ಚು ಬೈಕ್​ಗಳು ಜಖಂ
ಬಿರುಗಾಳಿ ಮಳೆಗೆ ಧರೆಗುರುಳಿದ ಬೃಹತ್​​ ಮರ: 15ಕ್ಕೂ ಹೆಚ್ಚು ಬೈಕ್​ಗಳು ಜಖಂ
ಗೂಳಿ ಮತ್ತು ನಾಯಿ ನಡುವೆ ಕಾದಾಟ, ಇಬ್ಬರು ಮಹಿಳೆಯರಿಗೆ ಗಾಯ
ಗೂಳಿ ಮತ್ತು ನಾಯಿ ನಡುವೆ ಕಾದಾಟ, ಇಬ್ಬರು ಮಹಿಳೆಯರಿಗೆ ಗಾಯ
ಹುಬ್ಬಳ್ಳಿಯಲ್ಲಿ ಮತ್ತೊಮ್ಮೆ ಪ್ರಯಾಣಿಕರ ಎದೆ ನಡುಗಿಸಿದ 'ಫ್ಲೈ 91' ವಿಮಾನ
ಹುಬ್ಬಳ್ಳಿಯಲ್ಲಿ ಮತ್ತೊಮ್ಮೆ ಪ್ರಯಾಣಿಕರ ಎದೆ ನಡುಗಿಸಿದ 'ಫ್ಲೈ 91' ವಿಮಾನ
ಬೆಳಗಾವಿ, ಬೀದರ್​​ನಲ್ಲಿ ಬಿಸಿಲಿಗೆ ಸಾವಾಗಿಲ್ಲ: ಅಸಲಿ ಸತ್ಯ ರಿವೀಲ್​
ಬೆಳಗಾವಿ, ಬೀದರ್​​ನಲ್ಲಿ ಬಿಸಿಲಿಗೆ ಸಾವಾಗಿಲ್ಲ: ಅಸಲಿ ಸತ್ಯ ರಿವೀಲ್​
ಅತ್ತಿಕೋಣೆಯಲ್ಲಿಕುಡಿಯುವ ನೀರಿಗಾಗಿ ಅಪಾಯಕಾರಿ ದೋಣಿ ಯಾನದ ಸಾಹಸ!
ಅತ್ತಿಕೋಣೆಯಲ್ಲಿಕುಡಿಯುವ ನೀರಿಗಾಗಿ ಅಪಾಯಕಾರಿ ದೋಣಿ ಯಾನದ ಸಾಹಸ!
ಸ್ನೇಹಿತನ ಹೊಸ ಕಾರು ಓಡಿಸಿದ ಸಚಿವ ಪರಮೇಶ್ವರ್!
ಸ್ನೇಹಿತನ ಹೊಸ ಕಾರು ಓಡಿಸಿದ ಸಚಿವ ಪರಮೇಶ್ವರ್!
‘ಎಲ್ರ ಕಾಲೆಳಿತದೆ ಕಾಲ’ ಕನ್ನಡ ಸಿನಿಮಾ ಬಗ್ಗೆ ಅನುರಾಗ್ ಕಶ್ಯಪ್ ಮಾತು
‘ಎಲ್ರ ಕಾಲೆಳಿತದೆ ಕಾಲ’ ಕನ್ನಡ ಸಿನಿಮಾ ಬಗ್ಗೆ ಅನುರಾಗ್ ಕಶ್ಯಪ್ ಮಾತು
ಪತಿಗೆ ನಿದ್ದೆ ಮಾತ್ರೆ ನೀಡಿ ಪ್ರಿಯಕರನೊಂದಿಗೆ ವಿವಾಹಿತೆ ಎಸ್ಕೇಪ್​?
ಪತಿಗೆ ನಿದ್ದೆ ಮಾತ್ರೆ ನೀಡಿ ಪ್ರಿಯಕರನೊಂದಿಗೆ ವಿವಾಹಿತೆ ಎಸ್ಕೇಪ್​?